Homeನಿಜವೋ ಸುಳ್ಳೋFact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ?

Fact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ?

- Advertisement -
- Advertisement -

ತನ್ನ ಪ್ರೇಯಸಿಗೆ ಬರೆದ ಹಳೆಯ ಪ್ರೇಮ ಪತ್ರ ಓದುತ್ತಾ ದುಃಖಿಸುವ ವೃದ್ದರೊಬ್ಬರ ಫೋಟೋವೊಂದನ್ನು ಕೊರೊನಾ ಸೋಕಿನಿಂದ ಚೇತರಿಕೆ ಹೊಂದಿದ ಇಟಲಿಯ ವ್ಯಕ್ತಿ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಡಲಾಗಿದೆ.

ಈ ಚಿತ್ರ ಐದು ವರ್ಷದ ಹಿಂದಿನ ಚಿತ್ರವಾಗಿದ್ದು, ವಾಸ್ತವದಲ್ಲಿ ಆ ವ್ಯಕ್ತಿ ಇಟಲಿಯವರಲ್ಲ. ಚಿತ್ರದಲ್ಲಿ, ಕೊಲೊರಾಡೋ ಮೂಲದ ಬಿಲ್ ಮೂರ್‌ ಎಂಬ ಎರಡನೇ ಮಹಾಯುದ್ಧದಲ್ಲಿ ಭಾಗವಹಿಸಿದ ಮಾಜಿ ಸೈನಿಕ ತಾನು ಮದುವೆಯಾಗಲು ನಿಶ್ಚಿತ ಮಾಡಿಕೊಂಡಿದ್ದ ಪ್ರೇಯಸಿಗೆ ಬರೆದ ಪತ್ರವನ್ನು ಓದುತ್ತಾ ಭಾವುಕನಾಗುವುದು ಕಾಣಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾದ ಸಂದೇಶದಲ್ಲಿ, “93 ವರ್ಷದ ವ್ಯಕ್ತಿಯಲ್ಲಿ ವೆಂಟಿಲೇಟರ್ ಬಿಲ್ಲು ಕಟ್ಟುವಂತೆ ಹೇಳಿದಾಗ, ಇದುವರೆಗೆ ಯಾವುದೆ ಬಿಲ್ಲು ಪಡೆಯದೆ ಉಚಿತವಾಗಿ ಉಸಿರಾಡಿಸಿದ ದೇವರ ಅನುಗ್ರಹವನ್ನು ನೆನೆದು ಭಾವುಕನಾಗುತ್ತಾನೆ” ಎಂದು ಬಿತ್ತರಿಸಲಾಗಿದೆ.

ನಾನು ಬಿಲ್ಲು ಕಟ್ಟುತ್ತೇನೆ. ಹಣದ ಬಗ್ಗೆ ಚಿಂತೆಯಿಲ್ಲ. ಆದರೆ 93 ವರ್ಷಗಳ ಕಾಲ ಯಾವುದೇ ಹಣವಿಲ್ಲದೇ ನನಗೆ ಉಸಿರಾಡಲು ಅವಕಾಶ ಮಾಡಿಕೊಟ್ಟ ದೇವರ ಋಣವನ್ನು ಹೇಗೆ ತೀರಿಸಲಿ ಎಂದು ಭಾವುಕರಾಗಿದ್ದಾರೆ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

? After the 93 year old man in Italy got better in the hospital, he was told to pay for the ventilator for one day, and…

Posted by Nermeen Mohamed Ezzat on Thursday, April 2, 2020

 

ಅಲ್ಲದೇ ಹಲವಾರು ಜನರು ಇದನ್ನು ಹೀಗೆಯೆ ಹಂಚಿಕೊಂಡಿದ್ದಾರೆ. ನೋಡಲು ಇಲ್ಲಿ ಕ್ಲಿಕ್ ಮಾಡಿ.

