HomeಮುಖಪುಟCAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

CAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.

- Advertisement -
- Advertisement -

ಕೊವಿಡ್‌-19 ವಿರುದ್ಧದ ಹೋರಾಟಕ್ಕೆ ದೇಣಿಗೆ ಸಂಗ್ರಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕೇರ್ಸ್ ನಿಧಿಯನ್ನು ಇತ್ತೀಚೆಗೆ ಆರಂಭಿಸಿದ್ದಾರೆ. ಈಗಾಗಲೇ ನಿಧಿ ಸಂಗ್ರಹಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಇದ್ದರೂ ಕೂಡ ಇನ್ನೊದು PM CARES ನಿಧಿ ಏಕೆ ಬೇಕಿತ್ತು ಎಂಬ ಪ್ರಶ್ನೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.

ಇದೇ ಸಂದರ್ಭದಲ್ಲಿ ಈ PM CARES ನಿಧಿಯ ಆಡಿಟ್‌ನ್ನು ದೇಶದ ಪ್ರಖ್ಯಾತ CAG (Comptroller and Auditor General of India) ಮಾಡಲು ಬರುವುದಿಲ್ಲ. ಬದಲಿಗೆ ಪ್ರಧಾನ ಮಂತ್ರಿ ಸೇರಿದಂತೆ ಅದರ ಟ್ರಸ್ಟಿಗಳು ನೇಮಿಸಿದ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿಟ್‌ ಮಾಡಲಾಗುವುದು ಎಂಬ ಅಂಶ ಬೆಳಕಿಗೆ ಬಂದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಈಗಾಗಲೇ PM CARES ನಿಧಿಗೆ ಸಾವಿರಾರು ಕೋಟಿ ರೂ ದೇಣಿಗೆ ಹರಿದುಬಂದಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ(FCRA) ಯಿಂದ ವಿನಾಯಿತಿ ಪಡೆದ ನಂತರ ದೇಣಿಗೆಯಲ್ಲಿ ಸಾಕಷ್ಟು ಹೆಚ್ಚಾಗಿದೆ ಎಂದು ಇಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಲ್ಲಿ, ಪಿಎಂ ಕೇರ್ಸ್ ನಿಧಿಯಲ್ಲಿರುವ ಎಲ್ಲಾ ಹಣವನ್ನು ಈ ಹಿಂದಿನಿಂದಲೂ ಬಳಸುತ್ತಿರುವ ಪ್ರಧಾನ ಮಂತ್ರಿಗಳ “ರಾಷ್ಟ್ರೀಯ ಪರಿಹಾರ ನಿಧಿ”ಗೆ ವರ್ಗಾಯಿಸಬೇಕು. ಆ ಮೂಲಕ ದಕ್ಷತೆ, ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ ಲೆಕ್ಕಪರಿಶೋಧನೆಯನ್ನು ಖಚಿತಪಡಿಸಿಕೊಳ್ಳಲು ಆಗ್ರಹಿಸಿದ್ದರು. ಆದರೆ ಅವರ ಬೇಡಿಕೆಯನ್ನು ಮೋದಿಯವರು ಪರಿಗಣಿಸಿಲ್ಲ.

ವಿಡಿಯೊ ನೋಡಿ: PM CARES ಆಡಿಟ್ ಹಕ್ಕು ಸಿಎಜಿಗಿಲ್ಲ: ಹಾಗಾದರೆ ಇದೊಂದು ಹಗರಣವಲ್ಲವೇ?

