Homeಮುಖಪುಟನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ಪಬ್ಲಿಕ್‌ ಟಿವಿಯಲ್ಲಿ ಏಪ್ರಿಲ್‌ 15ರ ರಾತ್ರಿ ಆ ಹೆಲಿಕಾಪ್ಟರ್‌ನಲ್ಲಿ ಹಣ ಸುರೀತಾರಾ ಮೋದಿ ಎಂಬ ಸುದ್ದಿ ಪ್ರಸಾರವಾದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರು ಪಬ್ಲಿಕ್‌ ಟಿವಿ ಮತ್ತು ಅದರ ಮುಖ್ಯಸ್ಥ ಎಚ್‌.ಆರ್‌ ರಂಗನಾಥ್‌ಗೆ ಛೀಮಾರಿ ಹಾಕಿದ್ದರು.

- Advertisement -
- Advertisement -

ಹೆಲಿಕಾಪ್ಟರ್‌ನಿಂದ ದುಡ್ಡು ಸುರಿಯುತ್ತಾರಾ ಮೋದಿ ಎಂಬ ಸುಳ್ಳು ಸುದ್ದಿ ಪ್ರಕಟಿಸಿದ ಕನ್ನಡದ ಪಬ್ಲಿಕ್‌ಟಿವಿಗೆ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ನೋಟಿಸ್‌ ನೀಡಿದೆ.

ಈ ಕುರಿತು ಪಬ್ಲಿಕ್‌ ಟಿವಿ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ರವರಿಗೆ ಅಡಿಷನಲ್‌ ಡೈರೆಕ್ಟರ್‌ ಜನರಲ್‌ ಎಂ.ನಾಗೇಂದ್ರ ಸ್ವಾಮಿಯವರು ನೋಟಿಸ್‌ ನೀಡಿದ್ದು ಏಕೆ ನಿಮ್ಮ ಚಾನೆಲ್‌ ಪ್ರಸಾರವನ್ನು ಕೂಡಲೇ ನಿಲ್ಲಿಸಬಾರದು ಎಂದು ಪ್ರಶ್ನಿಸಿದ್ದಾರೆ.

ಏಪ್ರಿಲ್‌ 15ರ ಬುಧವಾರ ರಾತ್ರಿ 8:30ರ ಸಮಯದಲ್ಲಿ ಪಬ್ಲಿಕ್‌ ಟಿವಿಯಲ್ಲಿ “ಕೊರೊನಾ ಎಫೆಕ್ಟ್‌:ಹೆಲಿಕ್ಯಾಪ್ಟರ್‌ನಲ್ಲಿ ದುಡ್ಡು ಸುರೀತಾರಾ ಮೋದಿ!?, ಜನರಿಗೆ ಬಂಪರ್‌ ಗಿಫ್ಟ್‌ ಆಕಾಶದಿಂದ ಬೀಳಲಿದ್ಯಾ ಕಂತೆ ಕಂತೆ ನೋಟು, ಏನಿದು ಹೆಲಿಕ್ಯಾಪ್ಟರ್‌ ಮೋದಿ ಪ್ಲಾನ್‌? ಮೋದಿ ಬಳಿ ಸೂಪರ್‌ ಐಡಿಯಾ!, ಬಡ್ಡಿ ಇಲ್ಲ.. ಸಾಲ ಅಲ್ಲ.. ಹೆಲಿಕಾಪ್ಟರ್‌ನಿಂದ ಪ್ರತಿ ಊರಿಗೂ ದುಡ್ಡು ಎಂಬುದಾಗಿ ಪ್ರಸಾರ ಮಾಡಿತ್ತು.

ಎಲ್ರೂ ಆಯ್ಕಳಿ, ಎಷ್ಟು ಬೇಕೋ ಅಷ್ಟು.

Posted by Dinesh Kumar Dinoo on Wednesday, April 15, 2020

ಈ ಸುದ್ದಿಯು ಸುಳ್ಳು ಸುದ್ದಿಯಾಗಿದ್ದು, ಜನರನ್ನು ತಪ್ಪು ದಾರಿಗೆಳೆಯಲಿದೆ ಮಾತ್ರವಲ್ಲದೇ ಉದ್ದೇಶಪೂರ್ವಕವಾದ, ಕುಚೇಷ್ಟೆಯ ಮತ್ತು ಸ್ಪಷ್ಟವಾದ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ ಮತ್ತು ಸಂಕೇತಗಳ ಉಲ್ಲಂಘನೆಯಾಗಿದೆ ಎಂದು ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ನೋಟಿಸ್‌ನಲ್ಲಿ ತಿಳಿಸಿದೆ.

