Homeನಿಜವೋ ಸುಳ್ಳೋFact check: ಮುಂಬೈ ರೈಲ್ವೇ ನಿಲ್ದಾಣದಲ್ಲಿ ವಲಸಿಗರು ಸೇರಲು ಮಸೀದಿ ಕಾರಣವೇ? ಎಬಿಪಿ ಸುದ್ದಿ ಮಾಡಿದ್ದೇನು?

Fact check: ಮುಂಬೈ ರೈಲ್ವೇ ನಿಲ್ದಾಣದಲ್ಲಿ ವಲಸಿಗರು ಸೇರಲು ಮಸೀದಿ ಕಾರಣವೇ? ಎಬಿಪಿ ಸುದ್ದಿ ಮಾಡಿದ್ದೇನು?

- Advertisement -
- Advertisement -

ಏಪ್ರಿಲ್ 14 ರಂದು, ಮುಂಬೈನ ಬಾಂದ್ರಾ ರೈಲ್ವೆ ನಿಲ್ದಾಣದ ಬಳಿ ಭಾರಿ ಸಂಖ್ಯೆಯಲ್ಲಿ ವಲಸಿಗರು ಜಮಾಯಿಸಿದ್ದರು. ತಮ್ಮ ಊರಿಗೆ ತೆರಳಲು ಸೇರಿದ್ದ ಆ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದ ಸುದ್ದಿ ಮಾಧ್ಯಮಗಳಲ್ಲಿ ದಿನವಿಡೀ ಪ್ರಸಾರವಾಯಿತು.

ಮುಂಬೈನ ಬಾಂದ್ರದಲ್ಲಿ ವಲಸೆ ಕಾರ್ಮಿಕರು ತಮ್ಮೂರಿಗೆ ತೆರಳಲು ಬಂದಾಗ ಪೊಲೀಸರು ಲಾಠ ಪ್ರಹಾರ ನಡೆಸಿದ್ದಾರೆ. ಮೂರು ವಾರ ಲಾಕ್ ಡೌನ್ ಸಹಿಸಿದ ಅವರು ಮತ್ತೆ 19 ದಿನ ಸಾಧ್ಯವಿಲ್ಲವೆಂದು ಊರಿಗೆ ತೆರಳಲು ಮುಂದಾಗಿದ್ದರು.

Posted by Naanu Gauri on Tuesday, April 14, 2020

ಈ ಕುರಿತು ವದಂತಿ ಹಬ್ಬಿಸಿ ಜನರಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮರಾಠಿ ಸುದ್ದಿ ಚಾನೆಲ್ ಎಬಿಪಿ ಮಜಾ ವರದಿಗಾರ ರಾಹುಲ್ ಕುಲಕರ್ಣಿ ಸೇರಿದಂತೆ ಇತರ 11 ಜನರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ವಲಸಿಗರನ್ನು ಮನೆಗೆ ಹಿಂದಿರುಗಿಸಲು ವಿಶೇಷ ರೈಲುಗಳು ಇದೆ ಎಂದು ಈ ವರದಿಗಾರರು ಸುದ್ದಿ ಪ್ರಸಾರ ಮಾಡಿದ್ದರು. ಆದರೆ ಎಬಿಪಿ ಚಾನೆಲ್ ತಮ್ಮ ವರದಿಗಾರನನ್ನು ಸಮರ್ಥಿಸಿಕೊಂಡಿದೆ. ಪತ್ರಕರ್ತನನ್ನು ಬಂಧಿಸುವ ಮೊದಲು ಸತ್ಯ ಮತ್ತು ಸನ್ನಿವೇಶಗಳ ಸರಿಯಾದ ಪರಿಶೀಲನೆ ಇರಬೇಕು ಎಂದು ಹೇಳಿಕೊಂಡಿದೆ. ನಂತರ ಮುಂಬೈನ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತು.

ಎಬಿಪಿ ಗ್ರೂಪ್‌ನ ಹಿಂದಿ ಚಾನೆಲ್ ಆದ ಎಬಿಪಿ ನ್ಯೂಸ್ ಸಹ ದೃಶ್ಯಗಳನ್ನು ಪ್ರಸಾರ ಮಾಡಿತ್ತು. ಇಷ್ಟು ದೊಡ್ಡ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ನಿಲ್ದಾಣದ ಹೊರಗೆ ಹೇಗೆ ಸೇರಿದರು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿ, ಇದನ್ನ “ಪಿತೂರಿ” ಎಂದು ಕರೆದು ಘಟನೆಗೆ ಧಾರ್ಮಿಕ ಕಾರಣವಿದೆಯೆಂದು ಸೂಚಿಸಿತು.

