Homeರಾಜಕೀಯನೆಹರು ಎಲ್ಲೀ, ಮೋದಿ ಎಲ್ಲೀ, ರಂಗನ ಮುಂದೆ ಸಿಂಗನೆ?

ನೆಹರು ಎಲ್ಲೀ, ಮೋದಿ ಎಲ್ಲೀ, ರಂಗನ ಮುಂದೆ ಸಿಂಗನೆ?

- Advertisement -
- Advertisement -

ನಮ್ಮ ಭಾರತ ದೇಶ ಈವರೆಗೆ ಕಂಡ ಅಪರೂಪದ ಗುಣಸಂಪನ್ನ ಮೋದಿ ಮಹಾತ್ಮನಿಗೆ ಉಳಿದವರಿರಲಿ, ಬಿಜೆಪಿಗಳೇ ಹೆದರುತ್ತವೆಯಂತಲ್ಲಾ. ಮೂಲತಃ ಬಿಜೆಪಿಗಳೇ ಹುಟ್ಟು ಪುಕ್ಕಲುಗಳು, ಅದಕ್ಕೇ ಅವುಗಳ ಬಳಿ ಲಾಠಿ ಇರುವುದು! ಇರಲಿ ನಮ್ಮ ಮೋದಿ ಮಹಾತ್ಮನನ್ನು ಮುಗಿಸಲು ವಯಸ್ಸಾದ ವಿದ್ವಾಂಸರು ಅದರಲ್ಲೂ ಮಾಜಿ ನಕ್ಸಲರು ನೀಲನಕ್ಷೆ ತಯಾರಿಸುತ್ತಿದ್ದರೆಂದು ಇಂಕಿನ ವಾಸನೆಯನ್ನೆ ಹಿಡಿದುಹೋಗಿ ಪತ್ತೆಹಚ್ಚಿ ಗೃಹಬಂಧನಕ್ಕಾಗಿರುವ ಪೂನಾ ಪೊಲೀಸರು ದಾಬೊಲ್ಕರ್, ಪನ್ಸಾರೆ ಕತೆ ಮುಗಿದು ನಾಲ್ಕು ವರ್ಷಗಳಾದರೂ ಸುಮ್ಮನಿದ್ದದ್ದು ಅಷ್ಟೇನು ಸೋಜಿಗವಲ್ಲವಂತಲ್ಲಾ. ಇಂತಹ ಪೊಲೀಸರು ಕರ್ನಾಟಕದಲ್ಲೇನಾದರೂ ಇದ್ದರೆ ಇಷ್ಟರಲ್ಲಿ ಗೌರಿ ಕೇಸಿನ ಕತೆ ಮುಗಿಸಿ ಬಿ-ರಿಪೋರ್ಟಾಕುತ್ತಿದ್ದರಂತಲ್ಲಾ. ಇದನ್ನೆಲ್ಲಾ ಗಮನಿಸಿದರೆ ಕೊಲೆಗಡುಕ ಬಿಜೆಪಿಗಳು ಮತ್ತೆ ಈ ನಾಡಿನಲ್ಲಿ ವಕ್ಕರಿಸದಂತೆ ಡಿ.ಕೆ ಶಿವಕುಮಾರ್ ಮತ್ತು ಜಾರಕಿಹೊಳಿ ಬ್ರದರ್ಸ್‍ಗಳಾದಿಯಾಗಿ ಎಲ್ಲಾ ಮನುಷ್ಯರು ಮನುಷ್ಯರಲ್ಲದವರು ವಕ್ಕರಿಸದಂತೆ ಎಚ್ಚರ ವಹಿಸಬೇಕೆಂಬುದು ಕರ್ನಾಟಕದ ಮಾನವಂತರ ಇಂಗಿತವಾಗಿದೆಯಂತಲ್ಲಾ. ಥೂತ್ತೇರಿ

