Homeನಿಜವೋ ಸುಳ್ಳೋFact Check: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?

Fact Check: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?

- Advertisement -
- Advertisement -

ಟಿಕ್ ಟಾಕ್‌ ಬಳಕೆದಾರ ಶಾದಾಬ್ ಖಾನ್ ಅವರ ವೀಡಿಯೊವೊಂದನ್ನು ಎಲ್ಲಾ ಕಡೆ ಷೇರ್‌ ಮಾಡಿ ಕೊರೊನಾ ಹರಡುವುದೇಗೆಂದು ಈ ಮುಸ್ಲಿಂ ಯುವಕ ವಿಡಿಯೋ ಮಾಡಿ ಹಂಚುತ್ತಿದ್ದಾನೆ ಎಂಬ ಆರೋಪ ಮಾಡಲಾಗಿದೆ.

ಟ್ವಿಟರ್ ಬಳಕೆದಾರ ದೀಪಕ್ ಖಾಂಡ್ವಾಲ್ ಅವರು ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದು “ಶಬಾದ್ ಖಾನ್ ಟಿಕ್ ಟಾಕ್‌ನಲ್ಲಿ 11 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ ಮತ್ತು ಅವರು ಕರೋನವೈರಸ್ ಅನ್ನು ಹೇಗೆ ಹರಡಬೇಕೆಂದು ಪ್ರಚಾರ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ.

ಒಂದು ವಿಡಿಯೋದಲ್ಲಿ ಶಾದಾಬ್ ಖಾನ್ ತನ್ನ ಅಂಗೈಯನ್ನು ಉಗುಳಿನಿಂದ ತುಂಬಿಸಿ ಮಹಿಳೆಯ ಕೈ ಕುಲುಕುತ್ತಾನೆ. ಈ ವೀಡಿಯೊವನ್ನು ಹಂಚಿಕೊಂಡವರಲ್ಲಿ ಟ್ವಿಟರ್ ಬಳಕೆದಾರರಾದ ಬಾಲಾ ಮೊದಲಿಗರಾಗಿದ್ದಾರೆ. ಬಾಲಾ ಅವರನ್ನು ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಫಾಲೋ ಮಾಡುತ್ತಿದ್ದಾರೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

 

ಅದೇ ಕ್ಲಿಪ್ ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ. ಎಕ್ಸ್‌ಪೋಸ್ ದಿ ದೇಶ್ರೋಹಿಸ್ ಮತ್ತು ಮೋದಿ ಒನ್ಸ್ ಮೋರ್ ಎಂಬ ಫೇಸ್‌ಬುಕ್‌ ಪುಟಗಳಿಂದ ಇದು ಸಾವಿರಾರು ವೀಕ್ಷಣೆಗಳನ್ನು ಗಳಿಸಿದೆ. ರಣವೀರ್ ಗುಪ್ತಾ ಅವರ ಖಾತೆಯಿಂದ ಇದು 25 ಸಾವಿರ ವೀಕ್ಷಣೆಗಳನ್ನು ಪಡೆದಿದೆ, ಅವರು ಬಿಜೆಪಿಯಲ್ಲಿ ಯುವ ಕಾರ್ಯಕರ್ತ, ಆರ್‌ಎಸ್‌ಎಸ್‌ನಲ್ಲಿ ಸ್ವಯಂ ಸೇವಕ ಮತ್ತು ಎಬಿವಿಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.

