Homeಕರ್ನಾಟಕಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

- Advertisement -
- Advertisement -

ಕೊರೋನಾ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ರಾಜ್ಯ ಸರ್ಕಾರದ ಪರವಾನಗಿ ಹೊಂದಿದ್ದಾಗ್ಯೂ ಮಂಗಳೂರು ವ್ಯಾಪಾರಿಗಳನ್ನು ಅಲ್ಲಿನ ಮಹಾನಗರ ಪಾಲಿಕೆ ಅಧಿಕಾರಿಗಳು ಒಕ್ಕಲೆಬ್ಬಿಸಿದ್ದಾರೆ. ಅಲ್ಲದೆ, ಹಣ್ಣು ತರಕಾರಿಗಳನ್ನು ಒತ್ತಾಯಪೂರ್ವಕವಾಗಿ ಕಸದ ಲಾರಿಗೆ ತುಂಬುವ ಮೂಲಕ ಅಮಾನವೀಯತೆ ಮೆರೆದಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಜೀವನೋಪಾಯ ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಿರುವ ಬೀದಿಬದಿ ವ್ಯಾಪಾರಸ್ಥರಿಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುವು ಮಾಡಿಕೊಡುವಂತೆ ಎಪ್ರಿಲ್ 7 ರಂದು ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚಿಸಿತ್ತು.

ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರ ಪಡೆದಿರುವ ಬೀದಿಬದಿ ವ್ಯಾಪರಸ್ಥರಿಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸ್ಥಳೀಯ ಸಂಸ್ಥೆಗಳು ವ್ಯಾಪಾರಕ್ಕೆ ಅನುವು ಮಾಡಿಕೊಟ್ಟೆದೆ. ಆದರೆ ಮಂಗಳೂರಿನ ಮಹಾನಗರ ಪಾಲಿಕೆ ರಾಜ್ಯ ಸರ್ಕಾರದ ಸೂಚನೆ ಬಂದು ಒಂದು ವಾರವೆ ಕಳೆದರೂ, ವ್ಯಾಪಾರಕ್ಕೆ ಪಾಸ್ ಪಡೆದಿರುವ ವ್ಯಾಪಾರಿಗಳ ಸರಕುಗಳನ್ನು ವಶಪಡಿಸಿದ್ದಲ್ಲದೆ ಅದನ್ನು ಕಸದ ಡಬ್ಬಿಗೆ ಹಾಕಿ ನಾಶಪಡಿಸಿದ್ದಾರೆ ಎಂದು ಬೀದಿಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ.

