HomeಮುಖಪುಟCAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

CAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.

- Advertisement -
- Advertisement -

ಕೊವಿಡ್‌-19 ವಿರುದ್ಧದ ಹೋರಾಟಕ್ಕೆ ದೇಣಿಗೆ ಸಂಗ್ರಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕೇರ್ಸ್ ನಿಧಿಯನ್ನು ಇತ್ತೀಚೆಗೆ ಆರಂಭಿಸಿದ್ದಾರೆ. ಈಗಾಗಲೇ ನಿಧಿ ಸಂಗ್ರಹಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಇದ್ದರೂ ಕೂಡ ಇನ್ನೊದು PM CARES ನಿಧಿ ಏಕೆ ಬೇಕಿತ್ತು ಎಂಬ ಪ್ರಶ್ನೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.

ಇದೇ ಸಂದರ್ಭದಲ್ಲಿ ಈ PM CARES ನಿಧಿಯ ಆಡಿಟ್‌ನ್ನು ದೇಶದ ಪ್ರಖ್ಯಾತ CAG (Comptroller and Auditor General of India) ಮಾಡಲು ಬರುವುದಿಲ್ಲ. ಬದಲಿಗೆ ಪ್ರಧಾನ ಮಂತ್ರಿ ಸೇರಿದಂತೆ ಅದರ ಟ್ರಸ್ಟಿಗಳು ನೇಮಿಸಿದ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿಟ್‌ ಮಾಡಲಾಗುವುದು ಎಂಬ ಅಂಶ ಬೆಳಕಿಗೆ ಬಂದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಈಗಾಗಲೇ PM CARES ನಿಧಿಗೆ ಸಾವಿರಾರು ಕೋಟಿ ರೂ ದೇಣಿಗೆ ಹರಿದುಬಂದಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ(FCRA) ಯಿಂದ ವಿನಾಯಿತಿ ಪಡೆದ ನಂತರ ದೇಣಿಗೆಯಲ್ಲಿ ಸಾಕಷ್ಟು ಹೆಚ್ಚಾಗಿದೆ ಎಂದು ಇಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಲ್ಲಿ, ಪಿಎಂ ಕೇರ್ಸ್ ನಿಧಿಯಲ್ಲಿರುವ ಎಲ್ಲಾ ಹಣವನ್ನು ಈ ಹಿಂದಿನಿಂದಲೂ ಬಳಸುತ್ತಿರುವ ಪ್ರಧಾನ ಮಂತ್ರಿಗಳ “ರಾಷ್ಟ್ರೀಯ ಪರಿಹಾರ ನಿಧಿ”ಗೆ ವರ್ಗಾಯಿಸಬೇಕು. ಆ ಮೂಲಕ ದಕ್ಷತೆ, ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ ಲೆಕ್ಕಪರಿಶೋಧನೆಯನ್ನು ಖಚಿತಪಡಿಸಿಕೊಳ್ಳಲು ಆಗ್ರಹಿಸಿದ್ದರು. ಆದರೆ ಅವರ ಬೇಡಿಕೆಯನ್ನು ಮೋದಿಯವರು ಪರಿಗಣಿಸಿಲ್ಲ.

ವಿಡಿಯೊ ನೋಡಿ: PM CARES ಆಡಿಟ್ ಹಕ್ಕು ಸಿಎಜಿಗಿಲ್ಲ: ಹಾಗಾದರೆ ಇದೊಂದು ಹಗರಣವಲ್ಲವೇ?

