Homeಅಂಕಣಗಳುಮೂರು ಸಾರಿ ಲಡ್ಡು ಹಂಚಲಾಯಿತು; ರೈತರಿಗೆ ಬೂಂದಿ ಕಾಳೂ ಸಿಗಲಿಲ್ಲ

ಮೂರು ಸಾರಿ ಲಡ್ಡು ಹಂಚಲಾಯಿತು; ರೈತರಿಗೆ ಬೂಂದಿ ಕಾಳೂ ಸಿಗಲಿಲ್ಲ

- Advertisement -
- Advertisement -

ಮಗು ಇನ್ನೂ ಹುಟ್ಟೇ ಇಲ್ಲ, ಆದರೆ ಈಗಾಗಲೇ ಮೂರು ಸಲ ಸಿಹಿ ಹಂಚಿಕೊಂಡು ತಿಂದುಬಿಟ್ಟರು. ರೈತರ ಬೆಳೆಗೆ ಸರಿಯಾದ ಬೆಲೆ ನೀಡುವಲ್ಲಿ ಮೋದಿ ಸರಕಾರ ಇದನ್ನೇ ಮಾಡಿದೆ. ಇಲ್ಲಿಯತನಕ ಒಬ್ಬ ರೈತನಿಗೂ ಹೆಚ್ಚಿಸಲಾದ ಬೆಲೆ ಸಿಕ್ಕಿಲ್ಲ. ಹೆಚ್ಚಿನ ರೈತರಿಗೆ ಬೆಲೆ ಸಿಗುವ ಸಾಧ್ಯತೆಯೂ ಕಾಣುತ್ತಿಲ್ಲ. ಆದರೆ ಮೂರು ಬಾರಿ ಚಪ್ಪಾಳೆ ತಟ್ಟಲಾಗಿದೆ, ಅಭಿನಂದನೆಗಳ ಪೋಸ್ಟರ್‍ಗಳು, ಹೋರ್ಡಿಂಗ್‍ಗಳನ್ನು ಹಚ್ಚಲಾಗಿದೆ, ಸಿಹಿ ತಿನ್ನಲಾಗಿದೆ.
ಫೆಬ್ರುವರಿ 1 ರಂದು ಅರುಣ್ ಜೇಟ್ಲಿಯವರು ಈ ‘ಐತಿಹಾಸಿಕ’ ನಿರ್ಣಯದ ಘೋಷಣೆ ಮಾಡಿದಾಗ ಮೊದಲ ಬಾರಿ ಲಡ್ಡೂ ತಿನ್ನಲಾಯಿತು. ವಿತ್ತ ಸಚಿವರು ಕೃಷಿ ವೆಚ್ಚದ ವ್ಯಾಖ್ಯೆಯನ್ನೇ ಬದಲಿಸಿದ ಹಾಗೂ ತಮ್ಮ ಮೂಲ ಆಶ್ವಾಸನೆಯಿಂದ ನುಣುಚಿಕೊಂಡ ಕಹಿ ಸತ್ಯ ಲಡ್ಡೂಗಳ ಸಿಹಿಯಲ್ಲಿ ಮುಚ್ಚಿಹೋಯಿತು. ಜುಲೈ 4 ರಂದು ಸರಕಾರ ಈ ವರ್ಷದ ಮುಂಗಾರು ಬೆಳೆಯ ಬೆಲೆಯಲ್ಲಿ ‘ಐತಿಹಾಸಿಕ’ ವೃದ್ಧಿ ಘೋಷಿಸಿದಾಗ ಎರಡನೇ ಬಾರಿ ಲಡ್ಡೂ ತಿನ್ನಲಾಯಿತು. ಇದಕ್ಕಿಂತ ಹೆಚ್ಚಿನ ಚುನಾವಣೆಯ ಉಂಡೆಗಳನ್ನು ಹಿಂದಿನ ಸರಕಾರ 2009 ರಲ್ಲಿಯೇ ಹಂಚಿತ್ತು ಎನ್ನುವ ಸತ್ಯವೂ ಈ ಲಡ್ಡೂಗಳ ಭಾರದಲ್ಲಿ ಅವಿತುಹೋಯಿತು.
