Homeಮುಖಪುಟಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ಕರ್ನಾಟಕ ಎಂಪ್ಲಾಯರ್ಸ್‌ ಅಸೋಷಿಯೇಷನ್‌ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ನೌಕರರು/ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಡಿ, ಅವರಿಗೆ ಪೂರ್ತಿ ಸಂಬಳ ನೀಡಿ ಎಂದು ಸರ್ಕಾರದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಪಿ ಕ್ಯಾಪ್ಟನ್‌ ಮಣಿವಣ್ಣನ್‌ರವರು ಏಪ್ರಿಲ್‌ 13ರಂದು ಹೊರಡಿಸಿದ್ದ ಆದೇಶವನ್ನು ಅಚ್ಚರಿಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಹಿಂಪಡೆದಿದ್ದಾರೆ.

ಏಪ್ರಿಲ್‌ 15ರಂದು ಹಿಂಪಡೆಯಲಾದ ಆದೇಶವನ್ನು ಹೊರಡಿಸಲಾಗಿದ್ದು, ಈಗಾಗಲೇ ಉಲ್ಲೇಖ(1)ರಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿದೆ ಮತ್ತು ಈಗಾಗಲೇ ಕೇಂದ್ರ ಸರ್ಕಾರವು ದಿ.29-03-2020ರಂದು ಆದೇಶ ಹೊರಡಿಸಿರುವುದರಿಂದ ಸದರಿ ಉಲ್ಲೇಖ (3)ರ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮಣಿವಣ್ಣನ್ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಹಿನ್ನೆಲೆಯಲ್ಲಿ ನೌಕರರು/ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಡಿ, ಪೂರ್ತಿ ಸಂಬಳ ನೀಡಿ: ಸರ್ಕಾರದ ಆದೇಶ


ಮೇಲ್ನೋಟಕ್ಕೆ ಇದು ಕೇಂದ್ರದ ಆದೇಶವಿರುವುದರಿಂದ ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತೋರಿದರೂ ಸಹ ಕರ್ನಾಟಕ ಎಂಪ್ಲಾಯರ್‍ಸ್‌ ಅಸೋಷಿಯೇಷನ್‌ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

COVID -19 ತುರ್ತು ಪರಿಸ್ಥಿತಿಯ ಸನ್ನಿವೇಶದಲ್ಲಿ ಎಲ್ಲಾ ಸಾರ್ವಜನಿಕ/ಖಾಸಗಿ ಸಂಸ್ಥೆಗಳ ಉದ್ಯೋಗದಾತರು ತಮ್ಮ ಉದ್ಯೋಗಿಗಳನ್ನು, ವಿಶೇಷವಾಗಿ casual ಕೆಲಸಗಾರರರನ್ನು ಅಥವಾ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಬಾರದೆಂದು ಮತ್ತು ಅವರ ವೇತನವನ್ನು ಕಡಿತಗೊಳಿಸಬಾರದೆಂದು ವಿಪತ್ತು ನಿರ್ವಹಣೆ ಕಾಯ್ದೆ 2005 ಸೆಕ್ಷನ್ 69ರಡಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ಈ ಮೊದಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಈ ಸಂಬಂಧ ಮಾಡುವ ಯಾವುದೇ ಉಲ್ಲಂಘನೆಗಳು ವಿಪತ್ತು ನಿರ್ವಹಣೆ ಕಾಯ್ದೆ 2005 ರಡಿ ದಂಡನೆಯ ಕ್ರಮಕ್ಕೆ ಒಳಪಟ್ಟಿರುತ್ತದೆ ಎಂದು ಎಚ್ಚರಿಕೆ ಸಹ ನೀಡಲಾಗಿತ್ತು.

