Homeಮುಖಪುಟಡೆನ್ಮಾರ್ಕ್ ರಾಜಕುಮಾರನಿಲ್ಲದ ’ಹ್ಯಾಮ್ಲೆಟ್’: ಮೋದಿ ಭಾಷಣಕ್ಕೆ ಕಾಂಗ್ರೆಸ್ ಟೀಕೆ

ಡೆನ್ಮಾರ್ಕ್ ರಾಜಕುಮಾರನಿಲ್ಲದ ’ಹ್ಯಾಮ್ಲೆಟ್’: ಮೋದಿ ಭಾಷಣಕ್ಕೆ ಕಾಂಗ್ರೆಸ್ ಟೀಕೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಭಾಷಣವು ಡೆನ್ಮಾರ್ಕ್ ರಾಜಕುಮಾರನಿಲ್ಲದ ಷೇಕ್ಸ್‌ಪಿಯರ್‌ನ ಹ್ಯಾಮ್ಲೆಟ್‌‍ನಂತಿದೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಅಭಿಷೇಕ್ ಮನು ಸಿಂಘ್ವಿಯವರು ಭಾಷಣವನ್ನು ಮಾರ್ಗಸೂಚಿಯಿಲ್ಲದ ಭಾಷಣವೆಂದು ಟೀಕಿಸಿದ್ದಾರೆ.

“ಹ್ಯಾಮ್ಲೆಟ್” ಷೇಕ್ಸ್‌ಪಿಯರ್‌ ಬರೆದಿರುವ ಇಂಗ್ಲೀಷಿನ ಪ್ರಸಿದ್ದ ನಾಟಕವಾಗಿದ್ದು ಅದರಲ್ಲಿ ಡೆನ್ಮಾರ್ಕ್ ರಾಜಕುಮಾರನದ್ದು ಪ್ರಮುಖ ಪಾತ್ರವಾಗಿದೆ.

ಬಡವರು, ಮಧ್ಯಮ ವರ್ಗದವರು ಮತ್ತು ಸಣ್ಣ ಉದ್ಯಮಗಳಿಗೆ ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಸಿಂಘ್ವಿ ಟ್ವಿಟ್ಟರಿನಲ್ಲಿ ಪ್ರಧಾನ ಮಂತ್ರಿಯನ್ನು ಕೋರಿದ್ದಾರೆ.

ಸಿಂಘ್ವಿ ಟೀಕಿಸಿದ ಕೆಲವೇ ನಿಮಿಷಗಳಲ್ಲಿ ಹಲವಾರು ಕಾಂಗ್ರೆಸ್ ನಾಯಕರು ಪ್ರಧಾನ ಮಂತ್ರಿಯ ಭಾಷಣವನ್ನು ತರಾಟೆಗೆ ತೆಗೆದುಕೊಂಡರು.

ಮಾಜಿ ಹಣಕಾಸು ಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರು ಟ್ವೀಟ್ ಮಾಡಿ “ಹಣವಿದೆ, ಆಹಾರವಿದೆ, ಆದರೆ ಸರ್ಕಾರ ಹಣ ಅಥವಾ ಆಹಾರವನ್ನು ಬಿಡುಗಡೆ ಮಾಡುತ್ತಿಲ್ಲ, ಪ್ರೀತಿಯ ದೇಶವೇ ಅತ್ತು ಬಿಡು” ಎಂದು ಹೇಳಿದ್ದಾರೆ.

ಮುಂದುವರೆದ ಚಿದಂಬರಂ, “ಮುಖ್ಯಮಂತ್ರಿಗಳು ಇಟ್ಟ ಹಣದ ಬೇಡಿಕೆಯು ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಮಾರ್ಚ್ 25, 2020 ರ ಕೆಟ್ಟ ಪ್ಯಾಕೇಜ್‌ಗೆ ಒಂದು ರೂಪಾಯಿ ಕೂಡ ಸೇರಿಸಲಾಗಿಲ್ಲ. ರಘುರಾಮ್ ರಾಜನ್‌ನಿಂದ ಹಿಡಿದು ಜೀನ್ ಡ್ರೆಜ್‌ವರೆಗೆ, ಪ್ರಭಾತ್ ಪಟ್ನಾಯಕ್‌ನಿಂದ ಹಿಡಿದು ಅಭಿಜಿತ್ ಬ್ಯಾನರ್ಜಿವರೆಗೆ ಅವರ ಸಲಹೆಗೆ ಕಿವುಡಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು 10,000 ದಾಟಿದ ಬೆನ್ನಲ್ಲೇ ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದಾರೆ. “ಎಲ್ಲರ ಸಲಹೆಗಳನ್ನು ಗಣನೆಗೆ ತೆಗೆದುಕೊಂಡ ನಂತರ ಲಾಕ್‌ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲು ನಾವು ನಿರ್ಧರಿಸಿದ್ದೇವೆ” ಎಂದು ಅವರು ತಮ್ಮ 25 ನಿಮಿಷಗಳ ಭಾಷಣದಲ್ಲಿ ಹೇಳಿದ್ದಾರೆ.

“ಏಪ್ರಿಲ್ 20 ರವರೆಗೆ, ಪ್ರತಿ ಜಿಲ್ಲೆ, ಪ್ರತಿ ರಾಜ್ಯವನ್ನು ಲಾಕ್ ಡೌನ್ ಸರಿಯಾಗಿ ಅನುಸರಿಸಲಾಗಿದೆಯೆ ಎಂದು ಸೂಕ್ಷ್ಮವಾಗಿ ಗಮನಿಸಲಾಗುವುದು. ಅದರ ನಂತರ ನಾವು ನಿರ್ಬಂಧಗಳನ್ನು ಸಡಿಲಿಸುವ ಬಗ್ಗೆ ನಿರ್ಧರಿಸಬಹುದು” ಎಂದು ಪ್ರಧಾನಿ ಹೇಳಿದ್ದಾರೆ.

ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಲಾಕ್ ಡೌನ್ ವಿಸ್ತರಣೆಯನ್ನು ಬೆಂಬಲಿಸುತ್ತಿದ್ದರೂ, ಪ್ರಧಾನಿ ಮೋದಿ ಅವರು ಬಡವರಿಗೆ ಗಂಭೀರ ಪರಿಹಾರವನ್ನು ಘೋಷಿಸಬೇಕಾಗಿತ್ತು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...