HomeಮುಖಪುಟNPRಗೂ ಆರೋಗ್ಯ ಸಮೀಕ್ಷೆಗೂ ಸಂಬಂಧವಿಲ್ಲ- ಸಮೀಕ್ಷೆ ನಡೆಸುವ ಆಶಾ ಕಾರ್ಯಕರ್ತರಿಗೆ ಸಹಕಾರ ನೀಡಿ: ಪಿಎಫ್‌ಐ

NPRಗೂ ಆರೋಗ್ಯ ಸಮೀಕ್ಷೆಗೂ ಸಂಬಂಧವಿಲ್ಲ- ಸಮೀಕ್ಷೆ ನಡೆಸುವ ಆಶಾ ಕಾರ್ಯಕರ್ತರಿಗೆ ಸಹಕಾರ ನೀಡಿ: ಪಿಎಫ್‌ಐ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಬ್ಬುತ್ತಿರುವ ಸಾಂಕ್ರಾಮಿಕವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಆರೋಗ್ಯ ಸಮೀಕ್ಷೆ ನಡೆಸಲು ಮುಂದಾಗಿರುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತರಿಗೆ ಮುಸ್ಲಿಂ ಸಮುದಾಯವು ಸಂಪೂರ್ಣ ಸಹಕಾರ ನೀಡುವಂತೆ ಪಾಪ್ಯುಲರ್‌ ಪ್ರಂಟ್‌ ಆಫ್‌ ಇಂಡಿಯಾ ಮನವಿ ಮಾಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ದಕ್ಷಿಣ ಕನ್ನಡದ ಪಿಎಫ್‌ಐ ಜಿಲ್ಲಾಧ್ಯಕ್ಷ ಇಜಾಝಝ್ ಅಹ್ಮದ್ “ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ರವರು ಆರೋಗ್ಯ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ಕೋರಿಕೊಂಡಿದ್ದಾರೆ. ಎನ್‌ಪಿಆರ್ ಸಮೀಕ್ಷೆಯನ್ನು ಎಪ್ರಿಲ್ 15ರಂದು ಪ್ರಾರಂಭಿಸುವ ಬಗ್ಗೆ ಈ ಹಿಂದೆ ಸರಕಾರವು ಅಧಿಕೃತ ಆದೇಶ ಹೊರಡಿಸಿತ್ತು. ಆದರೆ ಕೊರೋನದ ಸನ್ನಿವೇಶದಲ್ಲಿ ಅದನ್ನು ಮುಂದೂಡಲಾಗಿದ್ದು, ಇದರ ದಿನಾಂಕವನ್ನು ಇನ್ನೂ ನಿಗದಿಪಡಿಸಲಾಗಿಲ್ಲ. ಎನ್‌ಪಿಆರ್‌ ಪ್ರಕ್ರಿಯೆಗೂ, ಈ  ಸಮೀಕ್ಷೆಗೂ ಯಾವುದೇ ರೀತಿಯ ಸಂಬಂಧವಿಲ್ಲ. ಹಾಗಾಗಿ ಸಮೀಕ್ಷೆ ನಡೆಸವು ನಾವೆಲ್ಲರೂ ಆಶಾಕಾರ್ಯಕರ್ತರಿಗೆ ಸಹಕಾರ ನೀಡೋಣ” ಎಂದಿದ್ದಾರೆ.


ಇದನ್ನೂ ಓದಿ: ಕರೋನಾಕ್ಕೆ ಕೊನೆಯಿದ್ದೀತು, ಆದರೆ ಈ ಮುಸ್ಲಿಮ್ ದ್ವೇಷಕ್ಕೆ ಮದ್ದೇನು?


