HomeಮುಖಪುಟNPRಗೂ ಆರೋಗ್ಯ ಸಮೀಕ್ಷೆಗೂ ಸಂಬಂಧವಿಲ್ಲ- ಸಮೀಕ್ಷೆ ನಡೆಸುವ ಆಶಾ ಕಾರ್ಯಕರ್ತರಿಗೆ ಸಹಕಾರ ನೀಡಿ: ಪಿಎಫ್‌ಐ

NPRಗೂ ಆರೋಗ್ಯ ಸಮೀಕ್ಷೆಗೂ ಸಂಬಂಧವಿಲ್ಲ- ಸಮೀಕ್ಷೆ ನಡೆಸುವ ಆಶಾ ಕಾರ್ಯಕರ್ತರಿಗೆ ಸಹಕಾರ ನೀಡಿ: ಪಿಎಫ್‌ಐ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಬ್ಬುತ್ತಿರುವ ಸಾಂಕ್ರಾಮಿಕವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಆರೋಗ್ಯ ಸಮೀಕ್ಷೆ ನಡೆಸಲು ಮುಂದಾಗಿರುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತರಿಗೆ ಮುಸ್ಲಿಂ ಸಮುದಾಯವು ಸಂಪೂರ್ಣ ಸಹಕಾರ ನೀಡುವಂತೆ ಪಾಪ್ಯುಲರ್‌ ಪ್ರಂಟ್‌ ಆಫ್‌ ಇಂಡಿಯಾ ಮನವಿ ಮಾಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ದಕ್ಷಿಣ ಕನ್ನಡದ ಪಿಎಫ್‌ಐ ಜಿಲ್ಲಾಧ್ಯಕ್ಷ ಇಜಾಝಝ್ ಅಹ್ಮದ್ “ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ರವರು ಆರೋಗ್ಯ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ಕೋರಿಕೊಂಡಿದ್ದಾರೆ. ಎನ್‌ಪಿಆರ್ ಸಮೀಕ್ಷೆಯನ್ನು ಎಪ್ರಿಲ್ 15ರಂದು ಪ್ರಾರಂಭಿಸುವ ಬಗ್ಗೆ ಈ ಹಿಂದೆ ಸರಕಾರವು ಅಧಿಕೃತ ಆದೇಶ ಹೊರಡಿಸಿತ್ತು. ಆದರೆ ಕೊರೋನದ ಸನ್ನಿವೇಶದಲ್ಲಿ ಅದನ್ನು ಮುಂದೂಡಲಾಗಿದ್ದು, ಇದರ ದಿನಾಂಕವನ್ನು ಇನ್ನೂ ನಿಗದಿಪಡಿಸಲಾಗಿಲ್ಲ. ಎನ್‌ಪಿಆರ್‌ ಪ್ರಕ್ರಿಯೆಗೂ, ಈ  ಸಮೀಕ್ಷೆಗೂ ಯಾವುದೇ ರೀತಿಯ ಸಂಬಂಧವಿಲ್ಲ. ಹಾಗಾಗಿ ಸಮೀಕ್ಷೆ ನಡೆಸವು ನಾವೆಲ್ಲರೂ ಆಶಾಕಾರ್ಯಕರ್ತರಿಗೆ ಸಹಕಾರ ನೀಡೋಣ” ಎಂದಿದ್ದಾರೆ.


ಇದನ್ನೂ ಓದಿ: ಕರೋನಾಕ್ಕೆ ಕೊನೆಯಿದ್ದೀತು, ಆದರೆ ಈ ಮುಸ್ಲಿಮ್ ದ್ವೇಷಕ್ಕೆ ಮದ್ದೇನು?


