Homeಕರ್ನಾಟಕಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

- Advertisement -
- Advertisement -

ಕೊರೋನಾ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ರಾಜ್ಯ ಸರ್ಕಾರದ ಪರವಾನಗಿ ಹೊಂದಿದ್ದಾಗ್ಯೂ ಮಂಗಳೂರು ವ್ಯಾಪಾರಿಗಳನ್ನು ಅಲ್ಲಿನ ಮಹಾನಗರ ಪಾಲಿಕೆ ಅಧಿಕಾರಿಗಳು ಒಕ್ಕಲೆಬ್ಬಿಸಿದ್ದಾರೆ. ಅಲ್ಲದೆ, ಹಣ್ಣು ತರಕಾರಿಗಳನ್ನು ಒತ್ತಾಯಪೂರ್ವಕವಾಗಿ ಕಸದ ಲಾರಿಗೆ ತುಂಬುವ ಮೂಲಕ ಅಮಾನವೀಯತೆ ಮೆರೆದಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಜೀವನೋಪಾಯ ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಿರುವ ಬೀದಿಬದಿ ವ್ಯಾಪಾರಸ್ಥರಿಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುವು ಮಾಡಿಕೊಡುವಂತೆ ಎಪ್ರಿಲ್ 7 ರಂದು ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚಿಸಿತ್ತು.

ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರ ಪಡೆದಿರುವ ಬೀದಿಬದಿ ವ್ಯಾಪರಸ್ಥರಿಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸ್ಥಳೀಯ ಸಂಸ್ಥೆಗಳು ವ್ಯಾಪಾರಕ್ಕೆ ಅನುವು ಮಾಡಿಕೊಟ್ಟೆದೆ. ಆದರೆ ಮಂಗಳೂರಿನ ಮಹಾನಗರ ಪಾಲಿಕೆ ರಾಜ್ಯ ಸರ್ಕಾರದ ಸೂಚನೆ ಬಂದು ಒಂದು ವಾರವೆ ಕಳೆದರೂ, ವ್ಯಾಪಾರಕ್ಕೆ ಪಾಸ್ ಪಡೆದಿರುವ ವ್ಯಾಪಾರಿಗಳ ಸರಕುಗಳನ್ನು ವಶಪಡಿಸಿದ್ದಲ್ಲದೆ ಅದನ್ನು ಕಸದ ಡಬ್ಬಿಗೆ ಹಾಕಿ ನಾಶಪಡಿಸಿದ್ದಾರೆ ಎಂದು ಬೀದಿಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ.

