Homeಕರ್ನಾಟಕಸಂಜಯ ನಗರದ 'ಪೊಲೀಸ್-ಯುವಕರ ನಡುವಿನ ಹೊಡೆದಾಟ' ಪ್ರಕರಣ ಸಿಐಡಿಗೆ

ಸಂಜಯ ನಗರದ ‘ಪೊಲೀಸ್-ಯುವಕರ ನಡುವಿನ ಹೊಡೆದಾಟ’ ಪ್ರಕರಣ ಸಿಐಡಿಗೆ

ಸಂಜಯನಗರದಲ್ಲಿ ಯುವಕರಿಬ್ಬರು ಪೊಲೀಸರ ಮೇಲೆ ದಾಳಿ ನಡೆಸಿದ್ದರು ಎಂಬುದು ದೊಡ್ಡ ಸುದ್ದಿಯಾಗಿತ್ತು. ಆದರೆ ಮರುದಿನ ಪೊಲೀಸರೇ ಆ ಯುವಕರಿಗೆ ತೀವ್ರವಾಗಿ ಹಲ್ಲೆ ನಡೆಸಿದ ವಿಡಿಯೋ ಹೊರಬಂದಿತ್ತು. ಅಷ್ಟೇ ಅಲ್ಲದೇ ಮಹಜರು ಮಾಡಲು ಕರೆದುಕೊಂಡು ಹೋಗಿ ಪೊಲೀಸರು ಕಾರಣವಿಲ್ಲದೇ ಅವರ ಕಾಲಿಗೆ ಗುಂಡು ಹೊಡೆದಿದ್ದಾರೆಂದು ಆರೋಪಿಸಲಾಗಿತ್ತು.

- Advertisement -
- Advertisement -

ಬೆಂಗಳೂರಿನ ಸಂಜಯ ನಗರದಲ್ಲಿ ಯುವಕರಿಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈಗಾಗಲೇ ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ನಡುವೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಐಡಿ ತನಿಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಿದ್ದಾರೆ.

ದೌರ್ಜನ್ಯ ಕುರಿತು ಬೆಂಗಳೂರಿನ ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ ಐಯ್ಯರ್ ಮತ್ತು ಪ್ರಕಾಶ್‌ಬಾಬು ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು. ಈ ನಡುವೆ ಇದರ ಸಂಬಂಧದ 3 ಪ್ರಕರಣಗಳನ್ನು (ಮೊಕದ್ದಮೆ ಸಂಖ್ಯೆ 43/2020, 44 ಮತ್ತು 45) ತನಿಖೆ ನಡೆಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಐಡಿಗೆ ಹಸ್ತಾಂತರಿಸಿದ್ದಾರೆ.

ಸಂಜಯ ನಗರದಲ್ಲಿ ನಡೆದ ಘಟನೆಯ ನಂತರ ಯುವಕರಿಬ್ಬರನ್ನು ಬಂಧಿಸಿದ ಪೊಲೀಸರು ಅವರಿಬ್ಬರು ತಪ್ಪಿಸಿಕೊಳ್ಳಲು  ಪ್ರಯತ್ನಿಸಿದರು ಎಂದು ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದ ನಂತರ ಯುವಕನೊಬ್ಬನ ಕಾಲಿಗೆ ಗುಂಡು ಹಾರಿಸಿದ್ದರು. ಈ ವೇಳೆ ಪೊಲೀಸರು ಕೂಡಾ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಇಡೀ ಘಟನೆಗೂ ಮುಂಚೆ ಪೊಲೀಸರು ಯುವಕರ ಮೇಲೆ ದೌರ್ಜನ್ಯ ನಡೆಸಿದ್ದರು ಎಂದು ಹೇಳುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಾದ್ಯಂತ ಹರಿದಾಡಿ ವೈರಲಾಗಿತ್ತು. ವಿಡಿಯೊದಲ್ಲಿ ಪೊಲೀಸರು ಯುವಕನ ಮೇಲೆ ಹಲ್ಲೆ ಮಾಡುವುದನ್ನು ಕಾಣಬಹುದಾಗಿದೆ. ಇದರ ನಂತರ ಸಾರ್ವಜನಿಕರು ಪೊಲೀಸರ ವರ್ತನೆಗೆ ಛೀಮಾರಿ ಹಾಕಿದ್ದರು.

