Homeಮುಖಪುಟಲಾಕ್‌ಡೌನ್ 15 ದಿನ ವಿಸ್ತರಣೆಗೆ ಹಲವು ಮುಖ್ಯಮಂತ್ರಿಗಳು ಹೇಳಿದ್ದೇನು?

ಲಾಕ್‌ಡೌನ್ 15 ದಿನ ವಿಸ್ತರಣೆಗೆ ಹಲವು ಮುಖ್ಯಮಂತ್ರಿಗಳು ಹೇಳಿದ್ದೇನು?

- Advertisement -
- Advertisement -

ಕೊರೊನಾ ಲಾಕ್‌ಡೌನ್ ಅನ್ನು ಎಪ್ರಿಲ್ 30 ವರೆಗೆ ಮುಂದುವರೆಸಲು, ಪ್ರಧಾನಿ ಮೋದಿ ಮತ್ತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವಿಡಿಯೋ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ.

ಇಂದು ವಿಡಿಯೋ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗಂಟೆಗಳ ಕಾಲ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ಲಾಕ್‌ಡೌನ್ ಅನ್ನು ಎರಡು ವಾರಗಳವರೆಗೆ ವಿಸ್ತರಿಸಲಾಗುವುದು ಎಂದು ಸೂಚಿಸಿದ್ದಾರೆ. ಈ ಹಿಂದೆ ಘೋಷಿಸಿದ್ದ 21 ದಿನಗಳ ಲಾಕ್‌ಡೌನ್ ಮಂಗಳವಾರ ಕೊನೆಕೊಳ್ಳುತ್ತದೆ.

“ಪ್ರಧಾನಿ ಲಾಕ್‌ಡೌನ್ ವಿಸ್ತರಿಸಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಲಾಕ್‌ಡೌನ್ ಅನ್ನು ಮೊದಲೇ ಪ್ರಾರಂಭಿಸಿದ್ದರಿಂದ, ಮುಂದುವರಿದ ದೇಶಗಳಿಗಿಂತ ಭಾರತದ ಪರಿಸ್ಥಿತಿ ಉತ್ತಮವಾಗಿದೆ. ಅದನ್ನು ಈಗ ನಿಲ್ಲಿಸಿದರೆ ಎಲ್ಲಾವು ನಷ್ಟವಾಗುತ್ತದೆ. ಲಾಕ್ ಡೌನ್ ವಿಸ್ತರಿಸುವುದು ಮುಖ್ಯವಾಗಿದೆ” ಸಭೆಯ ಕೆಲವೇ ನಿಮಿಷಗಳ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಒಡಿಶಾ ಮತ್ತು ಪಂಜಾಬ್ ಈಗಾಗಲೇ ಲಾಕ್ ಡೌನ್ ವಿಸ್ತರಣೆಯನ್ನು ಘೋಷಿಸಿವೆ. ಬಿಹಾರ ಸರ್ಕಾರ ಕೇಂದ್ರಕ್ಕೆ ಬರೆದ ಪತ್ರದಲ್ಲಿ ಲಾಕ್ ಡೌನ್ ಅನ್ನು ವಿಸ್ತರಿಸಲು ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ; ಆದರೆ ಗ್ರಾಮೀಣ ನಿರ್ಮಾಣ ಮತ್ತು ಪ್ರವಾಹ ಪರಿಹಾರ ಕಾರ್ಯಗಳನ್ನು ಮುಂದುವರೆಸಲು ಬಯಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಬಿಹಾರದಲ್ಲಿ ಕಳೆದ ವರ್ಷ ಭಾರಿ ಪ್ರವಾಹ ಬಂದಿದ್ದರಿಂದ ಅಲ್ಲಿ ಪುನರ್ನಿರ್ಮಾಣ ಕಾರ್ಯಗಳು ಇನ್ನೂ ನಡೆಯುತ್ತಿವೆ.

