Homeಮುಖಪುಟಲಾಕ್‌ಡೌನ್ 15 ದಿನ ವಿಸ್ತರಣೆಗೆ ಹಲವು ಮುಖ್ಯಮಂತ್ರಿಗಳು ಹೇಳಿದ್ದೇನು?

ಲಾಕ್‌ಡೌನ್ 15 ದಿನ ವಿಸ್ತರಣೆಗೆ ಹಲವು ಮುಖ್ಯಮಂತ್ರಿಗಳು ಹೇಳಿದ್ದೇನು?

- Advertisement -
- Advertisement -

ಕೊರೊನಾ ಲಾಕ್‌ಡೌನ್ ಅನ್ನು ಎಪ್ರಿಲ್ 30 ವರೆಗೆ ಮುಂದುವರೆಸಲು, ಪ್ರಧಾನಿ ಮೋದಿ ಮತ್ತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವಿಡಿಯೋ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ.

ಇಂದು ವಿಡಿಯೋ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗಂಟೆಗಳ ಕಾಲ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ಲಾಕ್‌ಡೌನ್ ಅನ್ನು ಎರಡು ವಾರಗಳವರೆಗೆ ವಿಸ್ತರಿಸಲಾಗುವುದು ಎಂದು ಸೂಚಿಸಿದ್ದಾರೆ. ಈ ಹಿಂದೆ ಘೋಷಿಸಿದ್ದ 21 ದಿನಗಳ ಲಾಕ್‌ಡೌನ್ ಮಂಗಳವಾರ ಕೊನೆಕೊಳ್ಳುತ್ತದೆ.

“ಪ್ರಧಾನಿ ಲಾಕ್‌ಡೌನ್ ವಿಸ್ತರಿಸಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಲಾಕ್‌ಡೌನ್ ಅನ್ನು ಮೊದಲೇ ಪ್ರಾರಂಭಿಸಿದ್ದರಿಂದ, ಮುಂದುವರಿದ ದೇಶಗಳಿಗಿಂತ ಭಾರತದ ಪರಿಸ್ಥಿತಿ ಉತ್ತಮವಾಗಿದೆ. ಅದನ್ನು ಈಗ ನಿಲ್ಲಿಸಿದರೆ ಎಲ್ಲಾವು ನಷ್ಟವಾಗುತ್ತದೆ. ಲಾಕ್ ಡೌನ್ ವಿಸ್ತರಿಸುವುದು ಮುಖ್ಯವಾಗಿದೆ” ಸಭೆಯ ಕೆಲವೇ ನಿಮಿಷಗಳ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಒಡಿಶಾ ಮತ್ತು ಪಂಜಾಬ್ ಈಗಾಗಲೇ ಲಾಕ್ ಡೌನ್ ವಿಸ್ತರಣೆಯನ್ನು ಘೋಷಿಸಿವೆ. ಬಿಹಾರ ಸರ್ಕಾರ ಕೇಂದ್ರಕ್ಕೆ ಬರೆದ ಪತ್ರದಲ್ಲಿ ಲಾಕ್ ಡೌನ್ ಅನ್ನು ವಿಸ್ತರಿಸಲು ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ; ಆದರೆ ಗ್ರಾಮೀಣ ನಿರ್ಮಾಣ ಮತ್ತು ಪ್ರವಾಹ ಪರಿಹಾರ ಕಾರ್ಯಗಳನ್ನು ಮುಂದುವರೆಸಲು ಬಯಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಬಿಹಾರದಲ್ಲಿ ಕಳೆದ ವರ್ಷ ಭಾರಿ ಪ್ರವಾಹ ಬಂದಿದ್ದರಿಂದ ಅಲ್ಲಿ ಪುನರ್ನಿರ್ಮಾಣ ಕಾರ್ಯಗಳು ಇನ್ನೂ ನಡೆಯುತ್ತಿವೆ.

