Homeಕರ್ನಾಟಕರಾಜಕೀಯ ಲಾಕ್‌ಡೌನ್‌ ಧಿಕ್ಕರಿಸಿ! ಕಾರ್ಮಿಕ ಮುಖಂಡ ಆರ್.ಮಾನಸಯ್ಯ ಕರೆ

ರಾಜಕೀಯ ಲಾಕ್‌ಡೌನ್‌ ಧಿಕ್ಕರಿಸಿ! ಕಾರ್ಮಿಕ ಮುಖಂಡ ಆರ್.ಮಾನಸಯ್ಯ ಕರೆ

ಲಾಕ್‌ಡೌನ್‌ನ ಪರಿಣಾಮಗಳು ಭಿನ್ನ ಆಯಾಮಗಳನ್ನು ಪಡೆದುಕೊಳ್ಳುತ್ತಿದ್ದಂತೆ ದೇಶದ ವಿವಿಧ ಕಡೆಗಳಿಂದ ಹಲವು ರೀತಿಯ ದನಿಗಳು ಮೇಲೇಳುತ್ತಿವೆ. ಟಿಯುಸಿಐ ಮುಖಂಡ ಆರ್.‌ಮಾನಸಯ್ಯನವರು ಬರೆದ ಅಂತಹ ಒಂದು ಬರಹ ಇಲ್ಲಿದೆ.

- Advertisement -
- Advertisement -

ಮೊಟ್ಟ ಮೊದಲನೆಯದಾಗಿ ನಾನು ದೈಹಿಕ ಅಂತರ ಕಾಯ್ದುಕೊಳ್ಳ ಬೇಕಾದ ಲಾಕ್‌ಡೌನ್‌ ಪರವಾಗಿದ್ದೇನೆ.ಆದರೆ ಪ್ರಜಾಪ್ರಭುತ್ವವನ್ನ ಹಂತ ಹಂತವಾಗಿ ಲಾಕ್ ಡೌನ್ ಮಾಡುವ, ಕೇಂದ್ರ ಸರಕಾರದ ನೀಚಾತಿನೀಚ ರಾಜಕೀಯ ದಬ್ಬಾಳಿಕೆ ವಿರುದ್ದ ಜನತೆ ಹಾಗೂ ರಾಜಕೀಯ ಪಕ್ಷಗಳು ಕೂಡಲೆ ಧ್ವನಿ ಎತ್ತಬೇಕೆಂದು ಮನವಿ ಮಾಡುತ್ತೇನೆ.

ಕೊರೊನಾ ಕಟ್ಟಿ ಹಾಕುಲು ಇದ್ದ ಆರಂಭದ ಎಲ್ಲ ಅವಕಾಶಗಳನ್ನು ಮೋದಿ ಸರಕಾರ ಬಳಸಿಕೊಳ್ಳಲಿಲ್ಲ. ಇದು ಸರಕಾರದ ಮೊದಲನೆಯ ದೇಶಘಾತುಕ ಕೆಲಸ.

ಎರಡನೆಯದಾಗಿ, ಈ ಭೇಮಾರಿಯನ್ನು ಎದುರಿಸಲು ವೈದ್ಯಕೀಯ ಹಾಗೂ ಆಡಳಿತಾತ್ಮಕ ಸಿದ್ದತೆಗಳು ಅತ್ಯಂತ ಕಳಪೆ ಹಾಗೂ ಯಾತಕ್ಕೂ ಸರಿ ಹೋಗದಂತವುಗಳು. ಇದು ಮೋದಿ ಸರಕಾರದ ಎರಡನೆಯ ದೇಶಘಾತುಕ ಕೆಲಸ.