ಮೂರ್ ಅವರ ಚಿತ್ರ, ಇದೇ ರೀತಿಯ ನಿರೂಪಣೆಯೊಂದಿಗೆ ಇನ್‌ಸ್ಟಾಗ್ರಾಮ್ ಶೀರ್ಷಿಕೆಯಂತೆ ಕಾಣುವ ಸ್ಕ್ರೀನ್‌ಶಾಟ್ ಒಂದು ಬಿಜೆಪಿಯ ಮುಖಂಡ ಮತ್ತು ನಟ ಪರೇಶ್ ರಾವಲ್ ಅವರು ಟ್ವೀಟ್ ಮಾಡಿದ್ದಾರೆ. ತನ್ನ ಟ್ವೀಟ್‌ನಲ್ಲಿ ಅವರು, “ಮಾನವ ಜನಾಂಗವಾದ ನಾವು ಅರ್ಥಮಾಡಿಕೊಳ್ಳುತ್ತಿದ್ದೇವೆ ಎಂದು ಭಾವಿಸುತ್ತೇನೆ” ಎಂದು ಬರೆದಿದ್ದರು.

ಅಲ್ಲದೆ ಇನ್ನೂ ಕೆಲವರು ಇದನ್ನು ಟ್ವೀಟ್ ಮಾಡಿದ್ದರು.

 

ಇಟಲಿಯಲ್ಲಿ ಎರಡು ಕೊರೊನಾ ಪ್ರಕರಣಗಳು ವರದಿಯಾದ ನಂತರ, ಇಟಲಿಯೂ ಜನವರಿ 31 ರಿಂದ ಕೊರೊನಾ ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಇದುವರೆಗೆ ಇಟಲಿಯಲ್ಲಿ ಕೊರೊನಾ ಸೋಂಕಿನಿಂದ 19,468 ಸಾವುಗಳು ಮತ್ತು 32,534 ಚೇತರಿಕೆಯಾಗಿದ್ದಾರೆಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಚಿತ್ರವೂ ವೈರಲಾಗುತ್ತಿರುವುದರಿವಂದ “ಭೂಮ್ ಲೈವ್” ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿ, ಚಿತ್ರವು ಐದು ವರ್ಷ ಹಳೆಯದಾಗಿದೆ ಮತ್ತು ಇದು ಇಟಲಿಯಲ್ಲಿ ನಡೆದ ಘಟನೆಯಲ್ಲ ಎಂದು ಕಂಡುಕೊಂಡಿದೆ.

ಇದರ ಮೂಲ ಚಿತ್ರವನ್ನು ಮಾರ್ಚ್ 2015 ರಿಂದ ಎಬಿಸಿ ನ್ಯೂಸ್ ಎಂಬ ಸುದ್ದಿಜಾಲದ ವರದಿಯಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಚಿತ್ರದಲ್ಲಿರವುದು ನಾನ್‌ಜೆಜೆನೇರಿಯನ್ ಕೊಲೊರಾಡೋ ಮೂಲದ ಎರಡನೇ ಮಹಾಯುದ್ಧದ ಮಾಜಿಸೈನಿಕ ಬಿಲ್ ಮೂರ್. ಯುದ್ಧದ ಸಮಯದಲ್ಲಿ ತನ್ನ ಪ್ರೇಯಸಿಗೆ ಅವರು ಬರೆದ ಪತ್ರ ಕಂಡುಬಂದಿದೆ ಎಂದು ತಿಳಿಸಿದ ನಂತರ ಅವರು ಭಾವುಕರಾಗಿದ್ದರು.

“1944 ರಲ್ಲಿ 20 ವರ್ಷ ಬಿಲ್ ಮೂರ್ ಅವರು ಬರ್ನಾಡಿಯನ್ ಎಂಬ ಯುವತಿಗೆ ಬರೆದ ಪತ್ರವನ್ನು 70 ವರ್ಷಗಳ ನಂತರ ಕಂಡು ಹಿಡಿದು ಓದಿದಾಗ ಮೂರ್ ಭಾವುಕರಗಿದ್ದರು. ವರದಿಯ ವೀಡಿಯೊದಲ್ಲಿ 52 ಸೆಕೆಂಡುಗಳ ನಂತರ ಮೂರ್‌ ಅಂಚೆಚೀಟಿ ಒಡೆಯುವುದನ್ನು ಕಾಣಬಹುದು.

