HomeಮುಖಪುಟCAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

CAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.

- Advertisement -
- Advertisement -

ಕೊವಿಡ್‌-19 ವಿರುದ್ಧದ ಹೋರಾಟಕ್ಕೆ ದೇಣಿಗೆ ಸಂಗ್ರಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕೇರ್ಸ್ ನಿಧಿಯನ್ನು ಇತ್ತೀಚೆಗೆ ಆರಂಭಿಸಿದ್ದಾರೆ. ಈಗಾಗಲೇ ನಿಧಿ ಸಂಗ್ರಹಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಇದ್ದರೂ ಕೂಡ ಇನ್ನೊದು PM CARES ನಿಧಿ ಏಕೆ ಬೇಕಿತ್ತು ಎಂಬ ಪ್ರಶ್ನೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.

ಇದೇ ಸಂದರ್ಭದಲ್ಲಿ ಈ PM CARES ನಿಧಿಯ ಆಡಿಟ್‌ನ್ನು ದೇಶದ ಪ್ರಖ್ಯಾತ CAG (Comptroller and Auditor General of India) ಮಾಡಲು ಬರುವುದಿಲ್ಲ. ಬದಲಿಗೆ ಪ್ರಧಾನ ಮಂತ್ರಿ ಸೇರಿದಂತೆ ಅದರ ಟ್ರಸ್ಟಿಗಳು ನೇಮಿಸಿದ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿಟ್‌ ಮಾಡಲಾಗುವುದು ಎಂಬ ಅಂಶ ಬೆಳಕಿಗೆ ಬಂದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಈಗಾಗಲೇ PM CARES ನಿಧಿಗೆ ಸಾವಿರಾರು ಕೋಟಿ ರೂ ದೇಣಿಗೆ ಹರಿದುಬಂದಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ(FCRA) ಯಿಂದ ವಿನಾಯಿತಿ ಪಡೆದ ನಂತರ ದೇಣಿಗೆಯಲ್ಲಿ ಸಾಕಷ್ಟು ಹೆಚ್ಚಾಗಿದೆ ಎಂದು ಇಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಲ್ಲಿ, ಪಿಎಂ ಕೇರ್ಸ್ ನಿಧಿಯಲ್ಲಿರುವ ಎಲ್ಲಾ ಹಣವನ್ನು ಈ ಹಿಂದಿನಿಂದಲೂ ಬಳಸುತ್ತಿರುವ ಪ್ರಧಾನ ಮಂತ್ರಿಗಳ “ರಾಷ್ಟ್ರೀಯ ಪರಿಹಾರ ನಿಧಿ”ಗೆ ವರ್ಗಾಯಿಸಬೇಕು. ಆ ಮೂಲಕ ದಕ್ಷತೆ, ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ ಲೆಕ್ಕಪರಿಶೋಧನೆಯನ್ನು ಖಚಿತಪಡಿಸಿಕೊಳ್ಳಲು ಆಗ್ರಹಿಸಿದ್ದರು. ಆದರೆ ಅವರ ಬೇಡಿಕೆಯನ್ನು ಮೋದಿಯವರು ಪರಿಗಣಿಸಿಲ್ಲ.

ವಿಡಿಯೊ ನೋಡಿ: PM CARES ಆಡಿಟ್ ಹಕ್ಕು ಸಿಎಜಿಗಿಲ್ಲ: ಹಾಗಾದರೆ ಇದೊಂದು ಹಗರಣವಲ್ಲವೇ?