*******

ಮೋದಿ ತಮ್ಮ 68ನೇ ಹುಟ್ಟುಹಬ್ಬವನ್ನು ಶಾಲಾಮಕ್ಕಳ ಜೊತೆ ಆಚರಿಸಿದರಂತೆ. ಅಚರಿಸಿದ್ದು ಹಾಳುಬಿದ್ದೋಗಲಿ ಮೋದಿ ಮಕ್ಕಳಿಗೆ ಪ್ರಶ್ನೆ ಕೇಳಲು ಭಯಪಡಬೇಡಿ ಎಂಬ ಬುದ್ಧಿ ಮಾತನ್ನ ಹೇಳಿದರಂತೆ. ಏಕೆಂದರೆ ಈಚೆಗೆ ಬಿಜೆಪಿಗಳು ಮೋದಿ ಆಡಳಿತವೈಖರಿ ಬಗ್ಗೆ ಪ್ರಶ್ನೆ ಕೇಳಲು ಹೆದರುತ್ತಿವೆಯಂತೆ. ಇದನ್ನು ಮನಗಂಡ ಮೋದಿ ಪ್ರಶ್ನೆ ಕೇಳುವ ಭಯವನ್ನು ಬಾಲ್ಯದಲ್ಲೇ ನಿವಾರಿಸಲು ಪಣ ತೊಟ್ಟಿದ್ದಾರಂತಲ್ಲಾ. ಸಾಮಾನ್ಯವಾಗಿ ಬಿಜೆಪಿಗಳು ಅಂದರೆ ಆರೆಸ್ಸೆಸ್ಸಿಗರು ಬಲಿತ ಜನರ ಸನಿಹಕ್ಕೆ ಹೋಗುವುದಿಲ್ಲ. ಬದಲಿಗೆ ಎಳೆ ಮಕ್ಕಳನ್ನ ಎತ್ತಿಕೊಂಡು ಚೆಡ್ಡಿಹಾಕಿ ಲಾಠಿಕೊಟ್ಟುಬಿಡುತ್ತವೆ. ಆದ್ದರಿಂದ ಮೋದಿ ಹದಿನೇಳು ವರ್ಷ ಭಾರತದ ಪ್ರಧಾನಿಯಾಗಿದ್ದ ನೆಹರು ತಮ್ಮ ಹುಟ್ಟುಹಬ್ಬದಂದು ಪಾರ್ಕಿನಲ್ಲಿ ಮಕ್ಕಳ ಜೊತೆ ಮಗುವಾಗಿ ಆಟವಾಡಿ ಕತೆ ಹೇಳಿ-ಕೇಳಿ ಖುಷಿ ಪಡುತ್ತಿದ್ದರು. ಎಲ್ಲದರಲ್ಲೂ ನೆಹರು ಮೀರಿಸಲು ಹೋರಾಡುವ ಈ ಮೋದಿ ಎಲ್ಲೀ ಆ ನೆಹರು ಎಲ್ಲೀ ಹಳ್ಳಿ ಗಾದೆಯಂತೆ ರಂಗನ ಮುಂದೆ ಸಿಂಗನೆ ಎಂಬಂತಾಯ್ತಲ್ಲಾ ಥೂತ್ತೇರಿ.

