Homeಮುಖಪುಟ4 ವರ್ಷದ ಹುಡುಗಿಯ ಕ್ಯಾನ್ಸರ್ ಔಷಧಿಗಾಗಿ ವ್ಯಕ್ತಿಯೊಬ್ಬ 150 ಕಿ.ಮೀ ಪ್ರಯಾಣಿಸಿದ ಕಥೆ.

4 ವರ್ಷದ ಹುಡುಗಿಯ ಕ್ಯಾನ್ಸರ್ ಔಷಧಿಗಾಗಿ ವ್ಯಕ್ತಿಯೊಬ್ಬ 150 ಕಿ.ಮೀ ಪ್ರಯಾಣಿಸಿದ ಕಥೆ.

- Advertisement -
- Advertisement -

21 ದಿನಗಳ ಲಾಕ್‌ಡೌನ್ ನಮ್ಮಲ್ಲಿ ಹಲವರ ಮೇಲೆ ಕಠಿಣ ಪರಿಣಾಮ ಬೀರಿರಬಹುದು. ಏಕೆಂದರೆ ಒಂದು ದಿನ ಹೊರಗಡೆ ಹೋಗದೆ ಬದುಕುವುದು ಹೇಗೆ ಎಂದು ನಾವು ಆಶ್ಚರ್ಯ ಪಡುತ್ತೇವೆ. ಆದರೆ ಕೆಲವು ಕಾಯಿಲೆಗಳಿಂದಾಗಿ ಅಕ್ಷರಶಃ ಇನ್ನೊಂದು ಹೆಚ್ಚು ದಿನ ಬದುಕಲು ಹೋರಾಡುತ್ತಿರುವವರಿಗೆ ಈ ಲಾಕ್‌ಡೌನ್‌ ವಿಶೇಷವಾಗಿ ಕ್ರೂರವಾಗಬಹುದು. ರಕ್ತದ ಕ್ಯಾನ್ಸರ್ ಹೊಂದಿರುವ ನಾಲ್ಕು ವರ್ಷದ ನೂರ್ (ಹೆಸರು ಬದಲಾಯಿಸಲಾಗಿದೆ) ಆ ಎರಡನೇ ವಿಭಾಗದಲ್ಲಿ ಸೇರುತ್ತಾಳೆ. ಈ ಕುರಿತು ದಿ ನ್ಯೂಸ್‌ ಮಿನಿಟ್‌ ಪ್ರಕಟಿಸಿದ ಬರಹದ ಕನ್ನಡ ಅನುವಾದ ಇಲ್ಲಿದೆ.

ಪ್ರತಿ ತಿಂಗಳು ನೂರ್‌ಳನ್ನು ತಿರುವನಂತಪುರಂನ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರಕ್ಕೆ, ತನ್ನ ಊರಾದ ಆಲಪ್ಪುಳದಿಂದ ಕೀಮೋಥೆರಪಿ ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಚ್‌ನಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಧಿಸಲಾಗಿದ್ದರಿಂದ ಆಸ್ಪತ್ರೆಯು ನೂರ್‌ಳ ಚಿಕಿತ್ಸೆಯನ್ನು ರದ್ದುಗೊಳಿಸಿದ್ದಲ್ಲದೆ, ಅವರ ಕುಟುಂಬವು ಔಷಧಿಗಳನ್ನು ಖರೀದಿಸಲು ದೂರದ ತಿರುವನಂತಪುರಂಗೆ ಪ್ರಯಾಣಿಸಲಾಗದೆ ಚಿಂತಿತರಾಗಿತ್ತು.

