Homeಮುಖಪುಟನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ಪಬ್ಲಿಕ್‌ ಟಿವಿಯಲ್ಲಿ ಏಪ್ರಿಲ್‌ 15ರ ರಾತ್ರಿ ಆ ಹೆಲಿಕಾಪ್ಟರ್‌ನಲ್ಲಿ ಹಣ ಸುರೀತಾರಾ ಮೋದಿ ಎಂಬ ಸುದ್ದಿ ಪ್ರಸಾರವಾದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರು ಪಬ್ಲಿಕ್‌ ಟಿವಿ ಮತ್ತು ಅದರ ಮುಖ್ಯಸ್ಥ ಎಚ್‌.ಆರ್‌ ರಂಗನಾಥ್‌ಗೆ ಛೀಮಾರಿ ಹಾಕಿದ್ದರು.

- Advertisement -
- Advertisement -

ಹೆಲಿಕಾಪ್ಟರ್‌ನಿಂದ ದುಡ್ಡು ಸುರಿಯುತ್ತಾರಾ ಮೋದಿ ಎಂಬ ಸುಳ್ಳು ಸುದ್ದಿ ಪ್ರಕಟಿಸಿದ ಕನ್ನಡದ ಪಬ್ಲಿಕ್‌ಟಿವಿಗೆ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ನೋಟಿಸ್‌ ನೀಡಿದೆ.

ಈ ಕುರಿತು ಪಬ್ಲಿಕ್‌ ಟಿವಿ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ರವರಿಗೆ ಅಡಿಷನಲ್‌ ಡೈರೆಕ್ಟರ್‌ ಜನರಲ್‌ ಎಂ.ನಾಗೇಂದ್ರ ಸ್ವಾಮಿಯವರು ನೋಟಿಸ್‌ ನೀಡಿದ್ದು ಏಕೆ ನಿಮ್ಮ ಚಾನೆಲ್‌ ಪ್ರಸಾರವನ್ನು ಕೂಡಲೇ ನಿಲ್ಲಿಸಬಾರದು ಎಂದು ಪ್ರಶ್ನಿಸಿದ್ದಾರೆ.

ಏಪ್ರಿಲ್‌ 15ರ ಬುಧವಾರ ರಾತ್ರಿ 8:30ರ ಸಮಯದಲ್ಲಿ ಪಬ್ಲಿಕ್‌ ಟಿವಿಯಲ್ಲಿ “ಕೊರೊನಾ ಎಫೆಕ್ಟ್‌:ಹೆಲಿಕ್ಯಾಪ್ಟರ್‌ನಲ್ಲಿ ದುಡ್ಡು ಸುರೀತಾರಾ ಮೋದಿ!?, ಜನರಿಗೆ ಬಂಪರ್‌ ಗಿಫ್ಟ್‌ ಆಕಾಶದಿಂದ ಬೀಳಲಿದ್ಯಾ ಕಂತೆ ಕಂತೆ ನೋಟು, ಏನಿದು ಹೆಲಿಕ್ಯಾಪ್ಟರ್‌ ಮೋದಿ ಪ್ಲಾನ್‌? ಮೋದಿ ಬಳಿ ಸೂಪರ್‌ ಐಡಿಯಾ!, ಬಡ್ಡಿ ಇಲ್ಲ.. ಸಾಲ ಅಲ್ಲ.. ಹೆಲಿಕಾಪ್ಟರ್‌ನಿಂದ ಪ್ರತಿ ಊರಿಗೂ ದುಡ್ಡು ಎಂಬುದಾಗಿ ಪ್ರಸಾರ ಮಾಡಿತ್ತು.

ಎಲ್ರೂ ಆಯ್ಕಳಿ, ಎಷ್ಟು ಬೇಕೋ ಅಷ್ಟು.

Posted by Dinesh Kumar Dinoo on Wednesday, April 15, 2020

ಈ ಸುದ್ದಿಯು ಸುಳ್ಳು ಸುದ್ದಿಯಾಗಿದ್ದು, ಜನರನ್ನು ತಪ್ಪು ದಾರಿಗೆಳೆಯಲಿದೆ ಮಾತ್ರವಲ್ಲದೇ ಉದ್ದೇಶಪೂರ್ವಕವಾದ, ಕುಚೇಷ್ಟೆಯ ಮತ್ತು ಸ್ಪಷ್ಟವಾದ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ ಮತ್ತು ಸಂಕೇತಗಳ ಉಲ್ಲಂಘನೆಯಾಗಿದೆ ಎಂದು ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ನೋಟಿಸ್‌ನಲ್ಲಿ ತಿಳಿಸಿದೆ.