ಇಡೀ ದೇಶ ಕೊರೊನಾ ವಿರುದ್ಧ ಹೋರಾಡುತ್ತಿರುವಾಗ ನಿಮ್ಮ ಚಾನೆಲ್‌ ಜಾಗೃತಿ ಮೂಡಿಸುವುದನ್ನು ಬಿಟ್ಟು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಜನರಲ್ಲಿ ಭೀತಿ ಉಂಟುಮಾಡುತ್ತಿದ್ದು ಸಾಮಾಜಿಕ ಅಶಾಂತಿಗೆ ಕಾರಣವಾಗಿದ್ದೀರಿ ಎಂದು ಪಬ್ಲಿಕ್‌ ಟಿವಿಗೆ ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ಛೀಮಾರಿ ಹಾಕಿದೆ.

ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995ರ ಹಲವು ನಿಯಮಗಳನ್ನು ಉಲ್ಲಂಘಿಸಿದಕ್ಕಾಗಿ ಏಕೆ ನಿಮ್ಮ ಚಾನೆಲ್‌ ಪ್ರಸಾರವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬಾರದು ಎಂದು ಪಿಐಬಿ ಕೇಳಿದ್ದು ಈ ನೋಟಿಸ್‌ಗೆ 10 ದಿನಗಳ ಒಳಗಾಗಿ ಸ್ಪಷ್ಟೀಕರಣ ನೀಡುವಂತೆ ತಾಕೀತು ಮಾಡಿದೆ.

ಪಬ್ಲಿಕ್‌ ಟಿವಿಯಲ್ಲಿ ಏಪ್ರಿಲ್‌ 15ರ ರಾತ್ರಿ ಆ ಹೆಲಿಕಾಪ್ಟರ್‌ನಲ್ಲಿ ಹಣ ಸುರೀತಾರಾ ಮೋದಿ ಎಂಬ ಸುದ್ದಿ ಪ್ರಸಾರವಾದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರು ಪಬ್ಲಿಕ್‌ ಟಿವಿ ಮತ್ತು ಅದರ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ಗೆ ಛೀಮಾರಿ ಹಾಕಿದ್ದರು.

ಈ ಹಿಂದೆ ನರೇಂದ್ರ ಮೋದಿಯವರು ನೋಟು ಅಮಾನ್ಯೀಕರಣ ಘೋಷಿಸಿದ ಸಂದರ್ಭದಲ್ಲಿ ಇದೇ ಪಬ್ಲಿಕ್‌ ಟಿವಿಯು ಮೋದಿಯವರನ್ನು ಹೊಗಳುವ ಭರದಲ್ಲಿ 2000 ರೂ ನೋಟಿನಲ್ಲಿ ನ್ಯಾನೋ ಜಿಪಿಎಸ್‌ ಚಿಪ್ಪು ಇದೆ ಎಂದು ಸ್ವತಃ ಎಚ್‌.ಆರ್‌.ರಂಗನಾಥ್‌ ಪದೇ ಪದೇ ಹೇಳಿದ್ದರು. ತದನಂತರ ಅದು ಸುಳ್ಳೆಂದು ಸಾಬೀತಾಗಿ ರಂಗನಾಥ್‌ ಬಹಳ ಲೇವಡಿಗೊಳಗಾಗಿದ್ದನ್ನು ಈ ಸಂದರ್ಭದಲ್ಲಿ ನಾವು ಸ್ಮರಿಸಬಹುದಾಗಿದೆ.


ಇದನ್ನೂ ಓದಿ: ಮೈ ಡಿಯರ್ ಮೀಡಿಯಾ’: ಸುದ್ದಿಮನೆಗಳು ಸ್ಥಿತ್ಯಂತರಗೊಂಡ ಬಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹುಚ್ಚರ ಸಂತೆ …ಮಾದ್ಯಮ ಮಾನಸಿಕ ಕಾಯಿಲೆ …
    ಬಾಯಿ ಬಡುಕರು..ಮಾನ ಮರ್ಯಾದೆ …ಸುಳ್ಳುಗಾರಿಕೆ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...