Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆಜನರಿಗೆ ಸುಖವನ್ನುಂಟುಮಾಡುವ ಸಮಸ್ತ ವಿಷಯಗಳ ಪುಸ್ತಕ

ಜನರಿಗೆ ಸುಖವನ್ನುಂಟುಮಾಡುವ ಸಮಸ್ತ ವಿಷಯಗಳ ಪುಸ್ತಕ

- Advertisement -
- Advertisement -

ಷಿಕಾರಿಪುರದಲ್ಲಿದ್ದಿರಬಹುದಾದ ಚಾವುಂಡರಾಯನ ಕಾಲ ಪ್ರಾಯಶಃ ಶಕ 969 ಕ್ರಿ. ಶ. 1042. ಈತ ರಚಿಸಿರುವ ಗ್ರಂಥದ ಹೆಸರೇ ಲೋಕೋಪಕಾರಂ. ಶ್ರವಣ ಬೆಳಗೊಳದ ಗೊಮ್ಮಟೇಶ್ವರನ ಕೆತ್ತಿಸಿದ ಚಾವುಂಡರಾಯನಿಗೂ ಮತ್ತು ಲೋಕೋಪಕಾರಂ ಗ್ರಂಥದ ಕರ್ತೃವಿಗೂ ಏನೂ ಸಂಬಂಧವಿಲ್ಲ. ಈತನ ಹೆಸರನ್ನು ಕೇಳಿ ಬಹುಶಃ ಜೈನ ಮತಸ್ಥನಿರಬೇಕೆಂದುಕೊಂಡರೆ ಅದೂ ಅಲ್ಲ. ಈತ ಸಕಲ ವಿದ್ಯಾ ಸಂಪನ್ನ ಬ್ರಾಹ್ಮಣ.

ಇನ್ನು ಈ ಶೀರ್ಷಿಕೆಯ ಪ್ರಕಾರ ಲೋಕ ಎಂದರೆ ಭೌತಿಕವಾದ ಜಗತ್ತಲ್ಲ. ಜನರೆಂದು ಅರ್ಥ. ಜನೋಪಕಾರ ಎನ್ನುವುದನ್ನೇ ಲೋಕೋಪಕಾರ ಎನ್ನುತ್ತಿದ್ದಾರೆ ಈ ಕರ್ತೃ.

ಈ ಭೂಮಂಡಲದಲ್ಲಿ ಜನ್ಮಿಸಿದ ಸಮಸ್ತ ಪ್ರಾಣಿಗಳಿಗೂ ಸುಖವು ಬೇಕು. ಹಾಗಾಗಿ ಜನರಿಗೆ ಸುಖವನ್ನು ಉಂಟುಮಾಡುವ ಸಮಸ್ತ ವಿಷಯಗಳನ್ನು ಈ ಪುಸ್ತಕವು ಒಳಗೊಂಡಿದೆ.

ಯಾವುದಪ್ಪಾ ಆ ವಿಷಯಗಳೆಂದರೆ, ವೃಕ್ಷಾರ್ಯುವೇದ, ಸೂಪಶಾಸ್ತ್ರ, ಪಶುಗಳಿಗೆ ವೈದ್ಯ, ಬಾಲ ವೈದ್ಯ, ಅಶ್ವ ವೈದ್ಯ, ಗಜವೈದ್ಯ, ನರಾದಿವೈದ್ಯ, ವಿಷವೈದ್ಯ, ಲೈಂಗಿಕ ಸಮಸ್ಯೆ, ಕೃಷಿ, ಪಶು ಸಾಕಣೆ, ಮನೆ ಮದ್ದು, ಜ್ಯೋತಿಷ್ಯ, ಶಕುನಗಳು; ಹೀಗೆ ಆ ಕಾಲಘಟ್ಟದಲ್ಲಿ ಜನರು ತಮ್ಮ ಸುಖಾನ್ವೇಷಣೆಯಲ್ಲಿ ಏನೇನಲ್ಲಾ ಅನುಸರಿಸುತ್ತಿದ್ದರೋ ಅಥವಾ ಅವಲಂಬಿಸುತ್ತಿದ್ದರೋ ಆ ವಿಷಯಗಳನ್ನೆಲ್ಲಾ ಈ ಪುಸ್ತಕವು ಒಳಗೊಂಡಿದೆ.

ಪುಸ್ತಕವು ಆಸಕ್ತಿಯಿಂದ ಕೂಡಿರುವುದೇಕೆಂದರೆ, ಆ ಕಾಲಘಟ್ಟದಲ್ಲಿ ಜನರು ಸಾಮಾನ್ಯವಾಗಿ ಪರಿಗಣಿಸುತ್ತಿದ್ದ ಮತ್ತು ಶ್ರದ್ಧೆಯನ್ನು ತೋರುತ್ತಿದ್ದ ವಿಷಯಗಳನ್ನೆಲ್ಲಾ ಬರಹಗಾರ ದಾಖಲು ಮಾಡಿದ್ದಾರೆ. ಆ ಜನರ ನಂಬಿಕೆಗಳು, ಆಸಕ್ತಿಗಳು, ಅಗತ್ಯಗಳು, ಅಭಿರುಚಿಗಳೆಲ್ಲಾ ಅನಾವರಣಗೊಳ್ಳುತ್ತಾ ಹೋಗುತ್ತವೆ.

ಉದಾಹರಣೆಗೊಂದು ನೋಡಿ, “ಒಂದೆಲದ, ಹೊನಗನ್ನೆ, ಅಮರ್ದುವಳ್ಳಿ, ಕೊಳುಗುಳಿಕೆ ಈ ಔಷಧಿಗಳಲ್ಲಿ ದೊರಕಿದ ಒಂದೊಂದರ ರಸಮಂ ಕೊಂಡು ಸಕ್ಕರೆಯಂ ಬೆರಸಿ ಕುಡಿಸಿದಡೆ ಪಿತ್ತಂ ಕಿಡುವುದು.”

