Homeಮುಖಪುಟಪಂಜಾಬ್‌ನ ಈ ಖಾಸಗಿ ವಿವಿ ಆಗಲಿದೆಯೇ ದೇಶದ ಅತಿದೊಡ್ಡ ಕೊರೊನಾ ಹಾಟ್‌ಸ್ಪಾಟ್‌?

ಪಂಜಾಬ್‌ನ ಈ ಖಾಸಗಿ ವಿವಿ ಆಗಲಿದೆಯೇ ದೇಶದ ಅತಿದೊಡ್ಡ ಕೊರೊನಾ ಹಾಟ್‌ಸ್ಪಾಟ್‌?

ಹಿಂದೊಮ್ಮೆ ಈ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಈ ದೇಶದ ಪ್ರಧಾನಿ ನರೇಂದ್ರ ಮೋದಿಯೇ ಭಾಗವಹಿಸಿದ್ದರು ಎಂಬುದು ಉಲ್ಲೇಖಾರ್ಹ.

- Advertisement -
- Advertisement -

ದೆಹಲಿ ಸರ್ಕಾರದ ಕಟ್ಟುನಿಟ್ಟಿನ ಆಜ್ಞೆಗಳ ನಡುವೆಯೂ ಸುಮಾರು 2,000 ಜನ ಇದ್ದ ದೆಹಲಿಯ ತಬ್ಲಿಘಿ ಜಮಾತ್ ಸಮಾವೇಶ ನಡೆಯಿತು. ಇದರಲ್ಲಿ ಭಾಗವಹಿಸಿದ ಕೆಲವರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಾಗ ದೇಶಾದಾದ್ಯಂತ ದೊಡ್ಡ ಅಲ್ಲೋಲಕಲ್ಲೋಲ ಸೃಷ್ಟಿಯಾಯಿತು. ಇದು ಕೊರೊನಾ ಹಾಟ್‌ಸ್ಪಾಟ್ ಆದಾಗ ಮುಖ್ಯವಾಹಿನಿ ಮಾಧ್ಯಮಗಳು ಒಂದು ಕೋಮಿನ ವಿರುದ್ಧ ಕೆಂಡಕಾರಿ, ಇಡೀ ಸಮುದಾಯವನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದ್ದವು. ತಬ್ಲಿಘಿ ವೈರಸ್‌, ಜಿಹಾದಿ ವೈರಸ್‌ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ರೆಂಡಿಂಗ್‌ ಆಗಿದ್ದವು.

ಈಗ ಪಂಜಾಬ್ ರಾಜ್ಯದ Lovely Professional University ದೇಶದ ಮತ್ತೊಂದು ಕೊರೊನಾ ಹಾಟ್‌‌ಸ್ಪಾಟ್‌ ಆಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ. ಲಾಕ್‌ಡೌನ್‌ ಘೋಷಿಸಿ 25 ದಿನಗಳಾಗುತ್ತಿದ್ದರೂ 30,000 ವಿದ್ಯಾರ್ಥಿಗಳಿರುವ ದೇಶದ ಈ ದೊಡ್ಡ ಖಾಸಗಿ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ ಸಂಕೀರ್ಣಗಳಲ್ಲಿ 2100 ವಿದ್ಯಾರ್ಥಿಗಳು ಒಟ್ಟಿಗೆ ಇದ್ದು ಸಾಮಾಜಿಕ ಅಂತರ ಪಾಲಿಸಲಾಗಿಲ್ಲ ಎಂಬ ಭಯಾನಕ ಸುದ್ದಿ ಹೊರಬಿದ್ದಿದೆ. ಅಷ್ಟು ಮಾತ್ರವಲ್ಲದೇ ನೂರಾರು ವಿದೇಶಿ ವಿದ್ಯಾರ್ಥಿಗಳು ಇರುವ ಈ ಹಾಸ್ಟೆಲ್‌ನಲ್ಲಿ ಓರ್ವ ವಿದ್ಯಾರ್ಥಿಗೆ ಕೊರೋನಾ ಸೋಂಕಿರುವುದು ದೃಢಪಟ್ಟಿದೆ. ಈ ಪ್ರಕರಣ ಇಡೀ ದೇಶಕ್ಕೆ ದೊಡ್ಡ ಕಂಟಕವಾಗಿ ಪರಿಣಮಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. ಆದರೆ, ಈ ಕುರಿತು ಯಾವ ಮಾಧ್ಯಮಗಳೂ ದೊಡ್ಡದಾಗಿ ಸುದ್ದಿ ಮಾಡುತ್ತಿಲ್ಲದಿರುವುದು ಆಶ್ಚರ್ಯಕರವಾಗಿದೆ. ಇನ್ನೂ ಜನರಿಗಂತು ಇದು ಚರ್ಚೆಯ ವಿಷಯವೇ ಆಗಿಲ್ಲದಿರುವುದು ವಿಪರ್ಯಾಸ.