 

CSR ದೇಣಿಗೆ ವಿಷಯದಲ್ಲಿಯೂ ವಿವಾದ

ಇನ್ನು ಕಾರ್ಪೊರೇಟ್‌ ಕಂಪನಿಗಳು ತಮ್ಮ ವಾರ್ಷಿಕ ಲಾಭದಲ್ಲಿ ಶೇ.2ರಷ್ಟನ್ನು ಸಾಮಾಜಿಕ ಹೊಣೆಗಾರಿಕೆಯ ದೃಷ್ಟಿಯಿಂದ ಖರ್ಚು ಮಾಡಬೇಕಿದ್ದ CSR ಹಣವನ್ನು ಪಿಎಂ ಕೇರ್ಸ್‌ಗೆ ಹಾಕಬಹುದಾಗಿದೆ. ಅಲ್ಲದೇ ವಯಕ್ತಿಕವಾಗಿ ದೇಣಿಗೆ ನೀಡುವವರಿಗೆ ತೆರಿಗೆ ವಿನಾಯಿಯಿ ನೀಡಲಾಗಿದೆ. ಆದರೆ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ CSR ಹಾಕಲು ಬರುವುದಿಲ್ಲ ಮತ್ತು ತೆರಿಗೆ ವಿನಾಯಿತಿ ಸಿಗುವುದಿಲ್ಲ ಎಂಬುದು ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಯುಪಿಎ ಸರ್ಕಾರವು ಜುಲೈ 2013 ರಲ್ಲಿ ಅಂಗೀಕರಿಸಿದ ಕಾನೂನಿನ (ಕಂಪನಿಗಳ ಕಾಯ್ದೆ) ತಿದ್ದುಪಡಿಯ ಕಾರಣದಿಂದ ರಾಜ್ಯಗಳು ಸಿಎಸ್‌ಆರ್‌ ದೇಣಿಗೆ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಹಲವು ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಆ ಕಾನೂನಿಗೆ ತಿದ್ದುಪಡಿ ತಂದು ರಾಜ್ಯಗಳ ಪರಿಹಾರ ನಿಧಿಗೂ ಕೂಡ ಸಿಎಸ್‌ಆರ್‌ ಹಣ ಹಾಕುವಂತಾಗಬೇಕು ಎಂದು ಮನವಿ ಮಾಡಿದ್ದಾರೆ. ಇದಕ್ಕೂ ಕೂಡ ಮೋದಿಯವರು ಸ್ಪಂದಿಸಿಲ್ಲ.

ಒಂದರ್ಥದಲ್ಲಿ ಹಲವು ರಾಜ್ಯಗಳು ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹಳಷ್ಟು ಮುಂದಿವೆ. ಜಾಗರೂಕತೆಯಿಂದ ಹಗಲು ಇರುಳು ಕೆಲಸ ಮಾಡುತ್ತಿದ್ದರೂ ಆರ್ಥಿಕ ಕೊರತೆ ತೀವ್ರವಾಗಿ ಕಾಡುತ್ತಿದೆ. ಕೇಂದ್ರ ಸರ್ಕಾರ ಇತ್ತ ಪರಿಹಾರ ಹಣವನ್ನೂ ನೀಡುತ್ತಿಲ್ಲ, ಅತ್ತ ಸಿಎಸ್‌ಆರ್‌ ಹಣ ಹಾಕಲು ಬಿಡುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿವೆ.

ಉದಾಹರಣಗೆ ಏಪ್ರಿಲ್‌ 15ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ದೇಶದ ಆರ್ಥಿಕ ರಾಜಧಾನಿ ಎಂದೇ ಕರೆಯಲ್ಪಡುವ ಮಹಾರಾಷ್ಟ್ರ ರಾಜ್ಯಕ್ಕೆ 247 ಕೋಟಿ ರೂ ಮಾತ್ರ ಸಂಗ್ರಹವಾಗಿದೆ. ಆದರೆ ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.


ಇದನ್ನೂ ಓದಿ:  ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ?


ಪಿಎಂ ಕೇರ್ಸ್‌ ಆಡಿಟ್‌ ಯಾರು ಮಾಡುತ್ತಾರೆ?

