Homeಚಳವಳಿಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಟ್ವಿಟ್ಟರ್‌ ಅಭಿಯಾನ: #DoNotArrestAnand ಟಾಪ್ ಟ್ರೆಂಡಿಂಗ್

ಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಟ್ವಿಟ್ಟರ್‌ ಅಭಿಯಾನ: #DoNotArrestAnand ಟಾಪ್ ಟ್ರೆಂಡಿಂಗ್

- Advertisement -
- Advertisement -

ಪ್ರಾಧ್ಯಾಪಕ ಹಾಗೂ ಸಾಮಾಜಿಕ ಹೋರಾಟಗಾರ ಡಾ. ಆನಂದ್ ತೇಲ್ತುಂಬ್ಡೆ ಅವರ ಬಂಧನವನ್ನು ವಿರೋಧಿಸಿ ಸಮಾನ ಮನಸ್ಕರು ನೀಡಿದ್ದ ಕರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಈಗ ಟ್ವಿಟ್ಟರಿನಲ್ಲಿ ವಿವಿದ ಸಂದೇಶದೊಂದಿಗೆ ದೇಶದ ಹಲವಾರು ಗಣ್ಯರು #DoNotArrestAnand ಹ್ಯಾಸ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದು, ಅದೀಗ ಟಾಪ್ ಟ್ರೆಂಡಿಗ್ ಆಗಿದೆ.

ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ’ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಯಂತಹ ಕರಾಳ ಶಾಸನವನ್ನು ಬಳಸಿಕೊಂಡು ಅವರ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು. 2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.

ಟ್ವಿಟ್ಟರಿನಲ್ಲಿ ಹಲವಾರು ಗಣ್ಯರು ಈ ಬಗ್ಗೆ ಬರೆದುಕೊಂಡಿದ್ದು, ಜೆಎನ್ಯೂ ಮಾಜಿ ನಾಯಕ ಉಮರ್ ಖಾಲಿದ್ “ಅವರು ತುಳಿತಕ್ಕೊಳಗಾದ ಜನರ ಹಿತದೃಷ್ಟಿಯಿಂದ ಬರೆಯುವುದನ್ನು ಆಯ್ಕೆ ಮಾಡಿಕೊಂಡರು. ದೇಶದ ಜನರನ್ನು ರಕ್ಷಿಸಲು ಇದನ್ನು ಮಾಡುತ್ತಿದ್ದಾರೆಂದು ನಂಬಿದ್ದರು. ಇದು ಅದಕ್ಕೆ ಪಡೆಯುವ ಪ್ರತಿಫಲವೇ?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಊನಾ ಚಳವಳಿಯ ನೇತಾರ ಹಾಗೂ ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ “ಡಾ. ತೇಲ್ತುಂಬ್ಡೆ ಆರೆಸ್ಸಸ್ಸನ್ನು ಮಾತ್ರ ಟೀಕಿಸಲಿಲ್ಲ, ತಪ್ಪು ಮಾಡಿದ ಅಂಬೇಡ್ಕರ್‌ವಾದಿಗಳನ್ನು ಮತ್ತು ಮಾರ್ಕ್ಸ್ವಾದಿಗಳನ್ನು ಕೂಡಾ ಅವರು ಟೀಕಿಸಿದರು. ಇದು ಅವರ ಸೈದ್ಧಾಂತಿಕ ಪ್ರಾಮಾಣಿಕತೆಯನ್ನು ತೋರಿಸುತ್ತದೆ! ಇಂತಹ ಪ್ರಾಮಾಣಿಕ ಚಿಂತಕನನ್ನು ಹೇಗೆ ಬಂಧಿಸಬಹುದು?” ಎಂದು ಟ್ವೀಟಿಸಿದ್ದಾರೆ.

ಮಹಿಳಾ ಹೊರಾಟಗಾರ್ತಿ ಹಾಗೂ ಸಾಮಾಜಿಕ ಕಾರ್ಯರ್ಕೆ ಕವಿತಾ ಕೃಷ್ಣನ್ ಅವರು, ರೋಮಿಳಾ ಥಾಪರ್ ಬರೆದಿರುವ “ವಿಶೇಷ ಅಮಾನವೀಯ” ಲೇಖನವನ್ನು ಟ್ಯಾಗ್‌ ಮಾಡಿ ಬಂಧನವನ್ನು ಖಂಡಿಸಿದ್ದಾರೆ.

