HomeಮುಖಪುಟCAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

CAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.

- Advertisement -
- Advertisement -

ಕೊವಿಡ್‌-19 ವಿರುದ್ಧದ ಹೋರಾಟಕ್ಕೆ ದೇಣಿಗೆ ಸಂಗ್ರಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕೇರ್ಸ್ ನಿಧಿಯನ್ನು ಇತ್ತೀಚೆಗೆ ಆರಂಭಿಸಿದ್ದಾರೆ. ಈಗಾಗಲೇ ನಿಧಿ ಸಂಗ್ರಹಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಇದ್ದರೂ ಕೂಡ ಇನ್ನೊದು PM CARES ನಿಧಿ ಏಕೆ ಬೇಕಿತ್ತು ಎಂಬ ಪ್ರಶ್ನೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.

ಇದೇ ಸಂದರ್ಭದಲ್ಲಿ ಈ PM CARES ನಿಧಿಯ ಆಡಿಟ್‌ನ್ನು ದೇಶದ ಪ್ರಖ್ಯಾತ CAG (Comptroller and Auditor General of India) ಮಾಡಲು ಬರುವುದಿಲ್ಲ. ಬದಲಿಗೆ ಪ್ರಧಾನ ಮಂತ್ರಿ ಸೇರಿದಂತೆ ಅದರ ಟ್ರಸ್ಟಿಗಳು ನೇಮಿಸಿದ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿಟ್‌ ಮಾಡಲಾಗುವುದು ಎಂಬ ಅಂಶ ಬೆಳಕಿಗೆ ಬಂದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಈಗಾಗಲೇ PM CARES ನಿಧಿಗೆ ಸಾವಿರಾರು ಕೋಟಿ ರೂ ದೇಣಿಗೆ ಹರಿದುಬಂದಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ(FCRA) ಯಿಂದ ವಿನಾಯಿತಿ ಪಡೆದ ನಂತರ ದೇಣಿಗೆಯಲ್ಲಿ ಸಾಕಷ್ಟು ಹೆಚ್ಚಾಗಿದೆ ಎಂದು ಇಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಲ್ಲಿ, ಪಿಎಂ ಕೇರ್ಸ್ ನಿಧಿಯಲ್ಲಿರುವ ಎಲ್ಲಾ ಹಣವನ್ನು ಈ ಹಿಂದಿನಿಂದಲೂ ಬಳಸುತ್ತಿರುವ ಪ್ರಧಾನ ಮಂತ್ರಿಗಳ “ರಾಷ್ಟ್ರೀಯ ಪರಿಹಾರ ನಿಧಿ”ಗೆ ವರ್ಗಾಯಿಸಬೇಕು. ಆ ಮೂಲಕ ದಕ್ಷತೆ, ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ ಲೆಕ್ಕಪರಿಶೋಧನೆಯನ್ನು ಖಚಿತಪಡಿಸಿಕೊಳ್ಳಲು ಆಗ್ರಹಿಸಿದ್ದರು. ಆದರೆ ಅವರ ಬೇಡಿಕೆಯನ್ನು ಮೋದಿಯವರು ಪರಿಗಣಿಸಿಲ್ಲ.

ವಿಡಿಯೊ ನೋಡಿ: PM CARES ಆಡಿಟ್ ಹಕ್ಕು ಸಿಎಜಿಗಿಲ್ಲ: ಹಾಗಾದರೆ ಇದೊಂದು ಹಗರಣವಲ್ಲವೇ?

