Homeಅಂತರಾಷ್ಟ್ರೀಯನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ.

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಗೆ ನೀಡುವ ನಿಧಿಯನ್ನು ನಿಲ್ಲಿಸುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ ಬೆನ್ನಲ್ಲೇ, ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ ನಿಧಿ ನಿಲ್ಲಿಸಿ WHO ಮಹಾಕಾರ್ಯದರ್ಶಿ ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಖಾರವಾದ ಪ್ರತಿಕ್ರಿಯೆ ನೀಡಿದ್ದರು. ತದನಂತರ ಮಾತುಕತೆಯ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಲು ಎರಡು ಬಣಗಳು ಒಪ್ಪಿಕೊಂಡಿವೆ ಎನ್ನಲಾಗಿದೆ.

‘ಕೋವಿಡ್ ಪಿಡುಗನ್ನು ಕೆಟ್ಟದಾಗಿ ನಿರ್ವಹಿಸಿದೆ ಮತ್ತು ಪಿಡುಗಿಗೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಮುಚ್ಚಿಹಾಕಲು ಚೀನಾದೊಂದಿಗೆ ಸೇರಿ ಸಂಚು ನಡೆಸುತ್ತಿದೆ’ ಎಂದು ಆರೋಪಿಸಿ, ಯುಎಸ್‌ಎ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ (WHO)ಗೆ ಎಪ್ರಿಲ್ 15ರಂದು ನಿಧಿ ಸ್ಥಗಿತಗೊಳಿಸಿದ್ದಾರೆ.

“ವ್ಯತಿರಿಕ್ತ ವರದಿಗಳು ಮತ್ತು ಸ್ಪಷ್ಟ ಸಾಕ್ಷ್ಯಾಧಾರಗಳ ಹೊರತಾಗಿಯೂ ಜನವರಿ ಮಧ್ಯಭಾಗಕ್ಕೆ ಮುನ್ನ ಮನುಷ್ಯನಿಂದ ಮನುಷ್ಯನಿಗೆ ರೋಗ ಹರಡುತ್ತಿಲ್ಲ ಎಂಬ ಕಲ್ಪನೆಯನ್ನು ಸಂಸ್ಥೆಯು ಬೆಂಬಲಿಸಿದುದು ಮತ್ತು ಅದನ್ನು ಒಂದು ಸಾರ್ವಜನಿಕ ತುರ್ತುಸ್ಥಿತಿ ಎಂದು ಘೋಷಿಸುವಲ್ಲಿ ಮಾಡಿದ ವಿಳಂಬವು ಯುಎಸ್‌ಎಗೆ ಅಮೂಲ್ಯವಾದ ಸಮಯ ನಷ್ಟವನ್ನು ಉಂಟುಮಾಡಿತು” ಎಂದು ಟ್ರಂಪ್ ಆರೋಪಿಸಿದ್ದಾರೆ.

WHO ಮುಖ್ಯ ಕಛೇರಿ

ನಿಲ್ಲಿಸಲಾಗುವ ನಿಧಿಯ ಮೊತ್ತವನ್ನು ಆತ ಉಲ್ಲೇಖಿಸಿಲ್ಲವಾದರೂ, ಪ್ರಸ್ತುತ ವಿಶ್ವ ಆರೋಗ್ಯ ಸಂಸ್ಥೆಯ 5600 ಕೋಟಿ ಡಾಲರ್ ವಾರ್ಷಿಕ ಬಜೆಟಿನಲ್ಲಿ ಯುಎಸ್‌ಎಯ ದೇಣಿಗೆಯು 90 ಕೋಟಿ ಡಾಲರ್‌ಗಳಾಗಿವೆ. ಆದರೆ, ಈ ನಿರ್ಧಾರವು ಜಾರಿಗೆ ಬರುವ ಮೊದಲು ಯುಎಸ್‌ಎಯ ಕಾಂಗ್ರೆಸ್ ಅದನ್ನು ಅಂಗೀಕರಿಸಬೇಕಾಗಿದೆ.