ಈ ಆರೋಗ್ಯ ಸಮೀಕ್ಷೆ ಯ ವೇಳೆ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಯಾವುದೇ ಗೊಂದಲ ಹಾಗೂ ತಪ್ಪುಗ್ರಹಿಕೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳಬಾರದು. ಈ ಸಮೀಕ್ಷೆಯಲ್ಲಿ ಕೇಳಲಾಗುವ ಮಾಹಿತಿಗಳ ಕುರಿತು ಬಹಳ ಸ್ಪಷ್ಟವಾಗಿ ವಿವರಿಸಲಾಗಿದೆ. ಮನೆಯ ಯಜಮಾನರ ಹೆಸರು, ಮೊಬೈಲ್ ನಂಬರ್, ಮನೆಯಲ್ಲಿ ಪ್ರಸ್ತುತವಿರುವ ಒಟ್ಟು ಸದಸ್ಯರ ಸಂಖ್ಯೆ ಮತ್ತು ಮನೆಮಂದಿಗೆ ಯಾವುದಾದರೂ ರೋಗ ಲಕ್ಷಣಗಳಿರುವ ಕುರಿತ ಆರೋಗ್ಯ ಸಂಬಂಧಿ ಮಾಹಿತಿಗಳನ್ನಷ್ಟೇ ಕೇಳಲಾಗುತ್ತದೆ. ಈ ಆರೋಗ್ಯ ಸಮೀಕ್ಷೆಗೆ ಎಲ್ಲರೂ ಸಹಕಾರ ನೀಡಿ ಜಿಲ್ಲಾಡಳಿತದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ಅದೇ ರೀತಿ ನಮ್ಮ ದೇಶದ, ಸಮಾಜದ ಒಳಿತಿಗಾಗಿ ಮತ್ತು ನಮ್ಮ ಆರೋಗ್ಯದ ಹಿತದಷ್ಟಿಯಿಂದ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸ್ವಯಂ ಸೇವಕರ ಸೇವೆಯನ್ನು ನಾವು ಈ ಸಂದರ್ಭದಲ್ಲಿ ಶ್ಲಾಘಿಸಬೇಕು ಮತ್ತು ಅವರನ್ನು ಗೌರವಿಸಬೇಕು. ಈ ನಿಟ್ಟಿನಲ್ಲಿ ಮನೆ ಮನೆ ಭೇಟಿ ಕೊಡುವ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಮೀಕ್ಷೆಯ ಸ್ವಯಂ ಸೇವಕರಿಗೆ ಸಮರ್ಪಕ ಮಾಹಿತಿ ನೀಡಿ ಸಹಕರಿಸಬೇಕು” ಎಂದು ಕೂಡ ಕರಪತ್ರವೊಂದನ್ನು ಮುದ್ರಿಸಿ ಹಂಚುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಯಾವುದೇ ಹೊಸ ಪ್ರಕರಣಗಳು ದಾಖಲಾಗಿರಲಿಲ್ಲ. ಆದರೆ ಇತ್ತೀಚೆಗೆ ಪ್ರಕರಣವೊಂದು ಕಾಣಿಸಿಕೊಂಡಿದ್ದು, ಜಿಲ್ಲಾಡಳಿತ ಆರೋಗ್ಯ ಸಮೀಕ್ಷೆ ಗೆ ಮುಂದಾಗಿದೆ.

ಏಪ್ರಿಲ್ ಮೊದಲ ವಾರದಲ್ಲಿ ಬೆಂಗಳೂರಿನ ಸಾರಾಯಿಪಾಳ್ಯದ ಸಾದಿಕ್ ಲೇಔಟ್ ನಲ್ಲಿ ಕೊವಿಡ್-19 ತಪಾಸಣೆ ಮಾಡಲು ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಪ್ರಯತ್ನಿಸಲಾಗಿದೆ ಎಂಬ ಆರೋಪ ಕೋಮು ಬಣ್ಣ ಪಡೆದಿತ್ತು. ಅಲ್ಲಿನ ನಿವಾಸಿಗಳು ಹಂಚಿಕೊಂಡ ಮಾಹಿತಿಯ ಪ್ರಕಾರ, ಅಲ್ಲಿನ ಕೆಲವು ನಿವಾಸಿಗಳು ಕೊರೊನಾ ಆರೋಗ್ಯ ತಪಾಸಣೆಯನ್ನು, ಎನ್‌ಪಿಆರ್ ಪ್ರಕ್ರಿಯೆ ಎಂದು ಗೊಂದಲ ಮಾಡಿಕೊಂಡು ಆಗಿದ್ದ ಮಾತಿನ ಚಕಮಕಿಯಾಗಿತ್ತು. ನಂತರ ಸಮುದಾಯದ ಮುಖಂಡರು ಇದರ ಬಗ್ಗೆ ಸಾಮಾನ್ಯರಿಗೆ ತಿಳಿ ಹೇಳಿ ಅಗತ್ಯ ಮಾಹಿತಿ ನೀಡಲು ಕೇಳಿಕೊಂಡಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...