Homeಮುಖಪುಟಮುಸ್ಲಿಮರನ್ನು ಕೊಳೆತ ಸೇಬುಗಳಿಗೆ ಹೋಲಿಸಿದ ಸ್ಟಾರ್‌ ಆಫ್‌ ಮೈಸೂರ್‌ ಪತ್ರಿಕೆ: ವೀರೋಧದ ನಂತರ ಕ್ಷಮಾಪಣೆ

ಮುಸ್ಲಿಮರನ್ನು ಕೊಳೆತ ಸೇಬುಗಳಿಗೆ ಹೋಲಿಸಿದ ಸ್ಟಾರ್‌ ಆಫ್‌ ಮೈಸೂರ್‌ ಪತ್ರಿಕೆ: ವೀರೋಧದ ನಂತರ ಕ್ಷಮಾಪಣೆ

- Advertisement -
- Advertisement -

ಮೈಸೂರಿನಲ್ಲಿ ಸಂಜೆ ಪ್ರಸಾರವಾಗುವ ಇಂಗ್ಲಿಶ್ ದಿನಪತ್ರಿಕೆ ಸ್ಟಾರ್ ಆಫ್ ಮೈಸೂರು ಎಪ್ರಿಲ್ 6 ರಂದು ಪ್ರಕಟಿಸಿದ್ದ ಸಂಪಾದಕೀಯದ ಬಗ್ಗೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ದೇಶದಲ್ಲಿ ಒಂದು ಸಮುದಾಯದ ಜನರು ಕೊಳೆತ ಸೇಬಿನಂತೆ ಎಂದು ಬರೆದಿದ್ದಲ್ಲದೆ ಅವುಗಳನ್ನು ಸಿಂಗಾಪುರ್ ದೇಶದ ಹಿಂದಿನ ಮುಖಂಡ ಅಥವಾ ಇಸ್ರೇಲ್‌ನ ಪ್ರಸಕ್ತ ಸರ್ಕಾರಾದ ಮಾದರಿಯಲ್ಲಿ ಹೊರಗೆ ಎಸೆಯಬೇಕು ಎಂದು ಎಂ ಗೋವಿಂದೆ ಗೌಡ ಸಂಪಾದಕರಾಗಿರುವ ಹಾಗು ಕೆ ಬಿ ಗಣಪತಿ ಉಪಸಂಪಾದಕರಾಗಿರುವ ಈ ಪತ್ರಿಕೆಯ ಸಂಪಾದಕೀಯ ಹೇಳಿತ್ತು.

ಅಂದರೆ ಕೊರೊನಾ ಕುರಿತು ಜಾಗೃತಿ ಮೂಡಿಸುವ ನೆಪದಲ್ಲಿ ಮುಸ್ಲಿಂ ಸಮುದಾಯದ ಮೇಲೆ ಕೋಮುದ್ವೇಷ ಮೂಡಿಸುವ ಸಂಪಾದಕೀಯವೊಂದು ಈ ಪತ್ರಿಕೆಯಲ್ಲಿ ಪ್ರಕಟವಾಗಿ ಭಾರೀ ಟೀಕೆಗೆ ಒಳಗಾಗಿದೆ.

ಸಂಪಾದಕೀಯದಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಎಲ್ಲಿಯೂ ನೇರವಾಗಿ ತೆಗೆದುಕೊಳ್ಳದಿದ್ದರೂ, ದೇಶದ 18% ಜನರನ್ನು ದೂಷಿಸಿದ್ದ ಸಂಪಾದಕೀಯದ ನಿಲುವು ಮುಸ್ಲಿಮರ ವಿರುದ್ಧವಾಗಿದೆ ಎಂದು ಸ್ಪಷ್ಟವಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿದ್ದವು.

‘ಫೋರಮ್ ಅಗೆನಿಸ್ಟ್ ಫೇಕ್ ನ್ಯೂಸ್’ ಎಂಬ ಮೈಸೂರು ಮೂಲದ ಸಂಘಟನೆ ಈ ಸಂಪಾದಕೀಯ ಮುಸ್ಲಿಮರ ವಿರುದ್ಧ ಇದ್ದು ಇದು ಕೋಮುಗಳ ವಿರುಧ್ದ ದ್ವೇಷಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿ ಸಂಪಾದಕರಿಗೆ ಪತ್ರ ಬರೆದಿತ್ತು. ಈ ಸಾಂಕ್ರಾಮಿಕ ಈಗಗಾಲೇ ಜನಕ್ಕೆ ಸಾಕಷ್ಟು ಸಂಕಷ್ಟ ತಂದಿದೆ. ಇದನ್ನು ಜಾತಿ ಧರ್ಮಗಳ ಹೊರತಾಗಿ ಹೋರಾಡಬೇಕು. ಇಂತಹ ಸಮಯದಲ್ಲಿ ಒಂದು ಸಮದಾಯವನ್ನು ಸುಳ್ಳು ಸುಳ್ಳೇ ಆರೋಪಿಸಿ ಅವರಿಗೆ ಒತ್ತಡ ತರುವುದು ತಪ್ಪು ಎಂದು ಹೇಳಿತ್ತು.