ಲಾಕ್‌ಡೌನ್ ಅನ್ನು ಈಗಲೇ ತೆಗೆದುಹಾಕಿ ಕೊರೊನಾ ಪ್ರಕರಣಗಳು ಹೆಚ್ಚಾದರೆ ಅದನ್ನು ಎದುರಿಸಲು ಅಗತ್ಯವಾದ ಬೃಹತ್ ಸಂಪನ್ಮೂಲಗಳು ಇಲ್ಲ ಎಂದು ವಿಡಿಯೋ ಸಮ್ಮೇಳನದಲ್ಲಿ ಭಾಗವಹಿಸಿದ ಹೆಚ್ಚಿನ ಮುಖ್ಯಮಂತ್ರಿಗಳು ಹೇಳಿದರು. ಬಿಜೆಪಿ ಅಲ್ಲದ ಎಲ್ಲ ಮುಖ್ಯಮಂತ್ರಿಗಳು ಪ್ರಧಾನಿಯ ಬಳಿ ಪರಿಹಾರ ಪ್ಯಾಕೇಜ್ ಕೇಳಿದರು.

ಲಾಕ್ ಡೌನ್ ವಿಸ್ತರಣೆಯನ್ನು ಘೋಷಿಸಲು ಪ್ರಧಾನಿ ಮೋದಿ ಮತ್ತೆ ರಾಷ್ಟ್ರಕ್ಕೆ ದೂರದರ್ಶನ ಭಾಷಣ ಮಾಡುವ ಸಾಧ್ಯತೆ ಇದೆ. ಇಂದು ನಡೆದ ಸಭೆಯ ಅಂತ್ಯದ ವೇಳೆಗೆ, ಕೈಗಾರಿಕೆಗಳನ್ನು ಶ್ರೇಣೀಕೃತ ರೀತಿಯಲ್ಲಿ ಮತ್ತೆ ತೆರೆಯಲು ಅವಕಾಶ ನೀಡುವುದಾಗಿ ಪ್ರಧಾನಿ ಮೋದಿ ಹೇಳಿದರು.

“ಲಾಕ್‌ಡೌನ್ ಅನ್ನು ವಿಸ್ತರಿಸಿ. ಕೊರೊನಾ ವೈರಸ್ ಅನ್ನು ಎದುರಿಸಲು ಮೂಲಸೌಕರ್ಯಗಳ ಕೊರತೆಯಿಲ್ಲ, ಆದರೆ ನೀತಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದೇ ಪ್ರಶ್ನೆ. ಪ್ರಧಾನಿ ಮೋದಿ ಯಾವಾಗಲೂ ರಾಜ್ಯಗಳ ಸಲಹೆಗಳನ್ನು ಸ್ವಾಗತಿಸಿದ್ದಾರೆ” ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಹೇಳಿದ್ದಾರೆ.

“ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಸ್ತರಿಸುವುದು ಮುಖ್ಯ …ಚಳಿಗಾಲದ ಬೆಳೆಗೆ ನಮಗೆ ಸಾಮಾನ್ಯ ಪರಿಹಾರ ನೀಡಬೇಕು” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಪರಿಸ್ಥಿತಿಗಳು ಕಳವಳಕಾರಿ ಆಗಿರುವುದರಿಂದ ಮಂಗಳವಾರ ಕೊನೆಗೊಳ್ಳಲಿರುವ ಪ್ರಸ್ತುತ ಲಾಕ್‌ಡೌನ್ ವಿಸ್ತರಣೆಯನ್ನು ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಭಾರತದಲ್ಲಿ 7,400 ಕ್ಕೂ ಹೆಚ್ಚು ಕರೋನವೈರಸ್ ಪ್ರಕರಣಗಳನ್ನು ದೃಡಪಟ್ಟಿವೆ ಮತ್ತು 239 ಸಾವುಗಳು ವರದಿಯಾಗಿದೆ. ದೆಹಲಿಯಲ್ಲಿ 903 ಪ್ರಕರಣಗಳು (ದೇಶದಲ್ಲಿ ಮೂರನೇ ಅತಿ ಹೆಚ್ಚು) ಮತ್ತು 13 ಸಾವುಗಳು ವರದಿಯಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...