ಬೆಂಗಳೂರಿನ ಸಂಜಯ್ ನಗರ ವ್ಯಾಪ್ತಿಯಲ್ಲಿ ಒಬ್ಬ ಪೊಲೀಸ್ ಪೇದೆಯ ಮೇಲೆ ಯುವಕರು ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಬಂಧಿಸಿರುವ ಇಬ್ಬರು ಯುವಕರ ಮೇಲೆ…

Posted by Venkatesh Bubberjung on Thursday, March 26, 2020

ಘಟನೆಯ ಬಗ್ಗೆ ಬೆಂಗಳೂರಿನ ಕಮೀಷನರ್ ಮಾತನಾಡಿ “ಅವರು ಹಲ್ಲೆ ನಡೆಸಿದ್ದು ಅವರಿಬ್ಬರಿಗಲ್ಲ ಇಡೀ ಪೊಲೀಸ್ ಸಮೂಹಕ್ಕೆ ಎಂದಿದ್ದರು. ಸಧ್ಯಕ್ಕೆ ಸಿಐಡಿಗೆ ವರ್ಗಾವಣೆಯಾಗಿರುವ ಪ್ರಕರಣವೂ ಇನ್ನಷ್ಟು ಕುತೂಹಲವನ್ನು ಕೆರಳಿಸಿದೆ.

ಪ್ರಕರಣದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಾಕಿರುವ ಜನಾಧಿಕಾರ ಪರಿಷತ್ ನ ಆದರ್ಶ್ ಅಯ್ಯರ್ ಮಾತನಾಡಿ “ಮಾರ್ಚ 29 ಕ್ಕೆ ಈ ಪ್ರಕರಣದ ಬಗ್ಗೆ ಪಿಐಎಲ್ ಹಾಕಿದ್ದೆವು, 30 ಕ್ಕೆ ವಿಚಾರಣೆಯಾಗಿತ್ತು. ಈ ಬಗ್ಗೆ ಆರೋಪವಿರುವವರೇ ಪ್ರಕರಣವನ್ನು ನಡೆಸಿದರೆ ಸರಿಯಾಗುವುದಿಲ್ಲ ಎಂದು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. ನಾವು ಕೋರ್ಟಿನಲ್ಲಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿಸುವಂತೆ ಆಗ್ರಹಿಸಿದ್ದೆವು, ಅಲ್ಲದೆ ಇದರೊಂದಿಗೆ ಒಟ್ಟು ಮೂರು ಆಗ್ರಹವನ್ನು ಕೊರ್ಟಿನಲ್ಲಿ ಆಗ್ರಹಿದ್ದೆವು. ಯುವಕ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು ಆತನ ಕಾಲಿಗೆ ಗುಂಡು ಹೊಡೆಯಲಾಗಿದೆ, ಇದರಿಂದಾಗಿ ಆತನ ಜೀವನ ಪೂರ್ತಿಯಾಗಿ ಕಷ್ಟಪಡಬೇಕಾಗುತ್ತದೆ. ಇದಕ್ಕಾಗಿ ಆತನಿಗೆ ಪರಿಹಾರ ನೀಡಬೇಕು ಎಂದು ಎರಡನೆ ಆಗ್ರಹವಾಗಿದೆ. ಮೂರನೇ ಆಗ್ರಹ ಯುವಕರಿಬ್ಬರ ಮೇಲಿರುವ ಮೂರು ಪ್ರಕರಣವನ್ನು ತಡೆಹಿಡಿಯಬೇಕು ಎಂದು ಆಗ್ರಹಿಸಲಾಗಿತ್ತು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...