Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಸರ್ಕಾರ ಮಾಡಬೇಕಾದ್ದನ್ನು ಮಾಡಿ, ಜನರನ್ನೂ ಕ್ರಿಯಾಶೀಲರನ್ನಾಗಿಸುವ ಸಮಯವಿದು

ಸರ್ಕಾರ ಮಾಡಬೇಕಾದ್ದನ್ನು ಮಾಡಿ, ಜನರನ್ನೂ ಕ್ರಿಯಾಶೀಲರನ್ನಾಗಿಸುವ ಸಮಯವಿದು

- Advertisement -
- Advertisement -

ಕೊರೋನಾ ಮಹಾಮಾರಿ ವಿರುದ್ಧ ಸಮರ ಹೂಡಿ ಆಗಿದೆ. ರೋಗದ ಪತ್ತೆಯ ಕೆಲಸವನ್ನು ಇನ್ನೂ ಮೊದಲೇ ಆರಂಭಿಸಬಹುದಿತ್ತು. 40 ಕೋಟಿ ಜನರನ್ನು ಬಡತನದಲ್ಲಿಡಲಾಗಿದೆ. ಇವರಿಗೆ ಯಾವ ಜೀವಭದ್ರತೆಯೂ ಇಲ್ಲ. ಊಟ ಮೊದಲೇ ಇಲ್ಲ. ಇವರು ಹೇಗೆ ಜೀವಿಸಬೇಕು? ವಲಸಿಗ ಕಾರ್ಮಿಕರ ಪರಿಸ್ಥಿತಿಯಂತೂ ಇನ್ನೂ ಘನಘೋರ; ಮಹಮದೀಯರೆ ರೋಗ ಹರಡಲು ಕಾರಣರು ಎಂದು ಜನತೆಯ ಮನಸ್ಸಿನಲ್ಲಿ ವಿಷ ಬಿಜ ಬಿತ್ತಿ ಹಿಂದುರಾಷ್ಟ್ರ ಆಗಬೇಕೆನ್ನುವ ಹುಂಬರು, ತಲೆಕೆಟ್ಟವರಂತೆ ಮಾತನಾಡುತ್ತಾ, ಜನರ ಮನಸ್ಸಿನಲ್ಲಿ ಕೋಮುವ್ಯಾಧಿ ಕೆರಳುವಂತೆ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರ ತನ್ನ ಮೌನದ ಮೂಲಕ ಅವರ ನಿಲುವನ್ನು ಸಮರ್ಥಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಜೆಪಿ ಸ್ಥಾಪನೆಯ 40ನೇ ವರ್ಷದ ದಿನದಂದೇ ಎಲ್ಲರು ರಾತ್ರಿ ಒಂಭತ್ತು ಘಂಟೆಯಿಂದ 9 ನಿಮಿಷ ಕಾಲ ಮೋಂಬತ್ತಿ ಹತ್ತಿಸಬೇಕೆಂದು ಫರ್ಮಾನ್ ಹೊರಡಿಸುವ ಮೂಲಕ ಕೊರೋನಾದ ದುರುಪಯೋಗ ಮಾಡಿಕೊಂಡದ್ದು ಸರಿಯೇ ಎಂದು ಪ್ರಶ್ನಿಸುವವರಿದ್ದಾರೆ. ಭಾರತದ ಕೊನೇ ಪಕ್ಷ ಹತ್ತು ಕೋಟಿ ಜನ ಆ ದಿನ ಮೋಂಬತ್ತಿ ಹಚ್ಚಿದ್ದರೆ, ಮೋಂಬತ್ತಿಗೆ 20 ಕೋಟಿ ರೂಗಳನ್ನು ವೆಚ್ಚ ಮಾಡಿದಂತಾಯಿತು. ಅದೇ 20 ಕೋಟಿಯನ್ನು ಕೊರೋನಾ ತಡೆಗಟ್ಟುವುದಕ್ಕೆ ಉಪಯೋಗಿಸಬಹುದಿತ್ತು, ಇಲ್ಲವೇ ಒಂದಷ್ಟು ಜನರಿಗೆ ಊಟ ಕೊಡಬಹುದಾಗಿತ್ತಲ್ಲವೇ ಎಂದು ಕೇಳುವವರೂ ಇದ್ದಾರೆ. ಇವೆಲ್ಲಕ್ಕಿಂತ ಮೊದಲು ಕೇಳುವ ಪ್ರಶ್ನೆ ಒಂದು ತಿಂಗಳ ಹಿಂದೆಯೇ ಕೊರೋನಾ ಹರಡುತ್ತಿರುವ ಸುದ್ದಿ ಸರ್ಕಾರಕ್ಕೆ ಗೊತ್ತಾದರೂ ಕೂಡಲೆ ಕ್ರಮ ಕೈಗೊಳ್ಳಲಿಲ್ಲ ಎಂಬುದು. ಇದೆಲ್ಲದಕ್ಕೂ ಮೋದಿ ಅವರ ಉತ್ತರ ‘ದಿವ್ಯಮೌನ’. ಇದು ಎಲ್ಲರಿಗೂ ತಿಳಿದ ವಿಷಯ; ಮೋದಿಜಿ ತಮಗೆ ತೋಚಿದ್ದನ್ನು ಹೇಳುವವರೇ ಹೊರತು ಜನ ಕೇಳಿದ ಪ್ರಶ್ನೆಗೆ ಉತ್ತರ ಕೊಡುವ ಜಾಯಮಾನದವರಲ್ಲ. ತಮಗೆ ಬೇಕಾದರೆ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ಕೇಳಿದ ಪ್ರಶ್ನೆಗೂ ಉತ್ತರ ಕೊಡುತ್ತಾರೆ. ಆದರೆ ಈ ಗಹನ ವಿಚಾರಕ್ಕಲ್ಲ. ಬಿಜೆಪಿ ಸಂಘಪರಿವಾರದ ಕೆಲವರನ್ನು ಸಾಕಿಕೊಂಡಿದ್ದಾರೆ ಮೋದಿ. ಈ ಮತಾಂಧರು ನೂರು ಸಾರಿ ವಿಷಕಾರಿದರೂ ಮೋದಿ ಮತ್ತು ಷಾ ಅವರನ್ನು ಪ್ರಶ್ನಿಸುವುದಿಲ್ಲ. ಅದಕ್ಕೆ ಕಾರಣ ಅವರೆಲ್ಲ Hidden Agendaಗೆ ಅನುಗುಣವಾಗಿ ಮಾತನಾಡುವ (ಅಪ) ಪ್ರಚಾರಕರು!

