Homeನಿಜವೋ ಸುಳ್ಳೋಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

- Advertisement -
- Advertisement -

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾ ರೋಗವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದನ್ನು ಸರಳವಾಗಿ ತೋರಿಸಲು ಅಮೆರಿಕದ ಸಿಇಒ ಭಾರತದ ಈ ನಕ್ಷೆಯನ್ನು ರಚಿಸಿದ್ದಾರೆ. ಆ ಮೂಲಕ ಭಾರತಕ್ಕೆ ಧನ್ಯವಾದಗಳ್ನನು ಅರ್ಪಿಸಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಭಾರತದ ನಕ್ಷೆಯೊಂದು ಇತ್ತೀಚಿನದು ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಈ ನಕ್ಷೆಯಲ್ಲಿ ಪ್ರತಿ ರಾಜ್ಯವನ್ನು ಜನಸಂಖ್ಯೆಯ ಆಧಾರದ ಮೇಲೆ ಬೇರೆ ದೇಶಕ್ಕೆ ಹೋಲಿಸಲಾಗಿದೆ. ಭಾರತದಲ್ಲಿ ಹೆಚ್ಚಿನ ಜನಸಂಖ್ಯೆಯ ಕಾರಣದಿಂದಾಗಿ, ಅನೇಕ ದೇಶಗಳ COVID-19 ಬಿಕ್ಕಟ್ಟನ್ನು ಎದುರಿಸುವಲ್ಲಿ ಎಷ್ಟು ಪ್ರಯತ್ನ ಹಾಕುತ್ತಿವೆಯೋ ಅಷ್ಟನ್ನೂ ಭಾರತವೊಂದೇ ಹಾಕುತ್ತಿದೆ ಎಂದು ಹೇಳಲಾಗಿದೆ.

“ಇದು ಸಮಸ್ಯೆಯನ್ನು ಸಮರ್ಥವಾಗಿ ನಿರ್ವಹಿಸುವ ಬಗೆ ಎಂದು ಅಮೆರಿಕಾದ ಸಿಇಒ ಮೋದಿಜಿಯನ್ನು ಈ ವಿಶಿಷ್ಟ ರೀತಿಯಲ್ಲಿ ಶ್ಲಾಘಿಸಿದರು. ಮೋದಿಜಿಯ ಪ್ರಯತ್ನಗಳನ್ನು ಜಗತ್ತು ಗುರುತಿಸುತ್ತಿದೆ ಆದರೆ ಕೆಲವು ಆಂತರಿಕ ಗುಲಾಮರು ಮತ್ತು ದೇಶದ್ರೋಹಿಗಳು ಇನ್ನೂ ಟೀಕಿಸುತ್ತಿದ್ದಾರೆ” ಎಂದೆಲ್ಲಾ ಟೈಟಲ್‌ನಲ್ಲಿ ಈ ನಕ್ಷೆಯನ್ನು ಕಳೆದ ಮೂರ್‍ನಾಲ್ಕು ದಿನಗಳಿಂದ ಹರಡಲಾಗುತ್ತಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇದೇ ರೀತಿಯ ಶೀರ್ಷಿಕೆಯೊಂದಿಗೆ ಚಿತ್ರವನ್ನು ಹಂಚಿಕೊಂಡಿದ್ದಾರೆ. 13 ಸಾವಿರಕ್ಕೂ ಹೆಚ್ಚು ಜನ ಈ ಪೋಸ್ಟ್‌ ಅನ್ನು ಇಷ್ಟಪಟ್ಟಿದ್ದು 3 ಸಾವಿರ ಜನ ಹಂಚಿಕೊಂಡಿದ್ದಾರೆ.

 

ಫ್ಯಾಕ್ಟ್ ಚೆಕ್

ಈ ಚಿತ್ರ ಇತ್ತೀಚಿನದೆ ಮತ್ತು ಕೊರೊನಾ ವಿಷಯಕ್ಕೆ ಚಿತ್ರಿಸಲಾಗಿದೆಯೇ ಎಂದು ಕಂಡುಹಿಡಿಯಲು ಹಲವಾರು ಕೀವರ್ಡ್ ಮೂಲಕ ಹುಡುಕಾಟ ನಡೆಸಿದರೂ ಸಹ ಅಮೇರಿಕನ್ ಸಿಇಒ ಅಂತಹ ನಕ್ಷೆಯನ್ನು ಚಿತ್ರಿಸುವ ಬಗ್ಗೆ ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿ ಲಭ್ಯವಾಗಿಲ್ಲ.

