Homeಮುಖಪುಟಮುಖ್ಯಮಂತ್ರಿ ಜೊತೆ ಸಭೆ ನಡೆಸಿದ ಕೆಲವೇ ಗಂಟೆಗಳಲ್ಲಿ ಗುಜರಾತ್‌ ಶಾಸಕನಿಗೆ ಕೊರೊನಾ ಪಾಸಿಟಿವ್‌!

ಮುಖ್ಯಮಂತ್ರಿ ಜೊತೆ ಸಭೆ ನಡೆಸಿದ ಕೆಲವೇ ಗಂಟೆಗಳಲ್ಲಿ ಗುಜರಾತ್‌ ಶಾಸಕನಿಗೆ ಕೊರೊನಾ ಪಾಸಿಟಿವ್‌!

- Advertisement -
- Advertisement -

ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಇತರ ಇಬ್ಬರು ಮಂತ್ರಿಗಳೊಂದಿಗಿನ ಸಭೆಯಲ್ಲಿ ಭಾಗವಹಿಸಿದ ನಂತರ ಗುಜರಾತ್ ಶಾಸಕರೊಬ್ಬರು ಕೊರೋನಾ ವೈರಸ್ ಪರೀಕ್ಷೆಯಲ್ಲಿ ಪಾಸಿಟಿವ್‌ ಆಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಾಂಗ್ರೆಸ್ ಶಾಸಕ ಇಮ್ರಾನ್ ಖೇದವಾಲಾ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು, ಅಲ್ಲಿ ಇತರ ಶಾಸಕರು ಮತ್ತು ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು. ಜಮಾಲ್‌ಪುರ-ಖಾದಿಯಾದ ಶಾಸಕರಾದ ಇವರು ಹಲವಾರು ದಿನಗಳಿಂದ ಅಧಿಕ ತಾಪಮಾನವನ್ನು ಹೊಂದಿದ್ದ ಕಾರಣ ತಮ್ಮ ಮಾದರಿಗಳನ್ನು ಪರೀಕ್ಷೆಗೆ ನೀಡಿದ್ದರು.

ಆದರೆ ಪರೀಕ್ಷೆಯ ಫಲಿತಾಂಶಗಳು ಬರುವ ಮೊದಲೇ ಅವರು ಇಬ್ಬರು ಕಾಂಗ್ರೆಸ್‌ ಶಾಸಕರೊಂದಿಗೆ ಸಿಎಂ ಜೊತೆ ಸಭೆ ಮತ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎನ್ನಲಾಗಿದೆ. ತದನಂತರ ಅವರು ಕೊರೊನಾ ಪಾಸಿಟಿವ್‌ ಆಗಿದ್ದಾರೆ ಎಂದು ತಿಳಿದುಬಂದಿದ್ದು, ಪ್ರಸ್ತುತ ಅವರನ್ನು COVID-19 ರೋಗಿಗಳ ಚಿಕಿತ್ಸೆಗೆ ಮೀಸಲಾಗಿರುವ ಗಾಂಧಿನಗರದ ಎಸ್‌ವಿಪಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಶಾಸಕರು ಈ ಮೊದಲು ಎಷ್ಟು ಜನರೊಂದಿಗೆ ಸಂಪರ್ಕ ಹೊಂದಿದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆಡಳಿತವು ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಅವರೊಂದಿಗೆ ಹತ್ತಿರದ ಸಂಪರ್ಕ ಬಂದವರನ್ನೆಲ್ಲಾ ಹೋಮ್‌ ಕ್ವಾರಂಟೈನ್‌ ಮಾಡುವುದು, ಪರೀಕ್ಷೆಗೆ ಒಳಪಡಿಸುವುದು ಅಗತ್ಯವಾಗಿದೆ.

ಇಂದು ಬೆಳಿಗ್ಗೆ ನಡೆದ ಮುಖ್ಯಮಂತ್ರಿಯವರ ಭೇಟಿಯ ವೀಡಿಯೊಗಳನ್ನು ನೋಡಿದಾಗ ಅವರು ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಿದ್ದಾರೆ ಎಂಬುದು ಕಾಣುತ್ತದೆ. ಸಿಎಂ ಕನಿಷ್ಠ ಒಂದು ಮೀಟರ್ ಅಂತರದಲ್ಲಿ ಕುಳಿತುಕೊಂಡಿದ್ದಾರೆ. ಮುಖ್ಯಮಂತ್ರಿಯಲ್ಲದೆ, ಸಭೆಯಲ್ಲಿ ಆರೋಗ್ಯ ಮತ್ತು ಗೃಹ ರಾಜ್ಯ ಸಚಿವರು ಭಾಗವಹಿಸಿದ್ದರು.

ಗುಜರಾತ್‌ನಲ್ಲಿ ಇದುವರೆಗೆ 617 ಕೊರೋನಾವೈರಸ್ ಪ್ರಕರಣಗಳಿದ್ದು, ಅವರಲ್ಲಿ 55 ರೋಗಿಗಳು ಚೇತರಿಸಿಕೊಂಡಿದ್ದಾರೆ ಮತ್ತು 26 ಮಂದಿ ಸಾವನ್ನಪ್ಪಿದ್ದಾರೆ.


ಇದನ್ನೂ ಓದಿ: ಜನರು ರೊಚ್ಚಿಗೇಳುವ ಸಾಧ್ಯತೆ: ಪೊಲೀಸ್ ಮಹಾನಿರ್ದೇಶಕರ ಮುನ್ನೆಚ್ಚರಿಕೆಯ ನೋಟಿಸ್


ಎನ್‌ಡಿಟಿವಿಯ ಪ್ರಣಯ್ ರಾಯ್ ವಿಶ್ಲೇಷಿಸಿದ ರಾಜ್ಯ ದತ್ತಾಂಶದ ಪ್ರಕಾರ ರಾಜ್ಯದಲ್ಲಿ ಲಾಕ್‌ಡೌನ್ ವೈರಸ್ ಅನ್ನು ನಿಧಾನಗೊಳಿಸಿಲ್ಲ ಎಂದು ತೋರಿಸಿದೆ. ಆದರೂ ಇತರ ರಾಜ್ಯಗಳು ಇದನ್ನು ಹತೋಟಿಯಲ್ಲಿಡಲು ಮತ್ತು ಸೋಂಕಿನ ಹರಡುವಿಕೆಯನ್ನು ತಡೆಯುವಲ್ಲಿ ಯಶಸ್ವಿಯಾಗಿದೆ.

ಗುಜರಾತ್, ನೆರೆಯ ಮಹಾರಾಷ್ಟ್ರದ ಜೊತೆಗೆ, ಅತಿ ಹೆಚ್ಚು ಸೋಂಕಿನ ಪ್ರಮಾಣವನ್ನು ಹೊಂದಿದೆ. ಅಲ್ಲಿ ಸರಿಸುಮಾರು ಎರಡು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...