ಕೆಳಗಿನ ವೀಡಿಯೊದಲ್ಲಿ, ನಿರೂಪಕಿ ಶೋಭನಾ ಯಾದವ್, “ಎಬಿಪಿ ನ್ಯೂಸ್ ಇದರ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಜನರನ್ನು ಒಟ್ಟುಗೂಡಿಸಲು ಮಸೀದಿಯಿಂದ ಪ್ರಚೋದಿಸಲಾಗಿದೆಯೇ? ಎಂಬುವುದು ದೊಡ್ಡ ಪ್ರಶ್ನೆ. ಮುಸ್ಲಿಂ ನಾಯಕರು ಭಾಷಣ ಮಾಡುವ ಮೂಲಕ ಜನರನ್ನು ಕೆರಳಿಸಿ ಜನಸಮೂಹವನ್ನು ಒಟ್ಟುಗೂಡಿಸಿದ್ದಾರೆಯೇ? ಈ ಜನಸಮೂಹ ನೆರೆಯಲು ಜಮಾ ಮಸೀದಿ ಕಾರಣವೇ? ಮಸೀದಿಯಿಂದ ಸಾವಿರಾರು ಜನರನ್ನು ಒಟ್ಟುಗೂಡಿಸಲಾಗಿದೆ. ಈ ಜನಸಮೂಹವನ್ನು ವಾಟ್ಸಾಪ್ ಸಂದೇಶ ಅಥವಾ ಫೋನ್ ಕರೆಯೊಂದಿಗೆ ಒಟ್ಟುಗೂಡಿಸಲಾಗಿದೆಯೇ? ಮುಂಬೈ ಪೊಲೀಸರು ಏಕೆ ನಿದ್ದೆ ಮಾಡುತ್ತಿದ್ದರು? ಅವರ ಬುದ್ಧಿಮತ್ತೆ ಏನು ಮಾಡಿದೆ? ” ಎಂದು ಹೇಳುತ್ತಿದ್ದಾರೆ.

ಎಬಿಪಿ ನ್ಯೂಸ್ ಎತ್ತಿದ ಐದು ಪ್ರಶ್ನೆಗಳು ಹೀಗಿವೆ:

ಜನರನ್ನು ಒಟ್ಟುಗೂಡಿಸಲು ಮಸೀದಿಯಿಂದ ಪ್ರಚೋದಿಸಲಾಗಿದೆಯೇ?
ಮುಸ್ಲಿಂ ನಾಯಕರು ನೀಡಿದ ಭಾಷಣವು ಜನರನ್ನು ಒಟ್ಟುಗೂಡಿಸಲು ಪ್ರೇರೇಪಿಸಿತೆ?
ಈ ಜನಸಮೂಹಕ್ಕೆ ಜಮಾ ಮಸೀದಿ ಕಾರಣವೇ?
ಈ ಗುಂಪನ್ನು ವಾಟ್ಸಾಪ್ ಅಥವಾ ಫೋನ್ ಕರೆಗಳ ಮೂಲಕ ಕಳುಹಿಸಿದ ಸಂದೇಶಗಳೊಂದಿಗೆ ಒಟ್ಟುಗೂಡಿಸಲಾಗಿದೆಯೇ?
ಮುಂಬೈ ಪೊಲೀಸರು ಮಲಗಿದ್ದಾರೆಯೇ?
ಪ್ರಸಾರದ ಸಮಯದಲ್ಲಿ ಪರದೆಯಲ್ಲಿ ಮುಖ್ಯವಾಗಿ “ಜನ ಗುಂಪುಗೂಡಲು ಜಮಾ ಮಸೀದಿ ಜವಾಬ್ದಾರಿ?” ಎಂದು ಓಡುತ್ತಿತ್ತು.

ಶೋಭನಾ ಯಾದವ್ ವಿಡಿಯೋದಲ್ಲಿ ಮುಂದುವರೆದು ಚಾನೆಲ್ ವರದಿಗಾರರಾದ ಅಜಯ್ ದುಬೆಗೆ , “ಅಜಯ್ ದುಬೆ, ಎಬಿಪಿ ನ್ಯೂಸ್ ದೊಡ್ಡ ಪ್ರಶ್ನೆಗಳನ್ನು ಎತ್ತುತ್ತಿದೆ. ನಿಮ್ಮ ಮಾಹಿತಿ ಏನು ಹೇಳುತ್ತಿದೆ, ಮಸೀದಿಯ ಜನರು ಇಲ್ಲಿಗೆ ಸೇರಲು ಅವರನ್ನು ಪ್ರಚೋದಿಸಿದ್ದಾರೆಯೇ? ” ಎಂದು ಕೇಳಿದ್ದಾರೆ.