ಮೂರನೆಯದ್ದಾಗಿ, ಜನತಾ ಕಫ್ಯು೯ ಹಾಗೂ 21 ದಿನಗಳ ಕಾಲ ಲಾಕ್‌ಡೌನ್‌ ಘೋಷಣೆಗಿಂತ ಪೂವ೯ದಲ್ಲಿ ವಿವಿಧ ರಾಜ್ಯ ಸರಕಾರಗಳ ಜತೆ, ಸವ೯ಪಕ್ಷಗಳ ಜತೆ, ರೈತ ಕಾಮಿ೯ಕ ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸಲಿಲ್ಲ. ದೀಘ೯ಕಾಲದ ಲಾಕ್‌ಡೌನ್‌ ಎದುರಿಸಲು ಜನರ ಬಳಿ ಏನೇನಿದೆ -ಏನೇನಿರಬೇಕು ಹಾಗೂ ರಾಷ್ಟ್ರೀಯ ತುರ್ತು ಸೇವೆಗಳನ್ನು ಕೊಡ ಮಾಡಲು ಸರಕಾರದ ಬಳಿ  ಯಾವ ಸಿದ್ದತೆಗಳಿರಲಿಲ್ಲ. ಇದು ಸಂಘ ಪರಿವಾರ್‌ ಸರಕಾರದ ಮೂರನೆಯ ಅತೀ ದೊಡ್ಡ ದೇಶ ಘಾತುಕ ಕೆಲಸ.

ಇದಕ್ಕಿಂತ ಮಿಗಿಲಾದ ದ್ರೋಹ ಎಂದರೆ ಇಡೀ ಪರಿಸ್ಥಿಯನ್ನು  ದುರುಪಯೋಗಪಡಿಸಿಕೊಂಡು ವಿರೋಧಮುಕ್ತ ಸವಾ೯ಧಿಕಾರವನ್ನು ಚಲಾಯಿಸಿ, ತನ್ನ ಹಿಂದೂ ರಾಷ್ಟ್ರ ರಾಜಕಾರಣವನ್ನು ದೇಶಾದ್ಯಂತ ಕೊರೊನಾಗಿಂತ ಹೈ ಸ್ಪೀಡನಲ್ಲಿ ಹರಡುತ್ತಿರುವುದು. ಕಳೆದ ಒಂದುವರೆ ತಿಂಗಳಿಂದ 99% ಚಾನಲಗಳು ಹಾಗೂ 75% ಪತ್ರಿಕೆಗಳು ಹಾಗೂ 520000ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ಮೂಲಕ ವಿರೋಧ ಪಕ್ಷಗಳು,ಪ್ರಜಾಪ್ರಭುತ್ವವಾದಿಗಳು, ಅಂಬೇಡ್ಕರ್ವಾದಿಗಳು, ಮುಸ್ಲೀಮರು, ಕಮ್ಯೂನಿಸ್ಟ್ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಅತೀ ದೊಡ್ಡ ದುಷ್ಪ್ರಚಾರ ಮಾಡುತ್ತಿರುವುದು.

ಈ ಪೈಕಿ ಅತ್ಯಂತ ಹೇಸಿಗೆ ಹಾಗೂ ನಿಲ೯ಜ್ಯದ ಕೆಲಸ ಎಂದರೆ, ಚಪ್ಪಾಳೆ-ಗಂಟೆ ಬಾರಿಸಲು, ಲೈಟ್ ಆಫ್ ಮಾಡಿ ದೀಪ ಹಚ್ಚಲು ಹಾಗೂ ಬಿಡಿಗಾಸಿನ ಬೆಲೆ ಇಲ್ಲದ ಸಪ್ತ ಸೂತ್ರ ಪ್ರಕಟಿಸಲು ದೇಶದ ಪ್ರಧಾನಿಯು ಸಂಪೂಣ೯ ಸೀಮಿತವಾಗಿ ಹೋಗಿದ್ದು!

ಯಾವ ತಯಾರಿ ಹಾಗೂ ಬಿಡಿಗಾಸಿನ ಸಹಾಯ ನೀಡದೆ ಮತ್ತೆ ಲಾಕ್‌ಡೌನ್‌ ವಿಸ್ತರಣೆ ಮಾಡಿದ್ದು ಅತ್ಯಂತ ರಾಜಕೀಯ ದ್ರೋಹವಾಗಿದೆ.