ಜಾಗತಿಕವಾದ ಈ ಬಿಕ್ಕಟ್ಟನ್ನು ಎದುರಿಸುವ ಕೆಲಸದಲ್ಲಿ ಭಾಗವಹಿಸುತ್ತಿರುವವರು ಈ ಸುದ್ದಿಗೆ ಹರಿತವಾಗಿ ಪ್ರತಿಕ್ರಿಯಿಸಿದ್ದಾರೆ. ಟ್ರಂಪ್ ಮಾಡಿರುವ ಈ ನಿರ್ಧಾರ ಮತ್ತು ಚೀನಾ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಕುರಿತ ಆತನ ಹಿಂದಿನ ಹೇಳಿಕೆಗಳನ್ನು ಅವರು ಆರೋಪದ ಧ್ವನಿಯಲ್ಲಿ ದೂರಿದ್ದಾರೆ. ವಿಶ್ವದಾದ್ಯಂತ ಅತ್ಯಂತ ಮಹತ್ವದ ಮತ್ತು ಅತ್ಯಗತ್ಯವಾದ ಮಾನವೀಯ ಕೆಲಸಗಳನ್ನು ಮಾಡುತ್ತಿರುವ ವಿಶ್ವ ಆರೋಗ್ಯ ಸಂಸ್ಥೆಯನ್ನು ಟ್ರಂಪ್ ರಾಜಕೀಕರಣಗೊಳಿಸುತ್ತಿರುವುದಾಗಿ ಅನೇಕರು ದೂರಿದ್ದಾರೆ- ಅದೂ ಕೂಡಾ, ಅತ್ಯಂತ ಬಡದೇಶಗಳಲ್ಲಿ ಅದರ ಕಾರ್ಯಗಳು ತೀರಾ ಅಗತ್ಯವಾಗಿರುವಾಗ. ಈ ನಿರ್ಧಾರವು ಬಹಳಷ್ಟು ಸಾವುಗಳಿಗೆ ಕಾರಣವಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಾಯಕರು ಎಚ್ಚರಿಸಿದ್ದಾರೆ.

“ದಯವಿಟ್ಟು ಈ ವೈರಸನ್ನು ರಾಜಕೀಕರಣಗೊಳಿಸಬೇಡಿ. ರಾಷ್ಟ್ರಮಟ್ಟದಲ್ಲಿ ನೀವು ಹೊಂದಿರುವ ಭಿನ್ನಾಭಿಪ್ರಾಯದ ಲಾಭವನ್ನು ಅದು ಎತ್ತುತ್ತದೆ. ನಿಮಗೆ ಹಾಗೆಯೇ ಆಗಬೇಕೆಂದಿದ್ದರೆ, ನಿಮಗೆ ಇನ್ನಷ್ಟು ಶವಪೆಟ್ಟಿಗೆಗಳು ಬೇಕೆಂದಾದರೆ, ಹಾಗೆಯೇ ಮಾಡಿ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಅವರು, ಕಳೆದ ವಾರ ನಿಧಿ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ ಹೂಡಿದಾಗಲೇ ಎಚ್ಚರಿಕೆ ನೀಡಿದ್ದರು. ಕೊರೋನ ವೈರಸ್ ಹರಡುವಿಕೆಯಲ್ಲಿ ಚೀನಾದ ಪಾತ್ರದ ಬಗ್ಗೆ ಕಾಂಗ್ರೆಷನಲ್ ತನಿಖೆ ನಡೆಸುವ ಯೋಚನೆ ಮಾಡುತ್ತಿರುವುದಾಗಿ ರಿಪಬ್ಲಿಕನ್ ಪಕ್ಷ ಮತ್ತು ಕಾಂಗ್ರೆಸ್ ಘೋಷಿಸಿರುವುದನ್ನು ಗಮನಿಸುವುದು ಕೂಡಾ ಅತ್ಯಗತ್ಯವಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್

