Homeಮುಖಪುಟಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ಕರ್ನಾಟಕ ಎಂಪ್ಲಾಯರ್ಸ್‌ ಅಸೋಷಿಯೇಷನ್‌ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ನೌಕರರು/ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಡಿ, ಅವರಿಗೆ ಪೂರ್ತಿ ಸಂಬಳ ನೀಡಿ ಎಂದು ಸರ್ಕಾರದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಪಿ ಕ್ಯಾಪ್ಟನ್‌ ಮಣಿವಣ್ಣನ್‌ರವರು ಏಪ್ರಿಲ್‌ 13ರಂದು ಹೊರಡಿಸಿದ್ದ ಆದೇಶವನ್ನು ಅಚ್ಚರಿಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಹಿಂಪಡೆದಿದ್ದಾರೆ.

ಏಪ್ರಿಲ್‌ 15ರಂದು ಹಿಂಪಡೆಯಲಾದ ಆದೇಶವನ್ನು ಹೊರಡಿಸಲಾಗಿದ್ದು, ಈಗಾಗಲೇ ಉಲ್ಲೇಖ(1)ರಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿದೆ ಮತ್ತು ಈಗಾಗಲೇ ಕೇಂದ್ರ ಸರ್ಕಾರವು ದಿ.29-03-2020ರಂದು ಆದೇಶ ಹೊರಡಿಸಿರುವುದರಿಂದ ಸದರಿ ಉಲ್ಲೇಖ (3)ರ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮಣಿವಣ್ಣನ್ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಹಿನ್ನೆಲೆಯಲ್ಲಿ ನೌಕರರು/ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಡಿ, ಪೂರ್ತಿ ಸಂಬಳ ನೀಡಿ: ಸರ್ಕಾರದ ಆದೇಶ


ಮೇಲ್ನೋಟಕ್ಕೆ ಇದು ಕೇಂದ್ರದ ಆದೇಶವಿರುವುದರಿಂದ ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತೋರಿದರೂ ಸಹ ಕರ್ನಾಟಕ ಎಂಪ್ಲಾಯರ್‍ಸ್‌ ಅಸೋಷಿಯೇಷನ್‌ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

COVID -19 ತುರ್ತು ಪರಿಸ್ಥಿತಿಯ ಸನ್ನಿವೇಶದಲ್ಲಿ ಎಲ್ಲಾ ಸಾರ್ವಜನಿಕ/ಖಾಸಗಿ ಸಂಸ್ಥೆಗಳ ಉದ್ಯೋಗದಾತರು ತಮ್ಮ ಉದ್ಯೋಗಿಗಳನ್ನು, ವಿಶೇಷವಾಗಿ casual ಕೆಲಸಗಾರರರನ್ನು ಅಥವಾ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಬಾರದೆಂದು ಮತ್ತು ಅವರ ವೇತನವನ್ನು ಕಡಿತಗೊಳಿಸಬಾರದೆಂದು ವಿಪತ್ತು ನಿರ್ವಹಣೆ ಕಾಯ್ದೆ 2005 ಸೆಕ್ಷನ್ 69ರಡಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ಈ ಮೊದಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಈ ಸಂಬಂಧ ಮಾಡುವ ಯಾವುದೇ ಉಲ್ಲಂಘನೆಗಳು ವಿಪತ್ತು ನಿರ್ವಹಣೆ ಕಾಯ್ದೆ 2005 ರಡಿ ದಂಡನೆಯ ಕ್ರಮಕ್ಕೆ ಒಳಪಟ್ಟಿರುತ್ತದೆ ಎಂದು ಎಚ್ಚರಿಕೆ ಸಹ ನೀಡಲಾಗಿತ್ತು.

