Homeಮುಖಪುಟಸಂಕಷ್ಟದ ಸಮಯದಲ್ಲಿ ಮೋಜು ಮಸ್ತಿ : ಸಚಿವ ಕೆ. ಸುಧಾಕರ್‌ ವಿರುದ್ಧ ಕಾಂಗ್ರೆಸ್ಸಿಗರ ಕಿಡಿ

ಸಂಕಷ್ಟದ ಸಮಯದಲ್ಲಿ ಮೋಜು ಮಸ್ತಿ : ಸಚಿವ ಕೆ. ಸುಧಾಕರ್‌ ವಿರುದ್ಧ ಕಾಂಗ್ರೆಸ್ಸಿಗರ ಕಿಡಿ

- Advertisement -
- Advertisement -

ಜಗತ್ತಿನಾದ್ಯಂತ 18.5 ಲಕ್ಷ ಜನರಿಗೆ ಕೊರೋನಾ ಸೋಂಕು ಅಂಟಿದೆ. ಈ ಮಹಾಮಾರಿ ವೈರಸ್‌ನಿಂದ 1.14 ಲಕ್ಷ ಮಂದಿ ಈಗಾಗಲೇ ಅಸುನೀಗಿದ್ದಾರೆ. ಭಾರತದಲ್ಲಿ ಸೋಂಕಿತರ ಸಂಖ್ಯೆ 9000 ದಾಟಿದ್ದು, 250ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲೂ 247ಜನಕ್ಕೆ ಸೋಂಕು ತಗುಲಿದ್ದು 6ಜನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಗತ್ತಿಗೆ ಪಿಡುಗಾಗಿ ಪರಿಣಮಿಸುತ್ತಿರುವ ಕೊರೋನಾ ಸದ್ಯದ ಮಟ್ಟಿಗಂತೂ ನಿಯಂತ್ರಣಕ್ಕೆ ಬರುವ ಯಾವ ಲಕ್ಷಣವೂ ಗೋಚರವಾಗುತ್ತಿಲ್ಲ.

ಹೀಗಾಗಿ ಕೊರೋನಾ ನಿಯಂತ್ರಣಕ್ಕಾಗಿ ಜಗತ್ತಿನ ಎಲ್ಲಾ ಸರ್ಕಾರಗಳು ಜನಪ್ರತಿನಿಧಿಗಳು, ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸರು ಸಾಕಷ್ಟು ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ. ತಮ್ಮ ದೇಶದ ಜನ ಪ್ರಾಣವನ್ನು ಉಳಿಸಿಕೊಳ್ಳಲು ಕಟಿಬದ್ಧರಾಗಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯ. ಆದರೆ, ಈ ನಡುವೆ ಕರ್ನಾಟಕದ ಆರೋಗ್ಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಡಿರುವ ಆ ಒಂದು ಕೆಲಸ ಇದೀಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.

ಏನಿದು ಸುಧಾಕರ್ ಪ್ರಕರಣ?

ಸಚಿವ ಕೆ. ಸುಧಾಕರ್ ಭಾನುವಾರ ಮಕ್ಕಳ ಜೊತೆ ಈಜುಕೊಳದಲ್ಲಿ ಆಟವಾಡುತ್ತಿದ್ದ ಪೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, “ತುಂಬಾ ದಿನಗಳ ನಂತರ ನಾನು ನನ್ನ ಮಕ್ಕಳ ಜೊತೆ ಈಜುಕೊಳದಲ್ಲಿದ್ದೇನೆ. ಇಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆ” ಎಂದು ಬರೆದಿದ್ದಾರೆ.

ಆದರೆ ಸಚಿವರ ಈ ಟ್ವೀಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ. “ಲಾಕ್ ಡೌನ್ ಸಮಯದಲ್ಲಿ ವೈದ್ಯರು, ಪೊಲೀಸರು ಕಷ್ಟ ಪಡುತ್ತಿದ್ದಾರೆ. ನೀವು ಈ ಸಮಯದಲ್ಲಿ ಎಂಜಾಯ್ ಮಾಡುತ್ತಿದ್ದೀರ? ವೈದ್ಯಕೀಯ ಮಂತ್ರಿಯಾಗಿ ನಿಮಗೆ ಜವಾಬ್ದಾರಿ ಇಲ್ಲವೇ? ಹೀಗೆ ಮನೆಮಂದಿಯೊಂದಿಗೆ ನೀವು ವಿಶ್ರಾಂತಿ ಮೂಡ್‌ನಲ್ಲಿ ಇರುವುದು ಸರಿಯಾದರೂ ಆ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಅಗತ್ಯ ಏನಿತ್ತು?” ಎಂದು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಚಿವ ಕೆ. ಸುಧಾಕರ್ ತಮ್ಮ ಟ್ವಿಟರ್ ಅಕೌಂಟ್‌ನಿಂದ ಆ ಪೋಟೋವನ್ನು ಡಿಲೀಟ್ ಮಾಡಿದ್ದಾರೆ.

ಈ ಪ್ರಕರಣದ ಕುರಿತು ‌ಇಂದು ಟ್ವೀಟ್ ಮಾಡುವ ಮೂಲಕ ಸಚಿವ ಕೆ. ಸುಧಾಕರ್ ರಾಜೀನಾಮೆಗೆ ಒತ್ತಾಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, “ಇಡೀ ಜಗತ್ತು ಆರೋಗ್ಯ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ, ಕೊರೋನಾ ಉಸ್ತುವಾರಿ ಸಚಿವ ಡಾ.ಸುಧಾಕರ್ ಈಜುಕೊಳದಲ್ಲಿ ಸಮಯ ಕಳೆಯುವ ಮೂಲಕ ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಇದು ನೈತಿಕ ಮಾನದಂಡಗಳ ವಿಷಯವಾಗಿದ್ದು, ಅವರು ತಮ್ಮ ಸ್ವಂತ ಇಚ್ಚೆಯಿಂದ ರಾಜೀನಾಮೆ ನೀಡಬೇಕು ಅಥವಾ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಸಚಿವ ಸಂಪುಟದಿಂದ ಸಚಿವ ಸುಧಾಕರ್ ಅವರನ್ನು ಹೊರಹಾಕಬೇಕು” ಎಂದು ಡಿಕೆಶಿ ಒತ್ತಾಯಿಸಿದ್ದಾರೆ.

ದಣಿದು ಬೆವರ ತೊಳೆಯುತ್ತಿರುವ ಡಾ.ಸುಧಾಕರ್ ಗೊಂದು ಲೈಕ್ ಕೊಡೋಣವೇ???
ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡ್ತಾ ಇರೋ ವೈದ್ಯಕೀಯ ಸಿಬ್ಬಂದಿಗೆ ಕೂಡಾ ಈ ಅವಕಾಶ ಇದೆಯಾ? ಎಂದು ಡಾ.ಮಹೇಂದ್ರ ಕೆ ರಂಗಪ್ಪ ಎಂಬುವವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...