ಅಲ್ಲದೆ ವಕೀಲರ ಬಳಗವೊಂದು ಪತ್ರಿಕೋದ್ಯಮದ ನಿಯಮಗಳನ್ನು ಉಲ್ಲೇಖಿಸಿ ಈ ಸಂಪಾದಕೀಯ ಪ್ರಚೋದಿಸಿರುವ ಕೋಮು ದ್ವೇಷವನ್ನು ಖಂಡಿಸಿತ್ತು. ಪತ್ರಿಕೆಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಲವು ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರಿಗೆ ಮನವಿ ಮಾಡಿದ್ದರು.

ಈ ಹಿನ್ನಲೆಯಲ್ಲಿ ಈಗ ಸ್ಟಾರ್ ಆಫ್ ಮೈಸೂರು ಪತ್ರಿಕೆ ಕ್ಷಮಾಪಣೆಯನ್ನು ಪ್ರಕಟಿಸಿದೆ. ಕೋವಿಡ್-19 ಹೋರಾಟಕ್ಕೆ ಸಂಬಂಧಿಸಿದಂತೆ ಬರೆದ ಈ ಲೇಖನ ಯಾವುದಾದರೂ ಸಮುದಾಯಕ್ಕೆ ನೋವುಂಟು ಮಾಡಿದ್ದರೆ ಕ್ಷಮಿಸುವುಂತೆ ಕೇಳಿಕೊಂಡಿದ್ದು ಸಂಪಾದಕ ಮಂಡಳಿಯಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡಿದೆ.

 

ಈ ಹಿಂದೆ ಮಾರ್ಚ್ 2019 ರಲ್ಲಿ ರಿಪಬ್ಲಿಕ್‌ ಟಿವಿಯಲ್ಲಿ ಜಮಾತ್-ಇ-ಇಸ್ಲಾಮಿ ಭಾರತದ ಮುಖ್ಯಸ್ಥ ಮೌಲಾನಾ ಜಲಾಲುದ್ದೀನ್ ಉಮ್ರಿ ಭಯೋತ್ಪಾದಕ ಎಂದು ಸುಳ್ಳು ಆರೋಪ ಮಾಡಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಇದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದ ನಂತರ ರಿಪಬ್ಲಿಕ್ ಟಿವಿ ಕ್ಷಮೆಯಾಚಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಮಾರ್ಚ್ ಕೊನೆಯ ವಾರದಲ್ಲಿ ದೆಹಲಿಯಲ್ಲಿ ನಡೆದ ತಬ್ಲೀಗ್ ಜಮಾತ್ ಸಮಾವೇಶದಿಂದಲೇ ಭಾರತದಲ್ಲಿ ಕೊರೊನ ಹರಡಿತು ಎಂಬ ಸುಳ್ಳು ಸುದ್ದಿಯನ್ನು ಹರಡಿ, ಒಂದು ಸಮುದಾಯದ ವಿರುದ್ಧ ಆರೋಪವನ್ನು ಹೊರಿಸುವುದನ್ನು ಕೆಲವು ಮಾಧ್ಯಮಗಳು ನಿರಂತರವಾಗಿ ಮಾಡುತ್ತಿವೆ. ಟಿವಿ ವಾಹಿನಿಗಳಿಗೆ ನೀಡಿದ್ದ ಸಂದರ್ಶನದಲ್ಲಿ ಇಂತಹ ಸಂಗತಿಗಳ ವಿರುದ್ಧ ಎಚ್ಚರಿಕೆ ವಹಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಮಾಧ್ಯಮಗಳಿಗೆ ಮತ್ತು ನಾಗರಿಕರಿಗೆ ಎಚ್ಚರಿಸಿದ್ದರು. ಮಹಾರಾಷ್ಟ್ರ ಸರ್ಕಾರ ಕೂಡ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಇಂತಹ ಧಾರ್ಮಿಕ ದ್ವೇಷಕ್ಕೆ ಕಾರಣವಾಗುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿತ್ತು.

400 ಪದದ ಸಂಪಾದಕೀಯ ಬರೆದು ಕೇವಲ 50 ಪದದ ಕ್ಷಮಾಪಣೆಯನ್ನು ಈ ಪತ್ರಿಕೆ ಪ್ರಕಟಿಸಿದೆ. ಇದರಿಂದ ಉಳಿದ ಮಾಧ್ಯಮಗಳು ಪಾಠ ಕಲಿಯುವಂತಾಗಲಿ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...