Homeಮುಖಪುಟದೇಶದಲ್ಲಿ ಆಹಾರಗಳ ದಾಸ್ತಾನು ಸಾಕಷ್ಟಿದೆ, ಆದರೂ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ!

ದೇಶದಲ್ಲಿ ಆಹಾರಗಳ ದಾಸ್ತಾನು ಸಾಕಷ್ಟಿದೆ, ಆದರೂ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ!

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣಕ್ಕಾಗಿ ಘೋಷಿಸಲಾದ ಲಾಕ್ ಡೌನ್ ನಿಂದಾಗಿ ಬಹಳಷ್ಟು ಬಡವರು ಮತ್ತು ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯಗಳು ಸಿಗದೇ ಸಂಕಷ್ಟದಲ್ಲಿದ್ದಾರೆ ಎಂಬ ವರದಿಗಳು ಬರುತ್ತಿವೆ. ಈ ಮಧ್ಯೆ ಯಾರೂ ಹಸಿವಿನಿಂದ ಬಳಲುತ್ತಿಲ್ಲ ಎಂದು ಹೇಳಿಕೊಳ್ಳಲು ಸರ್ಕಾರ ಹೆಣಗಾಡುತ್ತಿದೆ. ಹಾಗಾದರೆ ವಾಸ್ತವವೇನು? ಭಾರತದಲ್ಲಿನ ಆಹಾರದ ಪ್ರಮಾಣವೆಷ್ಟು? ಹಸಿದವರ ಸಂಖ್ಯೆಯೆಷ್ಟು ಎಂಬುದನ್ನು ಅರಿತುಕೊಳ್ಳಬೇಕಿದೆ.

ಮಾರ್ಚ್ ನಲ್ಲಿ ಭಾರತದ ಆಹಾರ ನಿಗಮ ( FCI) ದಲ್ಲಿನ ದಾಸ್ತಾನು ಸುಮಾರು 770 ಲಕ್ಷ ಟನ್ ಎಂದು ಅಂದಾಜಿಸಲಾಗಿದೆ. ಇದು FCI ನ ಈ ಹಿಂದಿನ ಕಾಪು ದಾಸ್ತಾನು 210 ಲಕ್ಷ ಟನ್ ಗಿಂತ ಮೂರು ಪಟ್ಟು ಹೆಚ್ಚು ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಹೆಚ್ಚುವರಿ ಆಹಾರ ಧಾನ್ಯಗಳ ಬಗ್ಗೆ ಹೇಳಿದ್ದಾರೆ.

“ಗೊಡೌನ್‌ಗಳಲ್ಲಿ ನಮಗೆ ಆಹಾರ ಧಾನ್ಯದ ದಾಸ್ತಾನು ಕೊರತೆಯಿಲ್ಲ ಮತ್ತು ಅಗತ್ಯವಿರುವದಕ್ಕಿಂತ ಎರಡು ಪಟ್ಟು ಹೆಚ್ಚು ಸಂಗ್ರಹವಿದೆ” ಎಂದು ಪಾಸ್ವಾನ್ ಹೇಳಿದ್ದರು.

ಈ ವರ್ಷ, ಭಾರತವು ಪ್ರಮುಖ ಚಳಿಗಾಳದ ಬೆಳೆಯಾದ 106.21 ಮಿಲಿಯನ್ ಟನ್ ಗೋಧಿ ಕೊಯ್ಲು ಮಾಡಲು ಸಜ್ಜಾಗಿದೆ. ಫೆಬ್ರವರಿಯಲ್ಲಿ ಬಿಡುಗಡೆಯಾದ ಸರ್ಕಾರದ ಎರಡನೇ ಮುಂಗಡ ಅಂದಾಜಿನ ಪ್ರಕಾರ, ದ್ವಿದಳ ಧಾನ್ಯಗಳು ಮತ್ತು ಧಾನ್ಯಗಳನ್ನು ಒಳಗೊಂಡಿರುವ ಒಟ್ಟು ಚಳಿಗಾಳದ ಆಹಾರ ಧಾನ್ಯಗಳನ್ನು 149.60 ಮಿಲಿಯನ್ ಟನ್ ಎಂದು ನಿರೀಕ್ಷಿಸಲಾಗಿದೆ, ಇದು ಕಳೆದ ವರ್ಷಕ್ಕಿಂತ ಶೇಕಡಾ 4.10 ರಷ್ಟು ಹೆಚ್ಚಾಗಿದೆ.