ಕಳೆದ ವಾರ ಸರಕಾರದ ಖರೀದಿಯ ವಾರ್ಷಿಕ ನೀತಿಯನ್ನು ಕ್ಯಾಬಿನೆಟ್ ಘೋಷಿಸಿದಾಗ ಮೂರನೇ ಬಾರಿ ಲಡ್ಡೂ ತಿನ್ನಲಾಯಿತು. ಮತ್ತೆ ಇದನ್ನು ಒಂದು ಹೊಸ ‘ಐತಿಹಾಸಿಕ’ ಘೋಷಣೆಯಂತೇ ದೇಶದ ಎದುರಿಡಲಾಯಿತು. ತನ್ನ ಕಾಯಕದ ಫಲ ಯಾವಾಗ ಸಿಗುವುದೆಂದು ರೈತ ಮಾತ್ರ ಕಣ್ಣು ಬಿಟ್ಟು ಕಾಯುತ್ತಿದ್ದ.
ಎಲ್ಲ ರೈತರು ತಮ್ಮ ಎಲ್ಲಾ ಬೆಳೆಗಳನ್ನು ಎಮ್‍ಎಸ್‍ಪಿ ದರದಲ್ಲಿ ಮಾರಾಟ ಮಾಡುವ ಒಂದು ವ್ಯವಸ್ಥೆ ಹೇಗೆ ಮಾಡಬಹುದು ಎಂಬ ಸಮಸ್ಯೆಗೆ ಹೊಸ ನೀತಿಯಲ್ಲೂ ಯಾವುದೇ ಉತ್ತರವಿಲ್ಲ. ಈಗ ಮೂರು ವಿಧಗಳಲ್ಲಿ ಒಂದು ವಿಧದಲ್ಲಿ ಸರಕಾರೀ ಖರೀದಿ ಆಗಬಹುದು. ಮೊದಲನೆಯದು ಹಳೆಯ ಸರಕಾರೀ ಖರೀದಿಯ ವಿಧ. ಈ ಯೋಜನೆ ಅನುಗುಣವಾಗಿ ರೇಷನ್ ಅಂಗಡಿಗಳಲ್ಲಿ ಮಾರಾಟ ಮಾಡಲು ಸರಕಾರ ಧಾನ್ಯಗಳನ್ನು ಖರೀದಿ ಮಾಡುತ್ತದೆ. ಅಥವಾ ಮೌಲ್ಯ ಸಮರ್ಥನೆ ಯೋಜನೆಯ ಅಡಿಯಲ್ಲಿ ಯಾವುದೇ ಬೆಳೆಯ ಮಾರುಕಟ್ಟೆಯ ಬೆಲೆ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆಯಾದಲ್ಲಿ ಸರಕಾರ ಆ ಬೇಳೆಯನ್ನು ಖರೀದಿ ಮಾಡಲು ಪ್ರಾರಂಭಿಸುತ್ತದೆ. ಏಳು ತಿಂಗಳ ನಂತರ ಎಂದಿನಂತೆಯೇ ಈ ವರ್ಷ ಕೂಡ ಇದೇ ವಿಧಾನವನ್ನು ಅಳವಡಿಸಿಕೊಳ್ಳಲಾಗುವುದು ಎಂದು ಸರಕಾರ ನಿರ್ಣಯಿಸಿದೆ.
ಒಂದೇ ಒಂದು ಬದಲಾವಣೆ ಏನೆಂದರೆ, ಸರಕಾರ ತನ್ನ ಬಜೆಟ್‍ನಲ್ಲಿ ಮಾಡಿದ ಕಟುವ್ಯಂಗ್ಯವನ್ನು ಸುಧಾರಿಸುತ್ತ ಈ ಖರೀದಿಗಾಗಿ 200 ಕೋಟಿಗಳ ಬದಲಾಗಿ ಈಗ ಸುಮಾರು 16,000 ಕೋಟಿ ರೂಪಾಯಿಗಳನ್ನು ನೀಡುವ ನಿರ್ಣಯ ಮಾಡಿದೆ. ಅದರೊಂದಿಗೆ ಸರಕಾರೀ ಖರೀದಿ ಮಾಡುವ ಏಜೆನ್ಸಿಗಳು ಬ್ಯಾಂಕಿನಿಂದ 45,000 ಕೋಟಿ ರೂಪಾಯಿಗಳ ಸಾಲ ಮಾಡಬಹುದು ಎನ್ನುವ ಘೋಷಣೆಯನ್ನೂ ಮಾಡಿದೆ. ಆದರೆ ಇದರಲ್ಲಿ ಸರಕಾರ ಗ್ಯಾರಂಟಿ ಮಾತ್ರ ನೀಡಿದೆ, ತನ್ನ ಬೊಕ್ಕಸದಿಂದ ಒಂದು ರೂಪಾಯಿಯನ್ನೂ ಹಾಕಿಲ್ಲ.
