Homeನಿಜವೋ ಸುಳ್ಳೋಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

- Advertisement -
- Advertisement -

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾ ರೋಗವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದನ್ನು ಸರಳವಾಗಿ ತೋರಿಸಲು ಅಮೆರಿಕದ ಸಿಇಒ ಭಾರತದ ಈ ನಕ್ಷೆಯನ್ನು ರಚಿಸಿದ್ದಾರೆ. ಆ ಮೂಲಕ ಭಾರತಕ್ಕೆ ಧನ್ಯವಾದಗಳ್ನನು ಅರ್ಪಿಸಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಭಾರತದ ನಕ್ಷೆಯೊಂದು ಇತ್ತೀಚಿನದು ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಈ ನಕ್ಷೆಯಲ್ಲಿ ಪ್ರತಿ ರಾಜ್ಯವನ್ನು ಜನಸಂಖ್ಯೆಯ ಆಧಾರದ ಮೇಲೆ ಬೇರೆ ದೇಶಕ್ಕೆ ಹೋಲಿಸಲಾಗಿದೆ. ಭಾರತದಲ್ಲಿ ಹೆಚ್ಚಿನ ಜನಸಂಖ್ಯೆಯ ಕಾರಣದಿಂದಾಗಿ, ಅನೇಕ ದೇಶಗಳ COVID-19 ಬಿಕ್ಕಟ್ಟನ್ನು ಎದುರಿಸುವಲ್ಲಿ ಎಷ್ಟು ಪ್ರಯತ್ನ ಹಾಕುತ್ತಿವೆಯೋ ಅಷ್ಟನ್ನೂ ಭಾರತವೊಂದೇ ಹಾಕುತ್ತಿದೆ ಎಂದು ಹೇಳಲಾಗಿದೆ.

“ಇದು ಸಮಸ್ಯೆಯನ್ನು ಸಮರ್ಥವಾಗಿ ನಿರ್ವಹಿಸುವ ಬಗೆ ಎಂದು ಅಮೆರಿಕಾದ ಸಿಇಒ ಮೋದಿಜಿಯನ್ನು ಈ ವಿಶಿಷ್ಟ ರೀತಿಯಲ್ಲಿ ಶ್ಲಾಘಿಸಿದರು. ಮೋದಿಜಿಯ ಪ್ರಯತ್ನಗಳನ್ನು ಜಗತ್ತು ಗುರುತಿಸುತ್ತಿದೆ ಆದರೆ ಕೆಲವು ಆಂತರಿಕ ಗುಲಾಮರು ಮತ್ತು ದೇಶದ್ರೋಹಿಗಳು ಇನ್ನೂ ಟೀಕಿಸುತ್ತಿದ್ದಾರೆ” ಎಂದೆಲ್ಲಾ ಟೈಟಲ್‌ನಲ್ಲಿ ಈ ನಕ್ಷೆಯನ್ನು ಕಳೆದ ಮೂರ್‍ನಾಲ್ಕು ದಿನಗಳಿಂದ ಹರಡಲಾಗುತ್ತಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇದೇ ರೀತಿಯ ಶೀರ್ಷಿಕೆಯೊಂದಿಗೆ ಚಿತ್ರವನ್ನು ಹಂಚಿಕೊಂಡಿದ್ದಾರೆ. 13 ಸಾವಿರಕ್ಕೂ ಹೆಚ್ಚು ಜನ ಈ ಪೋಸ್ಟ್‌ ಅನ್ನು ಇಷ್ಟಪಟ್ಟಿದ್ದು 3 ಸಾವಿರ ಜನ ಹಂಚಿಕೊಂಡಿದ್ದಾರೆ.

 

ಫ್ಯಾಕ್ಟ್ ಚೆಕ್

ಈ ಚಿತ್ರ ಇತ್ತೀಚಿನದೆ ಮತ್ತು ಕೊರೊನಾ ವಿಷಯಕ್ಕೆ ಚಿತ್ರಿಸಲಾಗಿದೆಯೇ ಎಂದು ಕಂಡುಹಿಡಿಯಲು ಹಲವಾರು ಕೀವರ್ಡ್ ಮೂಲಕ ಹುಡುಕಾಟ ನಡೆಸಿದರೂ ಸಹ ಅಮೇರಿಕನ್ ಸಿಇಒ ಅಂತಹ ನಕ್ಷೆಯನ್ನು ಚಿತ್ರಿಸುವ ಬಗ್ಗೆ ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿ ಲಭ್ಯವಾಗಿಲ್ಲ.