“ಇದು ಹುಚ್ಚು. ಭಾರತದಲ್ಲಿ ಅಂತಹ ಶೇಖರಣಾ ಮಟ್ಟಗಳು ಎಂದಿಗೂ ಇರಲಿಲ್ಲ. FCI ಗೆ ಆ ಮಟ್ಟಿನ ಶೇಖರಣಾ ಸಾಮರ್ಥ್ಯವಿಲ್ಲ” ಎಂದು ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಜ್ಞಾನಿ ಜೀನ್ ಡ್ರೀಜ್ ಹೇಳಿದ್ದಾರೆ.

ಆಹಾರ ಮತ್ತು ವ್ಯಾಪಾರ ನೀತಿ ವಿಶ್ಲೇಷಕ ದೇವಿಂದರ್ ಶರ್ಮಾ “ಅಂದಾಜಿನ ಪ್ರಕಾರ ಜುಲೈವರೆಗೆ ಆಹಾರ ದಾಸ್ತಾನು ಇರುವ ಕಾರಣದಿಂದಾಗಿ ಭಾರತವು ಕೊರೊನಾ ವೈರಸ್ ವಿರುದ್ಧ ಹೋರಾಡಲು ಸುರಕ್ಷಿತ ಸ್ಥಾನದಲ್ಲಿದೆ” ಎಂದು ಹೇಳಿದ್ದಾಗಿ ದಿ ಟೆಲಿಗ್ರಾಫ್ ವರದಿ ಮಾಡಿದೆ.

“ಕನಿಷ್ಠ ಒಂದು ವರ್ಷದವರೆಗೆ ಇಡೀ ರಾಷ್ಟ್ರಕ್ಕೆ ಆಹಾರ ಸರಬರಾಜು ಮಾಡುವ ಬಗ್ಗೆ ನಾವು ಚಿಂತಿಸಬೇಕಾಗಿಲ್ಲ. ಈ ರೀತಿಯಾಗಿರದಿದ್ದರೆ ನಾವು ಎರಡು ವಿಷಯಗಳ ವಿರುದ್ಧ ಹೋರಾಡುತ್ತಿದ್ದೆವು, ಒಂದು ಸಾಂಕ್ರಾಮಿಕ ಮತ್ತು ಇನ್ನೊಂದು ಹಸಿವು” ಎಂದು ಅವರು ವಿವರಿಸಿದರು.

ಆದರೆ ದುರದೃಷ್ಟವಶಾತ್, ಆಹಾರ ದಾಸ್ತಾನಿನಲ್ಲಿ ಈ ಹಿಂದಿನ ಕಾಪು ದಾಸ್ತಾನು ಇದ್ದ ಹೊರತಾಗಿಯೂ ಭಾರತ ಇನ್ನೂ ಎರಡು ವಿಷಯಗಳ ವಿರುದ್ಧ ಹೋರಾಡುತ್ತಿದೆ ಎಂದು ಅವರು ಹೇಳಿದರು. “ನಾವು ಆಹಾರ ದಾಸ್ತಾನು ಹೊಂದಿರುವಾಗ ಯಾಕೆ ಚಿಂತೆ ಮಾಡಬೇಕಾಗಿದೆ? ಈ ದೇಶದಲ್ಲಿ ಹಸಿವು ಬರದಂತೆ ನೋಡಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಬೇಕು ”ಎಂದು ಶರ್ಮಾ ಹೇಳಿದ್ದಾರೆ.

ಅಸಾಧಾರಣ ಬಿಕ್ಕಟ್ಟುಗಳಿಗೆ ಅಸಾಧಾರಣ ಪರಿಹಾರಗಳು ಬೇಕಾಗುತ್ತವೆ… ಹಸಿವಿನಿಂದ ಯಾರು ಬಳಲುತ್ತಿದ್ದಾರೋ ಅವರಿಗೆ ಈ ದಾಸ್ತಾನುಗಳನ್ನು ತೆರೆಯಿರಿ. ರಾಷ್ಟ್ರವನ್ನು ಪೋಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ದೇವಿಂದರ್ ಶರ್ಮಾ ಹೇಳಿದ್ದಾರೆ.

