Homeಮುಖಪುಟಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ...

ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ – ಪೊಲೀಸರ ವಿರುದ್ದವೇ ತನಿಖೆ!

ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮುದ್ವೇಷಪೂರಿತ ಪೋಸ್ಟ್‌ ಹಾಕಿದ ಆರೋಪದ ಮೇಲೆ ಏಪ್ರಿಲ್‌ 10ರಂದು ಹಾಸನ ಜಿಲ್ಲೆಯ ಬಿಕ್ಕೋಡಿನ ತೇಜಕುಮಾರ್ ಶೆಟ್ಟಿ ಎಂಬುವವರನ್ನು ಬಂಧಿಸಿದ್ದ ಪೊಲೀಸರ ವಿರುದ್ಧವೇ ತನಿಖೆ ನಡೆಯುವಂತ ಪರಿಸ್ಥಿತಿ ಎದುರಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮ ಹಾಗೂ ವ್ಯಕ್ತಿಯ ನಿಂದನೆಯಾಗಲಿ ಮಾಡಬಾರದು ಎಂದು ಈಗಾಗಲೇ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಆದೇಶ ಇದ್ದರೂ ಸಹ ಅದನ್ನು ಲೆಕ್ಕಿಸದೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರಿಂದ, ಕಲಂ 152ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಲಾಗಿದೆ ಎಂದು ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ತಿಳಿಸಿದ್ದರು. ಬಂಧಿತ ವ್ಯಕ್ತಿಯೊಂದಿಗಿನ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಇದೇ ಸಮುಯದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಸಹ ಎರಡು ಖಾಸಗಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿಯೂ ಅಲ್ಪಸಂಖ್ಯಾತ ಮುಸ್ಲಿಂ ಬಾಂಧವರ ವಿರುದ್ಧ ಸುಳ್ಳು ಸುದ್ದಿ ಹರಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಖಡಕ್‌ ಎಚ್ಚರಿಕೆ ಸಹ ನೀಡಿದ್ದರು.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ


ಘಟನೆ ನಡೆದ ಎರಡು ದಿನಗಳ ನಂತರ ಪ್ರವಾಸೋಧ್ಯಮ ಸಚಿವ ಸಿ.ಟಿ ರವಿರವರು ಆರೋಪಿಯ ರಕ್ಷಣೆಗೆ ಮುಂದಾಗಿದ್ದರು. ಅವರು ಟ್ವಿಟ್ಟರ್‌ನಲ್ಲಿ “ಕೊರೊನ ಸಂಬಂಧ ತಬ್ಲೀಘಿಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನನ್ನ ಸಹೋದ್ಯೋಗಿಗಳಾದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದೇನೆ”. ಎಂದು ಬರೆದುಕೊಂಡಿದ್ದರು.