ಇವೆಲ್ಲ ಒತ್ತಟ್ಟಿಗಿರಲಿ. ಈಗ ಸರ್ಕಾರ ಮಾಡಬೇಕಾದ್ದೇನು? ನಾವು ಅದನ್ನು ಕುರಿತು ಯೋಚನೆ ಮಾಡುವ. ಎಂದಿನಂತೆಯೇ ನಾವು ಮುಂದೆಯೂ People’s curfew, 144ನೇ ಸೆಕ್ಷನ್ ಜಾರಿ ಇವುಗಳನ್ನೇ ಮುಂದುವರೆಸಿಕೊಂಡೇ ಹೋಗುವುದೇ? ಇಲ್ಲವೇ ಜನರಿಗೆ ರೋಗದ ಬಗ್ಗೆ ತಿಳುವಳಿಕೆ ಕೊಟ್ಟು, ಅವರನ್ನು ಜಾಗೃತಗೊಳಿಸುವುದೇ? ಇದುವರೆಗೆ ಸರ್ಕಾರ ಮಾಡಿರುವುದೆಲ್ಲ ಇದನ್ನೆ. ಇದು ಮಾಬಾಪ್ ಸರ್ಕಾರ ಎಂದು ಜನ ಭಾವಿಸಿದ್ದಾರೆ. ರೋಗ ಬಂದರೆ ಸರ್ಕಾರ ಅದನ್ನು ತಡೆ ಹಿಡಿಯುತ್ತದೆ. ನಾವ್ಯಾಕೆ ಅದಕ್ಕೆ ತಲೆ ಕೆಡಿಸಿಕೊಳ್ಳಬೇಕು ಎಂದುಕೊಂಡು ಜನ ಜಡರಾಗುತ್ತಿದ್ದಾರೆ. ಬಿಹಾರದಲ್ಲಿ ಗಂಗಾ ನದಿ ಪ್ರವಾಹ ಬಂದು ಕೊಚ್ಚಿಕೊಂಡು ಹೋಗುವ ಸೂಚನೆ ಇದ್ದಾಗಲೂ ಜನ ಸಿನಿಮಾಕ್ಕೆ ಹೋಗಿ ಕೂತಿರುತ್ತಾರಂತೆ. ಮಾಬಾಪ್ ಗೌರ್ನಮೆಂಟ್ ನಮ್ಮನ್ನು ಪ್ರವಾಹದಿಂದ ರಕ್ಷಣೆ ಮಾಡುತ್ತದೆ ಎಂಬ ನಂಬಿಕೆಯಿಂದ. ಪ್ರವಾಹ ಬರುವುದಿದ್ದರೆ ಎಲ್ಲಿಗೆ ಹೋಗಬೇಕು? ಮರ ಹತ್ತಿ ಕೂಡೋಣವೇ, ಗಂಗಾ ನದಿಯಿಂದ ದೂರವಿರುವ ಗ್ರಾಮಕ್ಕೆ ಹೋಗಿ ತಾತ್ಕಾಲಿಕವಾಗಿ ರಕ್ಷಣೆ ಪಡೆಯಬೇಕೇ ಎಂದು ಹಿಂದಿನ ದಿನಗಳಲ್ಲಿ ಜನ ಯೋಚಿಸುತ್ತಿದ್ದರು. ಈಗಿನ ಜನ ಸರ್ಕಾರ ನಮ್ಮ ರಕ್ಷಣೆ ಮಾಡುತ್ತದೆ, ನಾವೇಕೆ ತಲೆ ಕೆಡಿಸಿಕೊಳ್ಳಬೇಕು ಎನ್ನುತ್ತಾರೆ.