ಮುಖ್ಯವಾಗಿ ಆಹಾರ-ಸಬ್ಸಿಡಿ ಅಕೌಂಟಿಂಗ್‌ಗೆ ಸಂಬಂಧಿಸಿರುವ ಅಸಂಗತತೆಯು, ಪರಿಸ್ಥಿತಿಯನ್ನು ನಿಭಾಯಿಸುವಾಗ ಕೇಂದ್ರದ ಮೇಲೆ ಪರಿಣಾಮ ಬೀರುವ ವಿವಿಧ ಸಮಸ್ಯೆಗಳನ್ನು ಅರ್ಥಶಾಸ್ತ್ರಜ್ಞ ಜೀನ್ ಡ್ರೀಜ್ ವಿವರಿಸಿದ್ದಾರೆ. “ಆರ್ಥಿಕ ದೃಷ್ಟಿಯಿಂದ ಕೇಂದ್ರ ಸರ್ಕಾರವು ಹೆಚ್ಚುವರಿ ದಾಸ್ತಾನುಗಳನ್ನು ಲೋಡ್ ಮಾಡಿ ಅದನ್ನು ರಾಜ್ಯಕ್ಕೆ ಕೊಡುವುದರಿಂದ ಏನೂ ಖರ್ಚಾಗುವುದಿಲ್ಲ” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರಲ್ಲದೆ, “ನಾವು ಶೂನ್ಯವಾಗಿರುವ ಆರ್ಥಿಕ ವೆಚ್ಚದ ಬಗ್ಗೆ ಯೋಚಿಸಬಾರದು. ಸಾರಿಗೆಯಲ್ಲಿ ಸಣ್ಣ ಆರ್ಥಿಕ ವೆಚ್ಚವಿರಬಹುದು, ” ಎಂದಿದ್ದಾರೆ.

ಏಪ್ರಿಲ್ 13 ರಂದು ಪಾಸ್ವಾನ್ ಅವರು ಲಾಕ್ ಡೌನ್ ಮಾಡುವ ಮೊದಲು ಸುಮಾರು 30 ಲಕ್ಷ ಟನ್ ಆಹಾರ ಧಾನ್ಯವನ್ನು ರೈಲ್ವೆ ಮೂಲಕ ಲೋಡ್ ಮಾಡಿ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ತಜ್ಞರು ಆಹಾರ ಧಾನ್ಯಗಳ ಸಾಗಣೆಯು ಸಮಸ್ಯೆಯಲ್ಲ ಎಂದು ಸೂಚಿಸಿದ್ದಾರೆ, ವಿಶೇಷವಾಗಿ ಈಗ ಸರಕುಗಳ ಚಲನೆ ತೆರೆದುಕೊಂಡಿದೆ. ನಿಜವಾದ ಕಾಳಜಿ ಪಡಿತರ ಚೀಟಿ ಇಲ್ಲದವರ ಬಗ್ಗೆ, ವಿಶೇಷವಾಗಿ ಸಿಕ್ಕಿಬಿದ್ದ ಸಾವಿರಾರು ವಲಸೆ ಕಾರ್ಮಿಕರ ಬಗ್ಗೆ ಎಂದಿದ್ದಾರೆ.

ವಾಸ್ತವವೆಂದರೆ ಹೆಚ್ಚಿನ ಸಂಖ್ಯೆಯ ಜನರು ಇನ್ನೂ ಪಡಿತರ ಚೀಟಿಗಳನ್ನು ಹೊಂದಿಲ್ಲ. ಈ ಜನರು ಹೊಸ ಕುಟುಂಬಗಳನ್ನು ಹೊಂದಿರಬಹುದು, ಕೆಲಸದ ಹುಡುಕಾಟದಲ್ಲಿ ಇತರ ನಗರಗಳಿಗೆ ವಲಸೆ ಹೋಗಿರಬಹುದು ಅಥವಾ ಅವರ ಆಧಾರ್ ಕಾರ್ಡ್‌ಗಳೊಂದಿಗೆ ಸಂಪರ್ಕ ಹೊಂದಲು ಸಾಧ್ಯವಾಗದ ಕಾರಣ ಅವರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ರಾಷ್ಟ್ರವ್ಯಾಪಿ ಲಾಕ್‌ಡೌನ್ ನಿಂದಾಗಿ ಹಲಾವಾರು ಜನರು ತಮ್ಮ ಸ್ಥಿರವಾದ ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

