Homeನಿಜವೋ ಸುಳ್ಳೋFact check: ಕೊರೊನಾ ಲಸಿಕೆಗಳನ್ನು ಟ್ರಂಪ್‌ ಭಾರತಕ್ಕೆ ಆರಂಭದಲ್ಲಿಯೇ ನೀಡುತ್ತಾರೆ ಎಂದ ರಾಹುಲ್‌ ಕನ್ವಾಲ್‌. ಇದು...

Fact check: ಕೊರೊನಾ ಲಸಿಕೆಗಳನ್ನು ಟ್ರಂಪ್‌ ಭಾರತಕ್ಕೆ ಆರಂಭದಲ್ಲಿಯೇ ನೀಡುತ್ತಾರೆ ಎಂದ ರಾಹುಲ್‌ ಕನ್ವಾಲ್‌. ಇದು ನಿಜವೇ?

- Advertisement -
- Advertisement -

ಹೈಡ್ರಾಕ್ಸಿಕ್ಲೋರೋಕ್ವಿನ್ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ “ವಿನಂತಿಯನ್ನು” ಸ್ವೀಕರಿಸಿದಾಗಿನಿಂದ, ಯುಎಸ್‌ನಲ್ಲಿ ಅಭಿವೃದ್ಧಿಪಡಿಸುತ್ತಿರುವ ಕೋವಿಡ್ -19 ಲಸಿಕೆಗಳನ್ನು ಭಾರತಕ್ಕೆ ಆರಂಭದಲ್ಲಿಯೇ ನೀಡಲಾಗುತ್ತದೆ ಎಂದು ಡೊನಾಲ್ಡ್ ಟ್ರಂಪ್ ಸೂಚಿಸಿದ್ದಾರೆ ಎಂದು ಇಂಡಿಯಾ ಟುಡೆ ಸುದ್ದಿ ನಿರ್ದೇಶಕ ರಾಹುಲ್ ಕನ್ವಾಲ್ ಹೇಳಿದ್ದಾರೆ. ಕನ್ವಾಲ್ ಫಾಕ್ಸ್ ನ್ಯೂಸ್ ಸಂದರ್ಶನವನ್ನು ತಮ್ಮ ಮೂಲವೆಂದು ಉಲ್ಲೇಖಿಸಿದ್ದಾರೆ.

ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲಿನ ರಫ್ತು ನಿಷೇಧವನ್ನು ಭಾರತ ತೆರವುಗೊಳಿಸದಿದ್ದರೆ ಪ್ರತಿಕಾರ ನೀಡಲಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಬೆದರಿಕೆ ಹಾಕಿದ ಚರ್ಚೆಯ ಹಿನ್ನೆಲೆಯಲ್ಲಿ ರಾಹುಲ್‌ ಕನ್ವಾಲ್‌ ಈ ಹೇಳಿಕೆ ನೀಡಿದ್ದಾರೆ.

ಫ್ಯಾಕ್ಟ್‌ ಚೆಕ್‌

COVID-19 ಲಸಿಕೆಯ ಭಾರತಕ್ಕೆ ಆರಂಭಿದಲ್ಲಿಯೇ ನೀಡುವ ರಾಹುಲ್‌ ಕನ್ವಾಲ್ ಅವರ ಕ್ಲೈಮ್‌ ಫಾಕ್ಸ್ ನ್ಯೂಸ್‌ನಲ್ಲಿ ಟ್ರಂಪ್ ಹ್ಯಾನಿಟಿಗೆ ನೀಡಿದ ದೂರವಾಣಿ ಸಂದರ್ಶನವನ್ನು ಆಲ್ಟ್ ನ್ಯೂಸ್ ವೀಕ್ಷಿಸಿತು. ಆದರೆ ಭಾರತಕ್ಕೆ ಲಸಿಕೆಯ ಆರಂಭಿಕ ಪ್ರವೇಶವನ್ನು ನೀಡುವ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದಿದೆ.