 

CSR ದೇಣಿಗೆ ವಿಷಯದಲ್ಲಿಯೂ ವಿವಾದ

ಇನ್ನು ಕಾರ್ಪೊರೇಟ್‌ ಕಂಪನಿಗಳು ತಮ್ಮ ವಾರ್ಷಿಕ ಲಾಭದಲ್ಲಿ ಶೇ.2ರಷ್ಟನ್ನು ಸಾಮಾಜಿಕ ಹೊಣೆಗಾರಿಕೆಯ ದೃಷ್ಟಿಯಿಂದ ಖರ್ಚು ಮಾಡಬೇಕಿದ್ದ CSR ಹಣವನ್ನು ಪಿಎಂ ಕೇರ್ಸ್‌ಗೆ ಹಾಕಬಹುದಾಗಿದೆ. ಅಲ್ಲದೇ ವಯಕ್ತಿಕವಾಗಿ ದೇಣಿಗೆ ನೀಡುವವರಿಗೆ ತೆರಿಗೆ ವಿನಾಯಿಯಿ ನೀಡಲಾಗಿದೆ. ಆದರೆ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ CSR ಹಾಕಲು ಬರುವುದಿಲ್ಲ ಮತ್ತು ತೆರಿಗೆ ವಿನಾಯಿತಿ ಸಿಗುವುದಿಲ್ಲ ಎಂಬುದು ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಯುಪಿಎ ಸರ್ಕಾರವು ಜುಲೈ 2013 ರಲ್ಲಿ ಅಂಗೀಕರಿಸಿದ ಕಾನೂನಿನ (ಕಂಪನಿಗಳ ಕಾಯ್ದೆ) ತಿದ್ದುಪಡಿಯ ಕಾರಣದಿಂದ ರಾಜ್ಯಗಳು ಸಿಎಸ್‌ಆರ್‌ ದೇಣಿಗೆ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಹಲವು ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಆ ಕಾನೂನಿಗೆ ತಿದ್ದುಪಡಿ ತಂದು ರಾಜ್ಯಗಳ ಪರಿಹಾರ ನಿಧಿಗೂ ಕೂಡ ಸಿಎಸ್‌ಆರ್‌ ಹಣ ಹಾಕುವಂತಾಗಬೇಕು ಎಂದು ಮನವಿ ಮಾಡಿದ್ದಾರೆ. ಇದಕ್ಕೂ ಕೂಡ ಮೋದಿಯವರು ಸ್ಪಂದಿಸಿಲ್ಲ.

ಒಂದರ್ಥದಲ್ಲಿ ಹಲವು ರಾಜ್ಯಗಳು ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹಳಷ್ಟು ಮುಂದಿವೆ. ಜಾಗರೂಕತೆಯಿಂದ ಹಗಲು ಇರುಳು ಕೆಲಸ ಮಾಡುತ್ತಿದ್ದರೂ ಆರ್ಥಿಕ ಕೊರತೆ ತೀವ್ರವಾಗಿ ಕಾಡುತ್ತಿದೆ. ಕೇಂದ್ರ ಸರ್ಕಾರ ಇತ್ತ ಪರಿಹಾರ ಹಣವನ್ನೂ ನೀಡುತ್ತಿಲ್ಲ, ಅತ್ತ ಸಿಎಸ್‌ಆರ್‌ ಹಣ ಹಾಕಲು ಬಿಡುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿವೆ.

ಉದಾಹರಣಗೆ ಏಪ್ರಿಲ್‌ 15ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ದೇಶದ ಆರ್ಥಿಕ ರಾಜಧಾನಿ ಎಂದೇ ಕರೆಯಲ್ಪಡುವ ಮಹಾರಾಷ್ಟ್ರ ರಾಜ್ಯಕ್ಕೆ 247 ಕೋಟಿ ರೂ ಮಾತ್ರ ಸಂಗ್ರಹವಾಗಿದೆ. ಆದರೆ ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.


ಇದನ್ನೂ ಓದಿ:  ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ?


ಪಿಎಂ ಕೇರ್ಸ್‌ ಆಡಿಟ್‌ ಯಾರು ಮಾಡುತ್ತಾರೆ?