ಸರ್ಕಾರ ತಾನೇನೆಲ್ಲಾ ಮಾಡಬಹುದೋ ಅದನ್ನೆಲ್ಲಾ ಮಾಡಿ ಇನ್ನಾದರೂ ಜನತೆಗೆ ‘ನಿಮ್ಮ ಜವಾಬ್ದಾರಿ ನಿರ್ವಹಿಸಿ, ರೋಗ ಹರಡದಂತೆ ತಡೆಗಟ್ಟಲು ನೀವೇನೂ ಮಾಡಬೇಕೋ ವಿಚಾರ ಮಾಡಿ’ ಎಂದು ತಿಳಿಸಬೇಕು. ಕರ್ತವ್ಯ ನಿರ್ವಹಣೆ ಮಾಡಿ ಎಂದು ತಿಳುವಳಿಕೆ ನೀಡಿ ಜನರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿ ಪರಿವರ್ತಿಸಬೇಕು. ಈಗ ಜನರನ್ನ ಮೋದಿ ವಿಚಾರ ಶೂನ್ಯರನ್ನಾಗಿ ಮಾಡಿದೆ. ಬೇಜವಾಬ್ದಾರಿಯಿಂದ ನಡೆಸಿಕೊಳ್ಳಲು ಬೇಕಾದ ವಾತಾವರಣ ಸೃಷ್ಟಿ ಮಾಡಿದೆ. ಇನ್ನಾದರೂ ಎಚ್ಚೆತ್ತು ಸರ್ಕಾರ ಸಮಾಜದ ವಿಚಾರವಂತರು ಏನು ಮಾಡಬೇಕು? ಕಾರ್ಮಿಕರು ಏನು ಮಾಡಬೇಕು, ವಿದ್ಯಾರ್ಥಿಗಳು ಯುವಕರು ಏನು ಮಾಡಬಹುದು? ಜನಸಾಮಾನ್ಯರು ಅನುಸರಿಸಬೇಕಾದ ನಿಯಮಗಳೇನು? ಎಂಬುದನ್ನು ಕುರಿತು ಅವರಿಗೆಲ್ಲ ಹೇಳಬೇಕು. ರಚನಾತ್ಮಕ ಸಲಹೆಗಳನ್ನು ಅವರಿಗೆ ನೀಡಬೇಕು. ಒಟ್ಟಿನಲ್ಲಿ ಜನಜಾಗೃತಿ ಮೂಡಿಸಿ ಅವರೆಲ್ಲ ಜವಬ್ದಾರಿಯಿಂದ ವರ್ತಿಸುವಂತೆ ಪ್ರೇರಣೆ ನೀಡಬೇಕು.


ಇದನ್ನು ಓದಿ: ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆ ಉಡುಪು, ಮೇಕಪ್…ಅಪರೂಪಕ್ಕೊಮ್ಮೆ ಬೆಚ್ಚಿಬೀಳಿಸುವ ಮವ್ನಿ ಬಾಬಾನಂತೆ…ಅಬ್ಬಾ! ನಾಡಿಗೆ ಉಳಿಗಾಲವುಂಟೆ!

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...