ಆದರೆ ಈಗ ಏಕಾಏಕಿ ಸರ್ಕಾರ ತನ್ನ ಕಾರ್ಮಿಕ ಪರವಿದ್ದ ಆದೇಶವನ್ನು ಹಿಂಪಡೆದಿದ್ದು ಕರ್ನಾಟಕ ಉದ್ಯೋಗದಾತರ ಸಂಘದ ಒತ್ತಾಯಕ್ಕೆ ಮಣಿದಿದೆ ಎನ್ನಲಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸರ್ಕಾರದ ಮೊದಲ ಆದೇಶಕ್ಕೆ ನಾವು ತಕರಾರು ಸಲ್ಲಿಸಿದ್ದೇವು. ನಂತರ ಸರ್ಕಾರ ಆ ಆದೇಶವನ್ನು ಹಿಂಪಡೆದಿದೆ ಎಂದು ಕರ್ನಾಟಕ ಎಂಪ್ಲಾಯರ್‍ಸ್‌ ಅಸೋಷಿಯೇಷನ್‌‌ನ ಅಧ್ಯಕ್ಷರಾದ ಬಿ.ಸಿ ಪ್ರಭಾಕರ್‌ರವರು ತಮ್ಮ ಸಂಘದ ಸದ್ಯಸ್ಯರಿಗೆ ಪತ್ರ ಬರೆದಿದ್ದಾರೆ.

ಇದು ಕಾರ್ಮಿಕ ದ್ರೋಹಿ ಸರ್ಕಾರ – ಎಸ್‌. ಬಾಲನ್‌

ಈ ಕುರಿತು ನಾನುಗೌರಿ.ಕಾಂ ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಅವರು “ಏಪ್ರಿಲ್‌ 13ರಂದು ಸರ್ಕಾರ ಹೊರಡಿಸಿದ್ದ ಆದೇಶ ಕೇವಲ ಸಂಘಟಿತ ವಲಯದಲ್ಲಿನ casual ಕೆಲಸಗಾರ ಮತ್ತು ಗುತ್ತಿಗೆ ಕಾರ್ಮಿಕರಿಗೆ ಮಾತ್ರ ಅನ್ವಯಿಸುತ್ತಿತ್ತು. ಅವರಲ್ಲದೇ ಈ ದೇಶದಲ್ಲಿ ಅಸಂಘಟಿತ ವಲಯದಲ್ಲಿ ಕೋಟ್ಯಾಂತರ ಕಾರ್ಮಿಕರಿದ್ದಾರೆ. ಅವರೆಲ್ಲರನ್ನು ಈ ಸರ್ಕಾರ ಮರತೇಬಿಟ್ಟಿತ್ತು. ಈಗ ಸಂಘಟಿತ ವಲಯದಲ್ಲಿರುವವರನ್ನು ಕೈಬಿಟ್ಟಿದ್ದಾರೆ. ಅಂದರೆ ಈ ಸರ್ಕಾರ ಕಾರ್ಮಿಕರಿಗೆ ದ್ರೋಹ ಮಾಡುತ್ತಿರುವುದು ಸ್ಪಷ್ಟವಾಗಿದೆ” ಎಂದರು.

ಎಸ್‌ ಬಾಲನ್‌

1979ರಲ್ಲಿ ಇಂಟರ್‌ಸ್ಟೇಟ್‌ ಕಾಂಟ್ರಾಕ್ಟ್‌ ಲೇಬರ್‌ ಆಕ್ಟ್‌ ಪ್ರಕಾರ ಕಾರ್ಮಿಕನ ಸ್ವಂತ ರಾಜ್ಯ ಮತ್ತು ಕಾರ್ಮಿಕ ಕೆಲಸ ಮಾಡುವ ರಾಜ್ಯ ಎರಡೂ ಸಹ ಆತನ ಬಗ್ಗೆ ಕಾಳಜಿ ವಹಿಸಬೇಕು. ಅದರ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ. ಅಲ್ಲದೇ ಲಾಕ್‌ಡೌನ್‌ ಮಾಡುವಾಗ ಕಾರ್ಮಿಕರ ಬಗ್ಗೆ ಕಿಂಚಿತ್ತೂ ಯೋಚಿಸದ ಸರ್ಕಾರಗಳು ಜನದ್ರೋಹಿಯಾಗಿವೆ. ಕಾರ್ಮಿಕರಿಗೆ ಊಟ ಹಾಕಲು ಯೋಗ್ಯತೆಯಿಲ್ಲದ ಈ ಸರ್ಕಾರ ಸೀಲ್‌ಡೌನ್‌ ಮಾಡುವ ಮಾತಾಡುತ್ತಿದೆ. ಆದೇಶ ಹಿಂಪಡೆದಿರುವುದು ಮಾನವ ಹಕ್ಕುಗಳಿಗೆ ವಿರುದ್ಧವಾಗಿದ್ದು, ಕೂಡಲೇ ಎಲ್ಲಾ ಕಾರ್ಮಿಕರ ರಕ್ಷಣೆಗೆ ಮುಂದಾಗಬೇಕು ಎಂದು ಬಾಲನ್‌ ಆಗ್ರಹಿಸಿದ್ದಾರೆ.