ಇವರಿಗೂ ಕೊರೊನಾದಿಂದ ಗುಣಮುಖರಾದ ರೋಗಿಗೂ ಯಾವುದೇ ಸಂಬಂಧವಿಲ್ಲ. ತಪ್ಪಾಗಿ ಇವರ ಚಿತ್ರವನ್ನು ಬಳಸಿಕೊಳ್ಳಲಾಗಿದೆ ಅಷ್ಟೆ.

ಅಧೀಕೃತ ವರದಿಯಂತೆ ಇಟಲಿಯ ಆರೋಗ್ಯ ರಕ್ಷಣಾ ವ್ಯವಸ್ಥೆಯು ವೆಚ್ಚಗಳನ್ನು ಒಳಗೊಂಡಿದೆ. ರಾಷ್ಟ್ರೀಯ ಆರೋಗ್ಯ ಸೇವೆ (ಎನ್‌ಎಚ್‌ಎಸ್) ಅಡಿಯಲ್ಲಿ ಇಟಲಿಯ ಸಾರ್ವಜನಿಕವಾಗಿ ಧನಸಹಾಯ ಪಡೆದ ಆರೋಗ್ಯ ನೀತಿ ಸಾರ್ವತ್ರಿಕತೆಯನ್ನು ಒಳಗೊಳ್ಳುತ್ತದೆ ಮತ್ತು ಸ್ವಯಂಚಾಲಿತವಾಗಿ ಎಲ್ಲಾ ನಾಗರಿಕರು ಮತ್ತು ಕಾನೂನುಬದ್ಧ ವಿದೇಶಿ ನಿವಾಸಿಗಳು ಈ ವರ್ಗಕ್ಕೆ ಸೇರುತ್ತಾರೆ.

ಮತ್ತೊಂದು ವರದಿಯ ಪ್ರಕಾರ, ಆರೋಗ್ಯ ವ್ಯವಸ್ಥೆಯಲ್ಲಿ ಖಾಸಗಿ ಆರೋಗ್ಯ ವಿಮೆ ಸೀಮಿತ ಪಾತ್ರ ವಹಿಸುತ್ತದೆ. ಇಟಲಿಯಲ್ಲಿ ಖಾಸಗಿ ಆರೋಗ್ಯ ವಿಮೆ ಎರಡು ವಿಧದ ಕಾರ್ಪೊರೇಟ್ ಆಗಿದೆ, ಇದಕ್ಕಾಗಿ ಕಂಪನಿಗಳು ಸ್ವಂತ ಉದ್ಯೋಗಿಗಳನ್ನು ಮತ್ತು ಕೆಲವೊಮ್ಮೆ ಅವರ ಕುಟುಂಬಗಳನ್ನು ಒಳಗೊಳ್ಳುತ್ತವೆ. ಕಾರ್ಪೊರೇಟ್ ಅಲ್ಲದ ವ್ಯಕ್ತಿಗಳು ತಮ್ಮ ಅಥವಾ ತಮ್ಮ ಕುಟುಂಬಗಳಿಗೆ ವಿಮೆಯನ್ನು ಖರೀದಿಸಬಹುದು. ಆದ್ದರಿಂದ ಇಟಲಿಯಲ್ಲಿ ಆರೋಗ್ಯ ಸೇವೆಗಳ ವಿಮೆಯನ್ನು ಪಡೆದ ನಂತರ ರೋಗಿಗಳು ವೈಯಕ್ತಿಕವಾಗಿ ಪಾವತಿಸುವ ಸಾಧ್ಯತೆ ಕಡಿಮೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...