Homeಮುಖಪುಟಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ.

- Advertisement -
- Advertisement -

ದೇಶದಲ್ಲಿ ಕಾರ್ಮಿಕರು ಇನ್ನುಮುಂದೆ 12 ಗಂಟೆ ಕೆಲಸ ಮಾಡಬೇಕು. ಕೇಂದ್ರ ಸರ್ಕಾರ ಇಂಥದ್ದೊಂದು ನಿಯಮ ರೂಪಿಸಿದ್ದು ಗುಜರಾತ್ ಸರ್ಕಾರ ಇದನ್ನು ಯಥಾವತ್ತಾಗಿ ಜಾರಿಗೆ ತಂದಿದೆ. ಇದುವರೆಗೆ ಎಂಟು ಗಂಟೆ ದುಡಿಯುತ್ತಿದ್ದ ಕಾರ್ಮಿಕರು ಈಗ 12 ಗಂಟೆಗಳು ಕೆಲಸದ ಸ್ಥಳದಲ್ಲೇ ಉಳಿಯುವ ಪರಿಸ್ಥಿತಿ ಬರಲಿದೆ. ಅಂದರೆ ಕಾರ್ಮಿಕರು ಮತ್ತೆ ನಾಲ್ಕು ಗಂಟೆ ಹೆಚ್ಚುವರಿ ಕೆಲಸ ಮಾಡಬೇಕಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹೊಸ ನಿಯಮ ಜಾರಿಗೆ ಬಂದರೆ ಮಾಲಿಕರ ಆದಾಯ, ಲಾಭಾಂಶ ಹೆಚ್ಚಳಕ್ಕೆ ದಾರಿಯಾಗಲಿದೆ ಮತ್ತು ಕಾರ್ಮಿಕರು ಮಾನಸಿಕ, ದೈಹಿಕ ಒತ್ತಡಗಳಿಗೆ ಸಿಲುಕಿ ಆರೋಗ್ಯ ಕ್ಷೀಣವಾಗುವ ಸಾಧ್ಯತೆ ಹೆಚ್ಚಾಗಿದೆ.

ಕೈಗಾರಿಕೆಗಳು ಆರಂಭವಾದ ದಿನಗಳಲ್ಲಿ ಕಾರ್ಮಿಕರು ಜೀತದಾಳುಗಳಂತೆ, ಪಶುಗಳಂತೆ ದುಡಿಯುತ್ತಿದ್ದರು. ಕೆಲಸ ಮಾಡುವ ಸ್ಥಳದಲ್ಲಿ ಅವರಿಗೆ ಯಾವುದೇ ಸೌಲಭ್ಯಗಳು ಇರಲಿಲ್ಲ. ಹೋರಾಟಗಳು ತೀವ್ರಗೊಂಡ ಬಳಿಕ ವಿಶ್ವದಲ್ಲಿ ಸೂಕ್ತ ವ್ಯವಸ್ಥೆ ಜಾರಿಗೆ ಬಂತು. ಪರಿಣಾಮ ಕಾರ್ಮಿಕರು ಎಂಟು ದುಡಿಯಲು ಅವಕಾಶವಾಯಿತು. ಇದೇವೇಳೆ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ಒಡಂಬಡಿಕೆಗೆ ಹಲವು ದೇಶಗಳು ಸಹಿ ಹಾಕಿದವು. ಅದರಲ್ಲಿ ಭಾರತವೂ ಒಂದು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಹೊಸ ಕಾನೂನು ತಂದು ಐಎಲ್ಒ  ಒಡಂಬಡಿಕೆಯನ್ನು ಉಲ್ಲಂಘಿಸಿದೆ. ಈ ಮೂಲಕ ದೇಶದಲ್ಲಿ ನಿರುದ್ಯೋಗದ ಹೆಚ್ಚಳಕ್ಕೆ ಮಾರ್ಗ ಕಲ್ಪಿಸಿದೆ. ನಿರುದ್ಯೋಗಿಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿರುವ ಹೊತ್ತಿನಲ್ಲಿ ಇಂಥ ಮಾರಕವಾದ ಕಾನೂನು ತಂದು ಕೇಂದ್ರ ಸರ್ಕಾರ ಬಂಡವಾಳಿಗರ ಪರ ತಾನಿದ್ದೇನೆ ಎಂಬುದನ್ನು  ಸಾಬೀತುಪಡಿಸಿದೆ.