ವಾಸ್ತವದಲ್ಲಿ ಈ ಮೊತ್ತವೂ ಒಂಟೆ ಬಾಯಲ್ಲಿ ಜೀರಿಗೆ ಹಾಕಿದಂತಿದೆ ಏಕೆಂದರೆ, ಸರಕಾರ ಎಲ್ಲಾ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಿದ್ದಲ್ಲಿ ಅದಕ್ಕೆ ಕನಿಷ್ಠ ಒಂದೂವರೆಯಿಂದ ಎರಡು ಲಕ್ಷ ಕೋಟಿ ರೂಪಾಯಿಗಳ ವ್ಯವಸ್ಥೆ ಮಾಡಬೇಕಿತ್ತು. ಸರಕಾರ ಯಾವುದೇ ಬೆಳೆಯ ಸಂಪೂರ್ಣ ಉತ್ಪನ್ನದಲ್ಲಿ ಕೇವಲ 25% ಉತ್ಪನ್ನ ಖರೀದಿಸುವಲ್ಲಿ ಮಾತ್ರ ರಾಜ್ಯ ಸರಕಾರದೊಂದಿಗೆ ಸಹಯೋಗ ಮಾಡುವುದು ಎನ್ನುವ ಸತ್ಯವೂ ಲಡ್ಡೂಗಳ ತಟ್ಟೆಯ ಮುಂದೆ ಮುಚ್ಚಿಹೋಗಿದೆ. ಇನ್ನುಳಿದ 75% ಖರೀದಿ ಮಾಡುವುದು ರಾಜ್ಯಸರಕಾರದ ತಲೆನೋವು ಆಗಿರುತ್ತದೆ. ರಾಜ್ಯ ಸರಕಾರಗಳಲ್ಲಿ ಅಷ್ಟು ದುಡ್ಡು ಇರೋಲ್ಲ, ರೈತರಿಗೆ ಬೆಳೆಯನ್ನು ಖರೀದಿ ಮಾಡಲ್ಲ.
ಅದರ ಬದಲಿಗೆ ಕೇಂದ್ರ ಸರಕಾರ ಪ್ರಾಯೋಗಿಕವಾಗಿ ಎರಡು ಬೇರೇ ವಿಧಾನಗಳ ಘೋಷಣೆ ಮಾಡಿದೆ. ಆದರೆ ಇವೆರಡರಿಂದಲೂ ರೈತರಿಗೆ ಯಾವುದೇ ಲಾಭ ಆಗಲು ಸಾಧ್ಯವಿಲ್ಲ. ಮೊದಲನೇದಂತೂ ಮಧ್ಯಪ್ರದೇಶದಲ್ಲಿ ಸಂಪೂರ್ಣವಾಗಿ ಫೇಲ್ ಆದ ‘ಭಾವಾಂತರ’ ಯೋಜನೆ. ಇದರಲ್ಲಿ ರೈತರು ಭಾರಿ ನಷ್ಟ ಅನುಭವಿಸಬೇಕಾಗಿ ಬಂತು. ಇನ್ನೊಂದೆಡೆ ಈ ಯೋಜನೆಯ ಗರಿಷ್ಠ ಲಾಭ ಪಡೆಯಲು ವ್ಯಾಪಾರಿಗಳು ರಾತ್ರೋರಾತ್ರಿ ಬೆಳೆಗಳನ್ನು ಬೆಲೆ ಇಳಿಸಿಬಿಟ್ಟರು ಹಾಗೂ ನಂತರ ಭಾರೀ ಲಾಭ ಗಳಿಸಿದರು. ಇದನ್ನು ಸುಧಾರಿಸದೇ ಭಾವಾಂತರ ಯೋಜನೆ ದೇಶಾದ್ಯಂತ ಅನುಷ್ಠಾನಗೊಳಿಸಿದರೆ ರೈತರಿಗೆ ನಷ್ಠ ಹಾಗೂ ವ್ಯಾಪಾರಿ ಮತ್ತು ವಂಚಕರಿಗೆ ಲಾಭ ಕಟ್ಟಿಟ್ಟ ಬುತ್ತಿ.