ಆದರೆ ಈಗ ಏಕಾಏಕಿ ಸರ್ಕಾರ ತನ್ನ ಕಾರ್ಮಿಕ ಪರವಿದ್ದ ಆದೇಶವನ್ನು ಹಿಂಪಡೆದಿದ್ದು ಕರ್ನಾಟಕ ಉದ್ಯೋಗದಾತರ ಸಂಘದ ಒತ್ತಾಯಕ್ಕೆ ಮಣಿದಿದೆ ಎನ್ನಲಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸರ್ಕಾರದ ಮೊದಲ ಆದೇಶಕ್ಕೆ ನಾವು ತಕರಾರು ಸಲ್ಲಿಸಿದ್ದೇವು. ನಂತರ ಸರ್ಕಾರ ಆ ಆದೇಶವನ್ನು ಹಿಂಪಡೆದಿದೆ ಎಂದು ಕರ್ನಾಟಕ ಎಂಪ್ಲಾಯರ್‍ಸ್‌ ಅಸೋಷಿಯೇಷನ್‌‌ನ ಅಧ್ಯಕ್ಷರಾದ ಬಿ.ಸಿ ಪ್ರಭಾಕರ್‌ರವರು ತಮ್ಮ ಸಂಘದ ಸದ್ಯಸ್ಯರಿಗೆ ಪತ್ರ ಬರೆದಿದ್ದಾರೆ.

ಇದು ಕಾರ್ಮಿಕ ದ್ರೋಹಿ ಸರ್ಕಾರ – ಎಸ್‌. ಬಾಲನ್‌

ಈ ಕುರಿತು ನಾನುಗೌರಿ.ಕಾಂ ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಅವರು “ಏಪ್ರಿಲ್‌ 13ರಂದು ಸರ್ಕಾರ ಹೊರಡಿಸಿದ್ದ ಆದೇಶ ಕೇವಲ ಸಂಘಟಿತ ವಲಯದಲ್ಲಿನ casual ಕೆಲಸಗಾರ ಮತ್ತು ಗುತ್ತಿಗೆ ಕಾರ್ಮಿಕರಿಗೆ ಮಾತ್ರ ಅನ್ವಯಿಸುತ್ತಿತ್ತು. ಅವರಲ್ಲದೇ ಈ ದೇಶದಲ್ಲಿ ಅಸಂಘಟಿತ ವಲಯದಲ್ಲಿ ಕೋಟ್ಯಾಂತರ ಕಾರ್ಮಿಕರಿದ್ದಾರೆ. ಅವರೆಲ್ಲರನ್ನು ಈ ಸರ್ಕಾರ ಮರತೇಬಿಟ್ಟಿತ್ತು. ಈಗ ಸಂಘಟಿತ ವಲಯದಲ್ಲಿರುವವರನ್ನು ಕೈಬಿಟ್ಟಿದ್ದಾರೆ. ಅಂದರೆ ಈ ಸರ್ಕಾರ ಕಾರ್ಮಿಕರಿಗೆ ದ್ರೋಹ ಮಾಡುತ್ತಿರುವುದು ಸ್ಪಷ್ಟವಾಗಿದೆ” ಎಂದರು.

ಎಸ್‌ ಬಾಲನ್‌

1979ರಲ್ಲಿ ಇಂಟರ್‌ಸ್ಟೇಟ್‌ ಕಾಂಟ್ರಾಕ್ಟ್‌ ಲೇಬರ್‌ ಆಕ್ಟ್‌ ಪ್ರಕಾರ ಕಾರ್ಮಿಕನ ಸ್ವಂತ ರಾಜ್ಯ ಮತ್ತು ಕಾರ್ಮಿಕ ಕೆಲಸ ಮಾಡುವ ರಾಜ್ಯ ಎರಡೂ ಸಹ ಆತನ ಬಗ್ಗೆ ಕಾಳಜಿ ವಹಿಸಬೇಕು. ಅದರ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ. ಅಲ್ಲದೇ ಲಾಕ್‌ಡೌನ್‌ ಮಾಡುವಾಗ ಕಾರ್ಮಿಕರ ಬಗ್ಗೆ ಕಿಂಚಿತ್ತೂ ಯೋಚಿಸದ ಸರ್ಕಾರಗಳು ಜನದ್ರೋಹಿಯಾಗಿವೆ. ಕಾರ್ಮಿಕರಿಗೆ ಊಟ ಹಾಕಲು ಯೋಗ್ಯತೆಯಿಲ್ಲದ ಈ ಸರ್ಕಾರ ಸೀಲ್‌ಡೌನ್‌ ಮಾಡುವ ಮಾತಾಡುತ್ತಿದೆ. ಆದೇಶ ಹಿಂಪಡೆದಿರುವುದು ಮಾನವ ಹಕ್ಕುಗಳಿಗೆ ವಿರುದ್ಧವಾಗಿದ್ದು, ಕೂಡಲೇ ಎಲ್ಲಾ ಕಾರ್ಮಿಕರ ರಕ್ಷಣೆಗೆ ಮುಂದಾಗಬೇಕು ಎಂದು ಬಾಲನ್‌ ಆಗ್ರಹಿಸಿದ್ದಾರೆ.