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ. ಕಾರ್ಮಿಕರಿಗೆ ಸಂಬಳ ಕಡಿಮೆ ಮಾಡುವ ಹುನ್ನಾರವೂ ಇದೆ. ಕೆಲಸದ ಅವಧಿ ಕಡಿಮೆ ಮಾಡಬೇಕೇ ವಿನಃ ಹೆಚ್ಚಳ ಮಾಡುವುದು ಸರ್ವಸಮ್ಮತವಲ್ಲ. ಕೇಂದ್ರದ ಈ ಕ್ರಮದಿಂದ ಹಲವರು ಉದ್ಯೋಗ ಕಳೆದುಕೊಳ್ಳುತ್ತಾರೆ. ನಿರುದ್ಯೋಗಿಗಳ ಸಂಖ್ಯೆ ಅಧಿಕವಾಗುತ್ತದೆ. ಹಾಗಾಗಿ ಸರ್ಕಾರ ಈಗಿರುವ ಪಾಳಿಯ ಅವಧಿಯನ್ನು ಕಡಿಮೆ ಮಾಢಬೇಕು. ಒಂದು ಪಾಳಿ 4 ರಿಂದ 6 ಗಂಟೆಗೆ ಇಳಿಸಿದರೆ ಎಲ್ಲರಿಗೂ ಉದ್ಯೋಗ ದೊರೆಯುತ್ತದೆ. ಪಾಳಿಗಳೂ ಹೆಚ್ಚಿ ಉತ್ಪಾದನೆ ದ್ವಿಗುಣವಾಗುತ್ತದೆ. ಆದರೆ ಕೇಂದ್ರ ಸರ್ಕಾರಕ್ಕೆ ಕಾರ್ಮಿಕರ ಹಿತಕ್ಕಿಂದ ಮಾಲಿಕರಿಗೆ ಸಹಕರಿಸುವುದು ಮುಖ್ಯವಾಗಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ನಾನುಗೌರಿ.ಕಾಂಗೆ ತಿಳಿಸಿದರು.

ಕಾರ್ಮಿಕ ಸಂಘಟನೆಗಳ ವ್ಯಾಪಕ ವಿರೋಧದ ನಡುವೆಯೇ ಗುಜರಾತ್ ಸರ್ಕಾರ ಕಾರ್ಮಿಕರನ್ನು 12 ಗಂಟೆ ದುಡಿಸಿಕೊಳ್ಳುತ್ತಿದ್ದು ಕೇಂದ್ರ ಸರ್ಕಾರದ ಕಾನೂನನ್ನು ದೇಶದಲ್ಲೇ ಮೊದಲು ಜಾರಿಗೆ ತಂದ ರಾಜ್ಯವಾಗಿದೆ.  ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಕೇಂದ್ರದ ಕಾನೂನು ಯಥಾವತ್ತು ಜಾರಿಯಾಗಲಿದೆ. ರಾಜ್ಯ ಸರ್ಕಾರಗಳಿಗೆ ಕೇಂದ್ರದ ನಿಯಮವನ್ನು ನಿರಾಕರಿಸುವ ಅಧಿಕಾರವಿದೆ. ಆದರೂ ರಾಜ್ಯದಲ್ಲಿ ಈ ಕಾನೂನು ಜಾರಿಗೊಂಡರೆ ಪ್ರತಿಯೊಬ್ಬ ಕಾರ್ಮಿಕರು 12 ಗಂಟೆ ದುಡಿಯುವುದು ಕಡ್ಡಾಯವಾಗಲಿದೆ. ಕೆಲಸದ ಅವಧಿ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಕಾರ್ಮಿಕರು ಅದರಲ್ಲೂ ಮಹಿಳಾ ಕಾರ್ಮಿಕರು ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ.  24 ಗಂಟೆಗೆ ಮೂರು ಪಾಳಿಗಳಿದ್ದವು ಇನ್ನು ಮುಂದೆ ಎರಡೇ ಪಾಳಿಯಾಗಲಿವೆ. ಕುಟುಂಬದೊಂದಿಗೆ ಕಾರ್ಮಿಕರು ಕಾಲ ಕಳೆಯುವುದು ತಪ್ಪಲಿದ್ದು ಮಾನಸಿಕ ಖಿನ್ನತೆಗೆ ಒಳಗಾಗಲಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವುದನ್ನೇ ಲಾಭ ಮಾಢಿಕೊಂಡು ಹೋರಾಟಗಳನ್ನು ರೂಪಿಸಲು ಆಗದಂತಹ ಪರಿಸ್ಥಿತಿಯಲ್ಲಿ ಇಂಥದ್ದೊಂದು ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಕೇಂದ್ರದ ಅವೈಜ್ಞಾನಿಕ ತೀರ್ಮಾನದಿಂದ ಶೇಕಡ 40ರಷ್ಟು ಉದ್ಯೋಗಗಳಿಗೆ ಕತ್ತರಿ ಬೀಳಲಿದೆ. ದೊಡ್ಡ ಪ್ರಮಾಣದ ನಿರುದ್ಯೋಗಕ್ಕೆ ಭಾಷ್ಯ ಬರೆಯಲಿದೆ. ಸಮಾಜದಲ್ಲಿ ಅಸಮತೋಲನ ಉಂಟಾಗಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಲು ಕಾರಣವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ. ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುವ ಕಾರ್ಮಿಕರಿಗೆ ಕೇಂದ್ರದ ತೀರ್ಮಾನ ಮರಣಶಾಸನವಾಗಿದೆ. ಮೊದಲ ಅವಧಿಯಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 12 ಗಂಟೆ ಕೆಲಸದ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಇದಕ್ಕೆ ವಿರೋಧ ವ್ಯಕ್ತವಾಗಿದ್ದರಿಂದ ವಾಪಸ್ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು. ಈಗಲೂ ಕೇಂದ್ರ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕಿದೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...