Homeಮುಖಪುಟತುಮಕೂರಿನಲ್ಲಿ ಮುಸ್ಲಿಮರಿಗೆ ಬೆದರಿಕೆ: ಕೊರೊನಾ ಸಮಯದಲ್ಲಿ ಒಂದಾಗಬೇಕಿದ್ದ ನಮ್ಮ ಸಮಾಜ ಎತ್ತ ಸಾಗುತ್ತಿದೆ?

ತುಮಕೂರಿನಲ್ಲಿ ಮುಸ್ಲಿಮರಿಗೆ ಬೆದರಿಕೆ: ಕೊರೊನಾ ಸಮಯದಲ್ಲಿ ಒಂದಾಗಬೇಕಿದ್ದ ನಮ್ಮ ಸಮಾಜ ಎತ್ತ ಸಾಗುತ್ತಿದೆ?

- Advertisement -
- Advertisement -

ದೇಶದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವಂತೆಯೇ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಮೇಲೆ ಹಲ್ಲೆ-ಹಿಂಸೆಗಳು ಹೆಚ್ಚತೊಡಗಿವೆ. ಕೊರೊನಾ ಭಯೋತ್ಪಾದನೆ, ಕೊರೊನಾ ಜಿಹಾದ್, ಕೊರೊನಾ ಬಾಂಬ್, ತಬ್ಲಿಘಿ ಹ್ಯಾಷ್ ಟ್ಯಾಗ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಮತ್ತು ದೃಶ್ಯಮಾಧ್ಯಮಗಳಲ್ಲಿ ಸುಳ್ಳು ಹರಡುತ್ತ ಸಮುದಾಯವನ್ನು ಅವಮಾನಿಸುವ ಘಟನೆಗಳು ನಿರಂತರವಾಗಿ ನಡೆಯುತ್ತಲೇ ಇವೆ. ದೆಹಲಿ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಭೆ ನಡೆದು ಒಂದು ತಿಂಗಳು ಕಳೆಯುತ್ತಾ ಬಂದಿದ್ದರೂ ಅದರಿಂದ ಹೊರಟ ಆತಂಕದ ಅಲೆಗಳು ಸಮಾಜದ ನಡುವೆ ಅಪ್ಪಳಿಸುತ್ತಲೇ ಇವೆ. ಸುಳ್ಳು-ಅಪಪ್ರಚಾರವನ್ನು ಮಾಡಲಾಗುತ್ತಿದೆ. ಇದರ ನಡುವೆ ಮುಸ್ಲಿಮರಿಗೆ ವ್ಯಾಪರಕ್ಕೆ ಅಡ್ಡಿ, ಅವರ ಮನೆಗಳ ಮೇಲೆ ಕಲ್ಲುತೂರಾಟ, ಮುಸ್ಲಿಮರನ್ನು ನಿಂದಿಸುವ ಪ್ರಕರಣಗಳು ವರದಿ ಆಗುತ್ತಿದ್ದರೂ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.

ತುಮಕೂರು ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾನಸಿಕ ಹಿಂಸೆ ನೀಡುವ ಪ್ರಕರಣಗಳು ನಡೆಯುತ್ತಿದ್ದರೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿಲ್ಲ. ಜಿಲ್ಲೆಯಲ್ಲಿ ಮೂರು ಘಟನೆಗಳು ನಾಗರೀಕ ಸಮಾಜವನ್ನು ತಲ್ಲಣಗೊಳಿಸುವಂತೆ ಮಾಡಿವೆ. ತುಮಕೂರಿನ ಸದಾಶಿವ ನಗರದಲ್ಲಿ ತಳ್ಳುವಗಾಡಿಯಲ್ಲಿ ತರಕಾರಿ ಮಾರಾಟ ಮಾಡಲು ಹೋದ ಮುಸ್ಲಿಂ ವ್ಯಾಪಾರಿಗಳನ್ನು ನೀವು ರಸ್ತೆಗೆ ಇಳಿಯಬೇಡಿ, ತರಕಾರಿ ಮಾರಾಟ ಮಾಡಬೇಡಿ, ನೀವೇ ಕೊರೋನಾ ಹರಡುತ್ತಿರುವುದು, ನೀವು ಮನೆಬಿಟ್ಟು ಹೊರಬರಬೇಡಿ ಎಂದು ಹಿಂದೂ ಯುವಕರು ಧಮಕಿಹಾಕಿದ್ದರಿಂದ ಮುಸ್ಲಿಂ ವ್ಯಾಪಾರಿಗಳು ಮೌನವಾಗಿ ಹಿಂದಿರುಗಿದ್ದಾರೆ. ಇಂತಹ ಅಮಾನವೀಯ ಘಟನೆಗಳಿಂದ ನೊಂದಿರುವ ಸಮುದಾಯ ನೋವನ್ನು ನುಂಗಿಕೊಂಡಿದೆ. ಇದು ಕೆಲ ವಿದ್ಯಾವಂತ ಮುಸ್ಲಿಂ ಸಮುದಾಯ ತಮ್ಮ ನಡುವೆಯೇ ಚರ್ಚೆ ನಡೆಸುತ್ತಿದ್ದು ಶಾಂತಿ, ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಮುಂದಾಗಿದೆ.

