Homeಮುಖಪುಟಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದವರಿಗೆ ಮುಂಬೈಗೆ ಪ್ರಯಣಿಸಲು ಪಾಸ್‌: ಬಿಜೆಪಿ ಮುಖಂಡನ ವಿರುದ್ಧ...

ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದವರಿಗೆ ಮುಂಬೈಗೆ ಪ್ರಯಣಿಸಲು ಪಾಸ್‌: ಬಿಜೆಪಿ ಮುಖಂಡನ ವಿರುದ್ಧ ದೂರು 

- Advertisement -
- Advertisement -

ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದ ಮಹಿಳೆಗೆ ಮುಂಬೈಗೆ ಪ್ರಯಣಿಸಲು ಪಾಸ್‌ ಕೊಡಿಸಲು ಮುಂದಾದ ಕೊಪ್ಪಳದ ಗುರುಬಸವ ಹೊಳಗುಂದಿ ಎಂಬ ವ್ಯಕ್ತಿ ವಿರುದ್ಧ ದೂರು ದಾಖಲಾಗಿದೆ. ಈ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳು ಪತ್ರಿಕಾ ಹೇಳಿಕೆಯೊಂದನ್ನು ನೀಡಿದ್ದಾರೆ.

ಆರೋಪಿಯು ಕೊಪ್ಪಳದ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದು, ಬಿಜೆಪಿ ಮುಖಂಡರಾಗಿದ್ದಾರೆ. ತಮ್ಮ ರಾಜಕೀಯ ಪ್ರಭಾವ ಬಳಸಿ ಪಾಸ್‌ ಪಡೆಯಲು ಹೋಗಿ ಈ ಪ್ರಕರಣದಲ್ಲಿ ಸಿಲುಕಿಹಾಕಿಕೊಂಡಿದ್ದಾರೆ.

ಹೇಳಿಕೆಯಂತೆ ಕೊರೋನಾವೈರಾಣು ಸೊಂಕು ದೃಡಪಟ್ಟಿರುವ KA – P194 ಇವರು ಮಾರ್ಚ್‌ 19 ರಂದು VRL ಟ್ರಾವೆಲ್ಸ್ ಬಸ್ ಮೂಲಕ ಮುಂಬೈಯಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಿರುತ್ತಾರೆ. ಅದೇ ದಿನ, ಅದೇ ಬಸ್‌ನಲ್ಲಿ  ಶಿಖಾ ಶೇಖ್ ಎಂಬುವವರು ಕೂಡ ಪ್ರಯಾಣಿಸಿದ್ದಾರೆ. ಅಂದರೆ ಶಿಖಾ ಶೇಕ್ ಇವರು ಸೋಂಕಿತರಾದ KA – P194 ಇವರೊಡನೆ ಪ್ರಾಥಮಿಕ ಸಂಪರ್ಕವನ್ನು (Primary Coolict ) ಹೊಂದಿರುತ್ತಾರೆ.

ಇದೇ ಶಿಖಾ ಶೇಖ್‌ರವರು ಮಾರ್ಚ್‌ 20 ರಂದು ಆಟೋ ಮೂಲಕ ಹುಬ್ಬಳ್ಳಿಯಲ್ಲಿ ಪರಿಚಯಸ್ಥರ ಮನೆಗೆ ತಲುಪಿ ಅಲ್ಲಿಯೇ ತಂಗಿದ್ದಾರೆ. ಆದರೆ ಅವರು ಮತ್ತೆ ಮುಂಬೈಗೆ ಹೋಗಬೇಕೆಂದುಕೊಂಡು ಏಪ್ರಿಲ್‌ 13ರಂದು ಸಾಯಂಕಾಲ 5–30ರ ಸಮಯದಲ್ಲಿ ತಮ್ಮ ಸ್ಕೂಟರ್ ವಾಹನದ ಜೊತೆಗೆ ಹಾಲಿನ ಡೈರಿ ವಾಹನದಲ್ಲಿ ಹುಬ್ಬಳಿಯಿಂದ ಪ್ರಯಾಣಿಸಿ, ರಾತ್ರಿ ಸುಮಾರು 08–30 ಗಂಟೆಗೆ ಕೊಪ್ಪಳಕ್ಕೆ ತಲುಪಿ ಶಾಂತಾರಾಮ, ಕದಂಬ ನಗರ, ಭಾಗ್ಯನಗರ ಇವರ ಮನೆಯಲ್ಲಿ ವಾಸ್ತವ್ಯ ಹೂಡಿರುತ್ತಾರೆ.