ನಂತರ ಗೂಗಲ್‌ನಲ್ಲಿ ನಕ್ಷೆಯ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ನಕ್ಷೆಯ ಚಿತ್ರವು 2016 ರ ಹಿಂದಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವುದನ್ನು ಕಾಣಬಹುದಾಗಿದೆ.

ಟ್ವಿಟರ್ ಬಳಕೆದಾರ ಅಮಿತ್ ರಂಜನ್ ಎಂಬುವವರು 2016ರ ಏಪ್ರಿಲ್‌ 13ರಂದೇ ಇದೇ ಚಿತ್ರವನ್ನು ಟ್ವೀಟ್‌ ಮಾಡಿದ್ದಾರೆ. “ಚಿಂತನೆಯನ್ನು ಪ್ರಚೋದಿಸುವ ನಕ್ಷೆ! ” ಭಾರತೀಯ ರಾಜ್ಯಗಳು ಹೊಂದಿರುವ ಜನಸಂಖ್ಯೆಯಷ್ಟೇ ಸಮಾನ ಜನಸಂಖ್ಯೆಯ ದೇಶಗಳನ್ನು ಮ್ಯಾಪ್ ಮಾಡಲಾಗಿದೆ” ಎಂದು ಬರೆದಿದ್ದಾರೆ. ಆದರೆ  ಆ ಪೋಸ್ಟ್‌ನಲ್ಲಿ “ಯಾವುದೇ ಎನ್ಆರ್‌ಐ ಅಥವಾ ಅಮೇರಿಕನ್ ಸಿಇಒ ಈ ನಕ್ಷೆಯನ್ನು ಚಿತ್ರಿ‍ಸಿರುವ ಬಗ್ಗೆ” ಯಾವುದೇ ಉಲ್ಲೇಖವಿಲ್ಲ.

ಅದೇ 2016ರಲ್ಲಿ ಇದೇ ನಕ್ಷೆಯನ್ನು ಈ ಹಿಂದೆ ನಾರ್ವೆಯಿಂದ ಭಾರತಕ್ಕೆ ರಾಜತಾಂತ್ರಿಕರಾಗಿದ್ದ ಎರಿಕ್ ಸೊಲ್ಹೈಮ್ ಕೂಡ ಹಂಚಿಕೊಂಡಿದ್ದಾರೆ. ಯಾರು ನಕ್ಷೆಯನ್ನು ರಚಿಸಿದರು ಎಂಬುದರ ಬಗ್ಗೆ ಸೋಲ್ಹೈಮ್ ಕೂಡ ಯಾವುದೇ ಉಲ್ಲೇಖವನ್ನು ನೀಡಿಲ್ಲ.

ವರ್ಷ ಕಳೆದಂತೆ ನಕ್ಷೆಯು ಹೆಚ್ಚು ವೈರಲ್ ಆಗುತ್ತಲೇ ಅದಕ್ಕೆ “ಅಮೇರಿಕನ್ ಸಿಇಒ” ಮತ್ತು “ಎನ್ಆರ್‌ಐ” ರಚಿಸಿದರು ಎಂಬ ಶೀರ್ಷಿಕೆ ಸೇರಿಕೊಂಡಿದೆ. 2018ರ ಮೇಲಿನ ಟ್ವೀಟ್‌ ಗಮನಿಸಿ.

ಏಪ್ರಿಲ್, 2020 ರಲ್ಲಿ, ನಕ್ಷೆಯು ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿತು – ಮತ್ತು ಈ ಸಮಯದಲ್ಲಿ ನಡೆಯುತ್ತಿರುವ COVID-19 ಸಾಂಕ್ರಾಮಿಕದ ರೋಗದ ವಿರುದ್ಧದ ಹೋರಾಟ ಹೀಗೆ ನಡೆಯುತ್ತಿದೆ ಎಂದು ಸೇರಿಸುವ ಮೂಲಕ ಹೊಸದಾಗಿ ರಚನೆಯಾಯಿತು ಎಂಬ ಸುಳ್ಳು ಹರಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ನೆಲತಿಟ್ಟದಲ್ಲಿರುವ ನಾಡುಗಳಲ್ಲಿ ಕೊರೊನಾ ಸೋಂಕಿನ ಒರೆತ(test)ದ ಕುರಿತು ಬರೆದರೆ ಬಾರತದ ಬಣ್ಣ ಬಯಲಾಗಲಿದೆ. ???

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...