ವೀಡಿಯೊದಲ್ಲಿ 8.35 ನಿಮಿಷಕ್ಕೆ, ಟ್ರಂಪ್ ಹೇಳುವುದನ್ನು ಕೇಳಬಹುದು, “ನಾನು ಲಕ್ಷಾಂತರ ಪ್ರಮಾಣದಲ್ಲಿ 29 ಮಿಲಿಯನ್‌ಗಿಂತಲೂ ಹೆಚ್ಚು  ಹೈಡ್ರಾಕ್ಸಿಕ್ಲೋರೋಕ್ವಿನ್  ಖರೀದಿಸಿದೆ. ನಾನು ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದ್ದೇನೆ, ಅದು ಬಹಳಷ್ಟು ಭಾರತದಿಂದ ಹೊರಬರುತ್ತದೆ. ಅವರು ಅದನ್ನು ಬಿಡುಗಡೆ ಮಾಡುತ್ತೀರಲ್ಲವೇ ಎಂದು ನಾನು ಕೇಳಿದೆ. ಅವರು ಗ್ರೇಟ್ ಆಗಿದ್ದರು. ಅವರು ನಿಜವಾಗಿಯೂ ಒಳ್ಳೆಯವರಾಗಿದ್ದರು. ಅವರು ಭಾರತಕ್ಕೆ ಬೇಕಾಗಿರುವುದರಿಂದ ಅವರು ಅದನ್ನು ನಿಲ್ಲಿಸಿದ್ದಾರೆಂದು ನಿಮಗೆ ತಿಳಿದಿದೆ. ಆದರೆ ಅದರಿಂದ ಸಾಕಷ್ಟು ಒಳ್ಳೆಯ ಸಂಗತಿಗಳು ಬರುತ್ತಿವೆ. ”

“ನಾವು ಲಸಿಕೆಗಳನ್ನು ಮಾಡುತ್ತಿದ್ದೇವೆಂದು ನಿಮಗೆ ತಿಳಿದಿದೆ. ಜಾನ್ಸನ್ ಮತ್ತು ಜಾನ್ಸನ್ ಅವರು ಅದನ್ನು ಪರೀಕ್ಷಿಸಬೇಕಾಗಿದೆ. ನೀವು ಚುಚ್ಚುಮದ್ದನ್ನು ನೀಡಿದಾಗ, ಲಸಿಕೆಯ ಲಕ್ಷಾಂತರ ಹೊಡೆತಗಳನ್ನು ನೀವು ನೀಡಿದಾಗ, ಅದು ಸುರಕ್ಷಿತವಾಗಿರಬೇಕು. ಆದರೆ ಈ ಹೈಡ್ರಾಕ್ಸಿಕ್ಲೋರೋಕ್ವಿನ್ ದಶಕಗಳಿಂದ ಮಾರುಕಟ್ಟೆಯಲ್ಲಿದೆ. ಇದು ಚೆನ್ನಾಗಿ ಕೆಲಸ ಮಾಡಿದೆ. ಮಲೇರಿಯಾ ದೇಶಗಳಂತೆ ಜನರು ಅದನ್ನು ತೆಗೆದುಕೊಳ್ಳುವುದರಿಂದ ಆ ದೇಶಗಳು ಕೊರೋನ ವೈರಸ್‌ನಿಂದ ಹೆಚ್ಚು ಬಾಧಿಸಿವೆ ಎಂದು ತೋರುತ್ತಿಲ್ಲ”

ಭಾರತಕ್ಕೆ ಲಸಿಕೆಗಳನ್ನು ಶೀಘ್ರವಾಗಿ ನೀಡಲು ಟ್ರಂಪ್ ಸೂಚಿಸಿದ್ದರೆ, ಅದು ಭಾರತದಲ್ಲಿ ವ್ಯಾಪಕವಾದ ಮಾಧ್ಯಮ ಪ್ರಸಾರವನ್ನು ಪಡೆಯುತ್ತಿತ್ತು ಎಂಬುದು ಗಮನಿಸಬೇಕಾದ ಸಂಗತಿ. ಆದರೆ, ಇಂಡಿಯಾ ಟುಡೆ ಕೂಡ ಅದನ್ನು ಸುದ್ದಿ ಮಾಡಿಲ್ಲ.

ಹೈಡ್ರಾಕ್ಸಿಕ್ಲೋರೋಕ್ವಿನ್ ನಿಷೇಧವನ್ನು ಹಿಂತೆಗೆದುಹಾಕಲು ಮತ್ತು ಅಮೆರಿಕಾಕ್ಕೆ ಹೈಡ್ರಾಕ್ಸಿಕ್ಲೋರೋಕ್ವಿನ್ ಪೂರೈಸಲು ಒಪ್ಪುವ ಭಾರತದ ನಿರ್ಧಾರದಿಂದ ಭಾರತಕ್ಕೆ ಒಳ್ಳೆಯದಾಗಿದ ಎಂದು ಹಲವು ಪ್ರಧಾನಿ ಮೋದಿಯವರ ಬೆಂಬಲಿಗರು ಹಲವಾರು ಆಧಾರ ರಹಿತ ಸುಳ್ಳು ಸುದ್ದಿಗಳನ್ನ ಹರಡುತ್ತಿದ್ದಾರೆ.

