Homeಕರ್ನಾಟಕಸಂಜಯ ನಗರದ 'ಪೊಲೀಸ್-ಯುವಕರ ನಡುವಿನ ಹೊಡೆದಾಟ' ಪ್ರಕರಣ ಸಿಐಡಿಗೆ

ಸಂಜಯ ನಗರದ ‘ಪೊಲೀಸ್-ಯುವಕರ ನಡುವಿನ ಹೊಡೆದಾಟ’ ಪ್ರಕರಣ ಸಿಐಡಿಗೆ

ಸಂಜಯನಗರದಲ್ಲಿ ಯುವಕರಿಬ್ಬರು ಪೊಲೀಸರ ಮೇಲೆ ದಾಳಿ ನಡೆಸಿದ್ದರು ಎಂಬುದು ದೊಡ್ಡ ಸುದ್ದಿಯಾಗಿತ್ತು. ಆದರೆ ಮರುದಿನ ಪೊಲೀಸರೇ ಆ ಯುವಕರಿಗೆ ತೀವ್ರವಾಗಿ ಹಲ್ಲೆ ನಡೆಸಿದ ವಿಡಿಯೋ ಹೊರಬಂದಿತ್ತು. ಅಷ್ಟೇ ಅಲ್ಲದೇ ಮಹಜರು ಮಾಡಲು ಕರೆದುಕೊಂಡು ಹೋಗಿ ಪೊಲೀಸರು ಕಾರಣವಿಲ್ಲದೇ ಅವರ ಕಾಲಿಗೆ ಗುಂಡು ಹೊಡೆದಿದ್ದಾರೆಂದು ಆರೋಪಿಸಲಾಗಿತ್ತು.

- Advertisement -
- Advertisement -

ಬೆಂಗಳೂರಿನ ಸಂಜಯ ನಗರದಲ್ಲಿ ಯುವಕರಿಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈಗಾಗಲೇ ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ನಡುವೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಐಡಿ ತನಿಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಿದ್ದಾರೆ.

ದೌರ್ಜನ್ಯ ಕುರಿತು ಬೆಂಗಳೂರಿನ ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ ಐಯ್ಯರ್ ಮತ್ತು ಪ್ರಕಾಶ್‌ಬಾಬು ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು. ಈ ನಡುವೆ ಇದರ ಸಂಬಂಧದ 3 ಪ್ರಕರಣಗಳನ್ನು (ಮೊಕದ್ದಮೆ ಸಂಖ್ಯೆ 43/2020, 44 ಮತ್ತು 45) ತನಿಖೆ ನಡೆಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಐಡಿಗೆ ಹಸ್ತಾಂತರಿಸಿದ್ದಾರೆ.

ಸಂಜಯ ನಗರದಲ್ಲಿ ನಡೆದ ಘಟನೆಯ ನಂತರ ಯುವಕರಿಬ್ಬರನ್ನು ಬಂಧಿಸಿದ ಪೊಲೀಸರು ಅವರಿಬ್ಬರು ತಪ್ಪಿಸಿಕೊಳ್ಳಲು  ಪ್ರಯತ್ನಿಸಿದರು ಎಂದು ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದ ನಂತರ ಯುವಕನೊಬ್ಬನ ಕಾಲಿಗೆ ಗುಂಡು ಹಾರಿಸಿದ್ದರು. ಈ ವೇಳೆ ಪೊಲೀಸರು ಕೂಡಾ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಇಡೀ ಘಟನೆಗೂ ಮುಂಚೆ ಪೊಲೀಸರು ಯುವಕರ ಮೇಲೆ ದೌರ್ಜನ್ಯ ನಡೆಸಿದ್ದರು ಎಂದು ಹೇಳುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಾದ್ಯಂತ ಹರಿದಾಡಿ ವೈರಲಾಗಿತ್ತು. ವಿಡಿಯೊದಲ್ಲಿ ಪೊಲೀಸರು ಯುವಕನ ಮೇಲೆ ಹಲ್ಲೆ ಮಾಡುವುದನ್ನು ಕಾಣಬಹುದಾಗಿದೆ. ಇದರ ನಂತರ ಸಾರ್ವಜನಿಕರು ಪೊಲೀಸರ ವರ್ತನೆಗೆ ಛೀಮಾರಿ ಹಾಕಿದ್ದರು.

