Homeಮುಖಪುಟಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದವರಿಗೆ ಮುಂಬೈಗೆ ಪ್ರಯಣಿಸಲು ಪಾಸ್‌: ಬಿಜೆಪಿ ಮುಖಂಡನ ವಿರುದ್ಧ...

ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದವರಿಗೆ ಮುಂಬೈಗೆ ಪ್ರಯಣಿಸಲು ಪಾಸ್‌: ಬಿಜೆಪಿ ಮುಖಂಡನ ವಿರುದ್ಧ ದೂರು 

- Advertisement -
- Advertisement -

ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದ ಮಹಿಳೆಗೆ ಮುಂಬೈಗೆ ಪ್ರಯಣಿಸಲು ಪಾಸ್‌ ಕೊಡಿಸಲು ಮುಂದಾದ ಕೊಪ್ಪಳದ ಗುರುಬಸವ ಹೊಳಗುಂದಿ ಎಂಬ ವ್ಯಕ್ತಿ ವಿರುದ್ಧ ದೂರು ದಾಖಲಾಗಿದೆ. ಈ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳು ಪತ್ರಿಕಾ ಹೇಳಿಕೆಯೊಂದನ್ನು ನೀಡಿದ್ದಾರೆ.

ಆರೋಪಿಯು ಕೊಪ್ಪಳದ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದು, ಬಿಜೆಪಿ ಮುಖಂಡರಾಗಿದ್ದಾರೆ. ತಮ್ಮ ರಾಜಕೀಯ ಪ್ರಭಾವ ಬಳಸಿ ಪಾಸ್‌ ಪಡೆಯಲು ಹೋಗಿ ಈ ಪ್ರಕರಣದಲ್ಲಿ ಸಿಲುಕಿಹಾಕಿಕೊಂಡಿದ್ದಾರೆ.

ಹೇಳಿಕೆಯಂತೆ ಕೊರೋನಾವೈರಾಣು ಸೊಂಕು ದೃಡಪಟ್ಟಿರುವ KA – P194 ಇವರು ಮಾರ್ಚ್‌ 19 ರಂದು VRL ಟ್ರಾವೆಲ್ಸ್ ಬಸ್ ಮೂಲಕ ಮುಂಬೈಯಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಿರುತ್ತಾರೆ. ಅದೇ ದಿನ, ಅದೇ ಬಸ್‌ನಲ್ಲಿ  ಶಿಖಾ ಶೇಖ್ ಎಂಬುವವರು ಕೂಡ ಪ್ರಯಾಣಿಸಿದ್ದಾರೆ. ಅಂದರೆ ಶಿಖಾ ಶೇಕ್ ಇವರು ಸೋಂಕಿತರಾದ KA – P194 ಇವರೊಡನೆ ಪ್ರಾಥಮಿಕ ಸಂಪರ್ಕವನ್ನು (Primary Coolict ) ಹೊಂದಿರುತ್ತಾರೆ.

ಇದೇ ಶಿಖಾ ಶೇಖ್‌ರವರು ಮಾರ್ಚ್‌ 20 ರಂದು ಆಟೋ ಮೂಲಕ ಹುಬ್ಬಳ್ಳಿಯಲ್ಲಿ ಪರಿಚಯಸ್ಥರ ಮನೆಗೆ ತಲುಪಿ ಅಲ್ಲಿಯೇ ತಂಗಿದ್ದಾರೆ. ಆದರೆ ಅವರು ಮತ್ತೆ ಮುಂಬೈಗೆ ಹೋಗಬೇಕೆಂದುಕೊಂಡು ಏಪ್ರಿಲ್‌ 13ರಂದು ಸಾಯಂಕಾಲ 5–30ರ ಸಮಯದಲ್ಲಿ ತಮ್ಮ ಸ್ಕೂಟರ್ ವಾಹನದ ಜೊತೆಗೆ ಹಾಲಿನ ಡೈರಿ ವಾಹನದಲ್ಲಿ ಹುಬ್ಬಳಿಯಿಂದ ಪ್ರಯಾಣಿಸಿ, ರಾತ್ರಿ ಸುಮಾರು 08–30 ಗಂಟೆಗೆ ಕೊಪ್ಪಳಕ್ಕೆ ತಲುಪಿ ಶಾಂತಾರಾಮ, ಕದಂಬ ನಗರ, ಭಾಗ್ಯನಗರ ಇವರ ಮನೆಯಲ್ಲಿ ವಾಸ್ತವ್ಯ ಹೂಡಿರುತ್ತಾರೆ.

