Homeಚಳವಳಿಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಟ್ವಿಟ್ಟರ್‌ ಅಭಿಯಾನ: #DoNotArrestAnand ಟಾಪ್ ಟ್ರೆಂಡಿಂಗ್

ಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಟ್ವಿಟ್ಟರ್‌ ಅಭಿಯಾನ: #DoNotArrestAnand ಟಾಪ್ ಟ್ರೆಂಡಿಂಗ್

- Advertisement -
- Advertisement -

ಪ್ರಾಧ್ಯಾಪಕ ಹಾಗೂ ಸಾಮಾಜಿಕ ಹೋರಾಟಗಾರ ಡಾ. ಆನಂದ್ ತೇಲ್ತುಂಬ್ಡೆ ಅವರ ಬಂಧನವನ್ನು ವಿರೋಧಿಸಿ ಸಮಾನ ಮನಸ್ಕರು ನೀಡಿದ್ದ ಕರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಈಗ ಟ್ವಿಟ್ಟರಿನಲ್ಲಿ ವಿವಿದ ಸಂದೇಶದೊಂದಿಗೆ ದೇಶದ ಹಲವಾರು ಗಣ್ಯರು #DoNotArrestAnand ಹ್ಯಾಸ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದು, ಅದೀಗ ಟಾಪ್ ಟ್ರೆಂಡಿಗ್ ಆಗಿದೆ.

ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ’ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಯಂತಹ ಕರಾಳ ಶಾಸನವನ್ನು ಬಳಸಿಕೊಂಡು ಅವರ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು. 2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.

ಟ್ವಿಟ್ಟರಿನಲ್ಲಿ ಹಲವಾರು ಗಣ್ಯರು ಈ ಬಗ್ಗೆ ಬರೆದುಕೊಂಡಿದ್ದು, ಜೆಎನ್ಯೂ ಮಾಜಿ ನಾಯಕ ಉಮರ್ ಖಾಲಿದ್ “ಅವರು ತುಳಿತಕ್ಕೊಳಗಾದ ಜನರ ಹಿತದೃಷ್ಟಿಯಿಂದ ಬರೆಯುವುದನ್ನು ಆಯ್ಕೆ ಮಾಡಿಕೊಂಡರು. ದೇಶದ ಜನರನ್ನು ರಕ್ಷಿಸಲು ಇದನ್ನು ಮಾಡುತ್ತಿದ್ದಾರೆಂದು ನಂಬಿದ್ದರು. ಇದು ಅದಕ್ಕೆ ಪಡೆಯುವ ಪ್ರತಿಫಲವೇ?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಊನಾ ಚಳವಳಿಯ ನೇತಾರ ಹಾಗೂ ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ “ಡಾ. ತೇಲ್ತುಂಬ್ಡೆ ಆರೆಸ್ಸಸ್ಸನ್ನು ಮಾತ್ರ ಟೀಕಿಸಲಿಲ್ಲ, ತಪ್ಪು ಮಾಡಿದ ಅಂಬೇಡ್ಕರ್‌ವಾದಿಗಳನ್ನು ಮತ್ತು ಮಾರ್ಕ್ಸ್ವಾದಿಗಳನ್ನು ಕೂಡಾ ಅವರು ಟೀಕಿಸಿದರು. ಇದು ಅವರ ಸೈದ್ಧಾಂತಿಕ ಪ್ರಾಮಾಣಿಕತೆಯನ್ನು ತೋರಿಸುತ್ತದೆ! ಇಂತಹ ಪ್ರಾಮಾಣಿಕ ಚಿಂತಕನನ್ನು ಹೇಗೆ ಬಂಧಿಸಬಹುದು?” ಎಂದು ಟ್ವೀಟಿಸಿದ್ದಾರೆ.

ಮಹಿಳಾ ಹೊರಾಟಗಾರ್ತಿ ಹಾಗೂ ಸಾಮಾಜಿಕ ಕಾರ್ಯರ್ಕೆ ಕವಿತಾ ಕೃಷ್ಣನ್ ಅವರು, ರೋಮಿಳಾ ಥಾಪರ್ ಬರೆದಿರುವ “ವಿಶೇಷ ಅಮಾನವೀಯ” ಲೇಖನವನ್ನು ಟ್ಯಾಗ್‌ ಮಾಡಿ ಬಂಧನವನ್ನು ಖಂಡಿಸಿದ್ದಾರೆ.