ಆನಂತರ ಏಪ್ರಿಲ್‌ 14ರಂದು ಸದ್ಯ ಆರೋಪಿಯಾಗಿರುವ ಗುರುಬಸವ ಹೊಳಗುಂದಿಯವರು ಶಿಖಾ ಶೇಖ್‌ ಇವರನ್ನು ಸ್ಕೂಟಿ ವಾಹನದಲ್ಲಿ ಕರೆದುಕೊಂಡು ಪೊಲೀಸ್ ಕೇಂದ್ರ ಕಛೇರಿಗೆ ಬಂದಿರುತ್ತಾರೆ . ಈ ಕುರಿತು ಶಿಖಾ ಶೇಖ್ ಇವರನ್ನು ವಿಚಾರಿಸಲಾಗಿ ಗುರುಬಸವ ಹೊಳಗುಂದಿ ಇವರು ಮುಂಬೈಗೆ ಹೋಗಲು ಪಾಸ್ ಕೊಡಿಸುವುದಾಗಿ ತಿಳಿಸಿರುವ ಹಿನ್ನಲೆಯಲ್ಲಿ ಕೊಪ್ಪಳಕ್ಕೆ ಬರುವಂತಾಯಿತು ಎಂದಿದ್ದಾರೆ.

ಪಾಸ್‌ ಕೊಡಲು ನಿರಾಕರಿಸಿದ ಪೊಲೀಸರು ಅವರಿಬ್ಬರನ್ನು ಆಸ್ಪತ್ರೆಗೆ ತೆರಳಲು ತಿಳಿಸಿರುತ್ತಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿಪ್ರಾಯದಂತೆ ಶಿಖಾ ಶೇಖ್‌ರವರ್‍ನು Institutional Quaintine ಕೇಂದ್ರದಲ್ಲಿ ಇಡಲಾಗಿದೆ. ಶಾಂತಾರಾಮ ಹಾಗೂ ಅವರ ಕುಟುಂಬದ ಸದಸ್ಯರನ್ನು ಸಹ Institutional Quarantirve ಮಾಡಲಾಗಿದೆ. ಆದರೆ ಗುರುಬಸವ ಹೊಳಗುಂದಿ ಇವರನ್ನು Institutional QUAurantine ಮಾಡಲು ಹೋದಾಗ ಪ್ರತಿರೋಧಿಸಿರುತ್ತಾರೆ. ಆದ್ದರಿಂದ ಇವರನ್ನು Institutional Quarantine ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ಅನುಮತಿ ಪಡೆಯದೇ Primary Contact ಸಂಪರ್ಕವಿರುವ ವ್ಯಕ್ತಿಗಳನ್ನು ಕೊಪ್ಪಳಕ್ಕೆ ಕರೆತಂದಿರುವುದು ಅಪರಾಧವಾಗಿದ್ದು, ಈ ಬಗ್ಗೆ ಗುರುಬಸವ ಹೊಳಗುಂದಿ ಇವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ತಹಶೀಲ್ದಾರ ಕೊಪ್ಪಳ / ವೈದ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಹೆಚ್ಚಿನ ತನಿಖೆಗೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಕಾರಣ ಮೇಲ್ಕಾಣಿಸಿದ ಸದಸ್ಯರ ಹಾಗೂ ಅವರ ಕುಟುಂಬದ ಸದಸ್ಯರ ಜೊತೆಗೆ ಯಾವುದೇ ಸಂಪರ್ಕ ಹೊಂದಿದ್ದಲ್ಲಿ ಅಂತಹ ವ್ಯಕ್ತಿಗಳು ತಮ್ಮ ಮನೆಯಿಂದ ಹೊರಗೆ ಬಾರದೇ ಕಡ್ಡಾಯವಾಗಿ ಮನೆಯಲ್ಲಿಯೇ ಇರತಕ್ಕದ್ದು, ಹಾಗೂ ಕೆಮ್ಮು, ನೆಗಡಿ, ಉಸಿರಾಟ ಸಂಬಂಧಿ ಖಾಯಿಲೆಗಳ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆಯನ್ನು ಪಡೆಯತಕ್ಕದ್ದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಕೊರೊನಾಗೆ ಪ್ರಸ್ತುತ ಭಾರತದಲ್ಲಿ 414 ಬಲಿಯಾಗಿದ್ದು 10 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಯಾರೂ ಕೂಡ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸದೇ ಎಚ್ಚರಿಕೆಯಿಂದಿರಬೇಕಾಗಿದೆ.


ಇದನ್ನೂ ಓದಿ: ಮೋದಿ ಭಾಷಣದಲ್ಲಿದ್ದ ಮೂರು ಮಹಾ ಸುಳ್ಳುಗಳು : ಶಿವಸುಂದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...