ಮೋದಿ ಸರಕಾರದ ದುರಾಡಳಿತದಿಂದ ಮೊದಲೆ ಮೂಲೆಗುಂಪಾಗಿದ್ದ ದೇಶದ ಆಥಿ೯ಕತೆ, ಸಂಸದೀಯ ಪ್ರಜಾಪ್ರಭುತ್ವ ಹಾಗೂ ವಿಶಾಲ ಜನವಗ೯ಗಳ ಜೀವನವು ಇನ್ನಷ್ಟು ದರಿದ್ರ ಹಾಗೂ ದಾರುಣ ಹಂತ ತಲುಪಲು ತಾನು ಕಾರಣವಲ್ಲ ಎಂದು ಸಮಥಿ೯ಸಿಕೊಳ್ಳಲು ಎಲ್ಲ ಬಗೆಯ ತಯಾರಿ ನಡೆದಿದೆ.

ಒಟ್ಟಾರೆ, ಕೊರೊನಾ ಹೆಸರಲ್ಲಿ ಅತೀ ದೊಡ್ಡ ರಾಜಕೀಯ ದಿಗ್ಭಂದನ ನಮ್ಮ ದೇಶದಲ್ಲಿ ಬಿಗಿಗೊಳ್ಳುತ್ತಿದೆ. ದೇಶದ ನಾಲ್ಲು ಮೂಲೆಗಳು ಪೊಲೀಸ್ ರಾಜ್ಯವಾಗಿ ಹೋಗಿವೆ.ಪ್ರತಿಪಕ್ಷ -ಪ್ರತಿರೋಧ-ಪ್ರತಿಕ್ರಿಯೆ -ಪ್ರತಿಭಟನೆ-ಪ್ರಶ್ನಿಸುವಿಕೆ-ಜಾತ್ಯತೀತತೆ-ಸಮಾನತೆ-ಸ್ವಾತಂತ್ರ್ಯ -ನ್ಯಾಯಾಪೇಕ್ಷೆ ಎಲ್ಲವೂ ಲಾಕ್ ಡೌನ್ ಆಗಿವೆ!
ಭೇಮಾರಿ ಹೆಸರಲ್ಲಿ ಮನುವಾದ ಹಾಗೂ ಕಾಪೊ೯ರೇಟ್ ಸವಾ೯ಧಿಕಾರ ಹದ್ದುಬಸ್ತು ಮೀರಿ ಹರಡುತ್ತದೆ.
ಈ ದೇಶ ಹಿಂದೆದೂ ಕಂಡರಿಯದ ರೀತಿಯಲ್ಲಿ ಮೋಸಕ್ಕೊಳಗಾಗಿದೆ !
ಕೂಡಲೆ ಇದರ ವಿರುದ್ದ ಮುಂಬೈ ಗುಳೆ ಕಾಮಿ೯ಕರಂತೆ  ಮೈಸೂರು ಸಂತ್ರಸ್ತರಂತೆ ಬೀದಿಗಿಳಿಯದಿದ್ದರೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಅಂತಿಮ ಯಾತ್ರೆಗೂ ನಮಗೆ ದಿಗ್ಬಂಧನ ಬೀಳಲಿದೆ !
ಆನಂದ ತೆಲತುಂಬ್ಡೆಯ ಬಂಧನವಾಯಿತು! ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದೆ ಅವರ ಮುಂಬೈ ನಿವಾಸ ರಾಜಗ್ರುಹದ ಮೇಲೆ ನಿನ್ನೆ ನೀಲಿ ಬಾವುಟ ಇಳಿಸಿ  ಕಪ್ಪು ಬಾವುಟ ಹಾರಾಡಿತು!
ಇವೆಲ್ಲ ಭಾರತದ ಜನಪರ ರಾಜಕೀಯದ ಪ್ರಳಯದ ಸಂಕೇತಗಳು.
ಬನ್ನಿ! ದೈಹಿಕ ಅಂತರ ಕಾಯ್ದುಕೊಂಡೆ ಬೀದಿಗಿಳಿಯೋಣ! ಬಿಜೆಪಿ ಸವಾ೯ಧಿಕಾರದ ವಿರುದ್ದ ನಮಗಾಗಿ ನಾವು ಹೋರಾಡೋಣ!


ಇದನ್ನು ಓದಿ: ಪ್ರೊ. ಆನಂದ್ ತೇಲ್ತುಂಬ್ಡೆ ನರೇಂದ್ರ ಮೋದಿ ಸರ್ಕಾರಕ್ಕೆ ಏಕೆ ಅಪಾಯಕಾರಿಯಾದರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...