Homeನಿಜವೋ ಸುಳ್ಳೋFact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ...

Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

- Advertisement -
- Advertisement -

ಜಗತ್ತಿಗೆ ಕೊರೊನಾ ಚಿಂತೆಯಾದರೆ ಪೋಸ್ಟ್‌ ಕಾರ್ಡ್ ಕನ್ನಡಕ್ಕೆ ಕಾಂಗ್ರೆಸ್‌ ಚಿಂತೆಯಾಗಿದೆ. ಹಾಗಾಗಿ ಅದು ಕಾಂಗ್ರೆಸ್‌ ಕುರಿತು, ಅದರ ಮುಖ್ಯಸ್ಥರ ಕುರಿತು ಸುಳ್ಳು ಸುದ್ದಿಗಳನ್ನು ಹರಡುವಲ್ಲಿ ನಿರತವಾಗಿದೆ.

ಇಂದು ಇದೇ ಪೋಸ್ಟ್‌ ಕಾರ್ಡ್ ಕನ್ನಡ ಮತ್ತೊಂದು ಸುಳ್ಳು ಸುದ್ದಿ ಹಬ್ಬಿಸಿದೆ. ಅದು ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತೆ ರಾಜಕಾರಣಿ ಎಂದು ವ್ಯಾಖ್ಯಾನಿಸಿದೆ. ಇದೇ ವೆಬ್‌ಸೈಟ್‌ ಈ ಹಿಂದೆ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂದು ಪೋಸ್ಟರ್‌ ಮಾಡಿ ಹಂಚಿತ್ತು.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಈ ರೀತಿಯ ಸುದ್ದಿ ಕಳೆದ ಹಲವು ವರ್ಷಗಳಿಂದ ವೈರಲ್‌ ಆಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ ಚೆಕ್‌ ನಡೆಸಿದೆ.

ಫ್ಯಾಕ್ಟ್‌ ಚೆಕ್‌

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. 2019ರ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಮೊದಲು 2012ರಲ್ಲಿ ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಈ ಬಿಸಿನೆಸ್‌ ಇನಸೈಡರ್‌ ಸೋರ್ಸ್‌ ಎಂದು ಫೋರ್ಬ್ಸ್‌, ದಿ ಗಾರ್ಡಿಯನ್‌, ಬ್ಲೂಮ್‌ಬರ್ಗ್‌, ಓಪನ್‌ ಸಿಕ್ರೇಟ್‌ ಎಂದು ಹೆಸರಿಸಿದೆ.

ಫೋರ್ಬ್ಸ್ 2011 ರಲ್ಲಿ ಒಂದು ಲೇಖನವನ್ನು ಪ್ರಕಟಿಸಿತ್ತು – ‘ಭಾರತದ 100 ಶ್ರೀಮಂತರು’ – ಇದರಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. 2012 ರಲ್ಲಿ, ದಿ ಗಾರ್ಡಿಯನ್ ವಿಶ್ವದ ಶ್ರೀಮಂತ ನಾಯಕರ ಬಗ್ಗೆ ವರದಿಯನ್ನು ಪ್ರಕಟಿಸಿತ್ತು. ಆದರೆ, ಇಲ್ಲಿಯೂ ಕೂಡ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. ಬ್ಲೂಮ್‌ಬರ್ಗ್‌ನಲ್ಲಿ ಹುಡುಕಿದರೂ ಈ ಬಗ್ಗೆ ವರದಿಯಾಗಿದ್ದು ಕಂಡುಬಂದಿಲ್ಲ. ಬಿಸಿನೆಸ್ ಇನ್ಸೈಡರ್ ಒದಗಿಸಿದ ಉಳಿದ ವೆಬ್‌ ಸೈಟ್‌ಗಳು – ಓಪನ್ ಸಿಕ್ರೆಟ್ ಸಹ ಹಾಲಿ ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಯಾವುದೇ ವರದಿಯನ್ನು ಬರೆದಿಲ್ಲ.

ಬಿಸಿನೆಸ್ ಇನ್ಸೈಡರ್ (ಮತ್ತು ‘ವರ್ಲ್ಡ್ಸ್ ಐಷಾರಾಮಿ ಗೈಡ್’) ನಂಬಬಹುದಾದ ಮೂಲವಲ್ಲ ಎಂಬುದು ಹೀಗೆ ಸ್ಪಷ್ಟವಾಯಿತು.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...