ಬೆಂಗಳೂರಿನ ಸಂಜಯ್ ನಗರ ವ್ಯಾಪ್ತಿಯಲ್ಲಿ ಒಬ್ಬ ಪೊಲೀಸ್ ಪೇದೆಯ ಮೇಲೆ ಯುವಕರು ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಬಂಧಿಸಿರುವ ಇಬ್ಬರು ಯುವಕರ ಮೇಲೆ…

Posted by Venkatesh Bubberjung on Thursday, March 26, 2020

ಘಟನೆಯ ಬಗ್ಗೆ ಬೆಂಗಳೂರಿನ ಕಮೀಷನರ್ ಮಾತನಾಡಿ “ಅವರು ಹಲ್ಲೆ ನಡೆಸಿದ್ದು ಅವರಿಬ್ಬರಿಗಲ್ಲ ಇಡೀ ಪೊಲೀಸ್ ಸಮೂಹಕ್ಕೆ ಎಂದಿದ್ದರು. ಸಧ್ಯಕ್ಕೆ ಸಿಐಡಿಗೆ ವರ್ಗಾವಣೆಯಾಗಿರುವ ಪ್ರಕರಣವೂ ಇನ್ನಷ್ಟು ಕುತೂಹಲವನ್ನು ಕೆರಳಿಸಿದೆ.

ಪ್ರಕರಣದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಾಕಿರುವ ಜನಾಧಿಕಾರ ಪರಿಷತ್ ನ ಆದರ್ಶ್ ಅಯ್ಯರ್ ಮಾತನಾಡಿ “ಮಾರ್ಚ 29 ಕ್ಕೆ ಈ ಪ್ರಕರಣದ ಬಗ್ಗೆ ಪಿಐಎಲ್ ಹಾಕಿದ್ದೆವು, 30 ಕ್ಕೆ ವಿಚಾರಣೆಯಾಗಿತ್ತು. ಈ ಬಗ್ಗೆ ಆರೋಪವಿರುವವರೇ ಪ್ರಕರಣವನ್ನು ನಡೆಸಿದರೆ ಸರಿಯಾಗುವುದಿಲ್ಲ ಎಂದು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. ನಾವು ಕೋರ್ಟಿನಲ್ಲಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿಸುವಂತೆ ಆಗ್ರಹಿಸಿದ್ದೆವು, ಅಲ್ಲದೆ ಇದರೊಂದಿಗೆ ಒಟ್ಟು ಮೂರು ಆಗ್ರಹವನ್ನು ಕೊರ್ಟಿನಲ್ಲಿ ಆಗ್ರಹಿದ್ದೆವು. ಯುವಕ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು ಆತನ ಕಾಲಿಗೆ ಗುಂಡು ಹೊಡೆಯಲಾಗಿದೆ, ಇದರಿಂದಾಗಿ ಆತನ ಜೀವನ ಪೂರ್ತಿಯಾಗಿ ಕಷ್ಟಪಡಬೇಕಾಗುತ್ತದೆ. ಇದಕ್ಕಾಗಿ ಆತನಿಗೆ ಪರಿಹಾರ ನೀಡಬೇಕು ಎಂದು ಎರಡನೆ ಆಗ್ರಹವಾಗಿದೆ. ಮೂರನೇ ಆಗ್ರಹ ಯುವಕರಿಬ್ಬರ ಮೇಲಿರುವ ಮೂರು ಪ್ರಕರಣವನ್ನು ತಡೆಹಿಡಿಯಬೇಕು ಎಂದು ಆಗ್ರಹಿಸಲಾಗಿತ್ತು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...