Homeನಿಜವೋ ಸುಳ್ಳೋFact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ...

Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

- Advertisement -
- Advertisement -

ಜಗತ್ತಿಗೆ ಕೊರೊನಾ ಚಿಂತೆಯಾದರೆ ಪೋಸ್ಟ್‌ ಕಾರ್ಡ್ ಕನ್ನಡಕ್ಕೆ ಕಾಂಗ್ರೆಸ್‌ ಚಿಂತೆಯಾಗಿದೆ. ಹಾಗಾಗಿ ಅದು ಕಾಂಗ್ರೆಸ್‌ ಕುರಿತು, ಅದರ ಮುಖ್ಯಸ್ಥರ ಕುರಿತು ಸುಳ್ಳು ಸುದ್ದಿಗಳನ್ನು ಹರಡುವಲ್ಲಿ ನಿರತವಾಗಿದೆ.

ಇಂದು ಇದೇ ಪೋಸ್ಟ್‌ ಕಾರ್ಡ್ ಕನ್ನಡ ಮತ್ತೊಂದು ಸುಳ್ಳು ಸುದ್ದಿ ಹಬ್ಬಿಸಿದೆ. ಅದು ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತೆ ರಾಜಕಾರಣಿ ಎಂದು ವ್ಯಾಖ್ಯಾನಿಸಿದೆ. ಇದೇ ವೆಬ್‌ಸೈಟ್‌ ಈ ಹಿಂದೆ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂದು ಪೋಸ್ಟರ್‌ ಮಾಡಿ ಹಂಚಿತ್ತು.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಈ ರೀತಿಯ ಸುದ್ದಿ ಕಳೆದ ಹಲವು ವರ್ಷಗಳಿಂದ ವೈರಲ್‌ ಆಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ ಚೆಕ್‌ ನಡೆಸಿದೆ.

ಫ್ಯಾಕ್ಟ್‌ ಚೆಕ್‌

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. 2019ರ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಮೊದಲು 2012ರಲ್ಲಿ ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಈ ಬಿಸಿನೆಸ್‌ ಇನಸೈಡರ್‌ ಸೋರ್ಸ್‌ ಎಂದು ಫೋರ್ಬ್ಸ್‌, ದಿ ಗಾರ್ಡಿಯನ್‌, ಬ್ಲೂಮ್‌ಬರ್ಗ್‌, ಓಪನ್‌ ಸಿಕ್ರೇಟ್‌ ಎಂದು ಹೆಸರಿಸಿದೆ.

ಫೋರ್ಬ್ಸ್ 2011 ರಲ್ಲಿ ಒಂದು ಲೇಖನವನ್ನು ಪ್ರಕಟಿಸಿತ್ತು – ‘ಭಾರತದ 100 ಶ್ರೀಮಂತರು’ – ಇದರಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. 2012 ರಲ್ಲಿ, ದಿ ಗಾರ್ಡಿಯನ್ ವಿಶ್ವದ ಶ್ರೀಮಂತ ನಾಯಕರ ಬಗ್ಗೆ ವರದಿಯನ್ನು ಪ್ರಕಟಿಸಿತ್ತು. ಆದರೆ, ಇಲ್ಲಿಯೂ ಕೂಡ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. ಬ್ಲೂಮ್‌ಬರ್ಗ್‌ನಲ್ಲಿ ಹುಡುಕಿದರೂ ಈ ಬಗ್ಗೆ ವರದಿಯಾಗಿದ್ದು ಕಂಡುಬಂದಿಲ್ಲ. ಬಿಸಿನೆಸ್ ಇನ್ಸೈಡರ್ ಒದಗಿಸಿದ ಉಳಿದ ವೆಬ್‌ ಸೈಟ್‌ಗಳು – ಓಪನ್ ಸಿಕ್ರೆಟ್ ಸಹ ಹಾಲಿ ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಯಾವುದೇ ವರದಿಯನ್ನು ಬರೆದಿಲ್ಲ.

ಬಿಸಿನೆಸ್ ಇನ್ಸೈಡರ್ (ಮತ್ತು ‘ವರ್ಲ್ಡ್ಸ್ ಐಷಾರಾಮಿ ಗೈಡ್’) ನಂಬಬಹುದಾದ ಮೂಲವಲ್ಲ ಎಂಬುದು ಹೀಗೆ ಸ್ಪಷ್ಟವಾಯಿತು.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...