ಲಾಕ್‌ಡೌನ್ ಅನ್ನು ಈಗಲೇ ತೆಗೆದುಹಾಕಿ ಕೊರೊನಾ ಪ್ರಕರಣಗಳು ಹೆಚ್ಚಾದರೆ ಅದನ್ನು ಎದುರಿಸಲು ಅಗತ್ಯವಾದ ಬೃಹತ್ ಸಂಪನ್ಮೂಲಗಳು ಇಲ್ಲ ಎಂದು ವಿಡಿಯೋ ಸಮ್ಮೇಳನದಲ್ಲಿ ಭಾಗವಹಿಸಿದ ಹೆಚ್ಚಿನ ಮುಖ್ಯಮಂತ್ರಿಗಳು ಹೇಳಿದರು. ಬಿಜೆಪಿ ಅಲ್ಲದ ಎಲ್ಲ ಮುಖ್ಯಮಂತ್ರಿಗಳು ಪ್ರಧಾನಿಯ ಬಳಿ ಪರಿಹಾರ ಪ್ಯಾಕೇಜ್ ಕೇಳಿದರು.

ಲಾಕ್ ಡೌನ್ ವಿಸ್ತರಣೆಯನ್ನು ಘೋಷಿಸಲು ಪ್ರಧಾನಿ ಮೋದಿ ಮತ್ತೆ ರಾಷ್ಟ್ರಕ್ಕೆ ದೂರದರ್ಶನ ಭಾಷಣ ಮಾಡುವ ಸಾಧ್ಯತೆ ಇದೆ. ಇಂದು ನಡೆದ ಸಭೆಯ ಅಂತ್ಯದ ವೇಳೆಗೆ, ಕೈಗಾರಿಕೆಗಳನ್ನು ಶ್ರೇಣೀಕೃತ ರೀತಿಯಲ್ಲಿ ಮತ್ತೆ ತೆರೆಯಲು ಅವಕಾಶ ನೀಡುವುದಾಗಿ ಪ್ರಧಾನಿ ಮೋದಿ ಹೇಳಿದರು.

“ಲಾಕ್‌ಡೌನ್ ಅನ್ನು ವಿಸ್ತರಿಸಿ. ಕೊರೊನಾ ವೈರಸ್ ಅನ್ನು ಎದುರಿಸಲು ಮೂಲಸೌಕರ್ಯಗಳ ಕೊರತೆಯಿಲ್ಲ, ಆದರೆ ನೀತಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದೇ ಪ್ರಶ್ನೆ. ಪ್ರಧಾನಿ ಮೋದಿ ಯಾವಾಗಲೂ ರಾಜ್ಯಗಳ ಸಲಹೆಗಳನ್ನು ಸ್ವಾಗತಿಸಿದ್ದಾರೆ” ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಹೇಳಿದ್ದಾರೆ.

“ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಸ್ತರಿಸುವುದು ಮುಖ್ಯ …ಚಳಿಗಾಲದ ಬೆಳೆಗೆ ನಮಗೆ ಸಾಮಾನ್ಯ ಪರಿಹಾರ ನೀಡಬೇಕು” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಪರಿಸ್ಥಿತಿಗಳು ಕಳವಳಕಾರಿ ಆಗಿರುವುದರಿಂದ ಮಂಗಳವಾರ ಕೊನೆಗೊಳ್ಳಲಿರುವ ಪ್ರಸ್ತುತ ಲಾಕ್‌ಡೌನ್ ವಿಸ್ತರಣೆಯನ್ನು ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಭಾರತದಲ್ಲಿ 7,400 ಕ್ಕೂ ಹೆಚ್ಚು ಕರೋನವೈರಸ್ ಪ್ರಕರಣಗಳನ್ನು ದೃಡಪಟ್ಟಿವೆ ಮತ್ತು 239 ಸಾವುಗಳು ವರದಿಯಾಗಿದೆ. ದೆಹಲಿಯಲ್ಲಿ 903 ಪ್ರಕರಣಗಳು (ದೇಶದಲ್ಲಿ ಮೂರನೇ ಅತಿ ಹೆಚ್ಚು) ಮತ್ತು 13 ಸಾವುಗಳು ವರದಿಯಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...