 

CSR ದೇಣಿಗೆ ವಿಷಯದಲ್ಲಿಯೂ ವಿವಾದ

ಇನ್ನು ಕಾರ್ಪೊರೇಟ್‌ ಕಂಪನಿಗಳು ತಮ್ಮ ವಾರ್ಷಿಕ ಲಾಭದಲ್ಲಿ ಶೇ.2ರಷ್ಟನ್ನು ಸಾಮಾಜಿಕ ಹೊಣೆಗಾರಿಕೆಯ ದೃಷ್ಟಿಯಿಂದ ಖರ್ಚು ಮಾಡಬೇಕಿದ್ದ CSR ಹಣವನ್ನು ಪಿಎಂ ಕೇರ್ಸ್‌ಗೆ ಹಾಕಬಹುದಾಗಿದೆ. ಅಲ್ಲದೇ ವಯಕ್ತಿಕವಾಗಿ ದೇಣಿಗೆ ನೀಡುವವರಿಗೆ ತೆರಿಗೆ ವಿನಾಯಿಯಿ ನೀಡಲಾಗಿದೆ. ಆದರೆ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ CSR ಹಾಕಲು ಬರುವುದಿಲ್ಲ ಮತ್ತು ತೆರಿಗೆ ವಿನಾಯಿತಿ ಸಿಗುವುದಿಲ್ಲ ಎಂಬುದು ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಯುಪಿಎ ಸರ್ಕಾರವು ಜುಲೈ 2013 ರಲ್ಲಿ ಅಂಗೀಕರಿಸಿದ ಕಾನೂನಿನ (ಕಂಪನಿಗಳ ಕಾಯ್ದೆ) ತಿದ್ದುಪಡಿಯ ಕಾರಣದಿಂದ ರಾಜ್ಯಗಳು ಸಿಎಸ್‌ಆರ್‌ ದೇಣಿಗೆ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಹಲವು ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಆ ಕಾನೂನಿಗೆ ತಿದ್ದುಪಡಿ ತಂದು ರಾಜ್ಯಗಳ ಪರಿಹಾರ ನಿಧಿಗೂ ಕೂಡ ಸಿಎಸ್‌ಆರ್‌ ಹಣ ಹಾಕುವಂತಾಗಬೇಕು ಎಂದು ಮನವಿ ಮಾಡಿದ್ದಾರೆ. ಇದಕ್ಕೂ ಕೂಡ ಮೋದಿಯವರು ಸ್ಪಂದಿಸಿಲ್ಲ.

ಒಂದರ್ಥದಲ್ಲಿ ಹಲವು ರಾಜ್ಯಗಳು ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹಳಷ್ಟು ಮುಂದಿವೆ. ಜಾಗರೂಕತೆಯಿಂದ ಹಗಲು ಇರುಳು ಕೆಲಸ ಮಾಡುತ್ತಿದ್ದರೂ ಆರ್ಥಿಕ ಕೊರತೆ ತೀವ್ರವಾಗಿ ಕಾಡುತ್ತಿದೆ. ಕೇಂದ್ರ ಸರ್ಕಾರ ಇತ್ತ ಪರಿಹಾರ ಹಣವನ್ನೂ ನೀಡುತ್ತಿಲ್ಲ, ಅತ್ತ ಸಿಎಸ್‌ಆರ್‌ ಹಣ ಹಾಕಲು ಬಿಡುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿವೆ.

ಉದಾಹರಣಗೆ ಏಪ್ರಿಲ್‌ 15ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ದೇಶದ ಆರ್ಥಿಕ ರಾಜಧಾನಿ ಎಂದೇ ಕರೆಯಲ್ಪಡುವ ಮಹಾರಾಷ್ಟ್ರ ರಾಜ್ಯಕ್ಕೆ 247 ಕೋಟಿ ರೂ ಮಾತ್ರ ಸಂಗ್ರಹವಾಗಿದೆ. ಆದರೆ ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.


ಇದನ್ನೂ ಓದಿ:  ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ?


ಪಿಎಂ ಕೇರ್ಸ್‌ ಆಡಿಟ್‌ ಯಾರು ಮಾಡುತ್ತಾರೆ?