ಪಿತ್ತ ಕಳಕೊಂಡರಾ, ಇನ್ನು ನಿಮ್ಮ ಮುಖವು ಚಂದ್ರನ ಕಾಂತಿಯಲ್ಲಿ ಹೊಳೆಯಬೇಕಾದರೆ, “ಜವೆ, ಕೋಷ್ಠಂ, ಲೋಧ್ರಂ ಇವುರೊಳಗೆ ಆವುದೊಂದು ದ್ಕೊರಕಿದುದಂ ಕೊಂಡು ಉದಕದಲ್ಲರೆದು ಮುಸುಡಂ ಪೂಸಲ್ ಮುಸುಡು ಚಂದ್ರನ ಮರ್ಯಾದೆಯಲ್ಲಿ ಕಾಂತಿಯಪ್ಪುದು – ಬೇಗಮಪ್ಪುದು.”

ಫೇರ್ ಅಂಡ್ ಲೌವ್ಲೀ ಜಾಹಿರಾತಿನಂತೆ ಇಲ್ಲಿ ಚಾವುಂಡರಾಯರೂ ಆಶ್ವಾಸನೆ ಕೊಡುತ್ತಾರೆ “ಬೇಗಮಪ್ಪುದು” ಎಂದು.

ಅತ್ಯಂತ ಕುತೂಹಲಕರವಾದ ವಿಷಯಗಳೆಂದರೆ ಭೂಮಿಯ ಮೇಲ್ಭಾಗವನ್ನು ನೋಡಿ, ಅಲ್ಲಿರುವ ಗಿಡಗಳು, ಮರಗಳು ಯಾವುವು, ಹೇಗೆ ಬೆಳೆದಿವೆ ಎಂಬುದನ್ನೆಲ್ಲಾ ನೋಡಿ, ಬಾವಿ ತೋಡಲು ನೀರಿನ ನೆಲೆಯನ್ನು ಪತ್ತೆ ಹಚ್ಚುವುದು.

ತರಾವರಿ ಸುಗಂಧಗಳ ಗಟ್ಟಿಯಾದ ಮೊಸರು ಮಾಡುವುದು, ಕಡಿಮೆ ವಸ್ತುಗಳನ್ನು ಬಳಸಿ ಅಡಿಗೆಯನ್ನು ರುಚಿಕರವಾಗಿ ಮಾಡುವುದು, ತರಕಾರಿಗಳನ್ನು, ಹಣ್ಣುಗಳನು ಗುರುತಿಸುವ ಬಗೆ ಇತ್ಯಾದಿಗಳನ್ನೆಲ್ಲಾ ವಿವರಿಸಿದ್ದಾರೆ.

ಪ್ರಾಣಿಗಳ ಮೇಲಿನ ದಯೆ, ಗಿಡಗಳನ್ನು ಗುರುತಿಸುವುದು, ಕೃಷಿಗೆ ಅಗತ್ಯ ಸಲಹೆ; ಹೀಗೆ ಎಲ್ಲಾ ವಿಷಯಗಳಲ್ಲೂ ಪಾರಂಗತರಾಗದಿದ್ದರೂ ತಕ್ಷಣಕ್ಕೆ ಒಂದಿಷ್ಟುಮಾಹಿತಿಯನ್ನು ಪಡೆದುಕೊಂಡು ಕೆಲಸಕ್ಕೆ ತೊಡಗಲು ಸಾಧ್ಯವಾಗುವ ಹಾಗೆ ವಿಷಯಗಳು ಹೆಣೆಯಲ್ಪಟ್ಟಿವೆ. ಒಂದು ಮನೆ ಎಂದರೆ ತಕ್ಷಣಕ್ಕೆ ಏನಾದರೂ ಜ್ವರ, ಗಾಯ, ಅಥವಾ ವಿಷ ಸೇವನೆ ಎಂತಾದರೂ ಆಗಿಬಿಡಬಹುದು. ಅದಕ್ಕೆ ಈ ಪುಸ್ತಕ ಮನೆಗಳಲ್ಲಿರಬೇಕು ಎಂಬುದು ಗ್ರಂಥಕರ್ತನ ಆಶಯ.

ಗೃಹಸಂಗಾತಿ ಎಂಬ ಪುಸ್ತಕವೊಂದು ಆಧುನಿಕ, ಸರಳ ಕನ್ನಡದಲ್ಲಿದೆ. ಅದೂ ಕೂಡಾ ಹೀಗೆಯೇ. ಸಾವಿರ ವರ್ಷಗಳ ಹಿಂದೆ ಕನ್ನಡದಲ್ಲೊಬ್ಬರು ಈ ಆಲೋಚನೆ, ಆಶಯದಲ್ಲಿ ಒಂದು ಗ್ರಂಥ ರಚನೆ ಮಾಡಿರುವುದು ನಿಜಕ್ಕೂ ವಿಶೇಷ. ಪುಸ್ತಕವನ್ನು ಓದುತ್ತಿದ್ದರೆ ಆ ಜನರ ಆಸಕ್ತಿ, ಅಭಿರುಚಿ, ಚಾತುರ್ಯಗಳೆಲ್ಲಾ ತಿಳಿಯುತ್ತಾ ಹೋಗುತ್ತದೆ. ಖುಷಿಯಾಗುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ಹೊರತಂದಿರುವ ಈ ಪುಸ್ತಕದ ಸಂಪಾದಕರು ಹೆಚ್ ಶೇಷ ಅಯ್ಯಂಗಾರ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...