ಚಿಕ್ಕನಾಯಕನಹಳ್ಳಿ ಕಂದೀಕೆರೆಯಲ್ಲಿ ಮುಸ್ಲಿಂ ಸಮುದಾಯದ ಮನೆಗಳ ಮೇಲೆ ಮೂರುದಿನಗಳ ಹಿಂದೆ ಕಲ್ಲುತೂರಾಟ ನಡೆಸಲಾಗಿದೆ. ಸಂಘಪರಿವಾರ ಪ್ರೇರಿತ ಯುವಕರು ಕಲ್ಲುತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದು, ಮುಸ್ಲಿಮರು ಆತಂಕಗೊಂಡಿದ್ದಾರೆ. ಕಲ್ಲುತೂರಾಟದಿಂದ ಭೀತರಾಗಿರುವ ಮುಸ್ಲಿಂ ಸಮುದಾಯ ಜೀವವನ್ನು ಕೈಯಲ್ಲಿಡಿದು ಬದುಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಘಟನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಪ್ರಜ್ಞಾವಂತ ಮುಸ್ಲಿಂ ಯುವಕರಿಂದ ನಡೆಯುತ್ತಿದೆ

ಕೊರೊನಾ ಸೋಂಕಿಗೆ ಸಿರಾ ತಾಲೂಕಿನ ವ್ಯಕ್ತಿಯೊಬ್ಬರು ಬಲಿಯಾದ ಮೇಲೆ ಸೂಕ್ಷ್ಮವಾತಾವರಣ ಏರ್ಪಟ್ಟಿದೆ. ಕೆಲ ಯುವಕ ಗುಂಪುಗಳು ಜನರ ನಡುವೆ ದ್ವೇಷ ಮೂಡಿಸುವಂತಹ ಕೆಲಸದಲ್ಲಿ ತೊಡಗಿವೆ. ಸಮಾಜದಲ್ಲಿ ಶಾಂತಿಗೆ ಭಂಗ ತರುವಂತಹ ಕೆಲಸವನ್ನು ಮಾಡುತ್ತಿವೆ. ಎಪ್ರಿಲ್ 16ರಂದು ಬೆಳಗ್ಗೆ 6 ಗಂಟೆ ಸಮಯದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಹಾಲು ತರಲು ಹೋಗಿದ್ದಾರೆ. ಹಾಲು ತೆಗೆದುಕೊಳ್ಳುತ್ತಿದ್ದಾಗ ಬ್ರಾಹ್ಮಣ ವ್ಯಕ್ತಿಯೊಬ್ಬರು ನೀವು ಮುಸ್ಲಿಮರು, ಕೊರೊನಾ ಹರಡುತ್ತಿರುವುದು ನಿಮ್ಮಿಂದಲೇ, ನೀವು ಹೀಗೆಲ್ಲ ಬರಬೇಡಿ ಎಂದು ಹೇಳಿದ್ದಾರೆ. ಇದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಎರಡು ಕೋಮುಗಳ ನಡುವೆ ಜಗಳವಾಗಿದೆ. ಈ ಪ್ರಕರಣ ಪೊಲೀಸ್ ಮೆಟ್ಟಿಲು ಹತ್ತಿದ್ದು ಎಫ್ಐಆರ್ ದಾಖಲಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಕೆಲಸ ಮಾಡಿದ ವ್ಯಕ್ತಿಯನ್ನು ರಕ್ಷಿಸಲು ಇನ್ನಿಲ್ಲದ ಪ್ರಯತ್ನಗಳು ನಡಯುತ್ತಿವೆ.

ದೇಶದಲ್ಲಿ ನಡೆಯುತ್ತಿರುವ ಇಂತಹ ಬೆಳವಣಿಗೆಗಳಿಂದ ಹಿರಿಯ ಜೀವಗಳು ಬೆಚ್ಚಿಬಿದ್ದಿವೆ. ಸೊಗಡು ಶಿವಣ್ಣರಂಥ ಮಾಜಿ ಸಚಿವರು ಕೂಡ ಮನಸ್ಸಿಗೆ ತೋಚಿದಂತೆ ಮಾತನಾಡುತ್ತಿರುವುದು, ಧರ್ಮ-ಧರ್ಮಗಳ ನಡುವೆ ಸೇಡಿನ ಮನೋಭಾವ, ದ್ವೇಷ ಮೂಡಿಸುವ ಕೆಲಸ ಮಾಡುತ್ತಿರುವುದನ್ನು ನೋಡಿ ದೇಶ ಎತ್ತಸಾಗುತ್ತಿದೆ ಎನ್ನುವಂತಾಗಿದೆ. ಶಾಂತಿ ಕಾಪಾಡಬೇಕಾದ ಜವಾಬ್ದಾರಿಯುತ ವ್ಯಕ್ತಿಗಳೇ ಹೀಗೆ ವರ್ತಿಸಿದರೆ ಹೇಗೆ ಎಂಬ ಪ್ರಶ್ನೆ ಏಳತೊಡಗಿವೆ. ಇದು ಎಲ್ಲಿಗೆ ಹೋಗಿ ತಲುಪುತ್ತೋ ಎಂಬ ಆತಂಕ ವ್ಯಕ್ತವಾಗಿದೆ. ಮನುಕುಲದ ಉದ್ದಾರಕ್ಕೆ ಶ್ರಮಿಸಬೇಕಾದ ವ್ಯಕ್ತಿಗಳು ಸಮಾಜದವನ್ನು ಒಡೆಯುವಂತಹ ಕೆಲಸದಲ್ಲಿ ತೊಡಗಿರುವುದು ನೋವಿನ ಸಂಗತಿ ಎಂದು ಹಿರಿಯ ಜೀವಗಳು ಮರುಗತೊಡಗಿವೆ. ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ನಡೆಯುತ್ತಿರುವ ಬೆಳವಣಿಗೆಗಳಿಂದ ಜನರ ನೆಮ್ಮದಿಗೆ ಭಂಗ ತರತೊಡಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Please do not think in a single angle.try to think in both angle then you will solve the problem .first you should try to educate the Muslim people regarding corona through the news .and create awerness to them.otherwise your news also nothing but all news

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...