ಕೊರೋನಾ ಸೋಂಕು ಸಾಮೂದಾಯಿಕವಾಗಿ ಹರಡುವುದನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಈಗಾಗಲೇ ದೇಶದ ಮೇಲೆ ಎರಡು ಬಾರಿ ಲಾಕ್‌ಡೌನ್‌ ಘೋಷಿಸಿದೆ. ಉತ್ಪಾದನಾ ವಲಯದಿಂದ ಶಾಲಾ-ಕಾಲೇಜಿನವರೆಗೆ ಎಲ್ಲಾ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ಹೀಗಾಗಿ LPU ವಿಶ್ವವಿದ್ಯಾಲಯ ತನ್ನ ಎಲ್ಲಾ ವಿದ್ಯಾರ್ಥಿಗಳನ್ನೂ ಮನೆಗೆ ಕಳುಹಿಸಬೇಕಿತ್ತು. ಆದರೆ, ವಿದೇಶಿ ವಿದ್ಯಾರ್ಥಿಗಳನ್ನೂ ಕ್ಯಾಂಪಸ್‌ನಲ್ಲೇ ಇಟ್ಟುಕೊಂಡು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿದೆ.

ಈ ಕುರಿತು ಏಪ್ರಿಲ್.16 ರಂದು ಫಾಗ್ವಾರ ಜಿಲ್ಲಾಧಿಕಾರಿಗೆ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗುರ್ವಿಂದರ್ ಸಿಂಗ್ ಜೋಹಾಲ್ ನೀಡಿರುವ ವರದಿಯಲ್ಲಿ, “ಕ್ಯಾಂಪಸ್‌ನೊಳಗೆ ಕೇವಲ 315 ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಮಾತ್ರ ವಾಸಿಸುತ್ತಿದ್ದಾರೆ ಎಂದು ವಿಶ್ವವಿದ್ಯಾನಿಲಯವು ಮೊದಲಿಗೆ ತಿಳಿಸಿತ್ತು. ಆದರೆ, ಈಗ ಭಾರತೀಯ ವಿದ್ಯಾರ್ಥಿಗಳೂ ಸೇರಿ 2,100 ಜನ ಕ್ಯಾಂಪಸ್ ಒಳಗೆ ಇದ್ದಾರೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.

ಇದಲ್ಲದೆ, 570 ಮೆಸ್ ಕಾರ್ಮಿಕರು, 46 ವಾರ್ಡನ್‌ಗಳು ಮತ್ತು 179 ಬೋಧಕವರ್ಗದ ಸದಸ್ಯರೂ ಇದ್ದಾರೆ. ಈ ಪೈಕಿ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ಪ್ರಕರಣ ಬಯಲಾಗಿದೆ” ಎಂದು ತಿಳಿಸಿದ್ದಾರೆ.

ಈ ನಡುವೆ ಶುಕ್ರವಾರ ಕ್ಯಾಂಪಸ್ ಎದುರು ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಕಾರ್ಯಕರ್ತರು LPU ವಿಶ್ವವಿದ್ಯಾಲಯದ “ಪಂಜಾಬ್‌ನ ಹಾಟ್‌ಸ್ಪಾಟ್‌” ಆಗಿ ಮಾರ್ಪಟ್ಟಿದೆ. ಕ್ಯಾಂಪಸ್ ಸುತ್ತಲಿನ ಹಳ್ಳಿಗಳಿಗೂ ಈ ಮೂಲಕ ಆಘಾತವಾಗಿದೆ. ಹೀಗಾಗಿ ದೆಹಲಿಯ ಜಮಾಅತ್‌ ಮೇಲೆ ಆದಂತೆಯೇ ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು. ವಿಶ್ವವಿದ್ಯಾಲಯವನ್ನು ಮುಚ್ಚಬೇಕು ಎಂದು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ ನಿರ್ಬಂಧಗಳನ್ನು ಉಲ್ಲಂಘಿಸಿದ್ದಕ್ಕಾಗಿ ವಿಶ್ವವಿದ್ಯಾಲಯದ NOC ಯನ್ನು ಏಕೆ ಹಿಂಪಡೆಯಬಾರದು? ಎಂದು ಪಂಜಾಬ್‌ನ ಉನ್ನತ ಶಿಕ್ಷಣ ಮತ್ತು ಭಾಷಾ ಇಲಾಖೆ ಗುರುವಾರ ಈ ಸಂಸ್ಥೆಗೆ ಶೋಕಾಸ್ ನೋಟಿಸ್ ಸಹ ನೀಡಿದೆ.

ಹಿಂದೊಮ್ಮೆ ಈ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಈ ದೇಶದ ಪ್ರಧಾನಿ ನರೇಂದ್ರ ಮೋದಿಯೇ ಭಾಗವಹಿಸಿದ್ದರು ಎಂಬುದು ಉಲ್ಲೇಖಾರ್ಹ.

