Homeಮುಖಪುಟನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ

ನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ

- Advertisement -
- Advertisement -

ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿಯವರ ಮಗ ನಿಖಿಲ್‌ ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ ಮಾಜಿ ಸಚಿವ ಕೃಷ್ಣಪ್ಪನವರ ಅಣ್ಣನ ಮಗಳಾದ ರೇವತಿಯವರ ವಿವಾಹವು ಇಂದು ಜರುಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರವಿರೋಧದ ಅಭಿಪ್ರಾಯಗಳು ಕೇಳಿಬಂದಿವೆ. ಒಂದಷ್ಟು ಜನರು ನವ ವಧು-ವರರಿಗೆ ಶುಭ ಹಾರೈಸಿದರೆ ಮತ್ತುಷ್ಟು ಜನ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಮದುವೆ ಬೇಕಿತ್ತಾ? ಮುಂದೂಡದಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಇಂದಿನ ಮದುವೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನ ಗುಂಪುಗೂಡಿದ್ದಾರೆ. ಎಲ್ಲಾ ಸಂಪ್ರದಾಯಗಳನ್ನು ಆಚರಿಸುವಾಗ ಸಾಮಾಜಿಕ ಅಂತರವನ್ನು ಪಾಲಿಸಿಲ್ಲ. ಯಾರೂ ಕೂಡ ಮಾಸ್ಕ್‌ ಧರಿಸಿಲ್ಲ. ಎಚ್ಚರಿಕೆಗಳನ್ನು ತೆಗೆದುಕೊಂಡಿಲ್ಲ ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಕೇಳಿಬಂದಿದೆ.

ನಮ್ಮ ಎರಡು ಕುಟುಂಬಗಳನ್ನು ಹೊರತುಪಡಿಸಿ ಉಳಿದವರಾರು ಮದುವೆಯಲ್ಲಿ ಯಾವುದೇ ಅತಿಥಿಗಳು ಹಾಜರಾಗಿಲ್ಲ. ರಾಮನಗರದ ಬಳಿಯ ನಮ್ಮ ಸಂಬಂಧಿಕರ ಫಾರ್ಮ್‌ಹೌಸ್‌ನಲ್ಲಿ ವಿವಾಹ ಜರುಗಿದೆ. ವರ ಮತ್ತು ವಧು ಹೂವಿನ ಹಾರಗಳನ್ನು ಬದಲಿಸಿಕೊಂಡರು. ಉಳಿದಂತೆ ಎಲ್ಲಾ ಸಂಪ್ರದಾಯಗಳನ್ನು ಪಾಲಿಸಲಾಗಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿರುವ ಫೋಟೊಗಳಲ್ಲಿ ನಿಖಿಲ್‌ ತಾತ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರವರು ಆರ್ಶಿವಾದ ಮಾಡುತ್ತಿರುವ ಚಿತ್ರ, ಅರ್ಚಕ ಇರುವ ಚಿತ್ರಗಳು ಸೇರಿವೆ. ಒಂದೇ ಫೋಟೊದಲ್ಲಿ 8 ಜನರು ಬಹಳ ಹತ್ತಿರದಲ್ಲಿಯೇ ನಿಂತಿರುವುದು ಸಹ ಕಂಡುಬಂದಿದೆ.

ಈ ಮೊದಲು ಮದುವೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಕೊರೊನಾ ಹಿನ್ನೆಲೆಯನ್ನು ಬೆಂಗಳೂರನ್ನು ರೆಡ್‌ಝೋನ್‌ ಎಂದು ಘೋಷಿಸಿದ್ದರಿಂದ ವಿವಾಹಸ್ಥಳ ರಾಮನಗರಕ್ಕೆ ಬದಲಾಗಿತ್ತು. ಮದುವೆಯನ್ನು ಮುಂದೂಡುವಂತೆ ಹಲವಾರು ಸಲಹೆಗಳು ಕೇಳಿಬಂದರೂ ಅದಕ್ಕೆ ಎಚ್‌.ಡಿ ಕುಮಾರಸ್ವಾಮಿಯವರು ಒಪ್ಪಿರಲಿಲ್ಲ. ನಿನ್ನೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಅವರು ದಯವಿಟ್ಟು ಅಭಿಮಾನಿಗಳು ವಿವಾಹ ನಡೆಯುವ ಸ್ಥಳದಿಂದ ದೂರದಲ್ಲಿರಿ. ಪರಿಸ್ಥಿತಿ ತಿಳಿಯಾದ ಬಳಿಕ ದೊಡ್ಡ ಸಮಾರಂಭವನ್ನು ಆಯೋಜಿಸುತ್ತೇವೆ ಎಂದಿದ್ದಾರೆ.

ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಕಷ್ಟವಾದ್ದರಿಂದ ಮನೆಯಲ್ಲಿ ಮದುವೆ ಮಾಡದೇ ಫಾರ್ಮ್‌‌ಹೌಸ್‌ನಲ್ಲಿ ಮಾಡುತ್ತಿದ್ದೇವೆ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಮದುವೆಯಲ್ಲಿ ಪಾಲ್ಗೊಳ್ಳಬೇಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಈ ಮದುವೆಯೂ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ವೈದ್ಯರುಗಳ ಜೊತೆಗಿನ ಸಮಾಲೋಚನೆಯೊಂದಿಗೆ ನಡೆಯುತ್ತಿದೆ. 60-70 ಜನರಷ್ಟೇ ಭಾಗವಹಿಸಿದ್ದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ವಿವಾಹದ ಸಮಯದಲ್ಲಿ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಇದರಲ್ಲಿ ಎರಡು ಮಾತಿಲ್ಲ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಹೇಳಿದ್ದಾರೆ.

ನಾವು ಅಧಿಕಾರದ ಸ್ಥಾನದಲ್ಲಿರುವವರು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ಅಧಿಕಾರ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದೇವೆ ಎಂಬ ತಪ್ಪು ಸಂದೇಶ ಹೋಗುತ್ತದೆ. ಒಂದು ವೇಳೆ ಉಲ್ಲಂಘನೆ ಕಂಡುಬಂದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾನು ಪೊಲೀಸರು ಮತ್ತು ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಡೆಯೇ ಬೇರೆ, ನುಡಿಯೇ ಬೇರೆ; ನುಡಿದಂತೆ ನಡೆಯಬೇಕಿಲ್ಲ, ಎಂಬ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ, ದೊಡ್ಡ ಗೌಡರ ಕುಟುಂಬದವರು!?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...