ಇಡೀ ದೇಶ ಕೊರೊನಾ ವಿರುದ್ಧ ಹೋರಾಡುತ್ತಿರುವಾಗ ನಿಮ್ಮ ಚಾನೆಲ್‌ ಜಾಗೃತಿ ಮೂಡಿಸುವುದನ್ನು ಬಿಟ್ಟು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಜನರಲ್ಲಿ ಭೀತಿ ಉಂಟುಮಾಡುತ್ತಿದ್ದು ಸಾಮಾಜಿಕ ಅಶಾಂತಿಗೆ ಕಾರಣವಾಗಿದ್ದೀರಿ ಎಂದು ಪಬ್ಲಿಕ್‌ ಟಿವಿಗೆ ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ಛೀಮಾರಿ ಹಾಕಿದೆ.

ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995ರ ಹಲವು ನಿಯಮಗಳನ್ನು ಉಲ್ಲಂಘಿಸಿದಕ್ಕಾಗಿ ಏಕೆ ನಿಮ್ಮ ಚಾನೆಲ್‌ ಪ್ರಸಾರವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬಾರದು ಎಂದು ಪಿಐಬಿ ಕೇಳಿದ್ದು ಈ ನೋಟಿಸ್‌ಗೆ 10 ದಿನಗಳ ಒಳಗಾಗಿ ಸ್ಪಷ್ಟೀಕರಣ ನೀಡುವಂತೆ ತಾಕೀತು ಮಾಡಿದೆ.

ಪಬ್ಲಿಕ್‌ ಟಿವಿಯಲ್ಲಿ ಏಪ್ರಿಲ್‌ 15ರ ರಾತ್ರಿ ಆ ಹೆಲಿಕಾಪ್ಟರ್‌ನಲ್ಲಿ ಹಣ ಸುರೀತಾರಾ ಮೋದಿ ಎಂಬ ಸುದ್ದಿ ಪ್ರಸಾರವಾದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರು ಪಬ್ಲಿಕ್‌ ಟಿವಿ ಮತ್ತು ಅದರ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ಗೆ ಛೀಮಾರಿ ಹಾಕಿದ್ದರು.

ಈ ಹಿಂದೆ ನರೇಂದ್ರ ಮೋದಿಯವರು ನೋಟು ಅಮಾನ್ಯೀಕರಣ ಘೋಷಿಸಿದ ಸಂದರ್ಭದಲ್ಲಿ ಇದೇ ಪಬ್ಲಿಕ್‌ ಟಿವಿಯು ಮೋದಿಯವರನ್ನು ಹೊಗಳುವ ಭರದಲ್ಲಿ 2000 ರೂ ನೋಟಿನಲ್ಲಿ ನ್ಯಾನೋ ಜಿಪಿಎಸ್‌ ಚಿಪ್ಪು ಇದೆ ಎಂದು ಸ್ವತಃ ಎಚ್‌.ಆರ್‌.ರಂಗನಾಥ್‌ ಪದೇ ಪದೇ ಹೇಳಿದ್ದರು. ತದನಂತರ ಅದು ಸುಳ್ಳೆಂದು ಸಾಬೀತಾಗಿ ರಂಗನಾಥ್‌ ಬಹಳ ಲೇವಡಿಗೊಳಗಾಗಿದ್ದನ್ನು ಈ ಸಂದರ್ಭದಲ್ಲಿ ನಾವು ಸ್ಮರಿಸಬಹುದಾಗಿದೆ.


ಇದನ್ನೂ ಓದಿ: ಮೈ ಡಿಯರ್ ಮೀಡಿಯಾ’: ಸುದ್ದಿಮನೆಗಳು ಸ್ಥಿತ್ಯಂತರಗೊಂಡ ಬಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹುಚ್ಚರ ಸಂತೆ …ಮಾದ್ಯಮ ಮಾನಸಿಕ ಕಾಯಿಲೆ …
    ಬಾಯಿ ಬಡುಕರು..ಮಾನ ಮರ್ಯಾದೆ …ಸುಳ್ಳುಗಾರಿಕೆ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...