ತಮಿಳು ಚಿತ್ರನಿರ್ದೇಶಕ ಮತ್ತು ಅಂಬೇಡ್ಕರ್‌ವಾದಿ ಕಲಾವಿದ ಪ.ರಂಜಿತ್‌ ಟ್ವೀಟ್‌ ಮಾಡಿ “ಮಾನವ ಹಕ್ಕು ಹೋರಾಟಗಾರರಾದ ಆನಂದ್‌ ತೇಲ್ತುಂಬ್ಡೆ ಮತ್ತು ಗೌತಮ್‌ ನವಲಖರನ್ನು ಸುಳ್ಳು ಕೇಸುಗಳ ಅಡಿಯಲ್ಲಿ ಬಂಧಿಸಬೇಡಿ. ಪ್ರಪಂಚವೇ ಕೊರೊನಾ ಭೀತಿಯಲ್ಲಿರುವಾಗ ಬಂಧನವಿಲ್ಲದೆಯೇ ವಿಚಾರಣೆ ನಡೆಸಿ. ಅಂತರರಾಷ್ಟ್ರೀಯ ಖ್ಯಾತಿಯ ವಿದ್ವಾಂಸರನ್ನು ಬಂಧಿಸುವುದು ನಿಜಕ್ಕೂ ದೌರ್ಜನ್ಯ ಮತ್ತು ನಾಚಿಕೆಗೇಡಿನ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬರಹಗಾರ್ತಿ ಮೀನಾ ಕಂದಸ್ವಾಮಿ, ದಲಿತರಿಂದ ಸ್ವತಂತ್ರ ಅಭಿವ್ಯಕ್ತಿಯ ಸಣ್ಣದೊಂದು ಚಿಹ್ನೆ ಕಂಡರು ಕೂಡಾ ರಾಜ್ಯವು ಅವರ ಮೇಲೆ ವಿವೇಚನಾರಹಿತವಾದ ಬಲವನ್ನು ಪ್ರಯೋಗಿಸುತ್ತದೆ. ಅವರನ್ನು ನಕ್ಸಲರಂತೆ ದೋಷಾರೋಪಣೆ ಮಾಡುತ್ತದೆ ಹಾಗೂ ಅವರನ್ನು ವರ್ಷಗಳ ಕಾಲ ಸೆರೆಹಿಡಿಯುತ್ತದೆ ಮತ್ತು ನಿರ್ಭಯದಿಂದ ಕೊಲ್ಲುತ್ತದೆ… ಎಂಬ ತೇಲ್ತುಂಬ್ಡೆ ಬರೆದ ಬರಹದ ಸಾಕ್ಷಾತ್ಕಾರ ಈಗ ಆಗುತ್ತಿದೆ ಎಂದು ಬರೆದಿದ್ದಾರೆ.

ಅಲ್ಲದೆ, “1926, ಇಟಾಲಿಯ ಫ್ಯಾಸಿಸಂ, ಆಂಟೋನಿಯೊ ಗ್ರಾಮ್ಸಿಯನ್ನು ಬೆನಿಟೊ ಮುಸೊಲಿನಿಯ ಆಡಳಿತವು ಬಂಧಿಸಿತು. 2020, ಮನುವಾದಿ ಹಿಂದುತ್ವ ಫ್ಯಾಸಿಸಂ ಆನಂದ್ ತೆಲ್ತುಂಬ್ದೆ ಅವರನ್ನು ನರೇಂದ್ರ ಮೋದಿ- ಅಮಿತ್ ಶಾ ಆಡಳಿತ ಬಂಧಿಸಲಿದೆ. ಇತಿಹಾಸವು ಮರುಕಳಿಸುತ್ತಿದೆ. ಬುದ್ಧಿಜೀವಿಗಳ ಬೇಟೆಯನ್ನು ನಿಲ್ಲಿಸಿ.” ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟ ಸುಶಾಂತ್ ಸಿಂಗ್ ಅವರು “ಅನ್ಯಾಯದ ಹಿನ್ನೆಲೆಯಲ್ಲಿ, ಮೌನವಾಗಿರುವುದು ರಾಜಕೀಯವಾಗಿ ಮಾತನಾಡುವುದು ಅಷ್ಟೇ. ಆನಂದ್ ತೆಲ್ತುಂಬ್ದೆ ಮತ್ತು ಗೌತಮ್ ನವಲಖ ಅವರೊಂದಿಗೆ ನಿಂತುಕೊಳ್ಳಿ. ಆತ್ಮಸಾಕ್ಷಿಯಿರುವವರು ಎಲ್ಲ ಕೈದಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ.” ಎಂದು ಒತ್ತಾಯಿಸಿದ್ದಾರೆ.

 

ಪತ್ರಕರ್ತ ನಿಲಂಜಯ್ ತಿವಾರಿ ಡಾ. ಅಂಬೇಡ್ಕರ್‌ ಅವರ ಜನ್ಮ ದಿನಾಚರಣೆಯಂದು “ಡಾ.ಬಿ.ಆರ್ ಅಂಬೇಡ್ಕರ್ ಅವರ ಅಳಿಯನನ್ನು ಬಂಧಿಸುತ್ತಿರುವುದು,  ಸಮಾಜ ಎಲ್ಲಿಗೆ ಹೋಗುತ್ತಿದ್ದೇವೆ ಎಂಬುದರ ಬಗ್ಗೆ ಸಾಕಷ್ಟು ಹೇಳುತ್ತೇವೆ. ನಾವು ಕೊರೊನಾದಿಂದ ಮಾತ್ರವಲ್ಲ, ಜಾತಿ, ಕೋಮುವಾದ ಮತ್ತು ಸರ್ವಾಧಿಕಾರಕ್ಕೆ ಕೂಡಾ ತುತ್ತಾಗಿದ್ದೇವೆ!” ಎಂದು ಬರೆದಿದ್ದಾರೆ.

 

ಹಿರಿಯ ಪ್ರಾದ್ಯಾಪಕರಾಗಿರುವ ಆನಂದ ತೇಲ್ತುಂಬ್ಡೆ ಅವರ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಜಾತಿ-ವರ್ಗ ಮತ್ತು ಸಾರ್ವಜನಿಕ ನೀತಿಗಳಿಗೆ ಸಂಬಂದಿಸಿದಂತೆ ಅತ್ಯಂತ ಮಹತ್ವದ ಚಿಂತಕರಾದ ಆನಂದ ತೇಲ್ತುಂಬ್ಡೆ ಅವರು ಪ್ರಜಾಪ್ರಭುತ್ವ ಮತ್ತು ಶಿಕ್ಷಣ ಹಕ್ಕುಗಳ ಪರವಾದ ಹೋರಾಟಗಾರರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...