 

CSR ದೇಣಿಗೆ ವಿಷಯದಲ್ಲಿಯೂ ವಿವಾದ

ಇನ್ನು ಕಾರ್ಪೊರೇಟ್‌ ಕಂಪನಿಗಳು ತಮ್ಮ ವಾರ್ಷಿಕ ಲಾಭದಲ್ಲಿ ಶೇ.2ರಷ್ಟನ್ನು ಸಾಮಾಜಿಕ ಹೊಣೆಗಾರಿಕೆಯ ದೃಷ್ಟಿಯಿಂದ ಖರ್ಚು ಮಾಡಬೇಕಿದ್ದ CSR ಹಣವನ್ನು ಪಿಎಂ ಕೇರ್ಸ್‌ಗೆ ಹಾಕಬಹುದಾಗಿದೆ. ಅಲ್ಲದೇ ವಯಕ್ತಿಕವಾಗಿ ದೇಣಿಗೆ ನೀಡುವವರಿಗೆ ತೆರಿಗೆ ವಿನಾಯಿಯಿ ನೀಡಲಾಗಿದೆ. ಆದರೆ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ CSR ಹಾಕಲು ಬರುವುದಿಲ್ಲ ಮತ್ತು ತೆರಿಗೆ ವಿನಾಯಿತಿ ಸಿಗುವುದಿಲ್ಲ ಎಂಬುದು ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಯುಪಿಎ ಸರ್ಕಾರವು ಜುಲೈ 2013 ರಲ್ಲಿ ಅಂಗೀಕರಿಸಿದ ಕಾನೂನಿನ (ಕಂಪನಿಗಳ ಕಾಯ್ದೆ) ತಿದ್ದುಪಡಿಯ ಕಾರಣದಿಂದ ರಾಜ್ಯಗಳು ಸಿಎಸ್‌ಆರ್‌ ದೇಣಿಗೆ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಹಲವು ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಆ ಕಾನೂನಿಗೆ ತಿದ್ದುಪಡಿ ತಂದು ರಾಜ್ಯಗಳ ಪರಿಹಾರ ನಿಧಿಗೂ ಕೂಡ ಸಿಎಸ್‌ಆರ್‌ ಹಣ ಹಾಕುವಂತಾಗಬೇಕು ಎಂದು ಮನವಿ ಮಾಡಿದ್ದಾರೆ. ಇದಕ್ಕೂ ಕೂಡ ಮೋದಿಯವರು ಸ್ಪಂದಿಸಿಲ್ಲ.

ಒಂದರ್ಥದಲ್ಲಿ ಹಲವು ರಾಜ್ಯಗಳು ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹಳಷ್ಟು ಮುಂದಿವೆ. ಜಾಗರೂಕತೆಯಿಂದ ಹಗಲು ಇರುಳು ಕೆಲಸ ಮಾಡುತ್ತಿದ್ದರೂ ಆರ್ಥಿಕ ಕೊರತೆ ತೀವ್ರವಾಗಿ ಕಾಡುತ್ತಿದೆ. ಕೇಂದ್ರ ಸರ್ಕಾರ ಇತ್ತ ಪರಿಹಾರ ಹಣವನ್ನೂ ನೀಡುತ್ತಿಲ್ಲ, ಅತ್ತ ಸಿಎಸ್‌ಆರ್‌ ಹಣ ಹಾಕಲು ಬಿಡುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿವೆ.

ಉದಾಹರಣಗೆ ಏಪ್ರಿಲ್‌ 15ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ದೇಶದ ಆರ್ಥಿಕ ರಾಜಧಾನಿ ಎಂದೇ ಕರೆಯಲ್ಪಡುವ ಮಹಾರಾಷ್ಟ್ರ ರಾಜ್ಯಕ್ಕೆ 247 ಕೋಟಿ ರೂ ಮಾತ್ರ ಸಂಗ್ರಹವಾಗಿದೆ. ಆದರೆ ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.


ಇದನ್ನೂ ಓದಿ:  ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ?


ಪಿಎಂ ಕೇರ್ಸ್‌ ಆಡಿಟ್‌ ಯಾರು ಮಾಡುತ್ತಾರೆ?

