Homeಮುಖಪುಟಮೇ 03ರವರೆಗೆ ಲಾಕ್‌ಡೌನ್‌ ಮುಂದುವರಿಕೆ: ಏಪ್ರಿಲ್‌ 20ರ ನಂತರ ನಿಬಂಧನೆಗಳು ಸಡಿಲ - ಪ್ರಧಾನಿ ಮೋದಿ

ಮೇ 03ರವರೆಗೆ ಲಾಕ್‌ಡೌನ್‌ ಮುಂದುವರಿಕೆ: ಏಪ್ರಿಲ್‌ 20ರ ನಂತರ ನಿಬಂಧನೆಗಳು ಸಡಿಲ – ಪ್ರಧಾನಿ ಮೋದಿ

- Advertisement -
- Advertisement -

ಮೇ 03ರವರೆಗೆ ಲಾಕ್‌ಡೌನ್‌ ಮುಂದುವರಿಕೆಯಾಗಲಿದ್ದು, ಈ ವಾರ ಕಠಿಣ ನಿಬಂಧನೆಗಳಿದ್ದು ಏಪ್ರಿಲ್‌ 20ರ ನಂತರ ನಿಬಂಧನೆಗಳು ಸಡಿಲವಾಗಲಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇದೇ ಸಮಯದಲ್ಲಿ ಅವರು ಕೊರೋನಾ ವೈರಸ್ ವಿಸ್ತರಣೆಯನ್ನು ತಡೆಗಟ್ಟಲು 21 ದಿನಗಳ ಲಾಕ್ ಡೌನ್ ಮಾಡುವಲ್ಲಿ ದೇಶದ ಜನರು ತೋರಿಸಿದ ಶಿಸ್ತನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

“ರಾಜ್ಯ ಸರ್ಕಾರಗಳು ಮತ್ತು ವಿವಿಧ ಪಾಲುದಾರರೊಂದಿಗಿನ ನನ್ನ ಚರ್ಚೆಗಳಲ್ಲಿ, ಒಂದು ವಿಷಯವು ಸರ್ವಾನುಮತದಿಂದ ಕೂಡಿತ್ತು, ಅದೆಂದರೆ ನಾವು ಲಾಕ್ ಡೌನ್ ಅನ್ನು ವಿಸ್ತರಿಸಬೇಕು. ಆದ್ದರಿಂದ, ಲಾಕ್ ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲಾಗುವುದು ಎಂದು ನಾನು ಇಂದು ಘೋಷಿಸುತ್ತೇನೆ” ಎಂದು ಪ್ರಧಾನಿ ಮೋದಿ ಹೇಳಿದರು.

ಜನರು ಜಾಗರೂಕರಾಗಿರಬೇಕು ಮತ್ತು ರೋಗ ಹರಡುವುದನ್ನು ತಡೆಯಬೇಕು ಎಂದು ಮನವಿ ಮಾಡಿದ ಅವರು, “ಮುಂದಿನ ವಾರದಲ್ಲಿ ಏಪ್ರಿಲ್ 20 ರವರೆಗೆ ನಾವು ಹೆಚ್ಚು ಕಠಿಣ ಕ್ರಮಗಳನ್ನು ವಿಧಿಸುತ್ತೇವೆ. ಸಾಂಕ್ರಾಮಿಕ ರೋಗವನ್ನು ವಿವಿಧ ರಾಜ್ಯಗಳು ಹೇಗೆ ಎದುರಿಸುತ್ತಿವೆ ಎಂಬುದನ್ನು ನಾವು ಮೌಲ್ಯಮಾಪನ ಮಾಡುತ್ತೇವೆ. ಕೊರೊನಾ ಹಾಟ್‌ಸ್ಪಾಟ್‌ಗಳನ್ನು ಹೆಚ್ಚಾಗದಂತೆ ತಡೆಗಟ್ಟುವ ರಾಜ್ಯಗಳು, ಕೆಲವು ಪ್ರಮುಖ ಚಟುವಟಿಕೆಗಳನ್ನು ಕೆಲವು ಷರತ್ತುಗಳೊಂದಿಗೆ ಪುನರಾರಂಭಿಸಲು ಅವರಿಗೆ ಅವಕಾಶ ನೀಡಬಹುದು, ಎಂದು ಮೋದಿ ಹೇಳಿದರು.

“ಹೋರಾಟವು ಶಕ್ತಿಯುತವಾಗಿ ಮುಂದುವರಿಯುತ್ತಿದೆ. ನೀವು ಎದುರಿಸಿದ ಕಷ್ಟಗಳನ್ನು ನಾನು ತಿಳಿದಿದ್ದೇನೆ, ನೀವು ನಿಮ್ಮ ಕರ್ತವ್ಯಗಳನ್ನು ಪೂರೈಸುತ್ತಿದ್ದೀರಿ. ಭಾರತದ ಜನರ ತ್ಯಾಗಕ್ಕಾಗಿ ನಾನು ಗೌರವಯುತವಾಗಿ ನಮಸ್ಕರಿಸುತ್ತೇನೆ ” ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಹೇಳಿದರು

“ಜನರು ತೊಂದರೆಗಳನ್ನು ಎದುರಿಸುತ್ತಿರುವಾಗ ಅವರು ದೇಶವನ್ನು ಉಳಿಸಿದ್ದಾರೆ” ಎಂದು ಅವರು ಹೇಳಿದರು.

ಇಂದಿನ ಡಾ.ಬಿ.ಆರ್‌ ಅಂಬೇಡ್ಕರ್‌ರವರ ಜನ್ಮ ಸ್ಮರಿಸಿದ ಮೋದಿ, “ನಮ್ಮ ಸಂವಿಧಾನವು ಜನರು ಬಗ್ಗೆ ಮಾತನಾಡುತ್ತದೆ. ಭಾರತದ ಜನತೆಯಾದ ನಾವು ಈ ಲಾಕ್‌ಡೌನ್ ಅವಧಿಯಲ್ಲಿ ಚೈತನ್ಯವನ್ನು ಪ್ರದರ್ಶಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...