ಭಾರತ ಸರ್ಕಾರ ಹೈಡ್ರಾಕ್ಸಿಕ್ಲೋರೋಕ್ವಿನ್ ರಪ್ತು ಮಾಡಲು ಅಮೇರಿಕಾಗೆ ವಿಧಿಸಿದ ಷರತ್ತುಗಳು

1 ಭಾರತೀಯ ಔಷಧೀಯ ಕಂಪನಿಗಳಿಗೆ ಅಮೇರಿಕಾದಲ್ಲಿ ಮಾರುಕಟ್ಟೆಯನ್ನು ತೆರೆಯಬೇಕು.

2 FDA ಹೆಸರಿನಲ್ಲಿ ವಿಧಿಸಲಾದ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಬೇಕು.

3 ಇನ್ನು ಮುಂದೆ ಭಾರತೀಯ ಔಷಧಿಯ ಕಂಪನಿಗಳಿಗೆ ಯಾವುದೇ ತೊಂದರೆಯಾಗದಂತೆ ಕಾನೂನಿನ ಭದ್ರತೆ ಒದಗಿಸಬೇಕು

ಅಮೆರಿಕ ಈ ಮೂರು ಷರತ್ತುಗಳನ್ನು 24 ಘಂಟೆಯ ಒಳಗಾಗಿ ಒಪ್ಪಿಕೊಂಡಿತ್ತು.

ಎಂದು ಟ್ವಿಟರ್ ಬಳಕೆದಾರ ರಿಷಿ ಬಾಗ್ರೀ ಟ್ವೀಟ್ ಮಾಡಿದ್ದಾರೆ. ಅವರ ಟ್ವೀಟ್ ಅನ್ನು 12ಸಾವಿರ ಬಾರಿ ಹಂಚಿಕೊಳ್ಳಲಾಗಿದೆ ಮತ್ತು 35 ಸಾವಿರ ಬಳಕೆದಾರರು ಇಷ್ಟಪಟ್ಟಿದ್ದಾರೆ. ದೇ ಸುದ್ದಿಯನ್ನು ಕನ್ನಡದ ಫೇಕ್‌ನ್ಯೂಸ್‌ ವೆಬ್‌ಸೈಟ್‌ ಪೋಸ್ಟ್‌ ಕಾರ್ಡ್‌ ಕನ್ನಡ ಹರಡಿದೆ.

ಆದಾಗ್ಯೂ ರಿಷಿ ಬಾಗ್ರೀ ಮತ್ತು ಪೋಸ್ಟ್‌ಕಾರ್ಡ್‌ ಕನ್ನಡ ಅನೇಕ ಸಂದರ್ಭಗಳಲ್ಲಿ ತಪ್ಪು ಮಾಹಿತಿಯನ್ನು ಪ್ರಸಾರ ಮಾಡಿದ್ದಾರೆಂದು ಹೇಳಲಾಗುತ್ತದೆ ಮತ್ತು ಈ ಸಮಯದಲ್ಲಿ ಅವರ ಹಕ್ಕುಗಳು ಪುರಾವೆಗಳು ಅಥವಾ ಮಾಧ್ಯಮ ವರದಿಗಳೊಂದಿಗೆ ಬೆಂಬಲಿತವಾಗಿಲ್ಲ.

ಇನ್ನು ರಾಹುಲ್‌ ಕನ್ವಾಲ್ ಅವರ ಟ್ವೀಟ್ ‌ಅನ್ನು ಸಾವಿರಾರು ಜನ ಇಷ್ಟಪಟ್ಟಿದ್ದು ಷೇರ್‌ ಮಾಡಿದ್ದಾರೆ. ಆದರೆ ಟ್ರಂಪ್‌ ಯಾವಾಗ ಹೇಳಿದರು, ಅದಕ್ಕೆ ಸಾಕ್ಷಿ, ಆಧಾರ ಕೊಡುವಲ್ಲಿ ರಾಹುಲ್‌ ವಿಫಲರಾಗಿದ್ದಾರೆ. ಭಾರತವು COVID-19 ಲಸಿಕೆಗಳನ್ನು ಆರಂಭದಲ್ಲಯೇ ಪಡೆಯಬಹುದು ಎಂದು ಟ್ರಂಪ್ ಸೂಚಿಸಿರುವುದಕ್ಕೆ ಇಲ್ಲಿಯವರೆಗೆ ಅವರು ಯಾವುದೇ ಸ್ಪಷ್ಟೀಕರಣವನ್ನು ನೀಡಿಲ್ಲ.

ಕೃಪೆ: ಆಲ್ಟ್‌ ನ್ಯೂಸ್‌


ಇದನ್ನೂ ಓದಿ: Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...