ಭಾರತದಾದ್ಯಂತ ಲಾಕ್‌ಡೌನ್ ಘೋಷಿದಂದಿನಿಂದ ದೇಶದ ಹಲವಾರು ಜನರು ಉದ್ಯೋಗ ಕಳೆದುಕೊಂಡು ತಮ್ಮ ಊರಿಗೆ ಕಾಲ್ನಡಿಗೆಯಲ್ಲೆ ಹೊರಟು ದಾರಿಯಲ್ಲೆ ಸಾವಿಗೀಡಾದ ಘಟನೆಗಳು ಈಗಾಗಲೇ ಹಸಿಹಸಿಯಾಗಿದೆ. ದೇಶದಾದ್ಯಂತ ಇರುವ ಅಸಂಘಟಿತ ಕಾರ್ಮಿಕರು ಇನ್ನೂ ಪ್ರಶ್ನಾರ್ಥಕವಾಗಿ ಆಡಳಿತದ ಕಡೆಗೆ ನೋಡುತ್ತಿದ್ದಾರೆ. ಹೀಗಿರುವಾಗ ಆಡಳಿತ ಇಷ್ಟು ಕ್ರೂರಿಯಾಗಬಾರದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನಲ್ಲಿ ನಿನ್ನೆ (ಮಂಗಳವಾರ) ನಗರದ ಸ್ಟೇಟ್‌ಬ್ಯಾಂಕ್ ಪರಿಸರದಲ್ಲಿ ಬೀದಿಬದಿ ವ್ಯಾಪರಸ್ಥರ ಮೇಲೆ ದಾಳಿ ಮಾಡಿದ ಮಹಾನಗರ ಪಾಲಿಕೆ ಮಾರಾಟಕ್ಕೆ ಇಟ್ಟಿದ್ದ ಸರಕುಗಳನ್ನು ಕಾರ್ಪೋರೇಶನ್ ಕಸದ ಗಾಡಿಗೆ ತುಂಬಿ ಅಮಾನವೀಯತೆ ಮೆರೆದಿದ್ದಾರೆ. ವ್ಯಾಪಾರಸ್ಥರು ವ್ಯಾಪಾರಿ ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರವನ್ನು ಹೊಂದಿದ್ದರೂ ವಸ್ತುಗಳನ್ನು ಕಸವೆತ್ತುವ ಲಾರಿಗೆ ತುಂಬಿ ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಬೀದಿಬದಿ ವ್ಯಾಪಾರಸ್ಥರನ್ನು ನಾನುಗೌರಿ.ಕಾಮ್ ಮಾತನಾಡಿಸಿದಾಗ, “ಕೊರೊನಾ ಬರುತ್ತದೆಯೆಂದು ಲಾಕ್‌ಡೌನ್ ಮಾಡಲಾಗಿದೆ. ಆದರೆ ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಕೊರೊನ ಬರುವುದಕ್ಕಿಂತಲೂ ಮುಂಚೆಯೆ ನಾವು ಹಸಿವಿನಿಂದ ಸಾಯುತ್ತೇವೆ. ಮನೆಗೆ ಹಾಲು ಕೊಳ್ಳಲು ಸಾಧ್ಯವಾಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ವಸ್ತುಗಳನ್ನು ಮಾತ್ರವಲ್ಲದೆ ತಕ್ಕಡಿ ಹಾಗೂ ಇತರ ವಸ್ತುಗಳನ್ನೂ ಸಹ ಪಾಲಿಕೆ ವಶಪಡಿಸಿಕೊಂಡಿದೆ. ಆಹಾರ ವಸ್ತುಗಳನ್ನು ಪೊಲೀಸರ ರಕ್ಷಣೆಯಲ್ಲಿ ಪಾಲಿಕೆಯ ಅಧಿಕಾರಿಗಳ ಸಮ್ಮುಖದಲ್ಲಿ ಕಸವನ್ನು ತುಂಬುವಂತೆ ತುಂಬಿ ನಾಶಪಡಿಸಲಾಗಿದೆ” ಎಂದು ಸ್ಥಳೀಯ ವ್ಯಾಪಾರಿ ಸಲೀಂ ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಮಹಾನಗರ ಪಾಲಿಕೆಯ ಜಂಟಿ ಆಯುಕ್ತರಾದ ಸಂತೋಷ್ ಕುಮಾರ್ “ಬೀದಿಬದಿ ವ್ಯಾಪಾರಸ್ಥರಿಗೆ ಈಗಾಗಲೇ ಗುರುತಿನ ಚೀಟಿಯನ್ನು ನೀಡಿ ಸರ್ಕಾರದಿಂದ ಆದೇಶ ಬರುವವರೆಗೂ ಕಾಯಲು ಹೇಳಿದ್ದೆವು. 60 ವಾರ್ಡಿಗೆ ಬೀದಿಬದಿ ವ್ಯಾಪಾರಿಗಳನ್ನು ವ್ಯಾಪಾರಕ್ಕೆ ನೇಮಿಸುವ ಬಗ್ಗೆ ಕೂಡಾ ಚಿಂತಿಸಲಾಗಿತ್ತು. ಸದ್ಯಕ್ಕೆ ಜಿಲ್ಲಾಡಳಿತ ಬೀದಿಬದಿ ವ್ಯಾಪಾರವನ್ನು ತಡೆ ಹಿಡಿದಿದೆ. ಅದಲ್ಲದೆ ಗುರುತಿನ ಚೀಟಿ ಇರದಿರುವವರು ಕಾನೂನು ಮೀರಿ ವ್ಯಾಪರ ಮಾಡುತ್ತಿರುವುದರಿಂದ ಅದನ್ನು ತೆರವು ಗೊಳಿಸುವ ಕಾರ್ಯ ನಡೆಯುತ್ತಿದೆ. ಆದ್ದರಿಂದ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ಕೇಳಿ ಕೊಂಡಿದ್ದೇವೆ” ಎಂದರಲ್ಲದೇ “ಆಹಾರವನ್ನು ಕಸದ ಬುಟ್ಟಿಗೆ ಎಸೆದ ಘಟನೆ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ” ಎಂದಿದ್ದಾರೆ.

(ಬೀದಿಬದಿ ವ್ಯಾಪಾರಿಗಳಿಗೆ ಅನುವು ಮಾಡುವಂತೆ ಸೂಚಿಸಿದ ಅಧಿಸೂಚನೆ)

ಒಟ್ಟಾರೆ ಬೀದಿಬದಿಯ ವ್ಯಾಪಾರಿಗಳಿಗೆ ಅಧಿಕಾರಿಗಳು ಕಿರುಕುಳ ಕೊಟ್ಟಿರುವುದು ನಿಜಕ್ಕೂ ದುರಾದೃಷ್ಟಕರ. ಈ ಕುರಿತು ರಾಜ್ಯ ಸರ್ಕಾರ ಮತ್ತು ಸಂಬಂಧ ಪಟ್ಟ ಅಧಿಕಾರಿಗಳೂ ಕೂಡಲೇ ಸೂಕ್ತ ಕ್ರಮ ಜರುಗಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂಬುದೆ ಎಲ್ಲರ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೀದಿ ಬದಿಯ ವ್ಯಾಪಾರಿಗಳ ಮೇಲಿನ ಈ ದೌರ್ಜನ್ಯ ಕಂಡನಾರ್ಹ. ಲಾಕ್ ಡೌನ್ ನೆಪದಲ್ಲಿ ಬಡವರ ಬದುಕನ್ನು ಕಸಿಯುವ ಹಕ್ಕು ಯಾರಿಗೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...