Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆಜನರಿಗೆ ಸುಖವನ್ನುಂಟುಮಾಡುವ ಸಮಸ್ತ ವಿಷಯಗಳ ಪುಸ್ತಕ

ಜನರಿಗೆ ಸುಖವನ್ನುಂಟುಮಾಡುವ ಸಮಸ್ತ ವಿಷಯಗಳ ಪುಸ್ತಕ

- Advertisement -
- Advertisement -

ಷಿಕಾರಿಪುರದಲ್ಲಿದ್ದಿರಬಹುದಾದ ಚಾವುಂಡರಾಯನ ಕಾಲ ಪ್ರಾಯಶಃ ಶಕ 969 ಕ್ರಿ. ಶ. 1042. ಈತ ರಚಿಸಿರುವ ಗ್ರಂಥದ ಹೆಸರೇ ಲೋಕೋಪಕಾರಂ. ಶ್ರವಣ ಬೆಳಗೊಳದ ಗೊಮ್ಮಟೇಶ್ವರನ ಕೆತ್ತಿಸಿದ ಚಾವುಂಡರಾಯನಿಗೂ ಮತ್ತು ಲೋಕೋಪಕಾರಂ ಗ್ರಂಥದ ಕರ್ತೃವಿಗೂ ಏನೂ ಸಂಬಂಧವಿಲ್ಲ. ಈತನ ಹೆಸರನ್ನು ಕೇಳಿ ಬಹುಶಃ ಜೈನ ಮತಸ್ಥನಿರಬೇಕೆಂದುಕೊಂಡರೆ ಅದೂ ಅಲ್ಲ. ಈತ ಸಕಲ ವಿದ್ಯಾ ಸಂಪನ್ನ ಬ್ರಾಹ್ಮಣ.

ಇನ್ನು ಈ ಶೀರ್ಷಿಕೆಯ ಪ್ರಕಾರ ಲೋಕ ಎಂದರೆ ಭೌತಿಕವಾದ ಜಗತ್ತಲ್ಲ. ಜನರೆಂದು ಅರ್ಥ. ಜನೋಪಕಾರ ಎನ್ನುವುದನ್ನೇ ಲೋಕೋಪಕಾರ ಎನ್ನುತ್ತಿದ್ದಾರೆ ಈ ಕರ್ತೃ.

ಈ ಭೂಮಂಡಲದಲ್ಲಿ ಜನ್ಮಿಸಿದ ಸಮಸ್ತ ಪ್ರಾಣಿಗಳಿಗೂ ಸುಖವು ಬೇಕು. ಹಾಗಾಗಿ ಜನರಿಗೆ ಸುಖವನ್ನು ಉಂಟುಮಾಡುವ ಸಮಸ್ತ ವಿಷಯಗಳನ್ನು ಈ ಪುಸ್ತಕವು ಒಳಗೊಂಡಿದೆ.

ಯಾವುದಪ್ಪಾ ಆ ವಿಷಯಗಳೆಂದರೆ, ವೃಕ್ಷಾರ್ಯುವೇದ, ಸೂಪಶಾಸ್ತ್ರ, ಪಶುಗಳಿಗೆ ವೈದ್ಯ, ಬಾಲ ವೈದ್ಯ, ಅಶ್ವ ವೈದ್ಯ, ಗಜವೈದ್ಯ, ನರಾದಿವೈದ್ಯ, ವಿಷವೈದ್ಯ, ಲೈಂಗಿಕ ಸಮಸ್ಯೆ, ಕೃಷಿ, ಪಶು ಸಾಕಣೆ, ಮನೆ ಮದ್ದು, ಜ್ಯೋತಿಷ್ಯ, ಶಕುನಗಳು; ಹೀಗೆ ಆ ಕಾಲಘಟ್ಟದಲ್ಲಿ ಜನರು ತಮ್ಮ ಸುಖಾನ್ವೇಷಣೆಯಲ್ಲಿ ಏನೇನಲ್ಲಾ ಅನುಸರಿಸುತ್ತಿದ್ದರೋ ಅಥವಾ ಅವಲಂಬಿಸುತ್ತಿದ್ದರೋ ಆ ವಿಷಯಗಳನ್ನೆಲ್ಲಾ ಈ ಪುಸ್ತಕವು ಒಳಗೊಂಡಿದೆ.

ಪುಸ್ತಕವು ಆಸಕ್ತಿಯಿಂದ ಕೂಡಿರುವುದೇಕೆಂದರೆ, ಆ ಕಾಲಘಟ್ಟದಲ್ಲಿ ಜನರು ಸಾಮಾನ್ಯವಾಗಿ ಪರಿಗಣಿಸುತ್ತಿದ್ದ ಮತ್ತು ಶ್ರದ್ಧೆಯನ್ನು ತೋರುತ್ತಿದ್ದ ವಿಷಯಗಳನ್ನೆಲ್ಲಾ ಬರಹಗಾರ ದಾಖಲು ಮಾಡಿದ್ದಾರೆ. ಆ ಜನರ ನಂಬಿಕೆಗಳು, ಆಸಕ್ತಿಗಳು, ಅಗತ್ಯಗಳು, ಅಭಿರುಚಿಗಳೆಲ್ಲಾ ಅನಾವರಣಗೊಳ್ಳುತ್ತಾ ಹೋಗುತ್ತವೆ.

ಉದಾಹರಣೆಗೊಂದು ನೋಡಿ, “ಒಂದೆಲದ, ಹೊನಗನ್ನೆ, ಅಮರ್ದುವಳ್ಳಿ, ಕೊಳುಗುಳಿಕೆ ಈ ಔಷಧಿಗಳಲ್ಲಿ ದೊರಕಿದ ಒಂದೊಂದರ ರಸಮಂ ಕೊಂಡು ಸಕ್ಕರೆಯಂ ಬೆರಸಿ ಕುಡಿಸಿದಡೆ ಪಿತ್ತಂ ಕಿಡುವುದು.”

