Homeನಿಜವೋ ಸುಳ್ಳೋಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES...

ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ?

- Advertisement -
- Advertisement -

ಪ್ರಧಾನಿ ಮಂತ್ರಿ ಪರಿಹಾರ ನಿಧಿ ಇದ್ದಾಗಲೂ ನಮ್ಮ ಪ್ರಧಾನಿ ಮೋದಿಯವರು ಪಿಎಂಕೇರ್ ನಿಧಿಯನ್ನು ಏಕೆ ರಚಿಸಿದರು ಎಂದು ವಿರೋಧ ಪಕ್ಷಗಳು ಪ್ರಶ್ನೆ ಮಾಡುತ್ತಿವೆ. ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯನ್ನು ಜವಾಹರಲಾಲ್ ನೆಹರು ಸ್ಥಾಪಿಸಿದರು. ಅಲ್ಲದೇ ಆ ಸಮಿತಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ಸದಸ್ಯರನ್ನಾಗಿ ಮಾಡಿದರು.

“ಈಗ ಯೋಚಿಸಿ ಅದು ಸರ್ಕಾರಿ ನಿಧಿಯಾಗಿದ್ದಾಗ ಯಾವುದೇ ರಾಜಕೀಯ ಪಕ್ಷದ ಅಧ್ಯಕ್ಷರು ಆ ನಿಧಿಯ ಟ್ರಸ್ಟಿಯನ್ನು ಏಕೆ ಮಾಡಬೇಕು? ಇಂದಿಗೂ, ಸೋನಿಯಾ ಗಾಂಧಿಯವರ ಸಹಿ ಅಥವಾ ಒಪ್ಪಿಗೆಯಿಲ್ಲದೆ ಮೋದಿಯವರುಪ್ರಧಾನಿ ಮಂತ್ರಿ ಪರಿಹಾರ ನಿಧಿಯಿಂದ ಹಣವನ್ನು ಖರ್ಚು ಮಾಡಲು ಸಾಧ್ಯವಿಲ್ಲ. ಇದು ಭಯಾನಕ ಸತ್ಯ” ಎಂದು ಬಲಪಂಥೀಯ ಸುಳ್ಳು ಸುದ್ದಿ ಹರಡುವ ಒಪಿಇಂಡಿಯಾ, ಸ್ವರಾಜ್‌ನಂತರ ವೆಬ್‌ಸೈಟ್‌ಗಳು ಸುದ್ದಿ ಮಾಡಿವೆ.

ಆದ್ದರಿಂದ ಸೋನಿಯಾ ಗಾಂಧಿಯವರ ಹಿಡಿತದಿಂದ ಮುಕ್ತರಾಗಲು ಮೋದಿ ಹೊಸ ನಿಧಿ ಪಿಎಂ ಕೇರ್ ಅನ್ನು ರಚಿಸಿದರು ಎಂದು ಅವು ವಾದ ಮಾಡಿವೆ

ಫ್ಯಾಕ್ಟ್‌ಚೆಕ್‌

ಪ್ರಧಾನ ಮಂತ್ರಿಗಳ ನಿಧಿಯಿಂದ ಹಣ ತೆಗೆಯಲು ಸೋನಿಯಾಗಾಂಧಿಯವರ ಅನುಮೋದನೆ ಅಗತ್ಯವಿಲ್ಲ ಎಂದು ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ಪ್ರಧಾನ ಮಂತ್ರಿಯ ವಿವೇಚನೆಯಿಂದ ನಿಧಿಯ ಹಣವನ್ನು ವಿತರಿಸಲಾಗುತ್ತದೆ ಎಂದು ಸಹ ಅಲ್ಲಿ ನಮೂದಿಸಲಾಗಿದೆ. ಈ ಹಿಂದೆ ಈ ನಿಧಿಯನ್ನು ಒಂದು ಸಮಿತಿಯು ನಿರ್ವಹಿಸುತ್ತಿತ್ತು (ಇದರಲ್ಲಿ ಕಾಂಗ್ರೆಸ್ ಅಧ್ಯಕ್ಷರು ಸದಸ್ಯರಾಗಿದ್ದರು), ಆದರೆ 1985 ರಲ್ಲಿ, ಎಲ್ಲಾ ಅಧಿಕಾರಗಳನ್ನು ಪ್ರಧಾನ ಮಂತ್ರಿಗೆ ವರ್ಗಾಯಿಸಲಾಯಿತು. ಆದ್ದರಿಂದ ಒಪಿ ಇಂಡಿಯಾ ಮತ್ತು ಸ್ವರಾಜ್‌ ಹೇಳಿರುವುದು ಸಂಪೂರ್ಣ ಸುಳ್ಳುಗಳಾಗಿವೆ.

ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ, ಈ ನಿಧಿಯನ್ನು 1948 ರಲ್ಲಿ ಸ್ಥಾಪಿಸಲಾಯಿತು ಎಂದು ಕಾಣಬಹುದು. ಪ್ರಾರಂಭದ ಸಮಯದಲ್ಲಿ, ನಿಧಿಯನ್ನು ನಿರ್ವಹಿಸಲು ಒಂದು ಸಮಿತಿಯನ್ನು ರಚಿಸಲಾಯಿತು. ‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರು’ ವ್ಯವಸ್ಥಾಪನಾ ಸಮಿತಿಯ ಸದಸ್ಯರಲ್ಲಿ ಒಬ್ಬರಾಗಿದ್ದರು.

ಆದರೆ ಪ್ರಸ್ತುತ, ಪಿಎಂಎನ್‌ಆರ್‌ಎಫ್ ವೆಬ್‌ಸೈಟ್‌ನಲ್ಲಿ, ‘ನಿಧಿಯಿಂದ ಹಣ ವಿತರಿಸುವುದು ಪ್ರಧಾನಮಂತ್ರಿಯ ವಿವೇಚನೆಯಿಂದ ಮತ್ತು ಪ್ರಧಾನ ಮಂತ್ರಿಯ ನಿರ್ದೇಶನಗಳಿಗೆ ಅನುಗುಣವಾಗಿ’ ಎಂದು ಓದಬಹುದು. ಆದ್ದರಿಂದ, ಕಾಂಗ್ರೆಸ್ ಅಧ್ಯಕ್ಷರಿಂದ ಅಂತಹ ಯಾವುದೇ ಅನುಮೋದನೆ ಅಗತ್ಯವಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಅಲ್ಲದೇ ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ, ‘1985 ರಲ್ಲಿ, ಪಿಎಂಎನ್‌ಆರ್‌ಎಫ್‌ನ ವ್ಯವಸ್ಥಾಪನಾ ಸಮಿತಿಯು ಈ ಪರಿಹಾ ನಿಧಿ ಯ ಸಂಪೂರ್ಣ ನಿರ್ವಹಣೆಯನ್ನು ಪ್ರಧಾನಮಂತ್ರಿಯವರಿಗೆ ವಹಿಸಿತ್ತು. ಅದನ್ನು ನಿರ್ವಹಿಸಲು ನಿಧಿಯ ಕಾರ್ಯದರ್ಶಿಯನ್ನು ನೇಮಿಸುವ ವಿವೇಚನೆಯನ್ನು ನೀಡಲಾಯಿತು’.

ಇಷ್ಟೆಲ್ಲಾ ಆಧಾರಗಳಿರುವುದರಿಂದ ಪ್ರಧಾನ ಮಂತ್ರಿಯವರ ಪರಿಹಾರ ನಿಧಿ ಯಿಂದ ಹಣವನ್ನು ಬಳಸಲು ಕಾಂಗ್ರೆಸ್‌ ಅಧ್ಯಕ್ಷರ ಅನುಮೋದನೆ ಬೇಕಿಲ್ಲ ಎಂಬುದು ಮತ್ತಷ್ಟು ಸ್ಪಷ್ಟವಾಗುತ್ತದೆ. ಆದರೂ ಸಹ ಪಿಎಂ ಕೇರ್ಸ್‌ ಅನ್ನು ಪ್ರಧಾನಿಗಳು ಏಕೆ ಆರಂಭಿಸಿದರು ಎಂಬುದಕ್ಕೆ ಮೋದಿಯಾಗಲಿ, ಒಪಿ ಇಂಡಿಯಾ, ಸ್ವರಾಜ್ ವೆಬ್‌ಸೈಟ್‌ಗಳಾಗಲಿ ಸ್ಪಷ್ಟ ಕಾರಣಗಳನ್ನು ನೀಡಿಲ್ಲ. ಬದಲಿಗೆ ಈ ವೆಬ್‌ಸೈಟ್‌ಗಳು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿವೆ.

ಮತ್ತುಷ್ಟು ಮಾಹಿತಿ: ಫ್ಯಾಕ್ಟ್‌ಲಿ


ಇದನ್ನೂ ಓದಿ: Fack Check: ಕೊರೊನಾ ಹರಡಲು ನೋಟುಗಳಿಗೆ ಎಂಜಲು ಸವರಿ ರಸ್ತೆಯಲ್ಲಿ ಎಸೆದಿದ್ದಾರೆಯೇ? ವಿಡಿಯೋದ ಅಸಲಿ ಸತ್ಯವೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋಶಾ ಬಕ್ತರು ಗೋಬೆಲ್ಸ್ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಆದರೆ ಅವರ ದುರಾದೃಷ್ಟವಶಾತ್ ಸತ್ಯವನ್ನು ಹೇಳುವ ಜನ ಈ ಬೂಮಿಯ ಮೇಲೆ ಇನ್ನೂ ಇದ್ದಾರೆ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...