Homeಮುಖಪುಟಇಮ್ತಿಯಾಜ್ ಅಲಿ ವೆಬ್‍ಸರಣಿಯಲ್ಲಿ ಕಿಶೋರ್ ಖಳ ನಾಯಕ್

ಇಮ್ತಿಯಾಜ್ ಅಲಿ ವೆಬ್‍ಸರಣಿಯಲ್ಲಿ ಕಿಶೋರ್ ಖಳ ನಾಯಕ್

- Advertisement -
- Advertisement -

ಜಬ್ ವಿ ಮೆಟ್ ಖ್ಯಾತಿಯ ಇಮ್ತಿಯಾಜ್ ಅಲಿ, ಭಿನ್ನ ಕಥೆಗಳನ್ನು ಬಾಲಿವುಡ್‍ಗೆ ಪರಿಚಯಿಸಿದ ನಿರ್ದೇಶಕ. ಕಳೆದ ಫೆಬ್ರವರಿಯಲ್ಲಿ ಪ್ರೇಮಕಥೆಯೊಂದನ್ನು ತೆರೆಗೆ ತಂದ ಅಲಿ, ಲಾಕ್‍ಡೌನ್ ಇಡೀ ಬಾಲಿವುಡ್‍ಅನ್ನು ಕಟ್ಟಿ ಹಾಕುವುದರೊಳಗೆ ಏಳು ಕಂತುಗಳ ವೆಬ್ ಸರಣಿಯೊಂದನ್ನು ನೆಟ್‍ಫ್ಲಿಕ್ಸ್‍ನಲ್ಲಿ ಬಿಡುಗಡೆ ಮಾಡಿದ್ದಾರೆ.