ಲಾಕ್ ಡೌನ್ ನಿಂದಾಗಿ ಸಿಕ್ಕಿಬಿದ್ದವರಿಗೆ ರಾಜ್ಯ ವಿಪತ್ತು ನಿಧಿಯಿಂದ ಆಹಾರವನ್ನು ನೀಡಬೇಕು ಎಂದು ಪಾಸ್ವಾನ್ ಹೇಳಿದ್ದರು. “ರಾಜ್ಯ ಸರ್ಕಾರಗಳು ಎಷ್ಟು ಆಹಾರ ಧಾನ್ಯವನ್ನು ತೆಗೆದುಕೊಳ್ಳಬಹುದು – ಗೋಧಿಗೆ ಕಿಲೋಗೆ 21 ರೂ ಮತ್ತು ಅಕ್ಕಿಗೆ 22 ರೂ. – ಮತ್ತು ಜನರಿಗೆ ಮತ್ತಷ್ಟು ವಿತರಿಸಬಹುದು” ಎಂದು ಸಚಿವರು ಹೇಳಿದ್ದರು. ಮೂರು ತಿಂಗಳವರೆಗೆ ಪ್ರತಿ ಕೆ.ಜಿ.ಗೆ 2 ಅಥವಾ 3 ರೂ.ಗಳಂತೆ ವಿತರಿಸಲಾಗುವ ಉಚಿತ ಪಡಿತರವನ್ನು ನೀಡುವ ಸರ್ಕಾರದ ನಿರ್ಧಾರವನ್ನೂ ಅವರು ಉಲ್ಲೇಖಿಸಿದ್ದಾರೆ.

ಕೇಂದ್ರ ಸಚಿವರು ಉಲ್ಲೇಖಿಸಿದ ಬೆಲೆ ಮಾರುಕಟ್ಟೆ ಬೆಲೆಗಿಂತ ಕೆಲವೇ ರೂಪಾಯಿಗಳಷ್ಟಿದೆ ಎಂದು ಅರ್ಥಶಾಸ್ತ್ರಜ್ಞ ಜೀನ್ ಡ್ರೀಜ್ ಗಮನಸೆಳೆದದಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರದಂತೆಯೇ ಸಂಪನ್ಮೂಲಗಳನ್ನು ಹೊಂದಿರದ ಕಾರಣ ರಾಜ್ಯ ಸರ್ಕಾರಗಳು ಅದನ್ನು ಪಾವತಿಸುವುದಿಲ್ಲ.

ಸರ್ಕಾರವು ಕನಿಷ್ಠ ಆರು ತಿಂಗಳವರೆಗೆ ತುರ್ತು ಪಡಿತರ ಚೀಟಿಗಳನ್ನು ಒದಗಿಸಬೇಕು ಮತ್ತು ಮುಂದಿನ 12 ತಿಂಗಳುಗಳ ತಾತ್ಕಾಲಿಕ ಕ್ರಮವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ನಗರ ಕೊಳೆಗೇರಿಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರಿಕಗೊಳಿಸಬೇಕು ಎಂದು ಜೀನ್ ಡ್ರೀಜ್ ಸಲಹೆ ನೀಡಿದರು.

“ಇದು ಆಹಾರ ದಾಸ್ತಾನುಗಳಲ್ಲಿ ಸಣ್ಣ ಪರಿಣಾಮ ಮಾತ್ರ ಮಾಡುತ್ತದೆ. ಅಸ್ತಿತ್ವದಲ್ಲಿರುವ ಹಂಚಿಕೆಗೆ ಹೋಲಿಸಿದರೆ ಇದಕ್ಕೆ ಹೆಚ್ಚುವರಿ 200 ಲಕ್ಷ ಟನ್ ಆಹಾರ ಧಾನ್ಯಗಳು ಬೇಕಾಗುತ್ತವೆ. ಇದು ಹೆಚ್ಚುವರಿಯಾಗಿ ಇರುವ ಆಹಾರ ದಾಸ್ತಾನಿನ ಅರ್ಧದಷ್ಟು ಆಗುವುದಿಲ್ಲ” ಎಂದು ಡ್ರೋಜ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...