ಆದರೆ ವರದಿಗಾರ ಪ್ರಶ್ನೆಯನ್ನು ತಪ್ಪಿಸಿ, “ಪೊಲೀಸರು ಈ ವಿಷಯವನ್ನು ತನಿಖೆ ಮಾಡುತ್ತಾರೆ. ಮುಖ್ಯವಾಗಿ ಈಗಾಗಲೇ ಪೊಲೀಸರು ಜನಸಮೂಹವನ್ನು ಚದುರಿಸಿದ್ದಾರೆ. ಆದಾಗ್ಯೂ, ಯಾವುದೇ ಯೋಜನೆ ಇಲ್ಲದೆ ಜನಸಮೂಹವು ಸ್ಥಳದಲ್ಲಿ ನೆರೆದಿದೆ ಎಂದು ನಂಬುವುದು ಕಷ್ಟ” ಎಂದು ದುಬೆ ಹೇಳಿದರು. ಪ್ರಸಾರದ ಈ ಸಮಯದಲ್ಲೂ, ಮಸೀದಿಯ ಬಳಿ ಜನಸಮೂಹ ಜಮಾಯಿಸಿದ್ದ ‘ಪಾಯಿಂಟ್’ ಅನ್ನು ಚಾನೆಲ್ ಎತ್ತಿ ತೋರಿಸುತ್ತಲೇ ಇತ್ತು.

ಎಬಿಪಿ ನ್ಯೂಸ್ v/s ಎಬಿಪಿ ನಿರೂಪಕಿ ರುಬಿಕಾ ಲಿಯಾಕತ್

ನಂತರದ ದಿನಗಳಲ್ಲಿ, ಎಬಿಪಿ ನ್ಯೂಸ್ ಪತ್ರಕರ್ತೆ ರುಬಿಕಾ ಲಿಯಾಕತ್ ಎಬಿಪಿ ನ್ಯೂಸ್‌ನ ಅಧಿಕೃತ ಫೇಸ್‌ಬುಕ್ ಪುಟದಿಂದ ಫೇಸ್‌ಬುಕ್ ಲೈವ್ ಮಾಡಿ, ಮುಸ್ಲಿಂ ಸಮುದಾಯದ ಜನರು ನಿಲ್ದಾಣದಲ್ಲಿ ಜಮಾಯಿಸಿದ್ದಾರೆ ಎಂಬ ವದಂತಿಯ ಬಗ್ಗೆ ಮಾತನಾಡಿದ್ದಾರೆ. ಅವರು ಹೇಳಿದ ಪ್ರಕಾರ, “ಮುಸ್ಲಿಂ ಜನರು ಅಲ್ಲಿ ಒಟ್ಟುಗೂಡಿದ್ದರು ಎಂದು ಹೇಳುತ್ತಿರುವ ಜನರು ಸುಳ್ಳುಗಾರರು ಎಂಬುದನ್ನು ನಾನು ಅದನ್ನು ನಿಮಗೆ ಸ್ಪಷ್ಟಪಡಿಸುತ್ತೇನೆ. ಇದು ಮಸೀದಿಯವರು ಸೇರಿಸಿದ ಜನರ ಗುಂಪು ಅಲ್ಲ ಎಂದು ಸ್ಪಷ್ಟ ಪಡಿಸುತ್ತೇನೆ. ಇದು ನಿಜವಾಗಿಯು ಮುಂದೆ ಏನು ಮಾಡಬೇಕೆಂದು ತಿಳಿಯದೆ ತೊಂದರೆಗೀಡಾದ ವಲಸಿಗರ ಸಮಸ್ಯೆಯಾಗಿದೆ. ” ಎಂದು ಹೇಳಿದ್ದಾರೆ.

Bandra की भीड़ किसने जुटायी? साज़िश या लापरवाही? Live session with Rubika

Posted by ABP News on Tuesday, April 14, 2020

ಫ್ಯಾಕ್ಟ್-ಚೆಕ್‌

ಈ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿದ “ಭೂಮ್ ಲೈವ್” ಪೊಲೀಸರನ್ನು ಸಂಪರ್ಕಿಸಿದೆ. ವಲಸಿಗ ಕಾರ್ಮಿಕರು ಈ ರೀತಿಯಾಗಿ ಸೇರಿರುವುದಕ್ಕೆ ಯಾವುದೇ ಕೋಮು ದೃಷ್ಟಿಕೋನ ಇಲ್ಲ ಎಂದು ಮುಂಬೈ ಪೊಲೀಸರು ಸ್ಪಷ್ಟಪಡಿಸಿದ್ದಾರೆ ಎಂದು ವರದಿ ಮಾಡಿದೆ.