ಮೂರನೇ ವಿಧಾನ, ಸರಕಾರದ ಪರವಾಗಿ ಕನಿಷ್ಠ ಬೆಂಬಲ ಬೆಲೆ ಮೇಲೆ ಖರೀದಿಯನ್ನು ಖಾಸಗೀ ವ್ಯಾಪಾರಿಗಳು ಮಾಡುವುದು. ಖರೀದಿ, ಸಂಸ್ಕರಣೆ, ಶೇಖರಣೆ ಮತ್ತು ಮಾರಾಟ ಇವೆಲ್ಲವೂ ಅವರ ಜವಾಬ್ದಾರಿ ಆಗಿರುತ್ತವೆ. ಸರಕಾರ ಅವರ ಈ ಕೆಲಸಕ್ಕಾಗಿ 15% ವರೆಗೆ ಶುಲ್ಕ ಪಾವತಿಸುತ್ತದೆ. ಆದರೆ, ಪ್ರಶ್ನೆ ಇರುವುದು, ಒಂದು ವೇಳೆ ಬೆಳೆಯ ಮಾರುಕಟ್ಟೆಯ ಬೆಲೆ ಕನಿಷ್ಠ ಬೆಂಬಲ ಬೆಲೆಗಿಂತ ತುಂಬಾ ಕಡಿಮೆ ಇದ್ದಲ್ಲಿ ಯಾವುದೇ ವ್ಯಾಪಾರಿ ಅದನ್ನೇಕೆ ಖರೀದಿಸುತ್ತಾರೆ ಎನ್ನುವುದು. ಇದರ ಬದಲಾಗಿ ಸರಕಾರ ಯಾವುದೇ ವ್ಯಾಪಾರಿ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಖರೀದಿಸುವುದನ್ನು ಅಪರಾಧ ಎಂದು ಪರಿಗಣಿಸುವಂತೆ ನಿಯಮ ಮಾಡಬೇಕು ಎಂದು ರೈತ ಚಳವಳಿಗಳು ಬೇಡಿಕೆ ಇಟ್ಟಿದ್ದವು. ಇದರ ಬಗ್ಗೆ ಕೇಂದ್ರ ಸರಕಾರ ಮೌನ ತೋರಿದೆ.
ಈಗ ಅನಿಸುವುದೇನೆಂದರೆ, ಈ ಬಾರಿಯೂ ಮತ್ತೊಮ್ಮೆ ಕುರ್ಚಿಗಳು ಲಡ್ಡೂ ತಿಂದು ಹಾಕುತ್ತವೆ ಹಾಗೂ ರೈತ ನೋಡುತ್ತ ನಿಲ್ಲಲಿದ್ದಾನೆ. ಸರ್ಕಾರ ಈ ‘ಐತಿಹಾಸಿಕ’ ನಿರ್ಣಯದ ಘೋಷಣೆ ಮಾಡಿಬಿಟ್ಟೆನೆಂದು ಕೇಂದ್ರ ಸರ್ಕಾರ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಸಂಭ್ರಮ ಆಚರಿಸುತ್ತಿದ್ದಾಗ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ಮಂಡಿಗಳಲ್ಲಿ ಹೆಸರುಕಾಳು ಬಂದು ಬಿದ್ದಿತ್ತು. ಸಾಮಾನ್ಯ ಕನಿಷ್ಠ ಬೆಂಬಲ ಬೆಲೆ ಸರ್ಕಾರದ ಪ್ರಕಾರ ಅಧಿಕೃತವಾಗಿ 6975 ಆಗಿದ್ದರೂ, ಮಂಡಿಯ ವೆಬ್‍ಸೈಟುಗಳಲ್ಲಿ ಅದು 3900 ಅಥವಾ 4400 ಎಂದು ಕಾಣಿಸಿಕೊಳ್ಳುತ್ತಾ, ಹೆಸರುಕಾಳಿನ ವಹಿವಾಟು ಅಷ್ಟಕ್ಕೇ ನಡೆದು ಮುಗಿಯಿತು. ಹೆಸರಿನ ಉಂಡೆಗಳಂತೂ ರೈತರ ಪಾಲಿಗೆ ಬಹಳ ಕಹಿಯಾದವು. ಇನ್ನುಳಿದ ಲಡ್ಡುಗಳ ಸಿಹಿಯು ರೈತರ ಮನೆಬಾಗಿಲಿನವರೆಗೆ ತಲುಪಲಿದೆಯೇ?

– ಯೋಗೇಂದ್ರ ಯಾದವ್
ಅನುವಾದ: ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...