*******

ಕುಮಾರಣ್ಣನ ಸರಕಾರ ಬುಡಭದ್ರವಿಲ್ಲದೆ ಅಲ್ಲಾಡುತ್ತಿರುವುದನ್ನ ನೋಡಿದ ಒಕ್ಕಲಿಗ ಜಗತ್ತಿನ ಗುರುವಾದ ನಿರ್ಮಲಾನಂದ ಸ್ವಾಮಿ ಈ ಸರಕಾರ ಬಿದ್ದರೆ ಅದು ದೈವಕೃಪೆಗೆ ವಿರುದ್ಧ ಎಂದರಂತಲ್ಲಾ. ಈ ನಿರ್ಮಲಾನಂದ ಚಿನ್ನದಂತಹ ಸ್ವಾಮಿ. ಏಕೆಂದರೆ ಎಂ.ಟೆಕ್‍ನಲ್ಲಿ ಇವರು ಹೊನ್ನ ಶಿಖರವೇರಿದ್ದರಂತೆ. ಆ ವಿದ್ವತ್ತಿಗೂ ಈಗ ಇವರು ಸರಕಾರದ ವಿಷಯದಲ್ಲಾಡುತ್ತಿರುವ ಮಾತಿಗೂ ಯಾವ ಸಂಬಂಧವೂ ಇಲ್ಲವಂತ¯್ಲ. ಸಂವಿಧಾನದಲ್ಲಿನ ಚುನಾವಣಾ ನಿಯಮದಂತೆ ಚುನಾವಣೆ ನಡೆದಿದ್ದೆ ಜಾತ್ಯತೀತ ಮನಸ್ಸುಗಳು 78 ಸೀಟು ಗೆಲ್ಲಿಸಿವೆ. ಧರ್ಮಾಂಧರು 104 ಸೀಟು ಗೆದ್ದಿದ್ದಾರೆ ಹಾಗೆ ಜಾತ್ಯಂಧರು 38 ಸೀಟು ಗೆಲ್ಲಿಸಿಕೊಂಡಿದ್ದಾರೆ. ಧರ್ಮಾಂಧರನ್ನ ದೂರವಿಡುವ ಸಲುವಾಗಿ ಜಾತ್ಯತೀತರು ಮತ್ತು ಜಾತಿವಾದಿಗಳು ಸೇರಿ ಸರಕಾರ ಮಾಡಿದ್ದಾರೆ. ಕುಪಿತಗೊಂಡ ಧರ್ಮಾಂಧರು ಸರಕಾರ ಕೆಡವಲು ಹಗಲುರಾತ್ರಿ ಹಾರೆಗುದ್ದಲಿಯೊಂದಿಗೆ ಡೈನಮೆಟ್‍ಗಳನ್ನ ಉಪಯೋಗಿಸುವ ಬೆದರಿಕೆಯೊಂದಿಗೆ ಕೆಲಸ ಮಾಡುತ್ತಿವೆ. ಇದು ಸಂವಿಧಾನಕ್ಕೆ ಮುಖ್ಯವಾಗಿ ಕೋರ್ಟಿಗೆ ಬಗೆಯುವ ದ್ರೋಹವಾಗಿದೆ. ಇಂತಲ್ಲಿ ಸರಕಾರ ಉರುಳಿದರೆ ಅದು ದೈವಕೃಪೆಗೆ ವಿರುದ್ಧ ಹೇಗಾಗುತ್ತದೆಂದು ಕೇಳಿದರೆ ನಿವರ್iಲಾನಂದರು ನಿರುತ್ತರ ಕುಮಾರನಂತಾದರಂತಲ್ಲಾ. ಥೂತ್ತೇರಿ

*******

ಕೇವಲ 37 ಸೀಟುಗಳನ್ನ ಹೊಂದಿದ ಜೆಡಿಎಸ್ ಪಾರ್ಟಿ ಅಧಿಕಾರದ ಚುಕ್ಕಾಣಿ ಹಿಡಿದು ಸರಕಾರ ನಡೆಸುತ್ತಿರುವುದು ಸಾಮಾನ್ಯ ಸಂಗತಿಯಲ್ಲ. ಇದಕ್ಕೆ ಯಜ್ಞ, ಯಾಗ, ಹೋಮ ಮತ್ತು ನೂರಾರು ಕ್ಷೇತ್ರ ದರ್ಶನದ ಪ್ರಭಾವವೇ ಸರಕಾರವನ್ನು ಮುನ್ನಡೆಸುತ್ತಿದೆ ಎಂದು ಖಚಿತವಾಗಿ ನಂಬಿರುವ ದೇವೇಗೌಡರಿಗೆ ಪ್ರಜಾಪ್ರಭುತ್ವದಲ್ಲಿನ ಚಮತ್ಕಾರವೇ ಹೊಳೆಯದಿರುವುದು ಆಶ್ಚರ್ಯ ತಂದಿದೆಯಂತ¯್ಲ. ಆದರೇನು ಅಪ್ಪನ ಮೂಢನಂಬಿಕೆ ಮಾತುಗಳನ್ನೆ ನಂಬಿದ್ದ ಕುಮಾರಣ್ಣ ಈಚೆಗೆ ಜ್ಞಾನೋದಯವಾದಂತೆ ಸಿದ್ದರಾಮಯ್ಯನ ಕೃಪೆಯಿದ್ದರೆ ಐದು ವರ್ಷ ಮುಗಿಸಿ ಮನೆಗೆ ಹೋಗುತ್ತೇವೆ ಎಂದಿದ್ದಾರಲ್ಲಾ. ಇದರಿಂದ ಸಿದ್ದುಗೆ ಬಿದ್ದ ಹೊಡೆತವೆಂದರೆ ಈವರೆಗೆ ಸರಕಾರವನ್ನು ಅಲ್ಲಾಡಿಸುತ್ತಿದ್ದ ಕೀರ್ತಿ ಸಿದ್ದುಗೆ ಸಲ್ಲುತ್ತದೆ. ಅದಷ್ಟೇ ಅಲ್ಲ ಮುಂದಿನ ಎಲ್ಲಾ ತಾರಾತಿಗಡಿಯ ರಗಳೆ ಸಿದ್ದು ಬೆನ್ನ ಬೀಳುವುದರಲ್ಲಿ ಸಂಶಯವಿಲ್ಲ. ಇದಾವುದನ್ನ ಯೋಚಿಸದ ಸಿದ್ದು ಅಂತೂ ಕುಮಾರನಿಗೆ ನನ್ನ ಕೃಪೆ ಮುಖ್ಯ ಎಂಬುದು ಈಗಲಾದರೂ ಹೊಳೆಯಿತಲ್ಲ ಎಂದು ಆಕಳಿಕೆ ತೆಗೆದು ಸೋಫಾಕ್ಕೆ ಒರಗಿದರಂತಲ್ಲಾ, ಥೂತ್ತೇರಿ.