ಪಿತ್ತ ಕಳಕೊಂಡರಾ, ಇನ್ನು ನಿಮ್ಮ ಮುಖವು ಚಂದ್ರನ ಕಾಂತಿಯಲ್ಲಿ ಹೊಳೆಯಬೇಕಾದರೆ, “ಜವೆ, ಕೋಷ್ಠಂ, ಲೋಧ್ರಂ ಇವುರೊಳಗೆ ಆವುದೊಂದು ದ್ಕೊರಕಿದುದಂ ಕೊಂಡು ಉದಕದಲ್ಲರೆದು ಮುಸುಡಂ ಪೂಸಲ್ ಮುಸುಡು ಚಂದ್ರನ ಮರ್ಯಾದೆಯಲ್ಲಿ ಕಾಂತಿಯಪ್ಪುದು – ಬೇಗಮಪ್ಪುದು.”

ಫೇರ್ ಅಂಡ್ ಲೌವ್ಲೀ ಜಾಹಿರಾತಿನಂತೆ ಇಲ್ಲಿ ಚಾವುಂಡರಾಯರೂ ಆಶ್ವಾಸನೆ ಕೊಡುತ್ತಾರೆ “ಬೇಗಮಪ್ಪುದು” ಎಂದು.

ಅತ್ಯಂತ ಕುತೂಹಲಕರವಾದ ವಿಷಯಗಳೆಂದರೆ ಭೂಮಿಯ ಮೇಲ್ಭಾಗವನ್ನು ನೋಡಿ, ಅಲ್ಲಿರುವ ಗಿಡಗಳು, ಮರಗಳು ಯಾವುವು, ಹೇಗೆ ಬೆಳೆದಿವೆ ಎಂಬುದನ್ನೆಲ್ಲಾ ನೋಡಿ, ಬಾವಿ ತೋಡಲು ನೀರಿನ ನೆಲೆಯನ್ನು ಪತ್ತೆ ಹಚ್ಚುವುದು.

ತರಾವರಿ ಸುಗಂಧಗಳ ಗಟ್ಟಿಯಾದ ಮೊಸರು ಮಾಡುವುದು, ಕಡಿಮೆ ವಸ್ತುಗಳನ್ನು ಬಳಸಿ ಅಡಿಗೆಯನ್ನು ರುಚಿಕರವಾಗಿ ಮಾಡುವುದು, ತರಕಾರಿಗಳನ್ನು, ಹಣ್ಣುಗಳನು ಗುರುತಿಸುವ ಬಗೆ ಇತ್ಯಾದಿಗಳನ್ನೆಲ್ಲಾ ವಿವರಿಸಿದ್ದಾರೆ.

ಪ್ರಾಣಿಗಳ ಮೇಲಿನ ದಯೆ, ಗಿಡಗಳನ್ನು ಗುರುತಿಸುವುದು, ಕೃಷಿಗೆ ಅಗತ್ಯ ಸಲಹೆ; ಹೀಗೆ ಎಲ್ಲಾ ವಿಷಯಗಳಲ್ಲೂ ಪಾರಂಗತರಾಗದಿದ್ದರೂ ತಕ್ಷಣಕ್ಕೆ ಒಂದಿಷ್ಟುಮಾಹಿತಿಯನ್ನು ಪಡೆದುಕೊಂಡು ಕೆಲಸಕ್ಕೆ ತೊಡಗಲು ಸಾಧ್ಯವಾಗುವ ಹಾಗೆ ವಿಷಯಗಳು ಹೆಣೆಯಲ್ಪಟ್ಟಿವೆ. ಒಂದು ಮನೆ ಎಂದರೆ ತಕ್ಷಣಕ್ಕೆ ಏನಾದರೂ ಜ್ವರ, ಗಾಯ, ಅಥವಾ ವಿಷ ಸೇವನೆ ಎಂತಾದರೂ ಆಗಿಬಿಡಬಹುದು. ಅದಕ್ಕೆ ಈ ಪುಸ್ತಕ ಮನೆಗಳಲ್ಲಿರಬೇಕು ಎಂಬುದು ಗ್ರಂಥಕರ್ತನ ಆಶಯ.

ಗೃಹಸಂಗಾತಿ ಎಂಬ ಪುಸ್ತಕವೊಂದು ಆಧುನಿಕ, ಸರಳ ಕನ್ನಡದಲ್ಲಿದೆ. ಅದೂ ಕೂಡಾ ಹೀಗೆಯೇ. ಸಾವಿರ ವರ್ಷಗಳ ಹಿಂದೆ ಕನ್ನಡದಲ್ಲೊಬ್ಬರು ಈ ಆಲೋಚನೆ, ಆಶಯದಲ್ಲಿ ಒಂದು ಗ್ರಂಥ ರಚನೆ ಮಾಡಿರುವುದು ನಿಜಕ್ಕೂ ವಿಶೇಷ. ಪುಸ್ತಕವನ್ನು ಓದುತ್ತಿದ್ದರೆ ಆ ಜನರ ಆಸಕ್ತಿ, ಅಭಿರುಚಿ, ಚಾತುರ್ಯಗಳೆಲ್ಲಾ ತಿಳಿಯುತ್ತಾ ಹೋಗುತ್ತದೆ. ಖುಷಿಯಾಗುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ಹೊರತಂದಿರುವ ಈ ಪುಸ್ತಕದ ಸಂಪಾದಕರು ಹೆಚ್ ಶೇಷ ಅಯ್ಯಂಗಾರ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...