ಇಂತಹ ಕಷ್ಟಕರ ಸಮಯದಲ್ಲಿ ಅವರ ನೆರೆಮನೆಯಲ್ಲಿದ್ದ ವ್ಯಕ್ತಿ ಮತ್ತು ಪೊಲೀಸ್‌ ಅಧಿಕಾರಿಯೊಬ್ಬ ಮಾನವೀಯತೆಯ ರೂಪದಲ್ಲಿ ಒದಗಿಬಂದಿದ್ದಾರೆ. ಆ ಮಗುವಿನೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲದಿದ್ದರೂ, ಆಕೆಯ ಜೀವ ಉಳಿಸುವ ಸಲುವಾಗಿ ಮಾರ್ಚ್ 31 ರಂದು ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯಕೀಯ ಸಾರ್ಜೆಂಟ್ ಆಗಿರುವ ಕೆ.ಪಿ.ವಿಷ್ಣು ಅವರು ತಮ್ಮ ಬೈಕ್‌ನಲ್ಲಿ 150 ಕಿ.ಮೀ ಪ್ರಯಾಣಿಸಿ ತಮ್ಮ ಕೈಯಿಂದ ಹಣ ಹಾಕಿ ಔಷಧಿ ಖರೀದಿಸಿ ಆ ಕುಟುಂಬಕ್ಕೆ ನೀಡಿದ್ದಾರೆ. ಔಷಧಿ ಕೈಸೇರುವವರೆಗೂ ವಿಷ್ಣುವಿನ ಈ ಸಾಹಸ ನೂರ್‌ಳ ಕುಟುಂಬಕ್ಕೆ ತಿಳಿದಿರಲಿಲ್ಲ.

ಆಲಪ್ಪುಳಾ ನಾರ್ತ್ ಸ್ಟೇಷನ್‌ನ ನಾಗರಿಕ ಪೊಲೀಸ್ ಅಧಿಕಾರಿ ಮತ್ತು ವಿಷ್ಣುವಿನ ನೆರೆಹೊರೆಯ ಆಂಟನಿ ರತೀಶ್, “ನಾನು ನೂರ್‌ನ ಕುಟುಂಬವನ್ನು ಕೆಲವು ತಿಂಗಳುಗಳಿಂದ ತಿಳಿದಿದ್ದೇನೆ. ಮಾರ್ಚ್ 30 ರಂದು, ಆಕೆಯ ತಾಯಿ ನನಗೆ ಕರೆ ಮಾಡಿ, ತನ್ನ ಮಗಳ ಕೀಮೋಥೆರಪಿಯನ್ನು ರದ್ದುಪಡಿಸಲಾಗಿದೆ ಮತ್ತು ವೈದ್ಯರು ಔಷಧಿ ತೆಗೆದುಕೊಳ್ಳುವುದನ್ನು ಮುಂದುವರೆಸಬೇಕೆಂದು ಕೇಳಿಕೊಂಡಿದ್ದಾರೆ. ಆದರೆ ಅವರ ಮನೆಯಲ್ಲಿ ಔಷಧಿ ಖಾಲಿಯಾಗಿತ್ತಲ್ಲದೇ ಆಲಪ್ಪುಳದಲ್ಲಿ ಎಲ್ಲಿಯೂ ಔಷಧಿಯನ್ನು ಸಿಗಲಿಲ್ಲ. ಅವರು ಲಾಕ್‌ಡೌನ್‌ ಸಮಯದಲ್ಲಿ ಔಷಧಿ ತರಲು ತಿರುವನಂತಪುರಂಗೆ ಕ್ಯಾಬ್ ತೆಗೆದುಕೊಳ್ಳುವಷ್ಟು ಹಣ ಹೊಂದಿಲ್ಲ” ಎಂದು ತಿಳಿಸಿದ್ದರು.