ಇದರಲ್ಲಿ ಕನ್ನಡ ಜನಪ್ರಿಯ ನಟ ಕಿಶೋರ್ ನಟಿಸಿದ್ದಾರೆ. ‘ಶೀ’ ಹೆಸರಿನ ಈ ಸರಣಿ ಸಾಮಾನ್ಯ ಪೇದೆಯೊಬ್ಬಳ ಸುತ್ತ ಹೆಣೆದ ಕತೆ. ಪೊಲೀಸ್ ಇಲಾಖೆಯ ತನಿಖಾ ದಳದಲ್ಲಿ ಉಗ್ರನೊಬ್ಬನನ್ನು ಬಲೆಗೆ ಬೀಳಿಸಲು ಹೆಣೆಯುವ ಬಲೆಯಲ್ಲಿ ಪೇದೆ ಒಂದುಮುಖ್ಯ ದಾಳ. ಹಾಗೆ ಬಲೆ ಬೀಳಬೇಕಾಗಿರುವ ಉಗ್ರನ ಹೆಸರು `ನಾಯಕ್’. ಈ ನಾಯಕ್ ಪಾತ್ರದಲ್ಲಿಯೇ ಕನ್ನಡದ ಜನಪ್ರಿಯ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಸರಣಿಯ ಆರಂಭದ ಕಂತುಗಳಿಂದಲೂ ನಾಯಕ್ ಹೆಸರು ಕೇಳಿಬರುತ್ತದೆಯಾದರೂ ಕಾಣಿಸಿಕೊಳ್ಳುವುದು ಕಡೆಯ ಎರಡು ಕಂತುಗಳಲ್ಲಿ. ಮುಂಬೈ ನಗರದಲ್ಲಿ ದಾಳಿ ನಡೆಸಲು ಸಂಚು ರೂಪಿಸುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ಜಮೀನ್‍ದಾರಿ ವಂಶದ ಹಿನ್ನೆಲೆಯ ನಾಯಕ್ ಅಲಿಯಾಸ್ ನಾಯಕಡು, ಪ್ರೀತಿಗೆ ಹಾತೊರೆಯುವ, ಹೆಚ್ಚು ಯಾರೊಂದಿಗೂ ಮಾತನಾಡದ, ಹೆಣ್ಣಿನೊಂದಿಗೆ ಸಭ್ಯವಾಗಿ ವ್ಯವಹರಿಸುವ ವ್ಯಕ್ತಿ. ಈತನಿಂದ ಮಾಹಿತಿ ಕಲೆಹಾಕಲು ಬರುವ ಪೇದೆ, ಕಡೆಗೆ ಆತನೊಂದಿಗೆ ಸ್ನೇಹ ಬೆಸೆದುಕೊಳ್ಳುವ ಮೂಲಕ ಸರಣಿ ಕೊನೆಯಾಗುತ್ತದೆ. ಇನ್ನೊಂದು ಸೀಸನ್ ಸುಳಿವು ನೀಡಿರುವ ಈ ಸರಣಿಯಲ್ಲಿ ಕಿಶೋರ್ ಕಾಣಿಸಿಕೊಂಡಿರುವ ರೀತಿಯೇ ವಿಶೇಷ. ಯಾವುದೇ ಅಬ್ಬರವಿಲ್ಲದ, ಆಕ್ಷನ್‍ಗಳಿಲ್ಲದ ತಣ್ಣನೆಯ ವ್ಯಕ್ತಿಯಾಗಿ ನಟಿಸಿದ್ದಾರೆ. ಹೆಚ್ಚು ಡೈಲಾಗ್‍ಗಳಿಲ್ಲದ ಪಾತ್ರ. ನೋಟದಲ್ಲೇ ಭಾವಗಳನ್ನು ಅಭಿವ್ಯಕ್ತಿಸುವ ಪಾತ್ರ. ಹಾಗೆ ನೋಡಿದರೆ `ಶೀ’ ಅಲಿಯವರ ಸಮರ್ಥ ಪ್ರಯೋಗವೇನಲ್ಲ. ಆದರೆ ಪೇದೆ ಪಾತ್ರದಲ್ಲಿ ಕಾಣಿಸಿಕೊಂಡ ಅದಿತಿ ಪೋಹನ್‍ಕರ್, ಸಸ್ಯ ಆಗಿ ಕಾಣಿಸಿಕೊಂಡ ವಿಜಯ್ ಶರ್ಮಾ ಮತ್ತು ಕಿಶೋರ್ ಆಕರ್ಷಿಸುತ್ತಾರೆ.

ವಿಭಿನ್ನ ಪಾತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿರುವ ಕಿಶೋರ್ ದಕ್ಷಿಣ ಭಾರತದ ಬಹುಬೇಡಿಕೆಯ ನಟ. ನಟರಾಗಿ ತಮ್ಮನ್ನು ಪ್ರಯೋಗಕ್ಕೆ ಒಡ್ಡಿಕೊಳ್ಳುತ್ತಲೇ ಬಂದಿರುವ ಇವರು, ಹೊಸ ವೀಕ್ಷಕ ವರ್ಗವನ್ನು ಸೆಳೆಯುತ್ತಿದ್ದಾರೆ. ಈ ಹಿಂದೆ ಎರಡು ವೆಬ್‍ಸರಣಿಯಲ್ಲಿ ಕಿಶೋರ್ ನಟಿಸಿ ಗಮನಸೆಳೆದಿದ್ದರು. ಝೀ5 ನೆಟ್‍ವರ್ಕ್ ನಿರ್ಮಿಸಿದ ಪುಷ್ಪಾ ಇಗ್ನೇಶಿಯಸ್ ನಿರ್ದೇಶನದ ‘ಹೈ ಪ್ರೀಸ್ಟ್’ ಮತ್ತು ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆಯಾದ ರಾಜ್ ನಿಡಿಮೋರು ಮತ್ತು ಕೃಷ್ಣ ನಿರ್ದೇಶನದ ‘ದಿ ಫ್ಯಾಮಿಲಿ ಮ್ಯಾನ್’ ನಲ್ಲಿ ತನಿಖಾಧಿಕಾರಿಯಾಗಿ ನಟಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...