ಆನಂತರ ಏಪ್ರಿಲ್‌ 14ರಂದು ಸದ್ಯ ಆರೋಪಿಯಾಗಿರುವ ಗುರುಬಸವ ಹೊಳಗುಂದಿಯವರು ಶಿಖಾ ಶೇಖ್‌ ಇವರನ್ನು ಸ್ಕೂಟಿ ವಾಹನದಲ್ಲಿ ಕರೆದುಕೊಂಡು ಪೊಲೀಸ್ ಕೇಂದ್ರ ಕಛೇರಿಗೆ ಬಂದಿರುತ್ತಾರೆ . ಈ ಕುರಿತು ಶಿಖಾ ಶೇಖ್ ಇವರನ್ನು ವಿಚಾರಿಸಲಾಗಿ ಗುರುಬಸವ ಹೊಳಗುಂದಿ ಇವರು ಮುಂಬೈಗೆ ಹೋಗಲು ಪಾಸ್ ಕೊಡಿಸುವುದಾಗಿ ತಿಳಿಸಿರುವ ಹಿನ್ನಲೆಯಲ್ಲಿ ಕೊಪ್ಪಳಕ್ಕೆ ಬರುವಂತಾಯಿತು ಎಂದಿದ್ದಾರೆ.

ಪಾಸ್‌ ಕೊಡಲು ನಿರಾಕರಿಸಿದ ಪೊಲೀಸರು ಅವರಿಬ್ಬರನ್ನು ಆಸ್ಪತ್ರೆಗೆ ತೆರಳಲು ತಿಳಿಸಿರುತ್ತಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿಪ್ರಾಯದಂತೆ ಶಿಖಾ ಶೇಖ್‌ರವರ್‍ನು Institutional Quaintine ಕೇಂದ್ರದಲ್ಲಿ ಇಡಲಾಗಿದೆ. ಶಾಂತಾರಾಮ ಹಾಗೂ ಅವರ ಕುಟುಂಬದ ಸದಸ್ಯರನ್ನು ಸಹ Institutional Quarantirve ಮಾಡಲಾಗಿದೆ. ಆದರೆ ಗುರುಬಸವ ಹೊಳಗುಂದಿ ಇವರನ್ನು Institutional QUAurantine ಮಾಡಲು ಹೋದಾಗ ಪ್ರತಿರೋಧಿಸಿರುತ್ತಾರೆ. ಆದ್ದರಿಂದ ಇವರನ್ನು Institutional Quarantine ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ಅನುಮತಿ ಪಡೆಯದೇ Primary Contact ಸಂಪರ್ಕವಿರುವ ವ್ಯಕ್ತಿಗಳನ್ನು ಕೊಪ್ಪಳಕ್ಕೆ ಕರೆತಂದಿರುವುದು ಅಪರಾಧವಾಗಿದ್ದು, ಈ ಬಗ್ಗೆ ಗುರುಬಸವ ಹೊಳಗುಂದಿ ಇವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ತಹಶೀಲ್ದಾರ ಕೊಪ್ಪಳ / ವೈದ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಹೆಚ್ಚಿನ ತನಿಖೆಗೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಕಾರಣ ಮೇಲ್ಕಾಣಿಸಿದ ಸದಸ್ಯರ ಹಾಗೂ ಅವರ ಕುಟುಂಬದ ಸದಸ್ಯರ ಜೊತೆಗೆ ಯಾವುದೇ ಸಂಪರ್ಕ ಹೊಂದಿದ್ದಲ್ಲಿ ಅಂತಹ ವ್ಯಕ್ತಿಗಳು ತಮ್ಮ ಮನೆಯಿಂದ ಹೊರಗೆ ಬಾರದೇ ಕಡ್ಡಾಯವಾಗಿ ಮನೆಯಲ್ಲಿಯೇ ಇರತಕ್ಕದ್ದು, ಹಾಗೂ ಕೆಮ್ಮು, ನೆಗಡಿ, ಉಸಿರಾಟ ಸಂಬಂಧಿ ಖಾಯಿಲೆಗಳ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆಯನ್ನು ಪಡೆಯತಕ್ಕದ್ದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಕೊರೊನಾಗೆ ಪ್ರಸ್ತುತ ಭಾರತದಲ್ಲಿ 414 ಬಲಿಯಾಗಿದ್ದು 10 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಯಾರೂ ಕೂಡ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸದೇ ಎಚ್ಚರಿಕೆಯಿಂದಿರಬೇಕಾಗಿದೆ.


ಇದನ್ನೂ ಓದಿ: ಮೋದಿ ಭಾಷಣದಲ್ಲಿದ್ದ ಮೂರು ಮಹಾ ಸುಳ್ಳುಗಳು : ಶಿವಸುಂದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...