ದೇಶದ ಬಹುಮುಖ್ಯ ಹಣಕಾಸು ವ್ಯವಹಾರಗಳನ್ನು ಪ್ರಖ್ಯಾತ CAG ನಡೆಸುತ್ತಿದೆ. 2G ಸ್ಪೆಕ್ಟ್ರಮ್‌ ಹಗರಣ ಸೇರಿದಂತೆ ದೊಡ್ಡ ಹಗರಣಗಳನ್ನು ಅದು ಬಯಲಿಗೆಳೆದಿದೆ. ಅಂತಹ ಸಂಸ್ಥೆ ಪಿಎಂ ಕೇರ್ಸ್‌‌ ಅನ್ನು ಆಡಿಟ್‌ ಮಾಡುವುದಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಬದಲಿಗೆ ಪಿಎಂ ಕೇರ್ಸ್ ನಿಧಿಯನ್ನು ಟ್ರಸ್ಟಿಗಳು ನೇಮಕ ಮಾಡುವ ಒಬ್ಬ ಅಥವಾ ಅದಕ್ಕಿಂತ ಹೆಚ್ಚಿನ ಅರ್ಹ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿತ್‌ ಮಾಡುವುದು ಎಂದು ಸರ್ಕಾರ ಷರತ್ತು ವಿಧಿಸಿದೆ.

ಈ ಪಿಎಂ ಕೇರ್ಸ್‌‌ಗೆ ಎಷ್ಟು ಹಣ ಬಂದಿದೆ. ಅದರಲ್ಲಿ ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ, ಎಷ್ಟು ಉಳಿದಿದೆ ಎಂಬ ನಂಬಿಕಾರ್ಹ ಮಾಹಿತಿ ಇದರಿಂದ ದೊರೆಯುವುದಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದುವರೆಗೂ ಕೇಂದ್ರ ಸರ್ಕಾರ ಕೊವಿಡ್‌ ಪ್ಯಾಕೇಜ್‌ಗಳಿಗೆ ತನ್ನ ಸರ್ಕಾರದ ಖಾತೆಯಿಂದ ಹಣ ನೀಡಿದೆಯೇ ಹೊರತು ಪಿಎಂ ಕೇರ್ಸ್‌‌ನಿಂದಲ್ಲ. ಹಾಗಾದರೆ ಈ ಹಣವನ್ನು ಯಾವಾಗ ಬಳಸುತ್ತಾರೆ ಎಂಬ ಪ್ರಶ್ನೆಯೂ ಎದ್ದಿದೆ.

ಕೋವಿಡ್ -19 ರ ವಿರುದ್ಧ ಹೋರಾಡುವ ಹೆಸರಿನಲ್ಲಿ, ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ಹೊಂದಿರುವ ನರೇಂದ್ರ ಮೋದಿ ನೇತೃತ್ವದ ಈ ಚಾರಿಟಬಲ್ ಟ್ರಸ್ಟ್ ಹಣವನ್ನು ಸಂಗ್ರಹಿಸಿ ನಂತರ ಅವುಗಳನ್ನು ಸ್ವಂತವಾಗಿ ಖರ್ಚು ಮಾಡುತ್ತದೆ. ಈ ನಿಧಿ ಖಾಸಗಿಯಾಗಿರುವುದರಿಂದ ಅದು ಆರ್‌ಟಿಐ ಅಡಿಯಲ್ಲಿ ಬರುವುದಿಲ್ಲ. ಈ ನಿಧಿಯು ಸಿಎಜಿಯ ವ್ಯಾಪ್ತಿಯಿಂದ ಹೊರಗಿರುವುದರಿಂದ, ಯಾವುದೇ ಸರ್ಕಾರಿ ಸಂಸ್ಥೆಯು ಈ ನಿಧಿಯನ್ನು ಲೆಕ್ಕಪರಿಶೋಧಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಇದು ಹಗರಣವೇ? ಭಾರತದ ಜನರು ನಿರ್ಧರಿಸಬೇಕಾಗುತ್ತದೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...