ಭಾರತದಾದ್ಯಂತ ಲಾಕ್‌ಡೌನ್ ಘೋಷಿದಂದಿನಿಂದ ದೇಶದ ಹಲವಾರು ಜನರು ಉದ್ಯೋಗ ಕಳೆದುಕೊಂಡು ತಮ್ಮ ಊರಿಗೆ ಕಾಲ್ನಡಿಗೆಯಲ್ಲೆ ಹೊರಟು ದಾರಿಯಲ್ಲೆ ಸಾವಿಗೀಡಾದ ಘಟನೆಗಳು ಈಗಾಗಲೇ ಹಸಿಹಸಿಯಾಗಿದೆ. ದೇಶದಾದ್ಯಂತ ಇರುವ ಅಸಂಘಟಿತ ಕಾರ್ಮಿಕರು ಇನ್ನೂ ಪ್ರಶ್ನಾರ್ಥಕವಾಗಿ ಆಡಳಿತದ ಕಡೆಗೆ ನೋಡುತ್ತಿದ್ದಾರೆ. ಹೀಗಿರುವಾಗ ಆಡಳಿತ ಇಷ್ಟು ಕ್ರೂರಿಯಾಗಬಾರದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನಲ್ಲಿ ನಿನ್ನೆ (ಮಂಗಳವಾರ) ನಗರದ ಸ್ಟೇಟ್‌ಬ್ಯಾಂಕ್ ಪರಿಸರದಲ್ಲಿ ಬೀದಿಬದಿ ವ್ಯಾಪರಸ್ಥರ ಮೇಲೆ ದಾಳಿ ಮಾಡಿದ ಮಹಾನಗರ ಪಾಲಿಕೆ ಮಾರಾಟಕ್ಕೆ ಇಟ್ಟಿದ್ದ ಸರಕುಗಳನ್ನು ಕಾರ್ಪೋರೇಶನ್ ಕಸದ ಗಾಡಿಗೆ ತುಂಬಿ ಅಮಾನವೀಯತೆ ಮೆರೆದಿದ್ದಾರೆ. ವ್ಯಾಪಾರಸ್ಥರು ವ್ಯಾಪಾರಿ ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣ ಪತ್ರವನ್ನು ಹೊಂದಿದ್ದರೂ ವಸ್ತುಗಳನ್ನು ಕಸವೆತ್ತುವ ಲಾರಿಗೆ ತುಂಬಿ ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಬೀದಿಬದಿ ವ್ಯಾಪಾರಸ್ಥರನ್ನು ನಾನುಗೌರಿ.ಕಾಮ್ ಮಾತನಾಡಿಸಿದಾಗ, “ಕೊರೊನಾ ಬರುತ್ತದೆಯೆಂದು ಲಾಕ್‌ಡೌನ್ ಮಾಡಲಾಗಿದೆ. ಆದರೆ ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಕೊರೊನ ಬರುವುದಕ್ಕಿಂತಲೂ ಮುಂಚೆಯೆ ನಾವು ಹಸಿವಿನಿಂದ ಸಾಯುತ್ತೇವೆ. ಮನೆಗೆ ಹಾಲು ಕೊಳ್ಳಲು ಸಾಧ್ಯವಾಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ವಸ್ತುಗಳನ್ನು ಮಾತ್ರವಲ್ಲದೆ ತಕ್ಕಡಿ ಹಾಗೂ ಇತರ ವಸ್ತುಗಳನ್ನೂ ಸಹ ಪಾಲಿಕೆ ವಶಪಡಿಸಿಕೊಂಡಿದೆ. ಆಹಾರ ವಸ್ತುಗಳನ್ನು ಪೊಲೀಸರ ರಕ್ಷಣೆಯಲ್ಲಿ ಪಾಲಿಕೆಯ ಅಧಿಕಾರಿಗಳ ಸಮ್ಮುಖದಲ್ಲಿ ಕಸವನ್ನು ತುಂಬುವಂತೆ ತುಂಬಿ ನಾಶಪಡಿಸಲಾಗಿದೆ” ಎಂದು ಸ್ಥಳೀಯ ವ್ಯಾಪಾರಿ ಸಲೀಂ ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಮಹಾನಗರ ಪಾಲಿಕೆಯ ಜಂಟಿ ಆಯುಕ್ತರಾದ ಸಂತೋಷ್ ಕುಮಾರ್ “ಬೀದಿಬದಿ ವ್ಯಾಪಾರಸ್ಥರಿಗೆ ಈಗಾಗಲೇ ಗುರುತಿನ ಚೀಟಿಯನ್ನು ನೀಡಿ ಸರ್ಕಾರದಿಂದ ಆದೇಶ ಬರುವವರೆಗೂ ಕಾಯಲು ಹೇಳಿದ್ದೆವು. 60 ವಾರ್ಡಿಗೆ ಬೀದಿಬದಿ ವ್ಯಾಪಾರಿಗಳನ್ನು ವ್ಯಾಪಾರಕ್ಕೆ ನೇಮಿಸುವ ಬಗ್ಗೆ ಕೂಡಾ ಚಿಂತಿಸಲಾಗಿತ್ತು. ಸದ್ಯಕ್ಕೆ ಜಿಲ್ಲಾಡಳಿತ ಬೀದಿಬದಿ ವ್ಯಾಪಾರವನ್ನು ತಡೆ ಹಿಡಿದಿದೆ. ಅದಲ್ಲದೆ ಗುರುತಿನ ಚೀಟಿ ಇರದಿರುವವರು ಕಾನೂನು ಮೀರಿ ವ್ಯಾಪರ ಮಾಡುತ್ತಿರುವುದರಿಂದ ಅದನ್ನು ತೆರವು ಗೊಳಿಸುವ ಕಾರ್ಯ ನಡೆಯುತ್ತಿದೆ. ಆದ್ದರಿಂದ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ಕೇಳಿ ಕೊಂಡಿದ್ದೇವೆ” ಎಂದರಲ್ಲದೇ “ಆಹಾರವನ್ನು ಕಸದ ಬುಟ್ಟಿಗೆ ಎಸೆದ ಘಟನೆ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ” ಎಂದಿದ್ದಾರೆ.

(ಬೀದಿಬದಿ ವ್ಯಾಪಾರಿಗಳಿಗೆ ಅನುವು ಮಾಡುವಂತೆ ಸೂಚಿಸಿದ ಅಧಿಸೂಚನೆ)

ಒಟ್ಟಾರೆ ಬೀದಿಬದಿಯ ವ್ಯಾಪಾರಿಗಳಿಗೆ ಅಧಿಕಾರಿಗಳು ಕಿರುಕುಳ ಕೊಟ್ಟಿರುವುದು ನಿಜಕ್ಕೂ ದುರಾದೃಷ್ಟಕರ. ಈ ಕುರಿತು ರಾಜ್ಯ ಸರ್ಕಾರ ಮತ್ತು ಸಂಬಂಧ ಪಟ್ಟ ಅಧಿಕಾರಿಗಳೂ ಕೂಡಲೇ ಸೂಕ್ತ ಕ್ರಮ ಜರುಗಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂಬುದೆ ಎಲ್ಲರ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೀದಿ ಬದಿಯ ವ್ಯಾಪಾರಿಗಳ ಮೇಲಿನ ಈ ದೌರ್ಜನ್ಯ ಕಂಡನಾರ್ಹ. ಲಾಕ್ ಡೌನ್ ನೆಪದಲ್ಲಿ ಬಡವರ ಬದುಕನ್ನು ಕಸಿಯುವ ಹಕ್ಕು ಯಾರಿಗೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...