ಅಲ್ಲಿಗೆ ವಲಸೆ ಕಾರ್ಮಿಕರು ಬಾಂದ್ರಾ ನಿಲ್ದಾಣದಲ್ಲಿ ಸೇರುವುದಕ್ಕೆ ಯಾವುದೇ ಮುಸ್ಲಿಮರು ಅಥವಾ ಮಸೀದಿ ಕಾರಣವಲ್ಲ ಎಂಬುದು ಸ್ಪಷ್ಟವಾಗಿದೆ. ಬದಲಿಗೆ ಎಬಿಪಿ ನ್ಯೂಸ್‌ ಸೇರಿದಂತೆ ಹಲವು ಟಿವಿ ಚಾನೆಲ್‌ಗಳು ವಲಸೆ ಕಾರ್ಮಿಕರಿಗೆ ವಿಶೇಷ ರೈಲುವ್ಯವಸ್ಥೆ ಮಾಡಲಾಗಿದೆ ಎಂಬ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದರಿಂದ ಜನರು ಒಟ್ಟುಗೂಡಿದ್ದಾರೆ ಎಂಬು ತಿಳಿದುಬಂದಿದೆ.

ಇಡೀ ಘಟನೆಯ ಬಗ್ಗೆ ಎಬಿಪಿ ನ್ಯೂಸ್‌ನ ಎರಡು ವೀಡಿಯೊಗಳೆ ಚಾನೆಲ್‌ನಲ್ಲಿ ಇರುವ ದ್ವಂದ್ವವನ್ನು ತೋರಿಸುತ್ತದೆ. ಘಟನೆಯನ್ನು ಕೋಮು ದೃಷ್ಟಿಕೋನ ನೀಡುವುದರೊಂದಿಗೆ, ಮಸೀದಿಯ ವಿರುದ್ಧ “ದೊಡ್ಡ ಪ್ರಶ್ನೆಗಳನ್ನು” ಹುಟ್ಟುಹಾಕಿ ಕಡೆಗೆ ಅದನ್ನು ವದಂತಿಗಳೆಂದು ಸಂಪೂರ್ಣವಾಗಿ ತಳ್ಳಿಹಾಕುವವರೆಗೆ ಎಲ್ಲಾ ಪಾತ್ರವನ್ನು ತಾನೇ ನಿರ್ವಹಿಸುತ್ತದೆ. ಎಬಿಪಿ ಮಜಾ ವಿರುದ್ಧ ವದಂತಿಗಳ ಆರೋಪಗಳು ತನಿಖೆಯ ವಿಷಯವಾಗಿದ್ದರೂ, ಎಬಿಪಿ ಗ್ರೂಪ್‌ನ ಹಿಂದಿ ಚಾನೆಲ್ ಎಬಿಪಿ ನ್ಯೂಸ್ ಕೋಮು ಆಧಾರಿತ ನಿರೂಪಣೆಯನ್ನು ನೀಡಿದ್ದಕ್ಕಾಗಿ ಹಾಗೂ ಘಟನೆಗೆ ಅಲ್ಪಸಂಖ್ಯಾತ ಸಮುದಾಯ ಕಾರಣವೆಂದು ದೂಷಿಸಿದ್ದಕ್ಕಾಗಿ ಖಂಡಿತವಾಗಿಯೂ ಶಿಕ್ಷಿಸಬೇಕಾಗಿದೆ.

ಮಾರ್ಚ್ ನಲ್ಲಿ ದೆಹಲಿಯ ಧಾರ್ಮಿಕ ಸಭೆಯೊಂದರಲ್ಲಿ ಭಾಗವಹಿಸಿದ ಹೆಚ್ಚಿನ ಸಂಖ್ಯೆಯ ಜನರಿಗೆ COVID-19 ಇರುವುದು ಪತ್ತೆಯಾದ ನಂತರ ಭಾರತದ ಮುಖ್ಯವಾಹಿನಿಯ ಮಾಧ್ಯಮಗಳು, ಕೊರೊನಾ ವೈರಸ್ ಹರಡುವಿಕೆಯನ್ನು ಕೋಮುವಾದೀಕರಣಗೊಳಿಸುವಲ್ಲಿ ಸಕ್ರಿಯವಾಗಿ ಭಾಗವಹಿಸಿವೆ. ಸಭೆಯನ್ನು ಹಾಟ್‌ಸ್ಪಾಟ್‌ ಎಂದು ಗುರುತಿಸಲಾಗಿರುವುದರಿಂದ, ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳಕ್ಕಾಗಿ ಚಾನೆಲ್‌ಗಳು ಮುಸ್ಲಿಂ ಸಮುದಾಯವನ್ನು ಸಂಪೂರ್ಣವಾಗಿ ಗುರಿಯಾಗಿರಿಸಿಕೊಂಡಿರುವುದು ಮಾತ್ರವಲ್ಲದೆ ಹಲವಾರು ಸುಳ್ಳು ಸುದ್ದಿಯನ್ನು ಹರಡಿದೆ.


ಇದನ್ನೂ ಓದಿ: ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...