ದೇಶದ ಬಹುಮುಖ್ಯ ಹಣಕಾಸು ವ್ಯವಹಾರಗಳನ್ನು ಪ್ರಖ್ಯಾತ CAG ನಡೆಸುತ್ತಿದೆ. 2G ಸ್ಪೆಕ್ಟ್ರಮ್‌ ಹಗರಣ ಸೇರಿದಂತೆ ದೊಡ್ಡ ಹಗರಣಗಳನ್ನು ಅದು ಬಯಲಿಗೆಳೆದಿದೆ. ಅಂತಹ ಸಂಸ್ಥೆ ಪಿಎಂ ಕೇರ್ಸ್‌‌ ಅನ್ನು ಆಡಿಟ್‌ ಮಾಡುವುದಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಬದಲಿಗೆ ಪಿಎಂ ಕೇರ್ಸ್ ನಿಧಿಯನ್ನು ಟ್ರಸ್ಟಿಗಳು ನೇಮಕ ಮಾಡುವ ಒಬ್ಬ ಅಥವಾ ಅದಕ್ಕಿಂತ ಹೆಚ್ಚಿನ ಅರ್ಹ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿತ್‌ ಮಾಡುವುದು ಎಂದು ಸರ್ಕಾರ ಷರತ್ತು ವಿಧಿಸಿದೆ.

ಈ ಪಿಎಂ ಕೇರ್ಸ್‌‌ಗೆ ಎಷ್ಟು ಹಣ ಬಂದಿದೆ. ಅದರಲ್ಲಿ ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ, ಎಷ್ಟು ಉಳಿದಿದೆ ಎಂಬ ನಂಬಿಕಾರ್ಹ ಮಾಹಿತಿ ಇದರಿಂದ ದೊರೆಯುವುದಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದುವರೆಗೂ ಕೇಂದ್ರ ಸರ್ಕಾರ ಕೊವಿಡ್‌ ಪ್ಯಾಕೇಜ್‌ಗಳಿಗೆ ತನ್ನ ಸರ್ಕಾರದ ಖಾತೆಯಿಂದ ಹಣ ನೀಡಿದೆಯೇ ಹೊರತು ಪಿಎಂ ಕೇರ್ಸ್‌‌ನಿಂದಲ್ಲ. ಹಾಗಾದರೆ ಈ ಹಣವನ್ನು ಯಾವಾಗ ಬಳಸುತ್ತಾರೆ ಎಂಬ ಪ್ರಶ್ನೆಯೂ ಎದ್ದಿದೆ.

ಕೋವಿಡ್ -19 ರ ವಿರುದ್ಧ ಹೋರಾಡುವ ಹೆಸರಿನಲ್ಲಿ, ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ಹೊಂದಿರುವ ನರೇಂದ್ರ ಮೋದಿ ನೇತೃತ್ವದ ಈ ಚಾರಿಟಬಲ್ ಟ್ರಸ್ಟ್ ಹಣವನ್ನು ಸಂಗ್ರಹಿಸಿ ನಂತರ ಅವುಗಳನ್ನು ಸ್ವಂತವಾಗಿ ಖರ್ಚು ಮಾಡುತ್ತದೆ. ಈ ನಿಧಿ ಖಾಸಗಿಯಾಗಿರುವುದರಿಂದ ಅದು ಆರ್‌ಟಿಐ ಅಡಿಯಲ್ಲಿ ಬರುವುದಿಲ್ಲ. ಈ ನಿಧಿಯು ಸಿಎಜಿಯ ವ್ಯಾಪ್ತಿಯಿಂದ ಹೊರಗಿರುವುದರಿಂದ, ಯಾವುದೇ ಸರ್ಕಾರಿ ಸಂಸ್ಥೆಯು ಈ ನಿಧಿಯನ್ನು ಲೆಕ್ಕಪರಿಶೋಧಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಇದು ಹಗರಣವೇ? ಭಾರತದ ಜನರು ನಿರ್ಧರಿಸಬೇಕಾಗುತ್ತದೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...