ದೇಶದ ಬಹುಮುಖ್ಯ ಹಣಕಾಸು ವ್ಯವಹಾರಗಳನ್ನು ಪ್ರಖ್ಯಾತ CAG ನಡೆಸುತ್ತಿದೆ. 2G ಸ್ಪೆಕ್ಟ್ರಮ್‌ ಹಗರಣ ಸೇರಿದಂತೆ ದೊಡ್ಡ ಹಗರಣಗಳನ್ನು ಅದು ಬಯಲಿಗೆಳೆದಿದೆ. ಅಂತಹ ಸಂಸ್ಥೆ ಪಿಎಂ ಕೇರ್ಸ್‌‌ ಅನ್ನು ಆಡಿಟ್‌ ಮಾಡುವುದಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಬದಲಿಗೆ ಪಿಎಂ ಕೇರ್ಸ್ ನಿಧಿಯನ್ನು ಟ್ರಸ್ಟಿಗಳು ನೇಮಕ ಮಾಡುವ ಒಬ್ಬ ಅಥವಾ ಅದಕ್ಕಿಂತ ಹೆಚ್ಚಿನ ಅರ್ಹ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿತ್‌ ಮಾಡುವುದು ಎಂದು ಸರ್ಕಾರ ಷರತ್ತು ವಿಧಿಸಿದೆ.

ಈ ಪಿಎಂ ಕೇರ್ಸ್‌‌ಗೆ ಎಷ್ಟು ಹಣ ಬಂದಿದೆ. ಅದರಲ್ಲಿ ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ, ಎಷ್ಟು ಉಳಿದಿದೆ ಎಂಬ ನಂಬಿಕಾರ್ಹ ಮಾಹಿತಿ ಇದರಿಂದ ದೊರೆಯುವುದಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದುವರೆಗೂ ಕೇಂದ್ರ ಸರ್ಕಾರ ಕೊವಿಡ್‌ ಪ್ಯಾಕೇಜ್‌ಗಳಿಗೆ ತನ್ನ ಸರ್ಕಾರದ ಖಾತೆಯಿಂದ ಹಣ ನೀಡಿದೆಯೇ ಹೊರತು ಪಿಎಂ ಕೇರ್ಸ್‌‌ನಿಂದಲ್ಲ. ಹಾಗಾದರೆ ಈ ಹಣವನ್ನು ಯಾವಾಗ ಬಳಸುತ್ತಾರೆ ಎಂಬ ಪ್ರಶ್ನೆಯೂ ಎದ್ದಿದೆ.

ಕೋವಿಡ್ -19 ರ ವಿರುದ್ಧ ಹೋರಾಡುವ ಹೆಸರಿನಲ್ಲಿ, ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ಹೊಂದಿರುವ ನರೇಂದ್ರ ಮೋದಿ ನೇತೃತ್ವದ ಈ ಚಾರಿಟಬಲ್ ಟ್ರಸ್ಟ್ ಹಣವನ್ನು ಸಂಗ್ರಹಿಸಿ ನಂತರ ಅವುಗಳನ್ನು ಸ್ವಂತವಾಗಿ ಖರ್ಚು ಮಾಡುತ್ತದೆ. ಈ ನಿಧಿ ಖಾಸಗಿಯಾಗಿರುವುದರಿಂದ ಅದು ಆರ್‌ಟಿಐ ಅಡಿಯಲ್ಲಿ ಬರುವುದಿಲ್ಲ. ಈ ನಿಧಿಯು ಸಿಎಜಿಯ ವ್ಯಾಪ್ತಿಯಿಂದ ಹೊರಗಿರುವುದರಿಂದ, ಯಾವುದೇ ಸರ್ಕಾರಿ ಸಂಸ್ಥೆಯು ಈ ನಿಧಿಯನ್ನು ಲೆಕ್ಕಪರಿಶೋಧಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಇದು ಹಗರಣವೇ? ಭಾರತದ ಜನರು ನಿರ್ಧರಿಸಬೇಕಾಗುತ್ತದೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...