ನಂತರ ಗೂಗಲ್‌ನಲ್ಲಿ ನಕ್ಷೆಯ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ನಕ್ಷೆಯ ಚಿತ್ರವು 2016 ರ ಹಿಂದಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವುದನ್ನು ಕಾಣಬಹುದಾಗಿದೆ.

ಟ್ವಿಟರ್ ಬಳಕೆದಾರ ಅಮಿತ್ ರಂಜನ್ ಎಂಬುವವರು 2016ರ ಏಪ್ರಿಲ್‌ 13ರಂದೇ ಇದೇ ಚಿತ್ರವನ್ನು ಟ್ವೀಟ್‌ ಮಾಡಿದ್ದಾರೆ. “ಚಿಂತನೆಯನ್ನು ಪ್ರಚೋದಿಸುವ ನಕ್ಷೆ! ” ಭಾರತೀಯ ರಾಜ್ಯಗಳು ಹೊಂದಿರುವ ಜನಸಂಖ್ಯೆಯಷ್ಟೇ ಸಮಾನ ಜನಸಂಖ್ಯೆಯ ದೇಶಗಳನ್ನು ಮ್ಯಾಪ್ ಮಾಡಲಾಗಿದೆ” ಎಂದು ಬರೆದಿದ್ದಾರೆ. ಆದರೆ  ಆ ಪೋಸ್ಟ್‌ನಲ್ಲಿ “ಯಾವುದೇ ಎನ್ಆರ್‌ಐ ಅಥವಾ ಅಮೇರಿಕನ್ ಸಿಇಒ ಈ ನಕ್ಷೆಯನ್ನು ಚಿತ್ರಿ‍ಸಿರುವ ಬಗ್ಗೆ” ಯಾವುದೇ ಉಲ್ಲೇಖವಿಲ್ಲ.

ಅದೇ 2016ರಲ್ಲಿ ಇದೇ ನಕ್ಷೆಯನ್ನು ಈ ಹಿಂದೆ ನಾರ್ವೆಯಿಂದ ಭಾರತಕ್ಕೆ ರಾಜತಾಂತ್ರಿಕರಾಗಿದ್ದ ಎರಿಕ್ ಸೊಲ್ಹೈಮ್ ಕೂಡ ಹಂಚಿಕೊಂಡಿದ್ದಾರೆ. ಯಾರು ನಕ್ಷೆಯನ್ನು ರಚಿಸಿದರು ಎಂಬುದರ ಬಗ್ಗೆ ಸೋಲ್ಹೈಮ್ ಕೂಡ ಯಾವುದೇ ಉಲ್ಲೇಖವನ್ನು ನೀಡಿಲ್ಲ.

ವರ್ಷ ಕಳೆದಂತೆ ನಕ್ಷೆಯು ಹೆಚ್ಚು ವೈರಲ್ ಆಗುತ್ತಲೇ ಅದಕ್ಕೆ “ಅಮೇರಿಕನ್ ಸಿಇಒ” ಮತ್ತು “ಎನ್ಆರ್‌ಐ” ರಚಿಸಿದರು ಎಂಬ ಶೀರ್ಷಿಕೆ ಸೇರಿಕೊಂಡಿದೆ. 2018ರ ಮೇಲಿನ ಟ್ವೀಟ್‌ ಗಮನಿಸಿ.

ಏಪ್ರಿಲ್, 2020 ರಲ್ಲಿ, ನಕ್ಷೆಯು ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿತು – ಮತ್ತು ಈ ಸಮಯದಲ್ಲಿ ನಡೆಯುತ್ತಿರುವ COVID-19 ಸಾಂಕ್ರಾಮಿಕದ ರೋಗದ ವಿರುದ್ಧದ ಹೋರಾಟ ಹೀಗೆ ನಡೆಯುತ್ತಿದೆ ಎಂದು ಸೇರಿಸುವ ಮೂಲಕ ಹೊಸದಾಗಿ ರಚನೆಯಾಯಿತು ಎಂಬ ಸುಳ್ಳು ಹರಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ನೆಲತಿಟ್ಟದಲ್ಲಿರುವ ನಾಡುಗಳಲ್ಲಿ ಕೊರೊನಾ ಸೋಂಕಿನ ಒರೆತ(test)ದ ಕುರಿತು ಬರೆದರೆ ಬಾರತದ ಬಣ್ಣ ಬಯಲಾಗಲಿದೆ. ???

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...