*******

ಹಟ ಸಂಭೋಗದ ಮುದುಕನಂತೆ ಹಗಲೂರಾತ್ರಿ ಅಧಿಕಾರಕ್ಕಾಗಿ ಹೋರಾಡುತ್ತಿರುವ ಎಡೂರಪ್ಪನನ್ನು ಗಮನಿಸಿದ ಚೆಡ್ಡಿಗಳು ಎಡೂರಪ್ಪನ ಇಂತಹ ಕಾರ್ಯಾಚರಣೆಗೆ ನಮ್ಮ ವಿರೋಧವಿದೆ ಎಂಬ ಸುದ್ದಿ ಬಿತ್ತರಿಸಿವೆಯಲ್ಲಾ. ಅಂದರೆ ಆರೆಸ್ಸೆಸ್ಸಿಗರು ಶ್ರೇಷ್ಠವಾದ ಜನತಂತ್ರ ರಾಜಕಾರಣ. ಎಡೂರಪ್ಪನದಲ್ಲ ಎಂದು ಅತ್ತ ಎಡೂರಪ್ಪನನ್ನ ದೂರಿ ಇತ್ತ ತಾವು ಮಾತ್ರ ಧರ್ಮವಂತರೆಂದು ಬಿಂಬಿಸಲು ಹೊರಟಿರುವುದು ಸ್ವತಃ ಎಡೂರಪ್ಪನಿಗೇ ಸಿಟ್ಟು ತರಿಸಿದೆಯಂತಲ್ಲಾ. ಕಂಠಪೂರ್ತಿ ಭ್ರಷ್ಟ ಎಂಬುದನ್ನ ಬಿಟ್ಟರೆ, ಎಡೂರಪ್ಪ ಎಂದು ಮುಸ್ಲಿಮರನ್ನ ದೂಷಿಸಿದವರಲ್ಲಾ ಇದಕ್ಕೆ ಕಾರಣ ಅವರ ಕ್ಷೇತ್ರದ ಮುಸ್ಲಿಮರ ಬೆಂಬಲ. ಜೊತೆಗೆ ಈ ಅನಂತ, ಈಶ್ವರ, ಜೋಷಿ, ಯತ್ನಾಳ ಇಂತ ಮತಾಂಧರಾಡುವ ಮಾತನ್ನ ಯಡ್ಡಿ ಎಂದೂ ಆಡಿದವರಲ್ಲ. ಆದ್ದರಿಂದ ಚಿಡ್ಡಿಗಳು ಬಿಟ್ಟುಹೋದ ಮನೆಗೆ ಬಂದ ಯಡ್ಡಿ ಬಗ್ಗೆ ಎಚ್ಚರಿಕೆಯಿಂದಲೇ ವರ್ತಿಸುತ್ತಿವೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...