ತಮಿಳು ಚಿತ್ರನಿರ್ದೇಶಕ ಮತ್ತು ಅಂಬೇಡ್ಕರ್‌ವಾದಿ ಕಲಾವಿದ ಪ.ರಂಜಿತ್‌ ಟ್ವೀಟ್‌ ಮಾಡಿ “ಮಾನವ ಹಕ್ಕು ಹೋರಾಟಗಾರರಾದ ಆನಂದ್‌ ತೇಲ್ತುಂಬ್ಡೆ ಮತ್ತು ಗೌತಮ್‌ ನವಲಖರನ್ನು ಸುಳ್ಳು ಕೇಸುಗಳ ಅಡಿಯಲ್ಲಿ ಬಂಧಿಸಬೇಡಿ. ಪ್ರಪಂಚವೇ ಕೊರೊನಾ ಭೀತಿಯಲ್ಲಿರುವಾಗ ಬಂಧನವಿಲ್ಲದೆಯೇ ವಿಚಾರಣೆ ನಡೆಸಿ. ಅಂತರರಾಷ್ಟ್ರೀಯ ಖ್ಯಾತಿಯ ವಿದ್ವಾಂಸರನ್ನು ಬಂಧಿಸುವುದು ನಿಜಕ್ಕೂ ದೌರ್ಜನ್ಯ ಮತ್ತು ನಾಚಿಕೆಗೇಡಿನ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬರಹಗಾರ್ತಿ ಮೀನಾ ಕಂದಸ್ವಾಮಿ, ದಲಿತರಿಂದ ಸ್ವತಂತ್ರ ಅಭಿವ್ಯಕ್ತಿಯ ಸಣ್ಣದೊಂದು ಚಿಹ್ನೆ ಕಂಡರು ಕೂಡಾ ರಾಜ್ಯವು ಅವರ ಮೇಲೆ ವಿವೇಚನಾರಹಿತವಾದ ಬಲವನ್ನು ಪ್ರಯೋಗಿಸುತ್ತದೆ. ಅವರನ್ನು ನಕ್ಸಲರಂತೆ ದೋಷಾರೋಪಣೆ ಮಾಡುತ್ತದೆ ಹಾಗೂ ಅವರನ್ನು ವರ್ಷಗಳ ಕಾಲ ಸೆರೆಹಿಡಿಯುತ್ತದೆ ಮತ್ತು ನಿರ್ಭಯದಿಂದ ಕೊಲ್ಲುತ್ತದೆ… ಎಂಬ ತೇಲ್ತುಂಬ್ಡೆ ಬರೆದ ಬರಹದ ಸಾಕ್ಷಾತ್ಕಾರ ಈಗ ಆಗುತ್ತಿದೆ ಎಂದು ಬರೆದಿದ್ದಾರೆ.

ಅಲ್ಲದೆ, “1926, ಇಟಾಲಿಯ ಫ್ಯಾಸಿಸಂ, ಆಂಟೋನಿಯೊ ಗ್ರಾಮ್ಸಿಯನ್ನು ಬೆನಿಟೊ ಮುಸೊಲಿನಿಯ ಆಡಳಿತವು ಬಂಧಿಸಿತು. 2020, ಮನುವಾದಿ ಹಿಂದುತ್ವ ಫ್ಯಾಸಿಸಂ ಆನಂದ್ ತೆಲ್ತುಂಬ್ದೆ ಅವರನ್ನು ನರೇಂದ್ರ ಮೋದಿ- ಅಮಿತ್ ಶಾ ಆಡಳಿತ ಬಂಧಿಸಲಿದೆ. ಇತಿಹಾಸವು ಮರುಕಳಿಸುತ್ತಿದೆ. ಬುದ್ಧಿಜೀವಿಗಳ ಬೇಟೆಯನ್ನು ನಿಲ್ಲಿಸಿ.” ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟ ಸುಶಾಂತ್ ಸಿಂಗ್ ಅವರು “ಅನ್ಯಾಯದ ಹಿನ್ನೆಲೆಯಲ್ಲಿ, ಮೌನವಾಗಿರುವುದು ರಾಜಕೀಯವಾಗಿ ಮಾತನಾಡುವುದು ಅಷ್ಟೇ. ಆನಂದ್ ತೆಲ್ತುಂಬ್ದೆ ಮತ್ತು ಗೌತಮ್ ನವಲಖ ಅವರೊಂದಿಗೆ ನಿಂತುಕೊಳ್ಳಿ. ಆತ್ಮಸಾಕ್ಷಿಯಿರುವವರು ಎಲ್ಲ ಕೈದಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ.” ಎಂದು ಒತ್ತಾಯಿಸಿದ್ದಾರೆ.

 

ಪತ್ರಕರ್ತ ನಿಲಂಜಯ್ ತಿವಾರಿ ಡಾ. ಅಂಬೇಡ್ಕರ್‌ ಅವರ ಜನ್ಮ ದಿನಾಚರಣೆಯಂದು “ಡಾ.ಬಿ.ಆರ್ ಅಂಬೇಡ್ಕರ್ ಅವರ ಅಳಿಯನನ್ನು ಬಂಧಿಸುತ್ತಿರುವುದು,  ಸಮಾಜ ಎಲ್ಲಿಗೆ ಹೋಗುತ್ತಿದ್ದೇವೆ ಎಂಬುದರ ಬಗ್ಗೆ ಸಾಕಷ್ಟು ಹೇಳುತ್ತೇವೆ. ನಾವು ಕೊರೊನಾದಿಂದ ಮಾತ್ರವಲ್ಲ, ಜಾತಿ, ಕೋಮುವಾದ ಮತ್ತು ಸರ್ವಾಧಿಕಾರಕ್ಕೆ ಕೂಡಾ ತುತ್ತಾಗಿದ್ದೇವೆ!” ಎಂದು ಬರೆದಿದ್ದಾರೆ.

 

ಹಿರಿಯ ಪ್ರಾದ್ಯಾಪಕರಾಗಿರುವ ಆನಂದ ತೇಲ್ತುಂಬ್ಡೆ ಅವರ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಜಾತಿ-ವರ್ಗ ಮತ್ತು ಸಾರ್ವಜನಿಕ ನೀತಿಗಳಿಗೆ ಸಂಬಂದಿಸಿದಂತೆ ಅತ್ಯಂತ ಮಹತ್ವದ ಚಿಂತಕರಾದ ಆನಂದ ತೇಲ್ತುಂಬ್ಡೆ ಅವರು ಪ್ರಜಾಪ್ರಭುತ್ವ ಮತ್ತು ಶಿಕ್ಷಣ ಹಕ್ಕುಗಳ ಪರವಾದ ಹೋರಾಟಗಾರರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...