ದೇಶದ ಬಹುಮುಖ್ಯ ಹಣಕಾಸು ವ್ಯವಹಾರಗಳನ್ನು ಪ್ರಖ್ಯಾತ CAG ನಡೆಸುತ್ತಿದೆ. 2G ಸ್ಪೆಕ್ಟ್ರಮ್‌ ಹಗರಣ ಸೇರಿದಂತೆ ದೊಡ್ಡ ಹಗರಣಗಳನ್ನು ಅದು ಬಯಲಿಗೆಳೆದಿದೆ. ಅಂತಹ ಸಂಸ್ಥೆ ಪಿಎಂ ಕೇರ್ಸ್‌‌ ಅನ್ನು ಆಡಿಟ್‌ ಮಾಡುವುದಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಬದಲಿಗೆ ಪಿಎಂ ಕೇರ್ಸ್ ನಿಧಿಯನ್ನು ಟ್ರಸ್ಟಿಗಳು ನೇಮಕ ಮಾಡುವ ಒಬ್ಬ ಅಥವಾ ಅದಕ್ಕಿಂತ ಹೆಚ್ಚಿನ ಅರ್ಹ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿತ್‌ ಮಾಡುವುದು ಎಂದು ಸರ್ಕಾರ ಷರತ್ತು ವಿಧಿಸಿದೆ.

ಈ ಪಿಎಂ ಕೇರ್ಸ್‌‌ಗೆ ಎಷ್ಟು ಹಣ ಬಂದಿದೆ. ಅದರಲ್ಲಿ ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ, ಎಷ್ಟು ಉಳಿದಿದೆ ಎಂಬ ನಂಬಿಕಾರ್ಹ ಮಾಹಿತಿ ಇದರಿಂದ ದೊರೆಯುವುದಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದುವರೆಗೂ ಕೇಂದ್ರ ಸರ್ಕಾರ ಕೊವಿಡ್‌ ಪ್ಯಾಕೇಜ್‌ಗಳಿಗೆ ತನ್ನ ಸರ್ಕಾರದ ಖಾತೆಯಿಂದ ಹಣ ನೀಡಿದೆಯೇ ಹೊರತು ಪಿಎಂ ಕೇರ್ಸ್‌‌ನಿಂದಲ್ಲ. ಹಾಗಾದರೆ ಈ ಹಣವನ್ನು ಯಾವಾಗ ಬಳಸುತ್ತಾರೆ ಎಂಬ ಪ್ರಶ್ನೆಯೂ ಎದ್ದಿದೆ.

ಕೋವಿಡ್ -19 ರ ವಿರುದ್ಧ ಹೋರಾಡುವ ಹೆಸರಿನಲ್ಲಿ, ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ಹೊಂದಿರುವ ನರೇಂದ್ರ ಮೋದಿ ನೇತೃತ್ವದ ಈ ಚಾರಿಟಬಲ್ ಟ್ರಸ್ಟ್ ಹಣವನ್ನು ಸಂಗ್ರಹಿಸಿ ನಂತರ ಅವುಗಳನ್ನು ಸ್ವಂತವಾಗಿ ಖರ್ಚು ಮಾಡುತ್ತದೆ. ಈ ನಿಧಿ ಖಾಸಗಿಯಾಗಿರುವುದರಿಂದ ಅದು ಆರ್‌ಟಿಐ ಅಡಿಯಲ್ಲಿ ಬರುವುದಿಲ್ಲ. ಈ ನಿಧಿಯು ಸಿಎಜಿಯ ವ್ಯಾಪ್ತಿಯಿಂದ ಹೊರಗಿರುವುದರಿಂದ, ಯಾವುದೇ ಸರ್ಕಾರಿ ಸಂಸ್ಥೆಯು ಈ ನಿಧಿಯನ್ನು ಲೆಕ್ಕಪರಿಶೋಧಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಇದು ಹಗರಣವೇ? ಭಾರತದ ಜನರು ನಿರ್ಧರಿಸಬೇಕಾಗುತ್ತದೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...