Homeಮುಖಪುಟಸಂಕಷ್ಟದ ಸಮಯದಲ್ಲಿ ಮೋಜು ಮಸ್ತಿ : ಸಚಿವ ಕೆ. ಸುಧಾಕರ್‌ ವಿರುದ್ಧ ಕಾಂಗ್ರೆಸ್ಸಿಗರ ಕಿಡಿ

ಸಂಕಷ್ಟದ ಸಮಯದಲ್ಲಿ ಮೋಜು ಮಸ್ತಿ : ಸಚಿವ ಕೆ. ಸುಧಾಕರ್‌ ವಿರುದ್ಧ ಕಾಂಗ್ರೆಸ್ಸಿಗರ ಕಿಡಿ

- Advertisement -
- Advertisement -

ಜಗತ್ತಿನಾದ್ಯಂತ 18.5 ಲಕ್ಷ ಜನರಿಗೆ ಕೊರೋನಾ ಸೋಂಕು ಅಂಟಿದೆ. ಈ ಮಹಾಮಾರಿ ವೈರಸ್‌ನಿಂದ 1.14 ಲಕ್ಷ ಮಂದಿ ಈಗಾಗಲೇ ಅಸುನೀಗಿದ್ದಾರೆ. ಭಾರತದಲ್ಲಿ ಸೋಂಕಿತರ ಸಂಖ್ಯೆ 9000 ದಾಟಿದ್ದು, 250ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲೂ 247ಜನಕ್ಕೆ ಸೋಂಕು ತಗುಲಿದ್ದು 6ಜನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಗತ್ತಿಗೆ ಪಿಡುಗಾಗಿ ಪರಿಣಮಿಸುತ್ತಿರುವ ಕೊರೋನಾ ಸದ್ಯದ ಮಟ್ಟಿಗಂತೂ ನಿಯಂತ್ರಣಕ್ಕೆ ಬರುವ ಯಾವ ಲಕ್ಷಣವೂ ಗೋಚರವಾಗುತ್ತಿಲ್ಲ.

ಹೀಗಾಗಿ ಕೊರೋನಾ ನಿಯಂತ್ರಣಕ್ಕಾಗಿ ಜಗತ್ತಿನ ಎಲ್ಲಾ ಸರ್ಕಾರಗಳು ಜನಪ್ರತಿನಿಧಿಗಳು, ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸರು ಸಾಕಷ್ಟು ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ. ತಮ್ಮ ದೇಶದ ಜನ ಪ್ರಾಣವನ್ನು ಉಳಿಸಿಕೊಳ್ಳಲು ಕಟಿಬದ್ಧರಾಗಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯ. ಆದರೆ, ಈ ನಡುವೆ ಕರ್ನಾಟಕದ ಆರೋಗ್ಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಡಿರುವ ಆ ಒಂದು ಕೆಲಸ ಇದೀಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.

ಏನಿದು ಸುಧಾಕರ್ ಪ್ರಕರಣ?

ಸಚಿವ ಕೆ. ಸುಧಾಕರ್ ಭಾನುವಾರ ಮಕ್ಕಳ ಜೊತೆ ಈಜುಕೊಳದಲ್ಲಿ ಆಟವಾಡುತ್ತಿದ್ದ ಪೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, “ತುಂಬಾ ದಿನಗಳ ನಂತರ ನಾನು ನನ್ನ ಮಕ್ಕಳ ಜೊತೆ ಈಜುಕೊಳದಲ್ಲಿದ್ದೇನೆ. ಇಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆ” ಎಂದು ಬರೆದಿದ್ದಾರೆ.

ಆದರೆ ಸಚಿವರ ಈ ಟ್ವೀಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ. “ಲಾಕ್ ಡೌನ್ ಸಮಯದಲ್ಲಿ ವೈದ್ಯರು, ಪೊಲೀಸರು ಕಷ್ಟ ಪಡುತ್ತಿದ್ದಾರೆ. ನೀವು ಈ ಸಮಯದಲ್ಲಿ ಎಂಜಾಯ್ ಮಾಡುತ್ತಿದ್ದೀರ? ವೈದ್ಯಕೀಯ ಮಂತ್ರಿಯಾಗಿ ನಿಮಗೆ ಜವಾಬ್ದಾರಿ ಇಲ್ಲವೇ? ಹೀಗೆ ಮನೆಮಂದಿಯೊಂದಿಗೆ ನೀವು ವಿಶ್ರಾಂತಿ ಮೂಡ್‌ನಲ್ಲಿ ಇರುವುದು ಸರಿಯಾದರೂ ಆ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಅಗತ್ಯ ಏನಿತ್ತು?” ಎಂದು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಚಿವ ಕೆ. ಸುಧಾಕರ್ ತಮ್ಮ ಟ್ವಿಟರ್ ಅಕೌಂಟ್‌ನಿಂದ ಆ ಪೋಟೋವನ್ನು ಡಿಲೀಟ್ ಮಾಡಿದ್ದಾರೆ.

ಈ ಪ್ರಕರಣದ ಕುರಿತು ‌ಇಂದು ಟ್ವೀಟ್ ಮಾಡುವ ಮೂಲಕ ಸಚಿವ ಕೆ. ಸುಧಾಕರ್ ರಾಜೀನಾಮೆಗೆ ಒತ್ತಾಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, “ಇಡೀ ಜಗತ್ತು ಆರೋಗ್ಯ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ, ಕೊರೋನಾ ಉಸ್ತುವಾರಿ ಸಚಿವ ಡಾ.ಸುಧಾಕರ್ ಈಜುಕೊಳದಲ್ಲಿ ಸಮಯ ಕಳೆಯುವ ಮೂಲಕ ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಇದು ನೈತಿಕ ಮಾನದಂಡಗಳ ವಿಷಯವಾಗಿದ್ದು, ಅವರು ತಮ್ಮ ಸ್ವಂತ ಇಚ್ಚೆಯಿಂದ ರಾಜೀನಾಮೆ ನೀಡಬೇಕು ಅಥವಾ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಸಚಿವ ಸಂಪುಟದಿಂದ ಸಚಿವ ಸುಧಾಕರ್ ಅವರನ್ನು ಹೊರಹಾಕಬೇಕು” ಎಂದು ಡಿಕೆಶಿ ಒತ್ತಾಯಿಸಿದ್ದಾರೆ.

ದಣಿದು ಬೆವರ ತೊಳೆಯುತ್ತಿರುವ ಡಾ.ಸುಧಾಕರ್ ಗೊಂದು ಲೈಕ್ ಕೊಡೋಣವೇ???
ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡ್ತಾ ಇರೋ ವೈದ್ಯಕೀಯ ಸಿಬ್ಬಂದಿಗೆ ಕೂಡಾ ಈ ಅವಕಾಶ ಇದೆಯಾ? ಎಂದು ಡಾ.ಮಹೇಂದ್ರ ಕೆ ರಂಗಪ್ಪ ಎಂಬುವವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...