ಸಿ.ಟಿ ರವಿರವರು ಟ್ವೀಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅನ್ಯಧರ್ಮದ ವಿರುದ್ಧ ಪೋಸ್ಟ್‌ ಹಾಕಿದ್ದಕ್ಕೆ ಬಂಧಿಸಿರುವ ಪ್ರಕರಣದಲ್ಲಿ ಆರೋಪಿಯೊಂದಿಗಿನ ಫೋಟೊವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕಿರುವ ಅಗತ್ಯವಿರಲಿಲ್ಲ. ಈ ಕುರಿತು ಆ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆ ನಡಸುತ್ತೇವೆ ಎಂದು ಶ್ರೀನಿವಾಸಗೌಡರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ತನಿಖೆ ಮತ್ತು ಸಚಿವ ಸಿ.ಟಿ ರವಿಯವರ ನಡೆಯ ಕುರಿತು ಸಾಮಾಜಿಕ ಜಾಲಾತಾಣದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಸಾಮಾಜಿಕ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ” ಗೌರವಾನ್ವಿತ ಸಚಿವರಾದ ಸಿ ಟಿ ರವಿಯವರೇ, ನೀವು ಯಾವುದೋ ಒಂದು ರಾಜಕೀಯ ಪಕ್ಷಕ್ಕೆ ಮಂತ್ರಿಯಲ್ಲ. ಇಡೀ ರಾಜ್ಯಕ್ಕೆ ಮಂತ್ರಿ. ಮಂತ್ರಿಯಾಗಿ ಸಂವಿಧಾನಕ್ಕೆ ಬದ್ಧರಾಗಿರಬೇಕಾದುದು, ಕಾನೂನು ಆಧರಿಸಿದ ಆಡಳಿತವನ್ನು ಬೆಂಬಲಿಸಬೇಕಾದುದು ತಮ್ಮ ಆದ್ಯ ಕರ್ತವ್ಯ. ಜವಾಬ್ದಾರಿಯುತ ಸ್ಥಾನದಲ್ಲಿರುವ ತಾವು ಹೀಗೆ ಪೊಲೀಸರ ಕರ್ತವ್ಯದಲ್ಲಿ ಹಸ್ತಕ್ಷೇಪ ನಡೆಸುವುದು ತಪ್ಪಲ್ಲವೇ? ಇದು ತಪ್ಪು ಸಂದೇಶ ರವಾನಿಸುವುದಿಲ್ಲವೇ? ಇದು ಪೊಲೀಸರ ನೈತಿಕ ಬಲ ಕುಂದಿಸುವುದಿಲ್ಲವೇ? “ನಮ್ಮ ಕಾರ್ಯಕರ್ತರು” ಎಂಬ ನೆಲೆಯಲ್ಲಿ ನೀವು ಅಪರಾಧಿಗಳನ್ನು ರಕ್ಷಿಸಹೊರಟರೆ ಇನ್ನಷ್ಟು ಅಪರಾಧ ಎಸಗಲು ಅದು ನಿಮ್ಮ ಕಾರ್ಯಕರ್ತರಿಗೆ ಕುಮ್ಮಕ್ಕು ನೀಡುವುದಿಲ್ಲವೇ? ನಿಮ್ಮ ಕಾರ್ಯಕರ್ತರಿಗೂ ಇತರ ಕಾರ್ಯಕರ್ತರಿಗೂ ರಾಜ್ಯದಲ್ಲಿ ಬೇರೆ ಬೇರೆ ಕಾನೂನುಗಳಿವೆಯೇ? ಇಂತಹ ಕೆಲಸ ಮಾಡುವ ಮೊದಲು ರಾಜ್ಯದ ಒಟ್ಟು ಹಿತಾಸಕ್ತಿ ಮತ್ತು ದೂರಗಾಮಿ ಪರಿಣಾಮಗಳ ಹಿನ್ನೆಲೆಯಲ್ಲಿ ತಾವು ಎರಡೆರಡು ಬಾರಿ ಯೋಚಿಸಬೇಕಾಗಿ ವಿನಂತಿ” ಎಂದು ಫೇಸ್‌ಬುಕ್‌ನಲ್ಲಿ ಮನವಿ ಮಾಡಿದ್ದಾರೆ.

ಇಂತಹ ಕಷ್ಟಕಾಲದಲ್ಲಿ ವೈಯಕ್ತಿಕ ಸುರಕ್ಷತೆಗೆ ಸೂಕ್ತ ವ್ಯವಸ್ಥೆ ಇಲ್ಲದೆ ದುಡಿಯುತ್ತಿರುವವರು ಪೊಲೀಸರು. ಅವರ ಸ್ಥೈರ್ಯ ಕುಂದಿಸುವಂತಹ ಕೆಲಸವನ್ನು ಸರಕಾರದ ಮಂತ್ರಿಗಳೇ ಮಾಡುತ್ತಿದ್ದಾರೆ. ಈ ಟ್ವೀಟ್ ಮಾಡಿದ ಎರಡು ತಾಸಿನಲ್ಲೇ ಅಧಿಕಾರಿಗಳ ಮೇಲೆ ಕ್ರಮ ಆಗಿದೆ. ಒಂದು ಕೋಮಿನ ವಿರುದ್ಧ ಸುಳ್ಳು ಬರೆದು ಶಾಂತಿ ಕದಡುವವರಿಗೆ ಧೈರ್ಯ ತುಂಬುತ್ತಿದ್ದಾರೆ ಎಂದು ಪತ್ರಕರ್ತರಾದ ಜಿ.ಟಿ ಸತೀಶ್‌ರವರು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....