ಆ ನಂತರ ಅವರಿಗೆ ಹೇಗೆ ಸಹಾಯ ಮಾಡಬೇಕೆಂದು ಆಶ್ಚರ್ಯಪಟ್ಟ ರತೀಶ್, ತಿರುವನಂತಪುರಂ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ತನ್ನ ನೆರೆಹೊರೆಯ ವಿಷ್ಣುವನ್ನು ಸಂಪರ್ಕಿಸಿದರು. ಆದರೆ ವಿಷ್ಣು ಆ ರಾತ್ರಿ ತಾನೇ ತಿರುವನಂತಪುರಕ್ಕೆ ತೆರಳಿದ್ದರು ಮತ್ತು ಅವರು ತಮ್ಮ ಕರ್ತವ್ಯವನ್ನು ಪೂರ್ಣಗೊಳಿಸುವವರೆಗೆ ಒಂದು ವಾರ ಅಲ್ಲಿಯೇ ಇರಲು ಯೋಜಿಸಿದ್ದರು.

“ನಾನು ಅವರಿಗೆ ಕರೆ ಮಾಡಿದಾಗ ಅವರು ತಿರುವನಂತಪುರಂ ತಲುಪಿದ್ದರು. ಪ್ರಾದೇಶಿಕ ಕ್ಯಾನ್ಸರ್ ಕೇಂದ್ರದಿಂದ ಔಷಧಿಯನ್ನು ಖರೀದಿಸಿ ಕೊಲ್ಲಂ ಜಿಲ್ಲೆಯವರೆಗೆ ಮಾತ್ರ ತಲುಪಿಸಬಹುದು ಎಂದು ಹೇಳಿದರು. ಆದರೆ ಮರುದಿನ ಬೆಳಿಗ್ಗೆ ಅವರು ಮನಸ್ಸು ಬದಲಿಸಿ 150 ಕಿಲೋಮೀಟರ್ ಸವಾರಿ ಮಾಡಿ, ನೂರ್‌ನ ಮನೆ ಬಾಗಿಲಿಗೆ ಹೋಗಿ ಔಷಧಿಗಳನ್ನು ತಲುಪಿಸಿದನು. ಆ ರಾತ್ರಿ ಅವನು ಮಲಗಿದ್ದನೆಂದು ನಾನು ಭಾವಿಸುವುದಿಲ್ಲ” ಎಂದು ರತೀಶ್ ಹೇಳುತ್ತಾರೆ.

ಮಾಜಿ ಪೊಲೀಸ್ ಅಧಿಕಾರಿಯಾಗಿದ್ದ 32 ವರ್ಷದ ಸಾರ್ಜೆಂಟ್ ವಿಷ್ಣು, ಔಷಧಿಗಳನ್ನು ವಿತರಿಸಿದ ನಂತರ ಆಲಪ್ಪುಳದಲ್ಲಿ ಒಂದು ದಿನ ಇದ್ದು ನಂತರ ತಿರುವನಂತಪುರಂಗೆ ಹಿಂತಿರುಗಿದ್ದಾರೆ.

ಲಾಕ್‌ಡೌನ್ ಹೊರತಾಗಿಯೂ ನೂರ್‌ಗೆ ಈಗ ಅಗತ್ಯ ಔಷಧಿಗಳು ಲಭ್ಯವಾದ್ದರಿಂದ, ಅವರ ಕುಟುಂಬವು ಸಂತೋಷದಲ್ಲಿದೆ. ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯ ಒದಗಿದ್ದಕ್ಕೆ ಅವರು ಕೃತಜ್ಞರಾಗಿದ್ದಾರೆ.

“ನಾನು ಪ್ರತಿ ಬಾರಿ ನನ್ನ ನಮಾಜ್ ಮಾಡುವಾಗ ಈ ಇಬ್ಬರು ಪುರುಷರ ಬಗ್ಗೆ ಯೋಚಿಸುತ್ತೇನೆ. ಅಲ್ಲಾಹನು ಯಾವಾಗಲೂ ಅವರನ್ನು ಆಶೀರ್ವದಿಸುವನು ”ಎಂದು ನೂರ್ ತಾಯಿ ಮಲಯಾಳಂ ಪತ್ರಿಕೆಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...