ಇದು ಮಾಲೀಕರ ಪರ ಸರಕಾರ – ಆರ್‌ ಮಾನಸಯ್ಯ

ಆರ್‌ ಮಾನಸಯ್ಯ

ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (TUCI)ದ ರಾಜ್ಯಧ್ಯಕ್ಷರಾದ ಕಾರ್ಮಿಕ ಸಂಘಟನೆಯ ಮುಖಂಡರಾದ ಆರ್‌.ಮಾನಸಯ್ಯನವರು ಈ ವಿಚಾರಕ್ಕೆ ಪ್ರತಿಕ್ರಿಯಿಸಿ, “ಕರ್ನಾಟಕ ರಾಜ್ಯ ಸರಕಾರವು ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ, ಕೆಲಸ ಇರಲಿ, ಇಲ್ಲದಿರಲಿ ಎಲ್ಲ ಕಾರ್ಮಿಕರಿಗೆ ಕಡ್ಡಾಯವಾಗಿ ವೇತನ ಪಾವತಿ ಮಾಡಬೇಕೆಂದು ದಿ 13-4-2020 ಸುತ್ತೋಲೆ ಹೊರಡಿಸಿತ್ತು. ಆದರೆ ಕರ್ನಾಟಕ ಉದ್ಯೋಗದಾತರ ಸಂಘದ ಒತ್ತಾಯಕ್ಕೆ ಮಣಿದು ಸದರಿ ಆದೇಶವನ್ನು ಹಿಂಪಡೆದಿದೆ. ಕೆಲಸ ಹಾಗೂ ಕೂಲಿ ಇಲ್ಲದೆ ರಾಜ್ಯದ ಖಾಸಗೀ ಕಾಖಾ೯ನೆಗಳ,ಹೋಟೆಲ್ ಅಂಗಡಿ ಮುಂಗಟ್ಟುಗಳ ,ಸರಕಾರಿ ಇಲಾಖೆಗಳ ಎಲ್ಲ ಕಾಮಿ೯ಕರ ಜೀವನಕ್ಕೆ ಗಂಡಾಂತರ ತರಲಾಗಿದೆ. ಈ ಮೂಲಕ ರಾಜ್ಯ ಬಿಜೆಪಿ ಸರಕಾರದ ಬಣ್ಣ ಇನ್ನಷ್ಟು ಬದಲಾಗಿದೆ. ಸಂಪೂಣ೯ ಸಂಕಷ್ಟಕ್ಕೆ ತುತ್ತಾದ ಕಾಮಿ೯ಕರನ್ನು ನಡು ನೀರಲ್ಲಿ ಕೈಬಿಟ್ಟು ತಾನು ಮಾಲೀಕರ ಸರಕಾರ ಎಂದು ಸಾಬೀತು ಪಡಿಸಿದೆ. ಇದೇ ರೀತಿ ಕೇಂದ್ರ ಹಾಗೂ ರಾಜ್ಯಸರಕಾರದ ಎಲ್ಲಾ ಕೊರೊನಾ ಪರಹಾರ ಭರವಸೆಗಳು ಮೋಸದಿಂದ ಕೂಡಿವೆ. ಈ ತೀರ್ಮಾನವನ್ನು ಸರಕಾರ ಕೈ ಬಿಡಬೇಕು. 13-4-2020ರ ಸುತ್ತೋಲೆಯನ್ನು ಮತ್ತೆ ಜಾರಿಗೆ ತರಬೇಕು. ಇದಾಗದಿದ್ದರೆ, ಕಾರ್ಮಿಕರು ಬಹಿರಂಗವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಸರಕಾರಕ್ಕೆ ಈ ಮೂಲಕ ಎಚ್ಚರಿಸುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...