ಕೊರೋನ ಪಿಡುಗನ್ನು ನಿಯಂತ್ರಿಸಲು ವಿಫಲವಾದ ಬಳಿಕ ಟ್ರಂಪ್ ಆಡಳಿತ ಮತ್ತು ರಿಪಬ್ಲಿಕನ್ನರು ಚೀನಾವನ್ನು ದೂರುವ, ಮತ್ತು ವೈರಸನ್ನು ಬಚ್ಚಿಡಲು ಚೀನಾಕ್ಕೆ ನೆರವಾದುದಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತಿತರ ಜಾಗತಿಕ ಸಂಸ್ಥೆಗಳನ್ನು ದೂರುವ ವಿವರವಾದ ಯೋಜನೆ ಹಾಕಿಕೊಂಡಿರುವುದಾಗಿ ಟೀಕಾಕಾರರು ಎಚ್ಚರಿಸಿದ್ದಾರೆ. ಈ ತನಕ ಯುಎಸ್‌ಎಯು 34,000ಕ್ಕೂ ಹೆಚ್ಚು ಸಾವುಗಳನ್ನು ದಾಖಲಿಸಿದೆ.

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಗೆ ಹಣಕಾಸು ನಿಲ್ಲಿಸುವ ಇತ್ತೀಚಿನ ಕ್ರಮವು- ಕೋವಿಡ್-19 ಬಿಕ್ಕಟ್ಟಿಗೆ ಚೀನಾವನ್ನು ದೂರುವ ದೀರ್ಘಕಾಲೀನ ತನಿಖೆಯ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿದೆ.

ಡಿಸೆಂಬರ್ ನಂತರದಿಂದ ಈ ಪಿಡುಗನ್ನು ಹೇಗೆ ಎದುರಿಸಲಾಯಿತು ಎಂಬ ಕುರಿತು ಹಂತ ಹಂತವಾಗಿ ಮಾಹಿತಿ ನೀಡಲು ಒಂದು ಕಾಲಾನುಕ್ರಮಣಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾದ ಅಧಿಕಾರಿಗಳು ಬಿಡುಗಡೆಗೊಳಿಸಿದ್ದಾರೆ ಮತ್ತು ಚೀನಾದ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ಸಂಸ್ಥೆಗಳ ನಡುವೆ ಸಮನ್ವಯ ಮತ್ತು ಸಹಕಾರವನ್ನು ತೋರಿಸಿದ್ದಾರೆ.

ಒಂದು ವಾರದ ನಂತರ WHO ಮತ್ತು ಅಮೆರಿಕಾ ಸರ್ಕಾರದ ನಡುವೆ ಸಮನ್ವಯ ಬಂದಿದ್ದು ಮಾತುಕತೆಯ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾಗಿವೆ ಎನ್ನಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವದಾದ್ಯಂತ ತನ್ನ ಮಾನವೀಯ ಕೆಲಸಗಳಿಗಾಗಿ ಹೆಸರುವಾಸಿಯಾಗಿದೆ ಮತ್ತು ಟ್ರಂಪ್ ಆಡಳಿತವು ಅದರ ಮೇಲೆ ಹೊರಿಸಿರುವ- ಈ ಪಿಡುಗಿಗೆ ಸಂಬಂಧಿಸಿದಂತೆ ಅದು ಶಾಮೀಲಾಗಿದೆ ಎಂಬ- ಆರೋಪವು ಅತಿರೇಕದ್ದಾಗಿದೆ. ಒಂದು ವೇಳೆ, ಕೆಲವು ಅಧಿಕಾರಿಗಳು ನಿಜವಾಗಿಯೂ ಯಾವುದಾದರೊಂದು ರೀತಿಯ ಮುಚ್ಚುಮರೆಯಲ್ಲಿ ತೊಡಗಿದ್ದರೂ, ಅದನ್ನು ನಂತರದಲ್ಲಿ ತನಿಖೆ ಮಾಡಬೇಕೇ ಹೊರತು, ಈ ಬಿಕ್ಕಟ್ಟು ತಾರಕಕ್ಕೇರಿರುವ ಈ ಹೊತ್ತಿನಲ್ಲಿ ಆಲ್ಲ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಅನುವಾದ: ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...