ಫ್ಯಾಕ್ಟ್‌ ಚೆಕ್‌

ಕೊರೋನವೈರಸ್ ಭಾರತದಲ್ಲಿ ಹರಡಲು ಅಥವಾ ಭಾರತದಲ್ಲಿ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸುವ ಹಲವು ವಾರಗಳ ಮೊದಲು, ಅಂದರೆ ಫೆಬ್ರವರಿ 6, 2020 ರಂದು ವೀಡಿಯೊವನ್ನು ತಯಾರಿಸಲಾಗಿದೆ ಎಂದು ಸದಾಬ್ ಖಾನ್ ಅವರ ಟಿಕ್ ಟೋಕ್ ಪ್ರೊಫೈಲ್ ಮೂಲಕ ತಿಳಿಯಬಹುದಾಗಿದೆ. ಅಂದರೆ ಈ ವಿಡಿಯೋಗೂ ಕೊರೊನಾ ವೈರಸ್‌ಗೂ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಸದಾಬ್‌ ಖಾನ್‌ ಮುಸ್ಲಿಂ ಯುವಕನಾಗಿದ್ದರಿಂದ ಇದು ವೈರಲ್‌ ಆಗಿದೆ.

ಅಲ್ಲದೇ ಕರೋನ ವೈರಸ್‌ ಕುರಿತು ಜಾಗೃತಿಗೆ ಸಂಬಂಧಿಸಿದ ಹಲವಾರು ವೀಡಿಯೊಗಳನ್ನು ಸಹ ಖಾನ್ ಮಾಡಿದ್ದಾರೆ. ಅವರು ಮನೆಯಲ್ಲಿರಲು ಜನರಿಗೆ ಸಲಹೆ ನೀಡುತ್ತಿರುವ ಒಂದು ವಿಡಿಯೋ ಕೆಳಗಿದ ನೋಡಿ.

ಟಿಕ್‌ಟಾಕ್‌ ಅಷ್ಟೇನೂ ಒಳ್ಳೇಯ ಸಾಮಾಜಿಕ ಜಾಲತಾಣವಲ್ಲ. ಅದರಲ್ಲಿ ದ್ವೇಷಪೂರಿತ, ಸುಳ್ಳಿನಿಂದ ಕೂಡಿದ ವಿಡಿಯೋಗಳೇ ತುಂಬಿರುತ್ತವೆ. ಅತಿಹೆಚ್ಚಿನ ಮನರಂಜನೆಗಾಗಿ ಅತಿಹೆಚ್ಚಿನ ಸುಳ್ಳುಗಳು ಸೇರಿಕೊಳ್ಳುತ್ತವೆ.

ಅದೇ ರೀತಿಯಲ್ಲಿ ಇಲ್ಲಿ ಈ ಹಿಂದೆ ಟ್ರೋಲ್‌ ಮಾಡುವ ಸಲುವಾಗಿ ಮುಸ್ಲಿಂ ಯುವಕ ಶಬಾದ್‌ ಖಾನ್‌ ಮಾಡಿದ ವಿಡಿಯೋ ಕೊರೊನಾ ತೀವ್ರವಾಗಿ ಭೀತಿ ಹುಟ್ಟಿಸಿರುವ ಸಮಯದಲ್ಲಿ ವೈರಲ್‌ ಆಗಿದೆ. ಅಲ್ಲದೇ ಕೊರೊನಾ ಹರಡುತ್ತಿದ್ದಾರೆ ಎಂಬು ಕೋಮುವಾದಿ ಆಯಾಮವನ್ನು ಸಹ ನೀಡಲಾಗಿದೆ. ಆದರೆ ಅದೆಲ್ಲವೂ ಸುಳ್ಳಾಗಿದೆ. ಒಂದು ಧರ್ಮವನ್ನು ಗುರಿಯಾಗಿಸಿ ಪ್ರಚಾರ ಮಾಡಲು ಈ ರೀತಿಯ ವಿಡಿಯೋಗಳು ಸರಕಾಗಿ ಬಳಕೆಯಾಗುತ್ತಿವಿ.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ಇದನ್ನೂ ಓದಿ: ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Respected Sir/ Madam, I am reading articles from last one month in your webesite, I feel your publishing only one side favoured articles. Reality should have some base. I want inform you that I will continue as yours published articles if it says impartial truths. Otherwise I think you’re also sailing in the same boat.
    With regards
    S V GANESH

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...