ಈ ಆರೋಗ್ಯ ಸಮೀಕ್ಷೆ ಯ ವೇಳೆ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಯಾವುದೇ ಗೊಂದಲ ಹಾಗೂ ತಪ್ಪುಗ್ರಹಿಕೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳಬಾರದು. ಈ ಸಮೀಕ್ಷೆಯಲ್ಲಿ ಕೇಳಲಾಗುವ ಮಾಹಿತಿಗಳ ಕುರಿತು ಬಹಳ ಸ್ಪಷ್ಟವಾಗಿ ವಿವರಿಸಲಾಗಿದೆ. ಮನೆಯ ಯಜಮಾನರ ಹೆಸರು, ಮೊಬೈಲ್ ನಂಬರ್, ಮನೆಯಲ್ಲಿ ಪ್ರಸ್ತುತವಿರುವ ಒಟ್ಟು ಸದಸ್ಯರ ಸಂಖ್ಯೆ ಮತ್ತು ಮನೆಮಂದಿಗೆ ಯಾವುದಾದರೂ ರೋಗ ಲಕ್ಷಣಗಳಿರುವ ಕುರಿತ ಆರೋಗ್ಯ ಸಂಬಂಧಿ ಮಾಹಿತಿಗಳನ್ನಷ್ಟೇ ಕೇಳಲಾಗುತ್ತದೆ. ಈ ಆರೋಗ್ಯ ಸಮೀಕ್ಷೆಗೆ ಎಲ್ಲರೂ ಸಹಕಾರ ನೀಡಿ ಜಿಲ್ಲಾಡಳಿತದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ಅದೇ ರೀತಿ ನಮ್ಮ ದೇಶದ, ಸಮಾಜದ ಒಳಿತಿಗಾಗಿ ಮತ್ತು ನಮ್ಮ ಆರೋಗ್ಯದ ಹಿತದಷ್ಟಿಯಿಂದ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸ್ವಯಂ ಸೇವಕರ ಸೇವೆಯನ್ನು ನಾವು ಈ ಸಂದರ್ಭದಲ್ಲಿ ಶ್ಲಾಘಿಸಬೇಕು ಮತ್ತು ಅವರನ್ನು ಗೌರವಿಸಬೇಕು. ಈ ನಿಟ್ಟಿನಲ್ಲಿ ಮನೆ ಮನೆ ಭೇಟಿ ಕೊಡುವ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಮೀಕ್ಷೆಯ ಸ್ವಯಂ ಸೇವಕರಿಗೆ ಸಮರ್ಪಕ ಮಾಹಿತಿ ನೀಡಿ ಸಹಕರಿಸಬೇಕು” ಎಂದು ಕೂಡ ಕರಪತ್ರವೊಂದನ್ನು ಮುದ್ರಿಸಿ ಹಂಚುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಯಾವುದೇ ಹೊಸ ಪ್ರಕರಣಗಳು ದಾಖಲಾಗಿರಲಿಲ್ಲ. ಆದರೆ ಇತ್ತೀಚೆಗೆ ಪ್ರಕರಣವೊಂದು ಕಾಣಿಸಿಕೊಂಡಿದ್ದು, ಜಿಲ್ಲಾಡಳಿತ ಆರೋಗ್ಯ ಸಮೀಕ್ಷೆ ಗೆ ಮುಂದಾಗಿದೆ.

ಏಪ್ರಿಲ್ ಮೊದಲ ವಾರದಲ್ಲಿ ಬೆಂಗಳೂರಿನ ಸಾರಾಯಿಪಾಳ್ಯದ ಸಾದಿಕ್ ಲೇಔಟ್ ನಲ್ಲಿ ಕೊವಿಡ್-19 ತಪಾಸಣೆ ಮಾಡಲು ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಪ್ರಯತ್ನಿಸಲಾಗಿದೆ ಎಂಬ ಆರೋಪ ಕೋಮು ಬಣ್ಣ ಪಡೆದಿತ್ತು. ಅಲ್ಲಿನ ನಿವಾಸಿಗಳು ಹಂಚಿಕೊಂಡ ಮಾಹಿತಿಯ ಪ್ರಕಾರ, ಅಲ್ಲಿನ ಕೆಲವು ನಿವಾಸಿಗಳು ಕೊರೊನಾ ಆರೋಗ್ಯ ತಪಾಸಣೆಯನ್ನು, ಎನ್‌ಪಿಆರ್ ಪ್ರಕ್ರಿಯೆ ಎಂದು ಗೊಂದಲ ಮಾಡಿಕೊಂಡು ಆಗಿದ್ದ ಮಾತಿನ ಚಕಮಕಿಯಾಗಿತ್ತು. ನಂತರ ಸಮುದಾಯದ ಮುಖಂಡರು ಇದರ ಬಗ್ಗೆ ಸಾಮಾನ್ಯರಿಗೆ ತಿಳಿ ಹೇಳಿ ಅಗತ್ಯ ಮಾಹಿತಿ ನೀಡಲು ಕೇಳಿಕೊಂಡಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...