ಈ ನಡುವೆ ದೇಶದ ಅತಿದೊಡ್ಡ ಖಾಸಗಿ ವಿಶ್ವವಿದ್ಯಾಲಯವಾಗಿ LPU ಆರಂಭವಾದದ್ದು ಹೇಗೆ? ಈ ವಿವಿಯ ಘಟಿಕೋತ್ಸವಕ್ಕೆ ಸ್ವತಃ ದೇಶದ ಪ್ರಧಾನಿ ನರೇಂದ್ರ ಮೋದಿಯವರೇ ಭಾಗವಹಿಸುವಷ್ಟು ಎತ್ತರಕ್ಕೆ ಬೆಳೆದದ್ದು ಹೇಗೆ ಎಂದು ಹುಡುಕುತ್ತಾ ಹೋದರೆ ದೊಡ್ಡ ಖಾಸಗಿ ಲಾಬಿಯೊಂದು ಕಣ್ಣಮುಂದೆ ತೆರೆದುಕೊಳ್ಳುತ್ತದೆ.

LPU ವಿಶ್ವವಿದ್ಯಾಲಯ ಮತ್ತು ಖಾಸಗಿ ಲಾಬಿ

ಪಂಜಾಬ್ ಮೂಲಕ ದಿವಂಗತ ಬಲ್ದೇವ್ ರಾಜ್ ಮಿತ್ತಲ್ ಮತ್ತು ಕುಟುಂಬ ಅನೇಕ ಯಶಸ್ವಿ ವ್ಯವಹಾರದಲ್ಲಿ ಕೈಹಾಕಿ ಯಶಸ್ಸು ಗಳಿಸಿದ ನಂತರ 2005ರಲ್ಲಿ ಈ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದ್ದಾರೆ.

ಭಾರತದಲ್ಲಿ ಆವರೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅವಕಾಶ ಇತ್ತೇ ವಿನಃ ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ಇರಲಿಲ್ಲ. ಆದರೆ, ಈ ಕುಟುಂಬಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ 2005 ಪಂಜಾಬ್‌ನಲ್ಲಿ ಕಾನೂನನ್ನೇ ಬದಲಿಸಲಾಗಿತ್ತು.

ಈ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಂದಿನ ಪಂಜಾಬ್ ಸರ್ಕಾರ ವಿಧಾನಸಭೆಯಲ್ಲಿ The Lovely Professional University Act, 2005 ಅನ್ನು ಮಂಡಿಸಿ ಅನುಮೋದನೆ ಪಡೆದಿತ್ತು. ಪರಿಣಾಮ ಇದೇ ಹೆಸರಿನಲ್ಲಿ 2006ರಿಂದ 24,000 ವಿದ್ಯಾರ್ಥಿಗಳೊಂದಿಗೆ ಕಾರ್ಯ ಚಟುವಟಿಕೆ ಆರಂಭಿಸಿದ್ದ Lovely Professional University ಇಂದು ವಾರ್ಷಿಕ ಸಾವಿರಾರು ಕೋಟಿ ವ್ಯವಹಾರ ನಡೆಸುವ ಉದ್ಯಮವಾಗಿದೆ.

ಸ್ವತಃ ದೇಶದ ಪ್ರಧಾನಿ ನರೇಂದ್ರ ಮೋದಿ ಸಂಸತ್ ಅಧಿವೇಶನ ನಡೆಸುತ್ತಿರುವ ಸಮಯದಲ್ಲಿಯೇ ಸಂಸತ್‌ಗೆ ಬಾರದೇ ಈ ವಿಶ್ವವಿದ್ಯಾಲಯದ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ ಎಂದರೆ ಈ ವಿಶ್ವವಿದ್ಯಾಲಯದ ವರ್ಚಸ್ಸನ್ನು ತಿಳಿಯಬಹುದು.

ಇಂದು ಇದೇ ವಿಶ್ವವಿದ್ಯಾಲಯ ಕಾನೂನು ಉಲ್ಲಂಘಿಸಿದೆ. ದೆಹಲಿಯ ತಬ್ಲಿಘಿ ಮಾದರಿಯ ಮತ್ತೊಂದು ಅನಾಹುತಕ್ಕೆ ಎಡೆಮಾಡಿಕೊಟ್ಟಿದೆ. ಆದರೆ, ಈ ದೇಶದ ಕಾನೂನು ವ್ಯವಸ್ಥೆ ನಿಜಕ್ಕೂ ತಬ್ಲಿಘಿ ಆಯೋಜಕರ ವಿರುದ್ಧ ನಡೆದುಕೊಂಡಂತೆಯೇ ಈ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಾ? ಎಂಬುದನ್ನು ಮಾತ್ರ ಕಾದು ನೋಡಬೇಕಾಗಿದೆ.

ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...