ಇದು ಮಾಲೀಕರ ಪರ ಸರಕಾರ – ಆರ್‌ ಮಾನಸಯ್ಯ

ಆರ್‌ ಮಾನಸಯ್ಯ

ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (TUCI)ದ ರಾಜ್ಯಧ್ಯಕ್ಷರಾದ ಕಾರ್ಮಿಕ ಸಂಘಟನೆಯ ಮುಖಂಡರಾದ ಆರ್‌.ಮಾನಸಯ್ಯನವರು ಈ ವಿಚಾರಕ್ಕೆ ಪ್ರತಿಕ್ರಿಯಿಸಿ, “ಕರ್ನಾಟಕ ರಾಜ್ಯ ಸರಕಾರವು ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ, ಕೆಲಸ ಇರಲಿ, ಇಲ್ಲದಿರಲಿ ಎಲ್ಲ ಕಾರ್ಮಿಕರಿಗೆ ಕಡ್ಡಾಯವಾಗಿ ವೇತನ ಪಾವತಿ ಮಾಡಬೇಕೆಂದು ದಿ 13-4-2020 ಸುತ್ತೋಲೆ ಹೊರಡಿಸಿತ್ತು. ಆದರೆ ಕರ್ನಾಟಕ ಉದ್ಯೋಗದಾತರ ಸಂಘದ ಒತ್ತಾಯಕ್ಕೆ ಮಣಿದು ಸದರಿ ಆದೇಶವನ್ನು ಹಿಂಪಡೆದಿದೆ. ಕೆಲಸ ಹಾಗೂ ಕೂಲಿ ಇಲ್ಲದೆ ರಾಜ್ಯದ ಖಾಸಗೀ ಕಾಖಾ೯ನೆಗಳ,ಹೋಟೆಲ್ ಅಂಗಡಿ ಮುಂಗಟ್ಟುಗಳ ,ಸರಕಾರಿ ಇಲಾಖೆಗಳ ಎಲ್ಲ ಕಾಮಿ೯ಕರ ಜೀವನಕ್ಕೆ ಗಂಡಾಂತರ ತರಲಾಗಿದೆ. ಈ ಮೂಲಕ ರಾಜ್ಯ ಬಿಜೆಪಿ ಸರಕಾರದ ಬಣ್ಣ ಇನ್ನಷ್ಟು ಬದಲಾಗಿದೆ. ಸಂಪೂಣ೯ ಸಂಕಷ್ಟಕ್ಕೆ ತುತ್ತಾದ ಕಾಮಿ೯ಕರನ್ನು ನಡು ನೀರಲ್ಲಿ ಕೈಬಿಟ್ಟು ತಾನು ಮಾಲೀಕರ ಸರಕಾರ ಎಂದು ಸಾಬೀತು ಪಡಿಸಿದೆ. ಇದೇ ರೀತಿ ಕೇಂದ್ರ ಹಾಗೂ ರಾಜ್ಯಸರಕಾರದ ಎಲ್ಲಾ ಕೊರೊನಾ ಪರಹಾರ ಭರವಸೆಗಳು ಮೋಸದಿಂದ ಕೂಡಿವೆ. ಈ ತೀರ್ಮಾನವನ್ನು ಸರಕಾರ ಕೈ ಬಿಡಬೇಕು. 13-4-2020ರ ಸುತ್ತೋಲೆಯನ್ನು ಮತ್ತೆ ಜಾರಿಗೆ ತರಬೇಕು. ಇದಾಗದಿದ್ದರೆ, ಕಾರ್ಮಿಕರು ಬಹಿರಂಗವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಸರಕಾರಕ್ಕೆ ಈ ಮೂಲಕ ಎಚ್ಚರಿಸುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...